Homeಮುಖಪುಟಮಹಾರಾಷ್ಟ್ರ: ಆಂಬ್ಯುಲೆನ್ಸ್‌ ನಿರಾಕರಿಸಿದ ಆಸ್ಪತ್ರೆ; ಸತ್ತ ಮಕ್ಕಳನ್ನು ಹೆಗಲ ಮೇಲೆ ಹೊತ್ತೊಯ್ದ ಪೋಷಕರು

ಮಹಾರಾಷ್ಟ್ರ: ಆಂಬ್ಯುಲೆನ್ಸ್‌ ನಿರಾಕರಿಸಿದ ಆಸ್ಪತ್ರೆ; ಸತ್ತ ಮಕ್ಕಳನ್ನು ಹೆಗಲ ಮೇಲೆ ಹೊತ್ತೊಯ್ದ ಪೋಷಕರು

- Advertisement -
- Advertisement -

ಮಹಾರಾಷ್ಟ್ರದ ಆಹೇರಿ ತಾಲೂಕಿನ ಯುವ ದಂಪತಿಗಳು ತೀವ್ರ ಜ್ವರದಿಂದ ಮೃತಪಟ್ಟಿದ್ದ ತಮ್ಮ ಇಬ್ಬರು ಪುತ್ರರ ಮೃತದೇಹಗಳನ್ನು ಹೆಗಲ ಮೇಲೆ ಹೊತ್ತೊಯ್ದಿರುವ ವಿಡಿಯೊ ಇದೀಗ ವೈರಲ್ ಆಗಿದ್ದು, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದ ಕಾರಣ ಜ್ವರದಿಂದ ಬಾಲಕರು ಸಾವನ್ನಪ್ಪಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್‌ ನೀಡಲು ನಿರಾಕರಿಸಿದ್ದರಿಂದ ಆಸ್ಪತ್ರೆಯಿಂದ 15 ಕಿಮೀ ದೂರದಲ್ಲಿರುವ ಗಡ್ಚಿರೋಲಿಯಲ್ಲಿರುವ ತಮ್ಮ ಗ್ರಾಮದ ಮನೆಗೆ ಕಾಲ್ನಡಿಗೆಯಲ್ಲೆ ಸಾಗಿದ್ದಾರೆ.

ಅಪರಿಚಿತ ದಂಪತಿಗಳು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಇಬ್ಬರು ಅಪ್ರಾಪ್ತ ಬಾಲಕರ ಶವಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಕೆಸರುಮಯವಾದ ಕಾಡಿನ ಹಾದಿಯಲ್ಲಿ ಸಾಗುತ್ತಿರುವ ದೃಶ್ಯವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜಯ ವಾಡೆತ್ತಿವಾರ್ ಅವರು ಹಂಚಿಕೊಂಡಿದ್ದಾರೆ.

“ಇಬ್ಬರು ಒಡಹುಟ್ಟಿದವರು ಜ್ವರದಿಂದ ಬಳಲುತ್ತಿದ್ದರು. ಆದರೆ, ಅವರಿಗೆ ಸಮಯಕ್ಕೆ ಚಿಕಿತ್ಸೆ ಸಿಗಲಿಲ್ಲ. ಒಂದೆರಡು ಗಂಟೆಗಳಲ್ಲಿ ಅವರ ಸ್ಥಿತಿ ಹದಗೆಟ್ಟಿತು ಮತ್ತು ಮುಂದಿನ ಒಂದು ಗಂಟೆಯಲ್ಲಿ ಇಬ್ಬರು ಹುಡುಗರು ಸಾವನ್ನಪ್ಪಿದರು” ಎಂದು ವಡೆಟ್ಟಿವಾರ್ ಅವರು ದುರಂತದ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.

