Homeಮುಖಪುಟಬಾಬರಿ ಮಸೀದಿ ಧ್ವಂಸದ ದಿನ 'ಸಂಭ್ರಮಾಚರಣೆ' ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ...

ಬಾಬರಿ ಮಸೀದಿ ಧ್ವಂಸದ ದಿನ ‘ಸಂಭ್ರಮಾಚರಣೆ’ ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ ಅಧಿಕಾರಿಯ ಪೋಸ್ಟ್‌…

- Advertisement -
- Advertisement -

ಮಹಾರಾಷ್ಟ್ರದ ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮನೀಶಾ ಪಾಟಂಕರ್ ಮ್ಹೈಸ್ಕರ್ ಅವರು ತಮ್ಮ ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದಾರೆ. ಅವರು ಮತ್ತು 1992ರ ಬ್ಯಾಚ್‌ನ ಇತರ ಐಎಎಸ್ ತರಬೇತಿ ಅಧಿಕಾರಿಗಳು ಬಾಬರಿ ಮಸೀದಿ ಧ್ವಂಸಗೊಂಡ ನಂತರ ಮಸ್ಸೂರಿಯಲ್ಲಿ ರಾತ್ರಿಯನ್ನು ಹೇಗೆ ಸಂಭ್ರಮಿಸಿದ್ದರು ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದರು.

ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ವೇಳೆ ಅಧಿಕಾರಿ ಈ ಪೋಸ್ಟ್‌ನ್ನು ಮಾಡಿದ್ದಾರೆ. ಪೋಸ್ಟ್‌ನ್ನು ‘ಜೈ ಶ್ರೀ ರಾಮ್’ ಘೋಷಣೆಯೊಂದಿಗೆ ಪ್ರಾರಂಭಿಸಲಾಗಿತ್ತು ಮತ್ತು ಈಗ ಅವರ ಜೀವನವು ಪರಿಪೂರ್ಣವಾಗಿದೆ ಎಂದು ಹೇಳಿದ್ದಾರೆ.

ಡಿಸೆಂಬರ್ 6 ರಂದು ಮಸ್ಸೂರಿಯಲ್ಲಿ ಹೆಚ್ಚು ಚಳಿಯಿತ್ತು. 1992ರ ಬ್ಯಾಚ್‌ನ ಐಎಎಸ್ ಅಧಿಕಾರಿಗಳು ಅಲ್ಲಿ ತರಬೇತಿಯಲ್ಲಿದ್ದೆವು. ಅಯೋಧ್ಯೆಯ ರಾಮ ಜನ್ಮ ಭೂಮಿಯಲ್ಲಿ ನಡೆಯುತ್ತಿರುವ  ಬೆಳವಣಿಗೆಗಳ ಬಗ್ಗೆ ನಮಗೆ ಮಾಹಿತಿ ಸಿಗುತ್ತಿತ್ತು. ಆಗ ನಮ್ಮ ಸಂಸ್ಥೆಯಲ್ಲಿ ರಹಸ್ಯ ಸಭೆ ನಡೆದಿತ್ತು. ಅದಕ್ಕೆ ಕೇವಲ ಆಹ್ವಾನಿತರಿಗೆ ಮಾತ್ರ ಪ್ರವೇಶವಿತ್ತು. ನನಗೆ ನಾಗ್ಪುರದ ನಂಟು ಇದ್ದ ಕಾರಣ ಆಹ್ವಾನ ಸಿಕ್ಕಿತ್ತು. ಆ ಸಭೆಯಲ್ಲಿ ಕೆಲವರು ಜೈ ಶ್ರೀ ರಾಮ್ ಎಂದು ಘೋಷಣೆಗಳನ್ನು ಕೂಗುತ್ತಿದ್ದರು ಮತ್ತು ಪೇಡಾಗಳನ್ನು ವಿತರಿಸಲಾಯಿತು. ಒಂದು ಫುಲ್ ಕೇಸರ್ ಪೇಡಾ ತಿಂದಿದ್ದು ನೆನಪಿದೆ. ಅಯೋಧ್ಯೆಯಲ್ಲಿ ನಡೆದ ಘಟನೆಗಳು ಅತ್ಯಂತ ಸಕಾರಾತ್ಮಕ, ಅತ್ಯಂತ ಶಕ್ತಿಯುತ ಮತ್ತು ಅತ್ಯಂತ ಮಂಗಳಕರವಾದ ಯಾವುದೋ ಒಂದರ ಆರಂಭ ಎಂದು ನನಗೆ ತಿಳಿದಿತ್ತು ಎಂದು ಬರೆದುಕೊಂಡಿದ್ದಾರೆ.

