Homeಮುಖಪುಟಬಾಬರಿ ಮಸೀದಿ ಧ್ವಂಸದ ದಿನ 'ಸಂಭ್ರಮಾಚರಣೆ' ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ...

ಬಾಬರಿ ಮಸೀದಿ ಧ್ವಂಸದ ದಿನ ‘ಸಂಭ್ರಮಾಚರಣೆ’ ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ ಅಧಿಕಾರಿಯ ಪೋಸ್ಟ್‌…

- Advertisement -
- Advertisement -

ಮಹಾರಾಷ್ಟ್ರದ ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮನೀಶಾ ಪಾಟಂಕರ್ ಮ್ಹೈಸ್ಕರ್ ಅವರು ತಮ್ಮ ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದಾರೆ. ಅವರು ಮತ್ತು 1992ರ ಬ್ಯಾಚ್‌ನ ಇತರ ಐಎಎಸ್ ತರಬೇತಿ ಅಧಿಕಾರಿಗಳು ಬಾಬರಿ ಮಸೀದಿ ಧ್ವಂಸಗೊಂಡ ನಂತರ ಮಸ್ಸೂರಿಯಲ್ಲಿ ರಾತ್ರಿಯನ್ನು ಹೇಗೆ ಸಂಭ್ರಮಿಸಿದ್ದರು ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದರು.

ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ವೇಳೆ ಅಧಿಕಾರಿ ಈ ಪೋಸ್ಟ್‌ನ್ನು ಮಾಡಿದ್ದಾರೆ. ಪೋಸ್ಟ್‌ನ್ನು ‘ಜೈ ಶ್ರೀ ರಾಮ್’ ಘೋಷಣೆಯೊಂದಿಗೆ ಪ್ರಾರಂಭಿಸಲಾಗಿತ್ತು ಮತ್ತು ಈಗ ಅವರ ಜೀವನವು ಪರಿಪೂರ್ಣವಾಗಿದೆ ಎಂದು ಹೇಳಿದ್ದಾರೆ.

ಡಿಸೆಂಬರ್ 6 ರಂದು ಮಸ್ಸೂರಿಯಲ್ಲಿ ಹೆಚ್ಚು ಚಳಿಯಿತ್ತು. 1992ರ ಬ್ಯಾಚ್‌ನ ಐಎಎಸ್ ಅಧಿಕಾರಿಗಳು ಅಲ್ಲಿ ತರಬೇತಿಯಲ್ಲಿದ್ದೆವು. ಅಯೋಧ್ಯೆಯ ರಾಮ ಜನ್ಮ ಭೂಮಿಯಲ್ಲಿ ನಡೆಯುತ್ತಿರುವ  ಬೆಳವಣಿಗೆಗಳ ಬಗ್ಗೆ ನಮಗೆ ಮಾಹಿತಿ ಸಿಗುತ್ತಿತ್ತು. ಆಗ ನಮ್ಮ ಸಂಸ್ಥೆಯಲ್ಲಿ ರಹಸ್ಯ ಸಭೆ ನಡೆದಿತ್ತು. ಅದಕ್ಕೆ ಕೇವಲ ಆಹ್ವಾನಿತರಿಗೆ ಮಾತ್ರ ಪ್ರವೇಶವಿತ್ತು. ನನಗೆ ನಾಗ್ಪುರದ ನಂಟು ಇದ್ದ ಕಾರಣ ಆಹ್ವಾನ ಸಿಕ್ಕಿತ್ತು. ಆ ಸಭೆಯಲ್ಲಿ ಕೆಲವರು ಜೈ ಶ್ರೀ ರಾಮ್ ಎಂದು ಘೋಷಣೆಗಳನ್ನು ಕೂಗುತ್ತಿದ್ದರು ಮತ್ತು ಪೇಡಾಗಳನ್ನು ವಿತರಿಸಲಾಯಿತು. ಒಂದು ಫುಲ್ ಕೇಸರ್ ಪೇಡಾ ತಿಂದಿದ್ದು ನೆನಪಿದೆ. ಅಯೋಧ್ಯೆಯಲ್ಲಿ ನಡೆದ ಘಟನೆಗಳು ಅತ್ಯಂತ ಸಕಾರಾತ್ಮಕ, ಅತ್ಯಂತ ಶಕ್ತಿಯುತ ಮತ್ತು ಅತ್ಯಂತ ಮಂಗಳಕರವಾದ ಯಾವುದೋ ಒಂದರ ಆರಂಭ ಎಂದು ನನಗೆ ತಿಳಿದಿತ್ತು ಎಂದು ಬರೆದುಕೊಂಡಿದ್ದಾರೆ.

