Homeಮುಖಪುಟಮಹಾರಾಷ್ಟ್ರ: ಆಂಬ್ಯುಲೆನ್ಸ್‌ ನಿರಾಕರಿಸಿದ ಆಸ್ಪತ್ರೆ; ಸತ್ತ ಮಕ್ಕಳನ್ನು ಹೆಗಲ ಮೇಲೆ ಹೊತ್ತೊಯ್ದ ಪೋಷಕರು

ಮಹಾರಾಷ್ಟ್ರ: ಆಂಬ್ಯುಲೆನ್ಸ್‌ ನಿರಾಕರಿಸಿದ ಆಸ್ಪತ್ರೆ; ಸತ್ತ ಮಕ್ಕಳನ್ನು ಹೆಗಲ ಮೇಲೆ ಹೊತ್ತೊಯ್ದ ಪೋಷಕರು

- Advertisement -
- Advertisement -

ಮಹಾರಾಷ್ಟ್ರದ ಆಹೇರಿ ತಾಲೂಕಿನ ಯುವ ದಂಪತಿಗಳು ತೀವ್ರ ಜ್ವರದಿಂದ ಮೃತಪಟ್ಟಿದ್ದ ತಮ್ಮ ಇಬ್ಬರು ಪುತ್ರರ ಮೃತದೇಹಗಳನ್ನು ಹೆಗಲ ಮೇಲೆ ಹೊತ್ತೊಯ್ದಿರುವ ವಿಡಿಯೊ ಇದೀಗ ವೈರಲ್ ಆಗಿದ್ದು, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದ ಕಾರಣ ಜ್ವರದಿಂದ ಬಾಲಕರು ಸಾವನ್ನಪ್ಪಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್‌ ನೀಡಲು ನಿರಾಕರಿಸಿದ್ದರಿಂದ ಆಸ್ಪತ್ರೆಯಿಂದ 15 ಕಿಮೀ ದೂರದಲ್ಲಿರುವ ಗಡ್ಚಿರೋಲಿಯಲ್ಲಿರುವ ತಮ್ಮ ಗ್ರಾಮದ ಮನೆಗೆ ಕಾಲ್ನಡಿಗೆಯಲ್ಲೆ ಸಾಗಿದ್ದಾರೆ.

ಅಪರಿಚಿತ ದಂಪತಿಗಳು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಇಬ್ಬರು ಅಪ್ರಾಪ್ತ ಬಾಲಕರ ಶವಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಕೆಸರುಮಯವಾದ ಕಾಡಿನ ಹಾದಿಯಲ್ಲಿ ಸಾಗುತ್ತಿರುವ ದೃಶ್ಯವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜಯ ವಾಡೆತ್ತಿವಾರ್ ಅವರು ಹಂಚಿಕೊಂಡಿದ್ದಾರೆ.

“ಇಬ್ಬರು ಒಡಹುಟ್ಟಿದವರು ಜ್ವರದಿಂದ ಬಳಲುತ್ತಿದ್ದರು. ಆದರೆ, ಅವರಿಗೆ ಸಮಯಕ್ಕೆ ಚಿಕಿತ್ಸೆ ಸಿಗಲಿಲ್ಲ. ಒಂದೆರಡು ಗಂಟೆಗಳಲ್ಲಿ ಅವರ ಸ್ಥಿತಿ ಹದಗೆಟ್ಟಿತು ಮತ್ತು ಮುಂದಿನ ಒಂದು ಗಂಟೆಯಲ್ಲಿ ಇಬ್ಬರು ಹುಡುಗರು ಸಾವನ್ನಪ್ಪಿದರು” ಎಂದು ವಡೆಟ್ಟಿವಾರ್ ಅವರು ದುರಂತದ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.

