Homeಮುಖಪುಟಬಾಬರಿ ಮಸೀದಿ ಧ್ವಂಸದ ದಿನ 'ಸಂಭ್ರಮಾಚರಣೆ' ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ...

ಬಾಬರಿ ಮಸೀದಿ ಧ್ವಂಸದ ದಿನ ‘ಸಂಭ್ರಮಾಚರಣೆ’ ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ ಅಧಿಕಾರಿಯ ಪೋಸ್ಟ್‌…

- Advertisement -
- Advertisement -

ಮಹಾರಾಷ್ಟ್ರದ ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮನೀಶಾ ಪಾಟಂಕರ್ ಮ್ಹೈಸ್ಕರ್ ಅವರು ತಮ್ಮ ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದಾರೆ. ಅವರು ಮತ್ತು 1992ರ ಬ್ಯಾಚ್‌ನ ಇತರ ಐಎಎಸ್ ತರಬೇತಿ ಅಧಿಕಾರಿಗಳು ಬಾಬರಿ ಮಸೀದಿ ಧ್ವಂಸಗೊಂಡ ನಂತರ ಮಸ್ಸೂರಿಯಲ್ಲಿ ರಾತ್ರಿಯನ್ನು ಹೇಗೆ ಸಂಭ್ರಮಿಸಿದ್ದರು ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದರು.

ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ವೇಳೆ ಅಧಿಕಾರಿ ಈ ಪೋಸ್ಟ್‌ನ್ನು ಮಾಡಿದ್ದಾರೆ. ಪೋಸ್ಟ್‌ನ್ನು ‘ಜೈ ಶ್ರೀ ರಾಮ್’ ಘೋಷಣೆಯೊಂದಿಗೆ ಪ್ರಾರಂಭಿಸಲಾಗಿತ್ತು ಮತ್ತು ಈಗ ಅವರ ಜೀವನವು ಪರಿಪೂರ್ಣವಾಗಿದೆ ಎಂದು ಹೇಳಿದ್ದಾರೆ.

ಡಿಸೆಂಬರ್ 6 ರಂದು ಮಸ್ಸೂರಿಯಲ್ಲಿ ಹೆಚ್ಚು ಚಳಿಯಿತ್ತು. 1992ರ ಬ್ಯಾಚ್‌ನ ಐಎಎಸ್ ಅಧಿಕಾರಿಗಳು ಅಲ್ಲಿ ತರಬೇತಿಯಲ್ಲಿದ್ದೆವು. ಅಯೋಧ್ಯೆಯ ರಾಮ ಜನ್ಮ ಭೂಮಿಯಲ್ಲಿ ನಡೆಯುತ್ತಿರುವ  ಬೆಳವಣಿಗೆಗಳ ಬಗ್ಗೆ ನಮಗೆ ಮಾಹಿತಿ ಸಿಗುತ್ತಿತ್ತು. ಆಗ ನಮ್ಮ ಸಂಸ್ಥೆಯಲ್ಲಿ ರಹಸ್ಯ ಸಭೆ ನಡೆದಿತ್ತು. ಅದಕ್ಕೆ ಕೇವಲ ಆಹ್ವಾನಿತರಿಗೆ ಮಾತ್ರ ಪ್ರವೇಶವಿತ್ತು. ನನಗೆ ನಾಗ್ಪುರದ ನಂಟು ಇದ್ದ ಕಾರಣ ಆಹ್ವಾನ ಸಿಕ್ಕಿತ್ತು. ಆ ಸಭೆಯಲ್ಲಿ ಕೆಲವರು ಜೈ ಶ್ರೀ ರಾಮ್ ಎಂದು ಘೋಷಣೆಗಳನ್ನು ಕೂಗುತ್ತಿದ್ದರು ಮತ್ತು ಪೇಡಾಗಳನ್ನು ವಿತರಿಸಲಾಯಿತು. ಒಂದು ಫುಲ್ ಕೇಸರ್ ಪೇಡಾ ತಿಂದಿದ್ದು ನೆನಪಿದೆ. ಅಯೋಧ್ಯೆಯಲ್ಲಿ ನಡೆದ ಘಟನೆಗಳು ಅತ್ಯಂತ ಸಕಾರಾತ್ಮಕ, ಅತ್ಯಂತ ಶಕ್ತಿಯುತ ಮತ್ತು ಅತ್ಯಂತ ಮಂಗಳಕರವಾದ ಯಾವುದೋ ಒಂದರ ಆರಂಭ ಎಂದು ನನಗೆ ತಿಳಿದಿತ್ತು ಎಂದು ಬರೆದುಕೊಂಡಿದ್ದಾರೆ.

