Homeಮುಖಪುಟಮಹಾರಾಷ್ಟ್ರ: ಶಿವಸೇನೆ- ಬಿಜೆಪಿ ಸರ್ಕಾರ ಉರುಳಿದರೆ ಅಜಿತ್‌ ಪವಾರ್‌ ಎನ್‌ಸಿಪಿ ಒಡೆಯುವರೇ?

ಮಹಾರಾಷ್ಟ್ರ: ಶಿವಸೇನೆ- ಬಿಜೆಪಿ ಸರ್ಕಾರ ಉರುಳಿದರೆ ಅಜಿತ್‌ ಪವಾರ್‌ ಎನ್‌ಸಿಪಿ ಒಡೆಯುವರೇ?

- Advertisement -
- Advertisement -

ಕಳೆದ ವರ್ಷ ಏಕನಾಥ್ ಶಿಂಧೆ ನೇತೃತ್ವದಲ್ಲಿ ಶಿವಸೇನೆಯನ್ನು ಇಬ್ಬಾಗವಾಗಿಸಿ ಬೇರೊಂದು ಸರ್ಕಾರ (ಶಿಂಧೆ ಬಣದ ಶಿವಸೇನೆ-ಬಿಜೆಪಿ) ರಚನೆಗೆ ಕಾರಣವಾಗಿದ್ದ ಶಿವಸೇನೆ ಶಾಸಕರನ್ನು ಸುಪ್ರೀಂ ಕೋರ್ಟ್ ಅನರ್ಹಗೊಳಿಸಿದಲ್ಲಿ ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ನಾಯಕ ಅಜಿತ್ ಪವಾರ್‌ ಯೋಚಿಸಿದ್ದಾರೆಂಬ ಗುಮಾನಿಗಳು ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ.

ಎನ್‌ಸಿಪಿ ನಾಯಕ ಅಜಿತ್ ಪವಾರ್ ಪಕ್ಷದಿಂದ ಹೊರನಡೆದು ಬಿಜೆಪಿಯೊಂದಿಗೆ ಕೈಜೋಡಿಸುವ ಸಾಧ್ಯತೆಯಿದೆ. 2019ರಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯಲ್ಲಿ ಮುಂಜಾನೆ ಪ್ರಮಾಣ ವಚನ ಸ್ವೀಕರಿಸಿ ಎಲ್ಲರನ್ನೂ ಅಚ್ಚರಿಗೆ ದೂಡಿದ್ದ ಅಜಿತ್ ಪವಾರ್ ಮತ್ತೊಮ್ಮೆ ಅದೇ ರೀತಿಯ ಪ್ಲಾನ್ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏಕನಾಥ್ ಶಿಂಧೆ ಮಾದರಿಯಲ್ಲಿಯೇ ಬಂಡಾಯವೆದ್ದು, ರಾಜಕೀಯ ವಲಯದಲ್ಲಿ ಬೇರೆ ರೀತಿಯ ಪರಿಣಾಮಗಳನ್ನು ಉಂಟು ಮಾಡುವುದಕ್ಕಾಗಿ ಎನ್‌ಸಿಪಿ ಶಾಸಕರೊಂದಿಗೆ ಅಜಿತ್‌ ಸಂಪರ್ಕದಲ್ಲಿದ್ದಾರೆಂದು ವರದಿಯಾಗಿದೆ.

“ಅಂತಹ ಯಾವುದೇ ಯೋಜನೆಯನ್ನು ಹೊಂದಿಲ್ಲ” ಎಂದು ಅಜಿತ್ ಪವಾರ್ ನಿರಾಕರಿಸಿದ್ದರೂ, ಎನ್‌ಸಿಪಿ ಶಾಸಕರು ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರಿಗೆ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಶಿವಸೇನೆಯನ್ನು ವಿಭಜಿಸಿದ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಸರ್ವೋಚ್ಚ ನ್ಯಾಯಾಲಯ ಅವಲೋಕಿಸುತ್ತಿರುವ ಅನೇಕ ಸಂಗತಿಗಳು ಮಹಾರಾಷ್ಟ್ರದಲ್ಲಿನ ಆಡಳಿತರೂಢ ಮೈತ್ರಿಕೂಟದಲ್ಲಿ ಆತಂಕ ತಂದಿವೆ ಎನ್ನಲಾಗುತ್ತಿದೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಾಂವಿಧಾನಿಕ ಪೀಠದ ಐವರು ನ್ಯಾಯಮೂರ್ತಿಗಳಲ್ಲಿ ಒಬ್ಬರಾದ ನ್ಯಾಯಮೂರ್ತಿ ಎಂ ಆರ್ ಷಾ ಅವರು ಮೇ 15ರಂದು ನಿವೃತ್ತಿಯಾಗಲಿದ್ದಾರೆ. ಅದಕ್ಕೂ ಮೊದಲು ಪ್ರಕರಣದ ಅಂತಿಮ ತೀರ್ಪು ನ್ಯಾಯಾಲಯದಿಂದ ಹೊರಬೀಳುವ ಸಾಧ್ಯತೆಯಿದೆ.