“ಇಬ್ಬರು ಅಪ್ರಾಪ್ತರ ಮೃತದೇಹಗಳನ್ನು ಅವರ ಗ್ರಾಮವಾದ ಪಟ್ಟಿಗಾಂವ್‌ಗೆ ವರ್ಗಾಯಿಸಲು ಸಹ ಆಂಬ್ಯುಲೆನ್ಸ್ ಇರಲಿಲ್ಲ ಮತ್ತು ಪೋಷಕರು ಮಳೆಯಿಂದ ತೋಯ್ದ ಕೆಸರು ಹಾದಿಯಲ್ಲಿ 15 ಕಿಲೋಮೀಟರ್ ನಡೆದುಕೊಂಡು ಹೋಗಬೇಕಾಯಿತು. ಗಡ್ಚಿರೋಲಿಯ ಆರೋಗ್ಯ ವ್ಯವಸ್ಥೆಯ ಕಠೋರ ವಾಸ್ತವ ಇಂದು ಮತ್ತೆ ಮುನ್ನೆಲೆಗೆ ಬಂದಿದೆ” ಎಂದು ಅವರು ಹೇಳಿದ್ದಾರೆ.

ಮಹಾಯುತಿ ಮಿತ್ರಪಕ್ಷಗಳಾದ ಭಾರತೀಯ ಜನತಾ ಪಕ್ಷದ ಫಡ್ನವೀಸ್ ಅವರು ಗಡ್ಚಿರೋಲಿಯ ಉಸ್ತುವಾರಿ ಸಚಿವರಾಗಿದ್ದಾರೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಧರ್ಮರಾವ್ ಬಾಬಾ ಅತ್ರಮ್ ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಸರ್ಕಾರದಲ್ಲಿ ಎಫ್‌ಡಿಎ ಸಚಿವರಾಗಿದ್ದಾರೆ ಎಂಬುದನ್ನು ಕಾಂಗ್ರೆಸ್ ನಾಯಕ ತಿಳಿಸಿದರು.

“ಇಬ್ಬರೂ ಮಹಾರಾಷ್ಟ್ರದಾದ್ಯಂತ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಪ್ರತಿದಿನ ರಾಜ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂದು ಹೇಳಿಕೊಳ್ಳುತ್ತಾರೆ. ಅವರು ನೆಲಮಟ್ಟಕ್ಕೆ ಇಳಿದು ಗಡ್ಚಿರೋಲಿಯಲ್ಲಿ ಜನರು ಹೇಗೆ ವಾಸಿಸುತ್ತಿದ್ದಾರೆ ಮತ್ತು ಅಲ್ಲಿನ ಸಾವಿನ ಸಂಖ್ಯೆಯನ್ನು ನೋಡಬೇಕು” ಎಂದು ವಡೆಟ್ಟಿವಾರ್ ಹೇಳಿದರು.

ಈ ವಾರ ವಿದರ್ಭ ಪ್ರದೇಶದಿಂದ ಈ ರೀತಿಯ ಎರಡನೇ ನಿದರ್ಶನವನ್ನು ಕಾಂಗ್ರೆಸ್ ಹೈಲೈಟ್ ಮಾಡಿದೆ. ಸೆಪ್ಟೆಂಬರ್ 1 ರಂದು, ಗರ್ಭಿಣಿ ಬುಡಕಟ್ಟು ಮಹಿಳೆ ತನ್ನ ಮನೆಯಲ್ಲಿಯೇ ಸತ್ತ ಮಗುವಿಗೆ ಜನ್ಮ ನೀಡಿದ್ದಳು ಮತ್ತು ನಂತರ ಸ್ಥಳೀಯ ಆಸ್ಪತ್ರೆಯು ಸಮಯಕ್ಕೆ ಆಂಬ್ಯುಲೆನ್ಸ್ ಕಳುಹಿಸಲು ವಿಫಲವಾದ ನಂತರ ಹೆರಿಗೆ ನೋವಿನಿಂದ ಸಾವನ್ನಪ್ಪಿದಳು.

