Homeಮುಖಪುಟಮಹಾರಾಷ್ಟ್ರ: ಇಂಡಿಯಾ ಬಣದ ಸೀಟು ಹಂಚಿಕೆ ಒಪ್ಪಂದ ಅಂತಿಮ; 18 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧೆ?

ಮಹಾರಾಷ್ಟ್ರ: ಇಂಡಿಯಾ ಬಣದ ಸೀಟು ಹಂಚಿಕೆ ಒಪ್ಪಂದ ಅಂತಿಮ; 18 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧೆ?

- Advertisement -
- Advertisement -

ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷವಾದ ‘ಮಹಾ ವಿಕಾಸ್ ಅಘಾಡಿ’ ಮೈತ್ರಿಕೂಟವು 2024ರ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದ ಇತ್ಯರ್ಥಗೊಂಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದ್ದು, 48 ಗಂಟೆಗಳ ಒಳಗೆ ಔಪಚಾರಿಕ ಘೋಷಣೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ರಾಜ್ಯದ 48 ಲೋಕಸಭಾ ಸ್ಥಾನಗಳ 20ರಲ್ಲಿ ಸ್ಪರ್ಧಿಸಲಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ 18ರಲ್ಲಿ ಸ್ಪರ್ಧಿಸಲಿದ್ದು, ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಘಟಕ 10 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ವಂಚಿತ್ ಬಹುಜನ ಅಘಾಡಿ ಪ್ರಾದೇಶಿಕ ಪಕ್ಷವು ಐದು ಸ್ಥಾನಗಳಿಗೆ ಬೇಡಿಕೆಯಿಟ್ಟಿತ್ತು. ಶಿವಸೇನೆಯ (ಯುಬಿಟಿ) ಪಾಲಿನಿಂದ ಎರಡನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ಸ್ವತಂತ್ರ ಅಭ್ಯರ್ಥಿ ರಾಜು ಶೆಟ್ಟಿ ಅವರು ಪವಾರ್ ಅವರ ಪಕ್ಷದಿಂದ ಬೆಂಬಲ ಪಡೆದಿದ್ದಾರೆ.

ಶಿವಸೇನೆ (ಯುಬಿಟಿ) ಮುಂಬೈನ ಆರು ಲೋಕಸಭಾ ಸ್ಥಾನಗಳ ಪೈಕಿ ನಾಲ್ಕರಲ್ಲಿ ಸ್ಪರ್ಧಿಸಲಿದೆ ಎಂದು ಮೂಲಗಳು ತಿಳಿಸಿವೆ, ಅವುಗಳಲ್ಲಿ ಒಂದನ್ನು – ಬಹುಶಃ ಮುಂಬೈ ಈಶಾನ್ಯ ಸ್ಥಾನವನ್ನು ವಿಬಿಎಗೆ ನೀಡಬಹುದು.

39 ಸ್ಥಾನಗಳ ಮಾತುಕತೆಗಳನ್ನು ಪರಿಹರಿಸಲಾಗಿದೆ ಎಂದು ಮೀಲಗಳು ತಿಳಿಸಿದ್ದು, ಮುಂಬೈನ ದಕ್ಷಿಣ ಮಧ್ಯ ಮತ್ತು ವಾಯುವ್ಯ ಸ್ಥಾನಗಳ ಬಗ್ಗೆ ದೊಡ್ಡ ಭಿನ್ನಾಭಿಪ್ರಾಯಗಳಿವೆ. ಕಾಂಗ್ರೆಸ್ ಮತ್ತು ಸೇನಾ (ಯುಬಿಟಿ) ಇವೆರಡೂ ಈ ಖ್ಷೇತ್ರದಲ್ಲಿ ಸ್ಪರ್ಧಿಸಲು ಬಯಸಿವೆ. ಆ ವಿವಾದವನ್ನು ಹೇಗೆ ಪರಿಹರಿಸಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