“ಇಬ್ಬರು ಅಪ್ರಾಪ್ತರ ಮೃತದೇಹಗಳನ್ನು ಅವರ ಗ್ರಾಮವಾದ ಪಟ್ಟಿಗಾಂವ್‌ಗೆ ವರ್ಗಾಯಿಸಲು ಸಹ ಆಂಬ್ಯುಲೆನ್ಸ್ ಇರಲಿಲ್ಲ ಮತ್ತು ಪೋಷಕರು ಮಳೆಯಿಂದ ತೋಯ್ದ ಕೆಸರು ಹಾದಿಯಲ್ಲಿ 15 ಕಿಲೋಮೀಟರ್ ನಡೆದುಕೊಂಡು ಹೋಗಬೇಕಾಯಿತು. ಗಡ್ಚಿರೋಲಿಯ ಆರೋಗ್ಯ ವ್ಯವಸ್ಥೆಯ ಕಠೋರ ವಾಸ್ತವ ಇಂದು ಮತ್ತೆ ಮುನ್ನೆಲೆಗೆ ಬಂದಿದೆ” ಎಂದು ಅವರು ಹೇಳಿದ್ದಾರೆ.

ಮಹಾಯುತಿ ಮಿತ್ರಪಕ್ಷಗಳಾದ ಭಾರತೀಯ ಜನತಾ ಪಕ್ಷದ ಫಡ್ನವೀಸ್ ಅವರು ಗಡ್ಚಿರೋಲಿಯ ಉಸ್ತುವಾರಿ ಸಚಿವರಾಗಿದ್ದಾರೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಧರ್ಮರಾವ್ ಬಾಬಾ ಅತ್ರಮ್ ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಸರ್ಕಾರದಲ್ಲಿ ಎಫ್‌ಡಿಎ ಸಚಿವರಾಗಿದ್ದಾರೆ ಎಂಬುದನ್ನು ಕಾಂಗ್ರೆಸ್ ನಾಯಕ ತಿಳಿಸಿದರು.

“ಇಬ್ಬರೂ ಮಹಾರಾಷ್ಟ್ರದಾದ್ಯಂತ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಪ್ರತಿದಿನ ರಾಜ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂದು ಹೇಳಿಕೊಳ್ಳುತ್ತಾರೆ. ಅವರು ನೆಲಮಟ್ಟಕ್ಕೆ ಇಳಿದು ಗಡ್ಚಿರೋಲಿಯಲ್ಲಿ ಜನರು ಹೇಗೆ ವಾಸಿಸುತ್ತಿದ್ದಾರೆ ಮತ್ತು ಅಲ್ಲಿನ ಸಾವಿನ ಸಂಖ್ಯೆಯನ್ನು ನೋಡಬೇಕು” ಎಂದು ವಡೆಟ್ಟಿವಾರ್ ಹೇಳಿದರು.

ಈ ವಾರ ವಿದರ್ಭ ಪ್ರದೇಶದಿಂದ ಈ ರೀತಿಯ ಎರಡನೇ ನಿದರ್ಶನವನ್ನು ಕಾಂಗ್ರೆಸ್ ಹೈಲೈಟ್ ಮಾಡಿದೆ. ಸೆಪ್ಟೆಂಬರ್ 1 ರಂದು, ಗರ್ಭಿಣಿ ಬುಡಕಟ್ಟು ಮಹಿಳೆ ತನ್ನ ಮನೆಯಲ್ಲಿಯೇ ಸತ್ತ ಮಗುವಿಗೆ ಜನ್ಮ ನೀಡಿದ್ದಳು ಮತ್ತು ನಂತರ ಸ್ಥಳೀಯ ಆಸ್ಪತ್ರೆಯು ಸಮಯಕ್ಕೆ ಆಂಬ್ಯುಲೆನ್ಸ್ ಕಳುಹಿಸಲು ವಿಫಲವಾದ ನಂತರ ಹೆರಿಗೆ ನೋವಿನಿಂದ ಸಾವನ್ನಪ್ಪಿದಳು.

