Homeಮುಖಪುಟಮಹಾರಾಷ್ಟ್ರ: ಆಂಬ್ಯುಲೆನ್ಸ್‌ ನಿರಾಕರಿಸಿದ ಆಸ್ಪತ್ರೆ; ಸತ್ತ ಮಕ್ಕಳನ್ನು ಹೆಗಲ ಮೇಲೆ ಹೊತ್ತೊಯ್ದ ಪೋಷಕರು

ಮಹಾರಾಷ್ಟ್ರ: ಆಂಬ್ಯುಲೆನ್ಸ್‌ ನಿರಾಕರಿಸಿದ ಆಸ್ಪತ್ರೆ; ಸತ್ತ ಮಕ್ಕಳನ್ನು ಹೆಗಲ ಮೇಲೆ ಹೊತ್ತೊಯ್ದ ಪೋಷಕರು

- Advertisement -
- Advertisement -

ಮಹಾರಾಷ್ಟ್ರದ ಆಹೇರಿ ತಾಲೂಕಿನ ಯುವ ದಂಪತಿಗಳು ತೀವ್ರ ಜ್ವರದಿಂದ ಮೃತಪಟ್ಟಿದ್ದ ತಮ್ಮ ಇಬ್ಬರು ಪುತ್ರರ ಮೃತದೇಹಗಳನ್ನು ಹೆಗಲ ಮೇಲೆ ಹೊತ್ತೊಯ್ದಿರುವ ವಿಡಿಯೊ ಇದೀಗ ವೈರಲ್ ಆಗಿದ್ದು, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದ ಕಾರಣ ಜ್ವರದಿಂದ ಬಾಲಕರು ಸಾವನ್ನಪ್ಪಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್‌ ನೀಡಲು ನಿರಾಕರಿಸಿದ್ದರಿಂದ ಆಸ್ಪತ್ರೆಯಿಂದ 15 ಕಿಮೀ ದೂರದಲ್ಲಿರುವ ಗಡ್ಚಿರೋಲಿಯಲ್ಲಿರುವ ತಮ್ಮ ಗ್ರಾಮದ ಮನೆಗೆ ಕಾಲ್ನಡಿಗೆಯಲ್ಲೆ ಸಾಗಿದ್ದಾರೆ.

ಅಪರಿಚಿತ ದಂಪತಿಗಳು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಇಬ್ಬರು ಅಪ್ರಾಪ್ತ ಬಾಲಕರ ಶವಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಕೆಸರುಮಯವಾದ ಕಾಡಿನ ಹಾದಿಯಲ್ಲಿ ಸಾಗುತ್ತಿರುವ ದೃಶ್ಯವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜಯ ವಾಡೆತ್ತಿವಾರ್ ಅವರು ಹಂಚಿಕೊಂಡಿದ್ದಾರೆ.

“ಇಬ್ಬರು ಒಡಹುಟ್ಟಿದವರು ಜ್ವರದಿಂದ ಬಳಲುತ್ತಿದ್ದರು. ಆದರೆ, ಅವರಿಗೆ ಸಮಯಕ್ಕೆ ಚಿಕಿತ್ಸೆ ಸಿಗಲಿಲ್ಲ. ಒಂದೆರಡು ಗಂಟೆಗಳಲ್ಲಿ ಅವರ ಸ್ಥಿತಿ ಹದಗೆಟ್ಟಿತು ಮತ್ತು ಮುಂದಿನ ಒಂದು ಗಂಟೆಯಲ್ಲಿ ಇಬ್ಬರು ಹುಡುಗರು ಸಾವನ್ನಪ್ಪಿದರು” ಎಂದು ವಡೆಟ್ಟಿವಾರ್ ಅವರು ದುರಂತದ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.