ಸಭೆಯ ಸುದ್ದಿ ಸೋರಿಕೆಯಾದಾಗ, ಅವರಿಗೆ ನೋಟಿಸ್ ನೀಡಲಾಗಿದೆ ಮತ್ತು ಘಟನೆಯನ್ನು ಪ್ರಮುಖ ಪತ್ರಿಕೆಯ ಮೊದಲ ಪುಟದಲ್ಲಿ ವರದಿ ಮಾಡಲಾಗಿದೆ. “ಐಎಎಸ್‌ನಲ್ಲಿ ಕೋಮುವಾದಿಗಳು ನುಸುಳುತ್ತಿದ್ದಾರೆ’ ಎಂದು ವರದಿಯಲ್ಲಿ ಹೇಳಲಾಗಿದೆ. ದೇವಾಲಯದ ಪ್ರತಿಷ್ಠಾಪನೆಯ ಈ ಸಮಾರಂಭದ ಸಂದರ್ಭದಲ್ಲಿ ನಾನು ಮತ್ತೊಂದು ಪೇಡಾವನ್ನು ತಿಂದಿದ್ದೇನೆ. ನಾಳೆ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣಪ್ರತಿಷ್ಠೆ ನಡೆಯಲಿದೆ. ಇದಕ್ಕೆ ಮುನ್ನಾದಿನವಾದ ಇಂದು, ನಾನು ಇನ್ನೊಂದು ಕೇಸರಿ ಪೇಡಾವನ್ನು ತಿನ್ನುವಾಗ ಡಿಸೆಂಬರ್ 6ರ ಮೂಲ ಕ್ಷಣ ಮತ್ತು ಅತ್ಯಂತ ಸಕಾರಾತ್ಮಕ, ಮಂಗಳಕರವಾದ ಶಕ್ತಿಯುತ ಭಾವನೆಯನ್ನು ನೆನಪಿಸಿಕೊಂಡೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಮಾಜಿ ಐಎಎಸ್ ಅಧಿಕಾರಿ ಎಂ.ಜಿ.ದೇವಸಹಾಯಂ, ಜಾತ್ಯತೀತತೆಯು ಸಂವಿಧಾನದ ಮೂಲಭೂತ ತತ್ವ ಮತ್ತು ಮೂಲ ರಚನೆಯಾಗಿದೆ. ಕೋಮುವಾದಿಯಾಗಿ ನಡೆದುಕೊಂಡು ಬಾಬರಿ ಮಸೀದಿ ಧ್ವಂಸವನ್ನು ಆಚರಿಸುವ ಮೂಲಕ ಆಕೆ ತನ್ನ ಪ್ರತಿಜ್ಞೆಯನ್ನು ಉಲ್ಲಂಘಿಸಿದ್ದಾಳೆ. ದೇವಸ್ಥಾನವನ್ನು ಪ್ರಶಂಸಿಸುವುದು ಒಂದು ವಿಷಯ, ಆದರೆ 30 ವರ್ಷಗಳ ನಂತರ ಕೆಡವಿದ್ದನ್ನು ನೆನಪಿಸಿಕೊಳ್ಳುವುದು ಮತ್ತು ಆಚರಿಸುವುದು ಅಪರಾಧ. ಉನ್ನತ ಅಧಿಕಾರಿಯ ಸ್ಥಾನದಲ್ಲಿರಲು ಆಕೆಗೆ ಯಾವುದೇ ನೈತಿಕತೆಯಿಲ್ಲ. ಅವರು ಕೆಲಸ ಮಾಡುತ್ತಿರುವ ರಾಜ್ಯದಲ್ಲಿ ಹಲವಾರು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಇದ್ದಾರೆ. ರಾಜಕಾರಣಿಗಳನ್ನು ಲೆಕ್ಕಿಸದೆ, ನಾಗರಿಕ ಸೇವೆಕರು ತಟಸ್ಥವಾಗಿರಬೇಕು. ಕೋಮುವಾದಿಯಲ್ಲದವರಾಗಿರಬೇಕು ಮತ್ತು ಜಾತ್ಯತೀತವಾಗಿರಬೇಕು. ಅವರು ಐಎಎಸ್‌ ಹುದ್ದೆ ಮತ್ತು ಭಾರತದ ಸಂವಿಧಾನವನ್ನು ಅವಮಾನಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆ ಐಎಎಸ್‌ ಅಧಿಕಾರಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇಂತಹ ಮನಸ್ಥಿತಿಯ ಅಧಿಕಾರಿಗಳು ತನ್ನ ವೃತ್ತಿ ಜೀವನದಲ್ಲಿ ಹೇಗೆ ಕಾರ್ಯ ನಿರ್ವಹಿಸಿರಬಹುದು ಎಂದು ಸಾಮಾಜಿಕ ಜಾಲತಾಣಗಳ ಬಳಕೆದಾರರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಎನ್‍ಡಿಟಿವಿಯ ಮುಂಬೈ ಕಚೇರಿಯ ಮಾಜಿ ಮುಖ್ಯಸ್ಥ ಸೋಹಿತ್ ಮಿಶ್ರಾ ಪ್ರತಿಕ್ರಿಯಿಸಿದ್ದು, ಮನೀಷಾ ಅವರ ಪೋಸ್ಟ್‌ನ್ನು ಖಂಡಿಸಿದ್ದಾರೆ. ಬಹುಸಂಖ್ಯಾತರ ಪರವಾಗಿರುವುದು ಸಾರ್ವಜನಿಕ ಸೇವೆಯಲ್ಲಿರುವವರಿಗೆ ಎಷ್ಟು ಸೂಕ್ತ ಎಂದು ಪ್ರಶ‍್ನಿಸಿದ್ದಾರೆ.

ಇದನ್ನು ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ ವೇಳೆ ಅಸ್ಸಾಂನಲ್ಲಿ ಭದ್ರತಾ ಸಮಸ್ಯೆ: ಅಮಿತ್‌ ಶಾಗೆ ಪತ್ರ ಬರೆದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...