ಅಮರಾವತಿಯ ಮೆಲ್ಘಾಟ್ ಬುಡಕಟ್ಟು ಪ್ರದೇಶದ ದಹೆಂಡ್ರಿ ಗ್ರಾಮದ ಕವಿತಾ ಎ. ಸಕೋಲ್ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತು. ಕೂಡಲೇ ಅವರ ಕುಟುಂಬವು ಸ್ಥಳೀಯ ಆರೋಗ್ಯ ಅಧಿಕಾರಿಗಳಿಂದ ಆಂಬ್ಯುಲೆನ್ಸ್ ಅನ್ನು ಕರೆದರು. ಆದರೆ ಕನಿಷ್ಠ ನಾಲ್ಕು ಗಂಟೆಗಳು ತೆಗೆದುಕೊಳ್ಳಬಹುದು ಎಂದು ಸಿಬ್ಬಂದಿ ಹೇಳಿದ್ದಾರೆ ಎನ್ನಲಾಗಿದೆ.

ಬೇರೆ ದಾರಿಯಿಲ್ಲದೆ ಕವಿತಾ ಮನೆಯಲ್ಲೇ ಹೆರಿಗೆ ಮಾಡಿಸಿದ್ದು, ಮಗು ಜನಿಸಿತ್ತು. ಆಕೆಯ ಸ್ಥಿತಿಯೂ ಹದಗೆಟ್ಟಿತು, ಆಕೆಯ ಸಂಬಂಧಿಕರು ಆತಂಕಗೊಂಡರು. ಮನೆಯವರು ಸ್ಥಳೀಯ ಖಾಸಗಿ ವಾಹನವನ್ನು ವ್ಯವಸ್ಥೆ ಮಾಡಿ ಚುರಾಣಿಯ ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಆದರೆ ಆಕೆ ಸ್ಥಿತಿ ಕ್ಷೀಣಿಸುತ್ತಲೇ ಇತ್ತು. ಅಕೆಯನ್ನು ಅಚಲಪುರಕ್ಕೆ ಮತ್ತು ನಂತರ ಅಮರಾವತಿಗೆ ವರ್ಗಾಯಿಸಿ ಚಿಕಿತ್ಸೆ ಕೊಡಿಸಿದ್ದರು.

“ಭಾನುವಾರ ಬೆಳಿಗ್ಗೆ ತಾಯಿ ಮತ್ತು ಶಿಶು ಇಬ್ಬರ ಜೀವನ್ ಹೋರಾಟ ಕೊನೆಗೊಂಡಿತು. ಅಸಮರ್ಪಕ ಆರೋಗ್ಯ ಮೂಲಸೌಕರ್ಯದಿಂದ ಇಬ್ಬರೂ ಜೀವಗಳನ್ನು ಕಳೆದುಕೊಂಡರು. ತಿಂಗಳಿಗೆ ₹ 1500 ಪಾವತಿಸಿ ಮತ ಕೇಳುತ್ತಿರುವ ಸರ್ಕಾರ. ‘ಲಡ್ಕಿ ಬಹಿನ್’ ಯೋಜನೆ, ಮೆಗಾ ಪ್ರಚಾರದ ಬ್ಲಿಟ್ಜ್ ಹಣವನ್ನು ಇಲ್ಲಿ ಆಂಬ್ಯುಲೆನ್ಸ್‌ಗಳಿಗಾಗಿ ಖರ್ಚು ಮಾಡಬಹುದಿತ್ತು” ಎಂದು ವಡೆಟ್ಟಿವಾರ್ ಹೇಳಿದರು.

ಎರಡೂ ಘಟನೆಗಳು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿವೆ. ಆದರೂ ಆಡಳಿತ ಪಕ್ಷದಿಂದ ಇದುವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ; ಹೇಮಾ ಸಮಿತಿ ವರದಿಗೆ ಸಂಬಂಧಿಸಿದ ವಿಷಯಗಳ ವಿಚಾರಣೆಗೆ ವಿಶೇಷ ಪೀಠ ರಚನೆ; ಕೇರಳ ಹೈಕೋರ್ಟ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...