2019ರ ಚುನಾವಣೆಯಲ್ಲಿ ಶಿವಸೇನೆ (ಆಗ ಅವಿಭಜಿತ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು) 23 ಸ್ಥಾನಗಳಲ್ಲಿ ಸ್ಪರ್ಧಿಸಿತು. ಮುಂಬೈ ದಕ್ಷಿಣ ಮಧ್ಯ ಮತ್ತು ವಾಯುವ್ಯ ಸೇರಿದಂತೆ 18 ಸ್ಥಾನಗಳನ್ನು ಗೆದ್ದಿತು. ಕಾಂಗ್ರೆಸ್ 25 ರಲ್ಲಿ ಸ್ಪರ್ಧಿಸಿ ಚಂದ್ರಾಪುರವನ್ನು ಮಾತ್ರ ಗೆದ್ದುಕೊಂಡಿತು. ಆದರೆ, ಶರದ್ ಪವಾರ್ ಅವರ ಎನ್‌ಸಿಪಿ (ಆಗ ಅವಿಭಜಿತ) 19 ಸ್ಥಾನಗಳಿಂದ ಸ್ಪರ್ಧಿಸಿ ನಾಲ್ಕು ಗೆದ್ದಿತು. ಬಿಜೆಪಿ ಆ ಚುನಾವಣೆಯಲ್ಲಿ ಪ್ರಾಬಲ್ಯ ಸಾಧಿಸಿತು, ಅದು ಸ್ಪರ್ಧಿಸಿದ 25 ಸ್ಥಾನಗಳಲ್ಲಿ 23 ಸ್ಥಾನಗಳನ್ನು ಗೆದ್ದಿತು.

ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಶಿವಸೇನೆ ಮತ್ತು ಎನ್‌ಸಿಪಿಯ ಬಂಡಾಯ ಬಣಗಳು ಈ ಬಾರಿ ಬಿಜೆಪಿಯನ್ನು ಬೆಂಬಲಿಸುತ್ತವೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರನ್ನು ಭೇಡಿಯಾದ ನಂತರ ಈ ಒಪ್ಪಂದವನ್ನು ಮಾಡಲಾಗಿದೆ.

ಈಗ ಅಂತಿಮವಾಗಿರುವ ಒಪ್ಪಂದವು ಇಂಡಿಯಾ ಬಣಕ್ಕೆ ಮತ್ತೊಂದು ದೊಡ್ಡ ಹೆಜ್ಜೆಯಾಗಿದೆ. ಇದು ಕೆಲವೇ ವಾರಗಳಲ್ಲಿ ಚುನಾವಣೆಗೆ ಕಾರಣವಾಗಿರುವುದರಿಂದ ಸಾಧ್ಯವಾದಷ್ಟು ಬೇಗ ಒಪ್ಪಂದಗಳನ್ನು ಕಟ್ಟಲು ಪ್ರಯತ್ನಿಸುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಭಾರತೀಯ ಜನತಾ ಪಕ್ಷವನ್ನು ಸೋಲಿಸುವ ಉದ್ದೇಶದಿಂದ ಕಳೆದ ವರ್ಷ ಜೂನ್‌ನಲ್ಲಿ ಸ್ಥಾಪಿಸಲಾದ ಕಾಂಗ್ರೆಸ್ ನೇತೃತ್ವದ ಗುಂಪು, ಸೀಟು ಹಂಚಿಕೆ ಮಾಡಿಕೊಳ್ಳಲು ಹೆಣಗಾಡುತ್ತಿದೆ. ಪ್ರಾದೇಶಿಕ ಪಕ್ಷಗಳು ಪ್ರತಿ ನಿದರ್ಶನದಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯಲು ರಾಷ್ಟ್ರೀಯ ಪಕ್ಷದ ಮುಂದೆ ಪಟ್ಟು ಹಿಡಿದಿವೆ.

ಇದನ್ನೂ ಓದಿ; ಮಣಿಪುರ ಗಲಭೆ: ಮಿಲಿಟೆಂಟ್ ಗುಂಪುಗಳೊಂದಿಗಿನ ಒಪ್ಪಂದ ರದ್ದುಗೊಳಿಸುವ ನಿರ್ಣಯ ವಿರೋಧಿಸಿದ ಕುಕಿ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...