Homeಮುಖಪುಟಮಹಾರಾಷ್ಟ್ರ: ಶಿವಸೇನೆ- ಬಿಜೆಪಿ ಸರ್ಕಾರ ಉರುಳಿದರೆ ಅಜಿತ್‌ ಪವಾರ್‌ ಎನ್‌ಸಿಪಿ ಒಡೆಯುವರೇ?

ಮಹಾರಾಷ್ಟ್ರ: ಶಿವಸೇನೆ- ಬಿಜೆಪಿ ಸರ್ಕಾರ ಉರುಳಿದರೆ ಅಜಿತ್‌ ಪವಾರ್‌ ಎನ್‌ಸಿಪಿ ಒಡೆಯುವರೇ?

- Advertisement -
- Advertisement -

ಕಳೆದ ವರ್ಷ ಏಕನಾಥ್ ಶಿಂಧೆ ನೇತೃತ್ವದಲ್ಲಿ ಶಿವಸೇನೆಯನ್ನು ಇಬ್ಬಾಗವಾಗಿಸಿ ಬೇರೊಂದು ಸರ್ಕಾರ (ಶಿಂಧೆ ಬಣದ ಶಿವಸೇನೆ-ಬಿಜೆಪಿ) ರಚನೆಗೆ ಕಾರಣವಾಗಿದ್ದ ಶಿವಸೇನೆ ಶಾಸಕರನ್ನು ಸುಪ್ರೀಂ ಕೋರ್ಟ್ ಅನರ್ಹಗೊಳಿಸಿದಲ್ಲಿ ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ನಾಯಕ ಅಜಿತ್ ಪವಾರ್‌ ಯೋಚಿಸಿದ್ದಾರೆಂಬ ಗುಮಾನಿಗಳು ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ.

ಎನ್‌ಸಿಪಿ ನಾಯಕ ಅಜಿತ್ ಪವಾರ್ ಪಕ್ಷದಿಂದ ಹೊರನಡೆದು ಬಿಜೆಪಿಯೊಂದಿಗೆ ಕೈಜೋಡಿಸುವ ಸಾಧ್ಯತೆಯಿದೆ. 2019ರಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯಲ್ಲಿ ಮುಂಜಾನೆ ಪ್ರಮಾಣ ವಚನ ಸ್ವೀಕರಿಸಿ ಎಲ್ಲರನ್ನೂ ಅಚ್ಚರಿಗೆ ದೂಡಿದ್ದ ಅಜಿತ್ ಪವಾರ್ ಮತ್ತೊಮ್ಮೆ ಅದೇ ರೀತಿಯ ಪ್ಲಾನ್ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏಕನಾಥ್ ಶಿಂಧೆ ಮಾದರಿಯಲ್ಲಿಯೇ ಬಂಡಾಯವೆದ್ದು, ರಾಜಕೀಯ ವಲಯದಲ್ಲಿ ಬೇರೆ ರೀತಿಯ ಪರಿಣಾಮಗಳನ್ನು ಉಂಟು ಮಾಡುವುದಕ್ಕಾಗಿ ಎನ್‌ಸಿಪಿ ಶಾಸಕರೊಂದಿಗೆ ಅಜಿತ್‌ ಸಂಪರ್ಕದಲ್ಲಿದ್ದಾರೆಂದು ವರದಿಯಾಗಿದೆ.

“ಅಂತಹ ಯಾವುದೇ ಯೋಜನೆಯನ್ನು ಹೊಂದಿಲ್ಲ” ಎಂದು ಅಜಿತ್ ಪವಾರ್ ನಿರಾಕರಿಸಿದ್ದರೂ, ಎನ್‌ಸಿಪಿ ಶಾಸಕರು ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರಿಗೆ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಶಿವಸೇನೆಯನ್ನು ವಿಭಜಿಸಿದ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಸರ್ವೋಚ್ಚ ನ್ಯಾಯಾಲಯ ಅವಲೋಕಿಸುತ್ತಿರುವ ಅನೇಕ ಸಂಗತಿಗಳು ಮಹಾರಾಷ್ಟ್ರದಲ್ಲಿನ ಆಡಳಿತರೂಢ ಮೈತ್ರಿಕೂಟದಲ್ಲಿ ಆತಂಕ ತಂದಿವೆ ಎನ್ನಲಾಗುತ್ತಿದೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಾಂವಿಧಾನಿಕ ಪೀಠದ ಐವರು ನ್ಯಾಯಮೂರ್ತಿಗಳಲ್ಲಿ ಒಬ್ಬರಾದ ನ್ಯಾಯಮೂರ್ತಿ ಎಂ ಆರ್ ಷಾ ಅವರು ಮೇ 15ರಂದು ನಿವೃತ್ತಿಯಾಗಲಿದ್ದಾರೆ. ಅದಕ್ಕೂ ಮೊದಲು ಪ್ರಕರಣದ ಅಂತಿಮ ತೀರ್ಪು ನ್ಯಾಯಾಲಯದಿಂದ ಹೊರಬೀಳುವ ಸಾಧ್ಯತೆಯಿದೆ.

