Homeಮುಖಪುಟಬಾಬರಿ ಮಸೀದಿ ಧ್ವಂಸದ ದಿನ 'ಸಂಭ್ರಮಾಚರಣೆ' ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ...

ಬಾಬರಿ ಮಸೀದಿ ಧ್ವಂಸದ ದಿನ ‘ಸಂಭ್ರಮಾಚರಣೆ’ ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ ಅಧಿಕಾರಿಯ ಪೋಸ್ಟ್‌…

- Advertisement -
- Advertisement -

ಮಹಾರಾಷ್ಟ್ರದ ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮನೀಶಾ ಪಾಟಂಕರ್ ಮ್ಹೈಸ್ಕರ್ ಅವರು ತಮ್ಮ ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದಾರೆ. ಅವರು ಮತ್ತು 1992ರ ಬ್ಯಾಚ್‌ನ ಇತರ ಐಎಎಸ್ ತರಬೇತಿ ಅಧಿಕಾರಿಗಳು ಬಾಬರಿ ಮಸೀದಿ ಧ್ವಂಸಗೊಂಡ ನಂತರ ಮಸ್ಸೂರಿಯಲ್ಲಿ ರಾತ್ರಿಯನ್ನು ಹೇಗೆ ಸಂಭ್ರಮಿಸಿದ್ದರು ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದರು.

ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ವೇಳೆ ಅಧಿಕಾರಿ ಈ ಪೋಸ್ಟ್‌ನ್ನು ಮಾಡಿದ್ದಾರೆ. ಪೋಸ್ಟ್‌ನ್ನು ‘ಜೈ ಶ್ರೀ ರಾಮ್’ ಘೋಷಣೆಯೊಂದಿಗೆ ಪ್ರಾರಂಭಿಸಲಾಗಿತ್ತು ಮತ್ತು ಈಗ ಅವರ ಜೀವನವು ಪರಿಪೂರ್ಣವಾಗಿದೆ ಎಂದು ಹೇಳಿದ್ದಾರೆ.

ಡಿಸೆಂಬರ್ 6 ರಂದು ಮಸ್ಸೂರಿಯಲ್ಲಿ ಹೆಚ್ಚು ಚಳಿಯಿತ್ತು. 1992ರ ಬ್ಯಾಚ್‌ನ ಐಎಎಸ್ ಅಧಿಕಾರಿಗಳು ಅಲ್ಲಿ ತರಬೇತಿಯಲ್ಲಿದ್ದೆವು. ಅಯೋಧ್ಯೆಯ ರಾಮ ಜನ್ಮ ಭೂಮಿಯಲ್ಲಿ ನಡೆಯುತ್ತಿರುವ  ಬೆಳವಣಿಗೆಗಳ ಬಗ್ಗೆ ನಮಗೆ ಮಾಹಿತಿ ಸಿಗುತ್ತಿತ್ತು. ಆಗ ನಮ್ಮ ಸಂಸ್ಥೆಯಲ್ಲಿ ರಹಸ್ಯ ಸಭೆ ನಡೆದಿತ್ತು. ಅದಕ್ಕೆ ಕೇವಲ ಆಹ್ವಾನಿತರಿಗೆ ಮಾತ್ರ ಪ್ರವೇಶವಿತ್ತು. ನನಗೆ ನಾಗ್ಪುರದ ನಂಟು ಇದ್ದ ಕಾರಣ ಆಹ್ವಾನ ಸಿಕ್ಕಿತ್ತು. ಆ ಸಭೆಯಲ್ಲಿ ಕೆಲವರು ಜೈ ಶ್ರೀ ರಾಮ್ ಎಂದು ಘೋಷಣೆಗಳನ್ನು ಕೂಗುತ್ತಿದ್ದರು ಮತ್ತು ಪೇಡಾಗಳನ್ನು ವಿತರಿಸಲಾಯಿತು. ಒಂದು ಫುಲ್ ಕೇಸರ್ ಪೇಡಾ ತಿಂದಿದ್ದು ನೆನಪಿದೆ. ಅಯೋಧ್ಯೆಯಲ್ಲಿ ನಡೆದ ಘಟನೆಗಳು ಅತ್ಯಂತ ಸಕಾರಾತ್ಮಕ, ಅತ್ಯಂತ ಶಕ್ತಿಯುತ ಮತ್ತು ಅತ್ಯಂತ ಮಂಗಳಕರವಾದ ಯಾವುದೋ ಒಂದರ ಆರಂಭ ಎಂದು ನನಗೆ ತಿಳಿದಿತ್ತು ಎಂದು ಬರೆದುಕೊಂಡಿದ್ದಾರೆ.