ಸಭೆಯ ಸುದ್ದಿ ಸೋರಿಕೆಯಾದಾಗ, ಅವರಿಗೆ ನೋಟಿಸ್ ನೀಡಲಾಗಿದೆ ಮತ್ತು ಘಟನೆಯನ್ನು ಪ್ರಮುಖ ಪತ್ರಿಕೆಯ ಮೊದಲ ಪುಟದಲ್ಲಿ ವರದಿ ಮಾಡಲಾಗಿದೆ. “ಐಎಎಸ್‌ನಲ್ಲಿ ಕೋಮುವಾದಿಗಳು ನುಸುಳುತ್ತಿದ್ದಾರೆ’ ಎಂದು ವರದಿಯಲ್ಲಿ ಹೇಳಲಾಗಿದೆ. ದೇವಾಲಯದ ಪ್ರತಿಷ್ಠಾಪನೆಯ ಈ ಸಮಾರಂಭದ ಸಂದರ್ಭದಲ್ಲಿ ನಾನು ಮತ್ತೊಂದು ಪೇಡಾವನ್ನು ತಿಂದಿದ್ದೇನೆ. ನಾಳೆ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣಪ್ರತಿಷ್ಠೆ ನಡೆಯಲಿದೆ. ಇದಕ್ಕೆ ಮುನ್ನಾದಿನವಾದ ಇಂದು, ನಾನು ಇನ್ನೊಂದು ಕೇಸರಿ ಪೇಡಾವನ್ನು ತಿನ್ನುವಾಗ ಡಿಸೆಂಬರ್ 6ರ ಮೂಲ ಕ್ಷಣ ಮತ್ತು ಅತ್ಯಂತ ಸಕಾರಾತ್ಮಕ, ಮಂಗಳಕರವಾದ ಶಕ್ತಿಯುತ ಭಾವನೆಯನ್ನು ನೆನಪಿಸಿಕೊಂಡೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಮಾಜಿ ಐಎಎಸ್ ಅಧಿಕಾರಿ ಎಂ.ಜಿ.ದೇವಸಹಾಯಂ, ಜಾತ್ಯತೀತತೆಯು ಸಂವಿಧಾನದ ಮೂಲಭೂತ ತತ್ವ ಮತ್ತು ಮೂಲ ರಚನೆಯಾಗಿದೆ. ಕೋಮುವಾದಿಯಾಗಿ ನಡೆದುಕೊಂಡು ಬಾಬರಿ ಮಸೀದಿ ಧ್ವಂಸವನ್ನು ಆಚರಿಸುವ ಮೂಲಕ ಆಕೆ ತನ್ನ ಪ್ರತಿಜ್ಞೆಯನ್ನು ಉಲ್ಲಂಘಿಸಿದ್ದಾಳೆ. ದೇವಸ್ಥಾನವನ್ನು ಪ್ರಶಂಸಿಸುವುದು ಒಂದು ವಿಷಯ, ಆದರೆ 30 ವರ್ಷಗಳ ನಂತರ ಕೆಡವಿದ್ದನ್ನು ನೆನಪಿಸಿಕೊಳ್ಳುವುದು ಮತ್ತು ಆಚರಿಸುವುದು ಅಪರಾಧ. ಉನ್ನತ ಅಧಿಕಾರಿಯ ಸ್ಥಾನದಲ್ಲಿರಲು ಆಕೆಗೆ ಯಾವುದೇ ನೈತಿಕತೆಯಿಲ್ಲ. ಅವರು ಕೆಲಸ ಮಾಡುತ್ತಿರುವ ರಾಜ್ಯದಲ್ಲಿ ಹಲವಾರು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಇದ್ದಾರೆ. ರಾಜಕಾರಣಿಗಳನ್ನು ಲೆಕ್ಕಿಸದೆ, ನಾಗರಿಕ ಸೇವೆಕರು ತಟಸ್ಥವಾಗಿರಬೇಕು. ಕೋಮುವಾದಿಯಲ್ಲದವರಾಗಿರಬೇಕು ಮತ್ತು ಜಾತ್ಯತೀತವಾಗಿರಬೇಕು. ಅವರು ಐಎಎಸ್‌ ಹುದ್ದೆ ಮತ್ತು ಭಾರತದ ಸಂವಿಧಾನವನ್ನು ಅವಮಾನಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆ ಐಎಎಸ್‌ ಅಧಿಕಾರಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇಂತಹ ಮನಸ್ಥಿತಿಯ ಅಧಿಕಾರಿಗಳು ತನ್ನ ವೃತ್ತಿ ಜೀವನದಲ್ಲಿ ಹೇಗೆ ಕಾರ್ಯ ನಿರ್ವಹಿಸಿರಬಹುದು ಎಂದು ಸಾಮಾಜಿಕ ಜಾಲತಾಣಗಳ ಬಳಕೆದಾರರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಎನ್‍ಡಿಟಿವಿಯ ಮುಂಬೈ ಕಚೇರಿಯ ಮಾಜಿ ಮುಖ್ಯಸ್ಥ ಸೋಹಿತ್ ಮಿಶ್ರಾ ಪ್ರತಿಕ್ರಿಯಿಸಿದ್ದು, ಮನೀಷಾ ಅವರ ಪೋಸ್ಟ್‌ನ್ನು ಖಂಡಿಸಿದ್ದಾರೆ. ಬಹುಸಂಖ್ಯಾತರ ಪರವಾಗಿರುವುದು ಸಾರ್ವಜನಿಕ ಸೇವೆಯಲ್ಲಿರುವವರಿಗೆ ಎಷ್ಟು ಸೂಕ್ತ ಎಂದು ಪ್ರಶ‍್ನಿಸಿದ್ದಾರೆ.

ಇದನ್ನು ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ ವೇಳೆ ಅಸ್ಸಾಂನಲ್ಲಿ ಭದ್ರತಾ ಸಮಸ್ಯೆ: ಅಮಿತ್‌ ಶಾಗೆ ಪತ್ರ ಬರೆದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...