ಆಡಳಿತಾರೂಢ ಮೈತ್ರಿಕೂಟಕ್ಕೆ ತೀರ್ಪು ಪ್ರತಿಕೂಲವಾಗಿಯಾದರೂ ಇರಬಹುದು ಅಥವಾ ಅನುಕೂಲವಾದರೂ ಆಗಬಹುದು ಎಂಬ ಚರ್ಚೆಗಳು ನಡೆಯುತ್ತಿವೆ.

ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ. ಅಜಿತ್ ಪವಾರ್ ಅವರ ದಂಗೆ ಯತ್ನ ಮಹಾರಾಷ್ಟ್ರದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ನಡೆಸಿರುವ ಪ್ಲಾನ್ ಬಿ ಎನ್ನಲಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಶಾಸಕರನ್ನು ಹೊಂದಿರುವ ಬಿಜೆಪಿಯು ಅಜಿತ್ ಪವಾರ್ ಅವರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿಯಾಗಿದೆ.

ಶರದ್ ಪವಾರ್ ಅವರು ತಮ್ಮ ಸೋದರಳಿಯನ ಯೋಜನೆಗಳ ಬಗ್ಗೆ ತಿಳಿದಿದ್ದಾರೆ ಹಾಗೂ ಒಗ್ಗಟ್ಟು ಕಾಪಾಡಿಕೊಳ್ಳಲು ಯೋಚಿಸಿದ್ದಾರೆ ಎಂದು ಮೂಲಗಳು ಹೇಳುತ್ತಿವೆ.

ಅಜಿತ್ ಪವಾರ್ ಅವರ ಇತ್ತೀಚಿನ ನಡೆಗೂ ಮತ್ತು ಅದಾನಿ ಗ್ರೂಪ್‌ ವಿರುದ್ಧ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಶರದ್ ಪವಾರ್ ವಿರೋಧಿಸಿದ್ದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪಕ್ಷದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.

ಇದನ್ನೂ ಓದಿರಿ: ಹಿಂಡೆನ್‌ಬರ್ಗ್ ವರದಿಯು ಅದಾನಿ ಗ್ರೂಪ್‌ ಮೇಲಿನ ಉದ್ದೇಶಿತ ದಾಳಿಯಾಗಿದೆ: ಶರದ್ ಪವಾರ್‌

ಅಜಿತ್ ಅವರ ಕ್ರಮಗಳ ಹಿಂದೆ ವರಿಷ್ಠರ ಆಶೀರ್ವಾದ ಇರಬಹುದು ಎಂಬ ವರದಿಗಳನ್ನು ಮೂಲಗಳು ತಳ್ಳಿಹಾಕಿವೆ. ಶರದ್ ಪವಾರ್ ಅವರು ಬಿಜೆಪಿಯೊಂದಿಗೆ ತೀವ್ರ ವಿರೋಧವನ್ನು ಹೊಂದಿದ್ದಾರೆ ಎಂದು ಹೇಳುತ್ತಿವೆ.

ಜಂಟಿ ಸಂಸದೀಯ ಸಮಿತಿಯ ಕುರಿತು ಶರದ್ ಪವಾರ್ ಅವರು ಹೇಳಿಕೆ ನೀಡಿದ ನಂತರ ಅಜಿತ್ ಪವಾರ್ ಅಜ್ಞಾತವಾಗಿ ವ್ಯವಹರಿಸುತ್ತಿರುವುದು ಒಂದು ರೀತಿಯ ರಾಜಕೀಯ ವದಂತಿಗಳಿಗೆ ಅವಕಾಶ ನೀಡಿದೆ. ಪಕ್ಷದಲ್ಲಿ ಒಡಕು ಮೂಡುವುದನ್ನು ತಪ್ಪಿಸುವ ಸಲುವಾಗಿ ವಿಧಾನಸಭೆಯ ಒಳಗೆ ಮತ್ತು ಹೊರಗೆ ಎನ್‌ಸಿಪಿ ಪಕ್ಷದಲ್ಲಿ ಕೆಲವು ಬದಲಾವಣೆಗಳನ್ನು ಶೀಘ್ರದಲ್ಲೇ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...

ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

ಇತ್ತೀಚೆಗೆ ಪ್ರಕಟವಾದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಂಗಳವಾರ (ಮಾ.10) ಬೇಷರತ್ತಾಗಿ ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು...