Homeಮುಖಪುಟಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಸರಣಿ ಸಾವು: ತನಿಖೆಗೆ ಕಾಂಗ್ರೆಸ್ ಆಗ್ರಹ, ರಾಜ್ಯ ಆರೋಗ್ಯ ವ್ಯವಸ್ಥೆ ವಿರುದ್ಧ ಖರ್ಗೆ...

ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಸರಣಿ ಸಾವು: ತನಿಖೆಗೆ ಕಾಂಗ್ರೆಸ್ ಆಗ್ರಹ, ರಾಜ್ಯ ಆರೋಗ್ಯ ವ್ಯವಸ್ಥೆ ವಿರುದ್ಧ ಖರ್ಗೆ ವಾಗ್ದಾಳಿ

- Advertisement -
- Advertisement -

ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಶಿಶುಗಳು ಸೇರಿದಂತೆ 24 ಜನ ಸಾವಿಗೀಡಾದ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕಾಂಗ್ರೆಸ್ ಮಂಗಳವಾರ ಒತ್ತಾಯಿಸಿದ್ದು, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ರಾಜ್ಯ ಸರ್ಕಾರದ ಆರೋಗ್ಯ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 1ರ ನಡುವೆ 12 ಶಿಶುಗಳು ಸೇರಿದಂತೆ 24 ಸಾವುಗಳು ವರದಿಯಾಗಿವೆ ಎಂದು ಮಹಾರಾಷ್ಟ್ರದ ಉನ್ನತ ಆರೋಗ್ಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಈ ಬಗ್ಗೆ ಮಲ್ಲಿಕಾರ್ಜುನ್ ಖರ್ಗೆ ಅವರು ಟ್ವೀಟ್ ಮಾಡಿದ್ದು, ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ”ಔಷಧಿಗಳು ಮತ್ತು ಚಿಕಿತ್ಸೆಯ ಕೊರತೆಯಿಂದಾಗಿ ಈ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತದೆ. 2023ರ ಆಗಸ್ಟ್‌ನಲ್ಲಿ ಥಾಣೆಯ ಸರ್ಕಾರಿ ಆಸ್ಪತ್ರೆಯಲ್ಲಿ ಇದೇ ರೀತಿಯ ಘಟನೆ ನಡೆದಿದ್ದು 18 ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಖರ್ಗೆ ಹೇಳಿದರು.

”ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಿದ್ದೇನೆ. ಪದೇ ಪದೇ ನಡೆಯುತ್ತಿರುವ ಇಂತಹ ಘಟನೆಗಳು ರಾಜ್ಯ ಸರ್ಕಾರದ ಆರೋಗ್ಯ ವ್ಯವಸ್ಥೆಯ ಮೇಲೆ ಪ್ರಶ್ನಾರ್ಥಕ ಚಿಹ್ನೆಯನ್ನು ಹುಟ್ಟುಹಾಕಿದೆ” ಎಂದು ಕಾಂಗ್ರೆಸ್ ಮುಖ್ಯಸ್ಥರು ಮಹಾರಾಷ್ಟ್ರದ ಬಿಜೆಪಿ-ಶಿವಸೇನೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

”ಈ ನಿರ್ಲಕ್ಷ್ಯದ ಅಪರಾಧಿಗಳಿಗೆ ನ್ಯಾಯಾಂಗವು ಕಠಿಣ ಶಿಕ್ಷೆಯನ್ನು ನೀಡುವಂತೆ ನಾವು ಸಮಗ್ರ ತನಿಖೆಗೆ ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದರು.

ಈ ಬಗ್ಗೆ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಈ ಸಾವಿನ ಸುದ್ದಿಗೆ ದುಃಖವನ್ನು ವ್ಯಕ್ತಪಡಿಸಿದ್ದಾರೆ ಮತ್ತು ದುಃಖಿತ ಕುಟುಂಬಗಳಿಗೆ ಸಾಂತ್ವನ ಹೇಳಿದರು.