“ಇಬ್ಬರು ಅಪ್ರಾಪ್ತರ ಮೃತದೇಹಗಳನ್ನು ಅವರ ಗ್ರಾಮವಾದ ಪಟ್ಟಿಗಾಂವ್‌ಗೆ ವರ್ಗಾಯಿಸಲು ಸಹ ಆಂಬ್ಯುಲೆನ್ಸ್ ಇರಲಿಲ್ಲ ಮತ್ತು ಪೋಷಕರು ಮಳೆಯಿಂದ ತೋಯ್ದ ಕೆಸರು ಹಾದಿಯಲ್ಲಿ 15 ಕಿಲೋಮೀಟರ್ ನಡೆದುಕೊಂಡು ಹೋಗಬೇಕಾಯಿತು. ಗಡ್ಚಿರೋಲಿಯ ಆರೋಗ್ಯ ವ್ಯವಸ್ಥೆಯ ಕಠೋರ ವಾಸ್ತವ ಇಂದು ಮತ್ತೆ ಮುನ್ನೆಲೆಗೆ ಬಂದಿದೆ” ಎಂದು ಅವರು ಹೇಳಿದ್ದಾರೆ.

ಮಹಾಯುತಿ ಮಿತ್ರಪಕ್ಷಗಳಾದ ಭಾರತೀಯ ಜನತಾ ಪಕ್ಷದ ಫಡ್ನವೀಸ್ ಅವರು ಗಡ್ಚಿರೋಲಿಯ ಉಸ್ತುವಾರಿ ಸಚಿವರಾಗಿದ್ದಾರೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಧರ್ಮರಾವ್ ಬಾಬಾ ಅತ್ರಮ್ ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಸರ್ಕಾರದಲ್ಲಿ ಎಫ್‌ಡಿಎ ಸಚಿವರಾಗಿದ್ದಾರೆ ಎಂಬುದನ್ನು ಕಾಂಗ್ರೆಸ್ ನಾಯಕ ತಿಳಿಸಿದರು.

“ಇಬ್ಬರೂ ಮಹಾರಾಷ್ಟ್ರದಾದ್ಯಂತ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಪ್ರತಿದಿನ ರಾಜ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂದು ಹೇಳಿಕೊಳ್ಳುತ್ತಾರೆ. ಅವರು ನೆಲಮಟ್ಟಕ್ಕೆ ಇಳಿದು ಗಡ್ಚಿರೋಲಿಯಲ್ಲಿ ಜನರು ಹೇಗೆ ವಾಸಿಸುತ್ತಿದ್ದಾರೆ ಮತ್ತು ಅಲ್ಲಿನ ಸಾವಿನ ಸಂಖ್ಯೆಯನ್ನು ನೋಡಬೇಕು” ಎಂದು ವಡೆಟ್ಟಿವಾರ್ ಹೇಳಿದರು.

ಈ ವಾರ ವಿದರ್ಭ ಪ್ರದೇಶದಿಂದ ಈ ರೀತಿಯ ಎರಡನೇ ನಿದರ್ಶನವನ್ನು ಕಾಂಗ್ರೆಸ್ ಹೈಲೈಟ್ ಮಾಡಿದೆ. ಸೆಪ್ಟೆಂಬರ್ 1 ರಂದು, ಗರ್ಭಿಣಿ ಬುಡಕಟ್ಟು ಮಹಿಳೆ ತನ್ನ ಮನೆಯಲ್ಲಿಯೇ ಸತ್ತ ಮಗುವಿಗೆ ಜನ್ಮ ನೀಡಿದ್ದಳು ಮತ್ತು ನಂತರ ಸ್ಥಳೀಯ ಆಸ್ಪತ್ರೆಯು ಸಮಯಕ್ಕೆ ಆಂಬ್ಯುಲೆನ್ಸ್ ಕಳುಹಿಸಲು ವಿಫಲವಾದ ನಂತರ ಹೆರಿಗೆ ನೋವಿನಿಂದ ಸಾವನ್ನಪ್ಪಿದಳು.