ಸಭೆಯ ಸುದ್ದಿ ಸೋರಿಕೆಯಾದಾಗ, ಅವರಿಗೆ ನೋಟಿಸ್ ನೀಡಲಾಗಿದೆ ಮತ್ತು ಘಟನೆಯನ್ನು ಪ್ರಮುಖ ಪತ್ರಿಕೆಯ ಮೊದಲ ಪುಟದಲ್ಲಿ ವರದಿ ಮಾಡಲಾಗಿದೆ. “ಐಎಎಸ್‌ನಲ್ಲಿ ಕೋಮುವಾದಿಗಳು ನುಸುಳುತ್ತಿದ್ದಾರೆ’ ಎಂದು ವರದಿಯಲ್ಲಿ ಹೇಳಲಾಗಿದೆ. ದೇವಾಲಯದ ಪ್ರತಿಷ್ಠಾಪನೆಯ ಈ ಸಮಾರಂಭದ ಸಂದರ್ಭದಲ್ಲಿ ನಾನು ಮತ್ತೊಂದು ಪೇಡಾವನ್ನು ತಿಂದಿದ್ದೇನೆ. ನಾಳೆ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣಪ್ರತಿಷ್ಠೆ ನಡೆಯಲಿದೆ. ಇದಕ್ಕೆ ಮುನ್ನಾದಿನವಾದ ಇಂದು, ನಾನು ಇನ್ನೊಂದು ಕೇಸರಿ ಪೇಡಾವನ್ನು ತಿನ್ನುವಾಗ ಡಿಸೆಂಬರ್ 6ರ ಮೂಲ ಕ್ಷಣ ಮತ್ತು ಅತ್ಯಂತ ಸಕಾರಾತ್ಮಕ, ಮಂಗಳಕರವಾದ ಶಕ್ತಿಯುತ ಭಾವನೆಯನ್ನು ನೆನಪಿಸಿಕೊಂಡೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಮಾಜಿ ಐಎಎಸ್ ಅಧಿಕಾರಿ ಎಂ.ಜಿ.ದೇವಸಹಾಯಂ, ಜಾತ್ಯತೀತತೆಯು ಸಂವಿಧಾನದ ಮೂಲಭೂತ ತತ್ವ ಮತ್ತು ಮೂಲ ರಚನೆಯಾಗಿದೆ. ಕೋಮುವಾದಿಯಾಗಿ ನಡೆದುಕೊಂಡು ಬಾಬರಿ ಮಸೀದಿ ಧ್ವಂಸವನ್ನು ಆಚರಿಸುವ ಮೂಲಕ ಆಕೆ ತನ್ನ ಪ್ರತಿಜ್ಞೆಯನ್ನು ಉಲ್ಲಂಘಿಸಿದ್ದಾಳೆ. ದೇವಸ್ಥಾನವನ್ನು ಪ್ರಶಂಸಿಸುವುದು ಒಂದು ವಿಷಯ, ಆದರೆ 30 ವರ್ಷಗಳ ನಂತರ ಕೆಡವಿದ್ದನ್ನು ನೆನಪಿಸಿಕೊಳ್ಳುವುದು ಮತ್ತು ಆಚರಿಸುವುದು ಅಪರಾಧ. ಉನ್ನತ ಅಧಿಕಾರಿಯ ಸ್ಥಾನದಲ್ಲಿರಲು ಆಕೆಗೆ ಯಾವುದೇ ನೈತಿಕತೆಯಿಲ್ಲ. ಅವರು ಕೆಲಸ ಮಾಡುತ್ತಿರುವ ರಾಜ್ಯದಲ್ಲಿ ಹಲವಾರು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಇದ್ದಾರೆ. ರಾಜಕಾರಣಿಗಳನ್ನು ಲೆಕ್ಕಿಸದೆ, ನಾಗರಿಕ ಸೇವೆಕರು ತಟಸ್ಥವಾಗಿರಬೇಕು. ಕೋಮುವಾದಿಯಲ್ಲದವರಾಗಿರಬೇಕು ಮತ್ತು ಜಾತ್ಯತೀತವಾಗಿರಬೇಕು. ಅವರು ಐಎಎಸ್‌ ಹುದ್ದೆ ಮತ್ತು ಭಾರತದ ಸಂವಿಧಾನವನ್ನು ಅವಮಾನಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆ ಐಎಎಸ್‌ ಅಧಿಕಾರಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇಂತಹ ಮನಸ್ಥಿತಿಯ ಅಧಿಕಾರಿಗಳು ತನ್ನ ವೃತ್ತಿ ಜೀವನದಲ್ಲಿ ಹೇಗೆ ಕಾರ್ಯ ನಿರ್ವಹಿಸಿರಬಹುದು ಎಂದು ಸಾಮಾಜಿಕ ಜಾಲತಾಣಗಳ ಬಳಕೆದಾರರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಎನ್‍ಡಿಟಿವಿಯ ಮುಂಬೈ ಕಚೇರಿಯ ಮಾಜಿ ಮುಖ್ಯಸ್ಥ ಸೋಹಿತ್ ಮಿಶ್ರಾ ಪ್ರತಿಕ್ರಿಯಿಸಿದ್ದು, ಮನೀಷಾ ಅವರ ಪೋಸ್ಟ್‌ನ್ನು ಖಂಡಿಸಿದ್ದಾರೆ. ಬಹುಸಂಖ್ಯಾತರ ಪರವಾಗಿರುವುದು ಸಾರ್ವಜನಿಕ ಸೇವೆಯಲ್ಲಿರುವವರಿಗೆ ಎಷ್ಟು ಸೂಕ್ತ ಎಂದು ಪ್ರಶ‍್ನಿಸಿದ್ದಾರೆ.

ಇದನ್ನು ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ ವೇಳೆ ಅಸ್ಸಾಂನಲ್ಲಿ ಭದ್ರತಾ ಸಮಸ್ಯೆ: ಅಮಿತ್‌ ಶಾಗೆ ಪತ್ರ ಬರೆದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...