Homeಮುಖಪುಟಮಹಾರಾಷ್ಟ್ರ: ಆಂಬ್ಯುಲೆನ್ಸ್‌ ನಿರಾಕರಿಸಿದ ಆಸ್ಪತ್ರೆ; ಸತ್ತ ಮಕ್ಕಳನ್ನು ಹೆಗಲ ಮೇಲೆ ಹೊತ್ತೊಯ್ದ ಪೋಷಕರು

ಮಹಾರಾಷ್ಟ್ರ: ಆಂಬ್ಯುಲೆನ್ಸ್‌ ನಿರಾಕರಿಸಿದ ಆಸ್ಪತ್ರೆ; ಸತ್ತ ಮಕ್ಕಳನ್ನು ಹೆಗಲ ಮೇಲೆ ಹೊತ್ತೊಯ್ದ ಪೋಷಕರು

- Advertisement -
- Advertisement -

ಮಹಾರಾಷ್ಟ್ರದ ಆಹೇರಿ ತಾಲೂಕಿನ ಯುವ ದಂಪತಿಗಳು ತೀವ್ರ ಜ್ವರದಿಂದ ಮೃತಪಟ್ಟಿದ್ದ ತಮ್ಮ ಇಬ್ಬರು ಪುತ್ರರ ಮೃತದೇಹಗಳನ್ನು ಹೆಗಲ ಮೇಲೆ ಹೊತ್ತೊಯ್ದಿರುವ ವಿಡಿಯೊ ಇದೀಗ ವೈರಲ್ ಆಗಿದ್ದು, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದ ಕಾರಣ ಜ್ವರದಿಂದ ಬಾಲಕರು ಸಾವನ್ನಪ್ಪಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್‌ ನೀಡಲು ನಿರಾಕರಿಸಿದ್ದರಿಂದ ಆಸ್ಪತ್ರೆಯಿಂದ 15 ಕಿಮೀ ದೂರದಲ್ಲಿರುವ ಗಡ್ಚಿರೋಲಿಯಲ್ಲಿರುವ ತಮ್ಮ ಗ್ರಾಮದ ಮನೆಗೆ ಕಾಲ್ನಡಿಗೆಯಲ್ಲೆ ಸಾಗಿದ್ದಾರೆ.

ಅಪರಿಚಿತ ದಂಪತಿಗಳು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಇಬ್ಬರು ಅಪ್ರಾಪ್ತ ಬಾಲಕರ ಶವಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಕೆಸರುಮಯವಾದ ಕಾಡಿನ ಹಾದಿಯಲ್ಲಿ ಸಾಗುತ್ತಿರುವ ದೃಶ್ಯವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜಯ ವಾಡೆತ್ತಿವಾರ್ ಅವರು ಹಂಚಿಕೊಂಡಿದ್ದಾರೆ.

“ಇಬ್ಬರು ಒಡಹುಟ್ಟಿದವರು ಜ್ವರದಿಂದ ಬಳಲುತ್ತಿದ್ದರು. ಆದರೆ, ಅವರಿಗೆ ಸಮಯಕ್ಕೆ ಚಿಕಿತ್ಸೆ ಸಿಗಲಿಲ್ಲ. ಒಂದೆರಡು ಗಂಟೆಗಳಲ್ಲಿ ಅವರ ಸ್ಥಿತಿ ಹದಗೆಟ್ಟಿತು ಮತ್ತು ಮುಂದಿನ ಒಂದು ಗಂಟೆಯಲ್ಲಿ ಇಬ್ಬರು ಹುಡುಗರು ಸಾವನ್ನಪ್ಪಿದರು” ಎಂದು ವಡೆಟ್ಟಿವಾರ್ ಅವರು ದುರಂತದ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.