ಆಡಳಿತಾರೂಢ ಮೈತ್ರಿಕೂಟಕ್ಕೆ ತೀರ್ಪು ಪ್ರತಿಕೂಲವಾಗಿಯಾದರೂ ಇರಬಹುದು ಅಥವಾ ಅನುಕೂಲವಾದರೂ ಆಗಬಹುದು ಎಂಬ ಚರ್ಚೆಗಳು ನಡೆಯುತ್ತಿವೆ.

ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ. ಅಜಿತ್ ಪವಾರ್ ಅವರ ದಂಗೆ ಯತ್ನ ಮಹಾರಾಷ್ಟ್ರದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ನಡೆಸಿರುವ ಪ್ಲಾನ್ ಬಿ ಎನ್ನಲಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಶಾಸಕರನ್ನು ಹೊಂದಿರುವ ಬಿಜೆಪಿಯು ಅಜಿತ್ ಪವಾರ್ ಅವರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿಯಾಗಿದೆ.

ಶರದ್ ಪವಾರ್ ಅವರು ತಮ್ಮ ಸೋದರಳಿಯನ ಯೋಜನೆಗಳ ಬಗ್ಗೆ ತಿಳಿದಿದ್ದಾರೆ ಹಾಗೂ ಒಗ್ಗಟ್ಟು ಕಾಪಾಡಿಕೊಳ್ಳಲು ಯೋಚಿಸಿದ್ದಾರೆ ಎಂದು ಮೂಲಗಳು ಹೇಳುತ್ತಿವೆ.

ಅಜಿತ್ ಪವಾರ್ ಅವರ ಇತ್ತೀಚಿನ ನಡೆಗೂ ಮತ್ತು ಅದಾನಿ ಗ್ರೂಪ್‌ ವಿರುದ್ಧ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಶರದ್ ಪವಾರ್ ವಿರೋಧಿಸಿದ್ದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪಕ್ಷದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.

ಇದನ್ನೂ ಓದಿರಿ: ಹಿಂಡೆನ್‌ಬರ್ಗ್ ವರದಿಯು ಅದಾನಿ ಗ್ರೂಪ್‌ ಮೇಲಿನ ಉದ್ದೇಶಿತ ದಾಳಿಯಾಗಿದೆ: ಶರದ್ ಪವಾರ್‌

ಅಜಿತ್ ಅವರ ಕ್ರಮಗಳ ಹಿಂದೆ ವರಿಷ್ಠರ ಆಶೀರ್ವಾದ ಇರಬಹುದು ಎಂಬ ವರದಿಗಳನ್ನು ಮೂಲಗಳು ತಳ್ಳಿಹಾಕಿವೆ. ಶರದ್ ಪವಾರ್ ಅವರು ಬಿಜೆಪಿಯೊಂದಿಗೆ ತೀವ್ರ ವಿರೋಧವನ್ನು ಹೊಂದಿದ್ದಾರೆ ಎಂದು ಹೇಳುತ್ತಿವೆ.

ಜಂಟಿ ಸಂಸದೀಯ ಸಮಿತಿಯ ಕುರಿತು ಶರದ್ ಪವಾರ್ ಅವರು ಹೇಳಿಕೆ ನೀಡಿದ ನಂತರ ಅಜಿತ್ ಪವಾರ್ ಅಜ್ಞಾತವಾಗಿ ವ್ಯವಹರಿಸುತ್ತಿರುವುದು ಒಂದು ರೀತಿಯ ರಾಜಕೀಯ ವದಂತಿಗಳಿಗೆ ಅವಕಾಶ ನೀಡಿದೆ. ಪಕ್ಷದಲ್ಲಿ ಒಡಕು ಮೂಡುವುದನ್ನು ತಪ್ಪಿಸುವ ಸಲುವಾಗಿ ವಿಧಾನಸಭೆಯ ಒಳಗೆ ಮತ್ತು ಹೊರಗೆ ಎನ್‌ಸಿಪಿ ಪಕ್ಷದಲ್ಲಿ ಕೆಲವು ಬದಲಾವಣೆಗಳನ್ನು ಶೀಘ್ರದಲ್ಲೇ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...