ಅಮರಾವತಿಯ ಮೆಲ್ಘಾಟ್ ಬುಡಕಟ್ಟು ಪ್ರದೇಶದ ದಹೆಂಡ್ರಿ ಗ್ರಾಮದ ಕವಿತಾ ಎ. ಸಕೋಲ್ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತು. ಕೂಡಲೇ ಅವರ ಕುಟುಂಬವು ಸ್ಥಳೀಯ ಆರೋಗ್ಯ ಅಧಿಕಾರಿಗಳಿಂದ ಆಂಬ್ಯುಲೆನ್ಸ್ ಅನ್ನು ಕರೆದರು. ಆದರೆ ಕನಿಷ್ಠ ನಾಲ್ಕು ಗಂಟೆಗಳು ತೆಗೆದುಕೊಳ್ಳಬಹುದು ಎಂದು ಸಿಬ್ಬಂದಿ ಹೇಳಿದ್ದಾರೆ ಎನ್ನಲಾಗಿದೆ.

ಬೇರೆ ದಾರಿಯಿಲ್ಲದೆ ಕವಿತಾ ಮನೆಯಲ್ಲೇ ಹೆರಿಗೆ ಮಾಡಿಸಿದ್ದು, ಮಗು ಜನಿಸಿತ್ತು. ಆಕೆಯ ಸ್ಥಿತಿಯೂ ಹದಗೆಟ್ಟಿತು, ಆಕೆಯ ಸಂಬಂಧಿಕರು ಆತಂಕಗೊಂಡರು. ಮನೆಯವರು ಸ್ಥಳೀಯ ಖಾಸಗಿ ವಾಹನವನ್ನು ವ್ಯವಸ್ಥೆ ಮಾಡಿ ಚುರಾಣಿಯ ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಆದರೆ ಆಕೆ ಸ್ಥಿತಿ ಕ್ಷೀಣಿಸುತ್ತಲೇ ಇತ್ತು. ಅಕೆಯನ್ನು ಅಚಲಪುರಕ್ಕೆ ಮತ್ತು ನಂತರ ಅಮರಾವತಿಗೆ ವರ್ಗಾಯಿಸಿ ಚಿಕಿತ್ಸೆ ಕೊಡಿಸಿದ್ದರು.

“ಭಾನುವಾರ ಬೆಳಿಗ್ಗೆ ತಾಯಿ ಮತ್ತು ಶಿಶು ಇಬ್ಬರ ಜೀವನ್ ಹೋರಾಟ ಕೊನೆಗೊಂಡಿತು. ಅಸಮರ್ಪಕ ಆರೋಗ್ಯ ಮೂಲಸೌಕರ್ಯದಿಂದ ಇಬ್ಬರೂ ಜೀವಗಳನ್ನು ಕಳೆದುಕೊಂಡರು. ತಿಂಗಳಿಗೆ ₹ 1500 ಪಾವತಿಸಿ ಮತ ಕೇಳುತ್ತಿರುವ ಸರ್ಕಾರ. ‘ಲಡ್ಕಿ ಬಹಿನ್’ ಯೋಜನೆ, ಮೆಗಾ ಪ್ರಚಾರದ ಬ್ಲಿಟ್ಜ್ ಹಣವನ್ನು ಇಲ್ಲಿ ಆಂಬ್ಯುಲೆನ್ಸ್‌ಗಳಿಗಾಗಿ ಖರ್ಚು ಮಾಡಬಹುದಿತ್ತು” ಎಂದು ವಡೆಟ್ಟಿವಾರ್ ಹೇಳಿದರು.

ಎರಡೂ ಘಟನೆಗಳು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿವೆ. ಆದರೂ ಆಡಳಿತ ಪಕ್ಷದಿಂದ ಇದುವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ; ಹೇಮಾ ಸಮಿತಿ ವರದಿಗೆ ಸಂಬಂಧಿಸಿದ ವಿಷಯಗಳ ವಿಚಾರಣೆಗೆ ವಿಶೇಷ ಪೀಠ ರಚನೆ; ಕೇರಳ ಹೈಕೋರ್ಟ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...