”ಬಿಜೆಪಿ ಸರ್ಕಾರ ಪ್ರಚಾರಕ್ಕೆ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ, ಆದರೆ ಮಕ್ಕಳಿಗೆ ಔಷಧಿ ಕೊಡಿಸಲು ಹಣವಿಲ್ಲ, ಬಿಜೆಪಿಯ ದೃಷ್ಟಿಯಲ್ಲಿ ಬಡವರ ಜೀವಕ್ಕೆ ಬೆಲೆ ಇಲ್ಲ” ಎಂದು ಆರೋಪಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೂಡ ಈ ಘಟನೆಯ ಬಗ್ಗೆ ಮೌನ ಮುರಿಯುವಂತೆ ಮೋದಿಯವರಿಗೆ ಸೂಚಿಸಿದ್ದಾರೆ.

”ಅಪಾರ ಸಂಖ್ಯೆಯ ಸಾವುಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಮತ್ತು ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಬೇಕು” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ.

ಸೋಮವಾರ ಎಕ್ಸ್‌ನಲ್ಲಿ ಹಿಂದಿಯಲ್ಲಿ ಬರೆದ ಪೋಸ್ಟ್‌ನಲ್ಲಿ ಪ್ರಿಯಾಂಕಾ ಗಾಂಧಿ ”ದೇವರು ಅಗಲಿದ ಆತ್ಮಗಳಿಗೆ ಶಾಂತಿ ನೀಡಲಿ. ದುಃಖತಪ್ತ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಕಾರಣರಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಮತ್ತು ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಬೇಕು” ಎಂದು ಹೇಳಿದ್ದಾರೆ.

ಈ ಬಗ್ಗೆ ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ನಿರ್ದೇಶಕ ಡಾ ದಿಲೀಪ್ ಮ್ಹೈಸೇಕರ್ ಪಿಟಿಐಗೆ ಮಾಹಿತಿ ನೀಡಿದ್ದು, ”ಕಳೆದ 24 ಗಂಟೆಗಳಲ್ಲಿ, ನಾಂದೇಡ್ ಸರ್ಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿನಲ್ಲಿ (ಜಿಎಂಸಿಎಚ್) 24 ಸಾವುಗಳು ವರದಿಯಾಗಿವೆ. ಈ ಪೈಕಿ 12 ಶಿಶುಗಳು ಇಲ್ಲಿಗೆ ಉಲ್ಲೇಖಿಸಲ್ಪಟ್ಟಿವೆ. ಕೆಲವು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಂದ ಉಳಿದ ಸಾವುಗಳು ವಿವಿಧ ಕಾರಣಗಳಿಂದ ವಯಸ್ಕರು” ಸೇರಿದ್ದಾರೆ.

ಶಂಕರರಾವ್ ಚವ್ಹಾಣ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ.ಎಸ್.ಆರ್.ವಕೋಡೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ”12 ಶಿಶುಗಳು ಆರು ಗಂಡು ಮತ್ತು ಆರು ಹೆಣ್ಣು ಮಕ್ಕಳನ್ನು ಒಳಗೊಂಡಿವೆ. ಅವರಲ್ಲಿ ಹೆಚ್ಚಿನವರು 0-3 ದಿನದ ವಯೋಮಾನದವರು ಮತ್ತು “ಅತ್ಯಂತ ಕಡಿಮೆ ತೂಕ” ಹೊಂದಿದ್ದರು” ಎಂದು ಅವರು ಹೇಳಿದರು.

ಇದನ್ನೂ ಓದಿ: ಕೋವಿಡ್-19 ಲಸಿಕೆ: ಕ್ಯಾಟಲಿನ್ ಕಾರಿಕೊ, ಡ್ರ್ಯೂ ವೈಸ್‌ಮನ್‌​​ಗೆ ವೈದ್ಯಕೀಯ ನೊಬೆಲ್ ಪುರಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...