ಅಮರಾವತಿಯ ಮೆಲ್ಘಾಟ್ ಬುಡಕಟ್ಟು ಪ್ರದೇಶದ ದಹೆಂಡ್ರಿ ಗ್ರಾಮದ ಕವಿತಾ ಎ. ಸಕೋಲ್ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತು. ಕೂಡಲೇ ಅವರ ಕುಟುಂಬವು ಸ್ಥಳೀಯ ಆರೋಗ್ಯ ಅಧಿಕಾರಿಗಳಿಂದ ಆಂಬ್ಯುಲೆನ್ಸ್ ಅನ್ನು ಕರೆದರು. ಆದರೆ ಕನಿಷ್ಠ ನಾಲ್ಕು ಗಂಟೆಗಳು ತೆಗೆದುಕೊಳ್ಳಬಹುದು ಎಂದು ಸಿಬ್ಬಂದಿ ಹೇಳಿದ್ದಾರೆ ಎನ್ನಲಾಗಿದೆ.

ಬೇರೆ ದಾರಿಯಿಲ್ಲದೆ ಕವಿತಾ ಮನೆಯಲ್ಲೇ ಹೆರಿಗೆ ಮಾಡಿಸಿದ್ದು, ಮಗು ಜನಿಸಿತ್ತು. ಆಕೆಯ ಸ್ಥಿತಿಯೂ ಹದಗೆಟ್ಟಿತು, ಆಕೆಯ ಸಂಬಂಧಿಕರು ಆತಂಕಗೊಂಡರು. ಮನೆಯವರು ಸ್ಥಳೀಯ ಖಾಸಗಿ ವಾಹನವನ್ನು ವ್ಯವಸ್ಥೆ ಮಾಡಿ ಚುರಾಣಿಯ ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಆದರೆ ಆಕೆ ಸ್ಥಿತಿ ಕ್ಷೀಣಿಸುತ್ತಲೇ ಇತ್ತು. ಅಕೆಯನ್ನು ಅಚಲಪುರಕ್ಕೆ ಮತ್ತು ನಂತರ ಅಮರಾವತಿಗೆ ವರ್ಗಾಯಿಸಿ ಚಿಕಿತ್ಸೆ ಕೊಡಿಸಿದ್ದರು.

“ಭಾನುವಾರ ಬೆಳಿಗ್ಗೆ ತಾಯಿ ಮತ್ತು ಶಿಶು ಇಬ್ಬರ ಜೀವನ್ ಹೋರಾಟ ಕೊನೆಗೊಂಡಿತು. ಅಸಮರ್ಪಕ ಆರೋಗ್ಯ ಮೂಲಸೌಕರ್ಯದಿಂದ ಇಬ್ಬರೂ ಜೀವಗಳನ್ನು ಕಳೆದುಕೊಂಡರು. ತಿಂಗಳಿಗೆ ₹ 1500 ಪಾವತಿಸಿ ಮತ ಕೇಳುತ್ತಿರುವ ಸರ್ಕಾರ. ‘ಲಡ್ಕಿ ಬಹಿನ್’ ಯೋಜನೆ, ಮೆಗಾ ಪ್ರಚಾರದ ಬ್ಲಿಟ್ಜ್ ಹಣವನ್ನು ಇಲ್ಲಿ ಆಂಬ್ಯುಲೆನ್ಸ್‌ಗಳಿಗಾಗಿ ಖರ್ಚು ಮಾಡಬಹುದಿತ್ತು” ಎಂದು ವಡೆಟ್ಟಿವಾರ್ ಹೇಳಿದರು.

ಎರಡೂ ಘಟನೆಗಳು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿವೆ. ಆದರೂ ಆಡಳಿತ ಪಕ್ಷದಿಂದ ಇದುವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ; ಹೇಮಾ ಸಮಿತಿ ವರದಿಗೆ ಸಂಬಂಧಿಸಿದ ವಿಷಯಗಳ ವಿಚಾರಣೆಗೆ ವಿಶೇಷ ಪೀಠ ರಚನೆ; ಕೇರಳ ಹೈಕೋರ್ಟ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...