“ಇಬ್ಬರು ಅಪ್ರಾಪ್ತರ ಮೃತದೇಹಗಳನ್ನು ಅವರ ಗ್ರಾಮವಾದ ಪಟ್ಟಿಗಾಂವ್‌ಗೆ ವರ್ಗಾಯಿಸಲು ಸಹ ಆಂಬ್ಯುಲೆನ್ಸ್ ಇರಲಿಲ್ಲ ಮತ್ತು ಪೋಷಕರು ಮಳೆಯಿಂದ ತೋಯ್ದ ಕೆಸರು ಹಾದಿಯಲ್ಲಿ 15 ಕಿಲೋಮೀಟರ್ ನಡೆದುಕೊಂಡು ಹೋಗಬೇಕಾಯಿತು. ಗಡ್ಚಿರೋಲಿಯ ಆರೋಗ್ಯ ವ್ಯವಸ್ಥೆಯ ಕಠೋರ ವಾಸ್ತವ ಇಂದು ಮತ್ತೆ ಮುನ್ನೆಲೆಗೆ ಬಂದಿದೆ” ಎಂದು ಅವರು ಹೇಳಿದ್ದಾರೆ.

ಮಹಾಯುತಿ ಮಿತ್ರಪಕ್ಷಗಳಾದ ಭಾರತೀಯ ಜನತಾ ಪಕ್ಷದ ಫಡ್ನವೀಸ್ ಅವರು ಗಡ್ಚಿರೋಲಿಯ ಉಸ್ತುವಾರಿ ಸಚಿವರಾಗಿದ್ದಾರೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಧರ್ಮರಾವ್ ಬಾಬಾ ಅತ್ರಮ್ ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಸರ್ಕಾರದಲ್ಲಿ ಎಫ್‌ಡಿಎ ಸಚಿವರಾಗಿದ್ದಾರೆ ಎಂಬುದನ್ನು ಕಾಂಗ್ರೆಸ್ ನಾಯಕ ತಿಳಿಸಿದರು.

“ಇಬ್ಬರೂ ಮಹಾರಾಷ್ಟ್ರದಾದ್ಯಂತ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಪ್ರತಿದಿನ ರಾಜ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂದು ಹೇಳಿಕೊಳ್ಳುತ್ತಾರೆ. ಅವರು ನೆಲಮಟ್ಟಕ್ಕೆ ಇಳಿದು ಗಡ್ಚಿರೋಲಿಯಲ್ಲಿ ಜನರು ಹೇಗೆ ವಾಸಿಸುತ್ತಿದ್ದಾರೆ ಮತ್ತು ಅಲ್ಲಿನ ಸಾವಿನ ಸಂಖ್ಯೆಯನ್ನು ನೋಡಬೇಕು” ಎಂದು ವಡೆಟ್ಟಿವಾರ್ ಹೇಳಿದರು.

ಈ ವಾರ ವಿದರ್ಭ ಪ್ರದೇಶದಿಂದ ಈ ರೀತಿಯ ಎರಡನೇ ನಿದರ್ಶನವನ್ನು ಕಾಂಗ್ರೆಸ್ ಹೈಲೈಟ್ ಮಾಡಿದೆ. ಸೆಪ್ಟೆಂಬರ್ 1 ರಂದು, ಗರ್ಭಿಣಿ ಬುಡಕಟ್ಟು ಮಹಿಳೆ ತನ್ನ ಮನೆಯಲ್ಲಿಯೇ ಸತ್ತ ಮಗುವಿಗೆ ಜನ್ಮ ನೀಡಿದ್ದಳು ಮತ್ತು ನಂತರ ಸ್ಥಳೀಯ ಆಸ್ಪತ್ರೆಯು ಸಮಯಕ್ಕೆ ಆಂಬ್ಯುಲೆನ್ಸ್ ಕಳುಹಿಸಲು ವಿಫಲವಾದ ನಂತರ ಹೆರಿಗೆ ನೋವಿನಿಂದ ಸಾವನ್ನಪ್ಪಿದಳು.