ಸಭೆಯ ಸುದ್ದಿ ಸೋರಿಕೆಯಾದಾಗ, ಅವರಿಗೆ ನೋಟಿಸ್ ನೀಡಲಾಗಿದೆ ಮತ್ತು ಘಟನೆಯನ್ನು ಪ್ರಮುಖ ಪತ್ರಿಕೆಯ ಮೊದಲ ಪುಟದಲ್ಲಿ ವರದಿ ಮಾಡಲಾಗಿದೆ. “ಐಎಎಸ್‌ನಲ್ಲಿ ಕೋಮುವಾದಿಗಳು ನುಸುಳುತ್ತಿದ್ದಾರೆ’ ಎಂದು ವರದಿಯಲ್ಲಿ ಹೇಳಲಾಗಿದೆ. ದೇವಾಲಯದ ಪ್ರತಿಷ್ಠಾಪನೆಯ ಈ ಸಮಾರಂಭದ ಸಂದರ್ಭದಲ್ಲಿ ನಾನು ಮತ್ತೊಂದು ಪೇಡಾವನ್ನು ತಿಂದಿದ್ದೇನೆ. ನಾಳೆ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣಪ್ರತಿಷ್ಠೆ ನಡೆಯಲಿದೆ. ಇದಕ್ಕೆ ಮುನ್ನಾದಿನವಾದ ಇಂದು, ನಾನು ಇನ್ನೊಂದು ಕೇಸರಿ ಪೇಡಾವನ್ನು ತಿನ್ನುವಾಗ ಡಿಸೆಂಬರ್ 6ರ ಮೂಲ ಕ್ಷಣ ಮತ್ತು ಅತ್ಯಂತ ಸಕಾರಾತ್ಮಕ, ಮಂಗಳಕರವಾದ ಶಕ್ತಿಯುತ ಭಾವನೆಯನ್ನು ನೆನಪಿಸಿಕೊಂಡೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಮಾಜಿ ಐಎಎಸ್ ಅಧಿಕಾರಿ ಎಂ.ಜಿ.ದೇವಸಹಾಯಂ, ಜಾತ್ಯತೀತತೆಯು ಸಂವಿಧಾನದ ಮೂಲಭೂತ ತತ್ವ ಮತ್ತು ಮೂಲ ರಚನೆಯಾಗಿದೆ. ಕೋಮುವಾದಿಯಾಗಿ ನಡೆದುಕೊಂಡು ಬಾಬರಿ ಮಸೀದಿ ಧ್ವಂಸವನ್ನು ಆಚರಿಸುವ ಮೂಲಕ ಆಕೆ ತನ್ನ ಪ್ರತಿಜ್ಞೆಯನ್ನು ಉಲ್ಲಂಘಿಸಿದ್ದಾಳೆ. ದೇವಸ್ಥಾನವನ್ನು ಪ್ರಶಂಸಿಸುವುದು ಒಂದು ವಿಷಯ, ಆದರೆ 30 ವರ್ಷಗಳ ನಂತರ ಕೆಡವಿದ್ದನ್ನು ನೆನಪಿಸಿಕೊಳ್ಳುವುದು ಮತ್ತು ಆಚರಿಸುವುದು ಅಪರಾಧ. ಉನ್ನತ ಅಧಿಕಾರಿಯ ಸ್ಥಾನದಲ್ಲಿರಲು ಆಕೆಗೆ ಯಾವುದೇ ನೈತಿಕತೆಯಿಲ್ಲ. ಅವರು ಕೆಲಸ ಮಾಡುತ್ತಿರುವ ರಾಜ್ಯದಲ್ಲಿ ಹಲವಾರು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಇದ್ದಾರೆ. ರಾಜಕಾರಣಿಗಳನ್ನು ಲೆಕ್ಕಿಸದೆ, ನಾಗರಿಕ ಸೇವೆಕರು ತಟಸ್ಥವಾಗಿರಬೇಕು. ಕೋಮುವಾದಿಯಲ್ಲದವರಾಗಿರಬೇಕು ಮತ್ತು ಜಾತ್ಯತೀತವಾಗಿರಬೇಕು. ಅವರು ಐಎಎಸ್‌ ಹುದ್ದೆ ಮತ್ತು ಭಾರತದ ಸಂವಿಧಾನವನ್ನು ಅವಮಾನಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆ ಐಎಎಸ್‌ ಅಧಿಕಾರಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇಂತಹ ಮನಸ್ಥಿತಿಯ ಅಧಿಕಾರಿಗಳು ತನ್ನ ವೃತ್ತಿ ಜೀವನದಲ್ಲಿ ಹೇಗೆ ಕಾರ್ಯ ನಿರ್ವಹಿಸಿರಬಹುದು ಎಂದು ಸಾಮಾಜಿಕ ಜಾಲತಾಣಗಳ ಬಳಕೆದಾರರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಎನ್‍ಡಿಟಿವಿಯ ಮುಂಬೈ ಕಚೇರಿಯ ಮಾಜಿ ಮುಖ್ಯಸ್ಥ ಸೋಹಿತ್ ಮಿಶ್ರಾ ಪ್ರತಿಕ್ರಿಯಿಸಿದ್ದು, ಮನೀಷಾ ಅವರ ಪೋಸ್ಟ್‌ನ್ನು ಖಂಡಿಸಿದ್ದಾರೆ. ಬಹುಸಂಖ್ಯಾತರ ಪರವಾಗಿರುವುದು ಸಾರ್ವಜನಿಕ ಸೇವೆಯಲ್ಲಿರುವವರಿಗೆ ಎಷ್ಟು ಸೂಕ್ತ ಎಂದು ಪ್ರಶ‍್ನಿಸಿದ್ದಾರೆ.

ಇದನ್ನು ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ ವೇಳೆ ಅಸ್ಸಾಂನಲ್ಲಿ ಭದ್ರತಾ ಸಮಸ್ಯೆ: ಅಮಿತ್‌ ಶಾಗೆ ಪತ್ರ ಬರೆದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...