ಅಮರಾವತಿಯ ಮೆಲ್ಘಾಟ್ ಬುಡಕಟ್ಟು ಪ್ರದೇಶದ ದಹೆಂಡ್ರಿ ಗ್ರಾಮದ ಕವಿತಾ ಎ. ಸಕೋಲ್ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತು. ಕೂಡಲೇ ಅವರ ಕುಟುಂಬವು ಸ್ಥಳೀಯ ಆರೋಗ್ಯ ಅಧಿಕಾರಿಗಳಿಂದ ಆಂಬ್ಯುಲೆನ್ಸ್ ಅನ್ನು ಕರೆದರು. ಆದರೆ ಕನಿಷ್ಠ ನಾಲ್ಕು ಗಂಟೆಗಳು ತೆಗೆದುಕೊಳ್ಳಬಹುದು ಎಂದು ಸಿಬ್ಬಂದಿ ಹೇಳಿದ್ದಾರೆ ಎನ್ನಲಾಗಿದೆ.

ಬೇರೆ ದಾರಿಯಿಲ್ಲದೆ ಕವಿತಾ ಮನೆಯಲ್ಲೇ ಹೆರಿಗೆ ಮಾಡಿಸಿದ್ದು, ಮಗು ಜನಿಸಿತ್ತು. ಆಕೆಯ ಸ್ಥಿತಿಯೂ ಹದಗೆಟ್ಟಿತು, ಆಕೆಯ ಸಂಬಂಧಿಕರು ಆತಂಕಗೊಂಡರು. ಮನೆಯವರು ಸ್ಥಳೀಯ ಖಾಸಗಿ ವಾಹನವನ್ನು ವ್ಯವಸ್ಥೆ ಮಾಡಿ ಚುರಾಣಿಯ ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಆದರೆ ಆಕೆ ಸ್ಥಿತಿ ಕ್ಷೀಣಿಸುತ್ತಲೇ ಇತ್ತು. ಅಕೆಯನ್ನು ಅಚಲಪುರಕ್ಕೆ ಮತ್ತು ನಂತರ ಅಮರಾವತಿಗೆ ವರ್ಗಾಯಿಸಿ ಚಿಕಿತ್ಸೆ ಕೊಡಿಸಿದ್ದರು.

“ಭಾನುವಾರ ಬೆಳಿಗ್ಗೆ ತಾಯಿ ಮತ್ತು ಶಿಶು ಇಬ್ಬರ ಜೀವನ್ ಹೋರಾಟ ಕೊನೆಗೊಂಡಿತು. ಅಸಮರ್ಪಕ ಆರೋಗ್ಯ ಮೂಲಸೌಕರ್ಯದಿಂದ ಇಬ್ಬರೂ ಜೀವಗಳನ್ನು ಕಳೆದುಕೊಂಡರು. ತಿಂಗಳಿಗೆ ₹ 1500 ಪಾವತಿಸಿ ಮತ ಕೇಳುತ್ತಿರುವ ಸರ್ಕಾರ. ‘ಲಡ್ಕಿ ಬಹಿನ್’ ಯೋಜನೆ, ಮೆಗಾ ಪ್ರಚಾರದ ಬ್ಲಿಟ್ಜ್ ಹಣವನ್ನು ಇಲ್ಲಿ ಆಂಬ್ಯುಲೆನ್ಸ್‌ಗಳಿಗಾಗಿ ಖರ್ಚು ಮಾಡಬಹುದಿತ್ತು” ಎಂದು ವಡೆಟ್ಟಿವಾರ್ ಹೇಳಿದರು.

ಎರಡೂ ಘಟನೆಗಳು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿವೆ. ಆದರೂ ಆಡಳಿತ ಪಕ್ಷದಿಂದ ಇದುವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ; ಹೇಮಾ ಸಮಿತಿ ವರದಿಗೆ ಸಂಬಂಧಿಸಿದ ವಿಷಯಗಳ ವಿಚಾರಣೆಗೆ ವಿಶೇಷ ಪೀಠ ರಚನೆ; ಕೇರಳ ಹೈಕೋರ್ಟ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...