Homeಕರ್ನಾಟಕಮಹಾರಾಷ್ಟ್ರ, ಜಾರ್ಖಂಡ್ ಫಲಿತಾಂಶ : ಮತ ಎಣಿಕೆ ಆರಂಭ

ಮಹಾರಾಷ್ಟ್ರ, ಜಾರ್ಖಂಡ್ ಫಲಿತಾಂಶ : ಮತ ಎಣಿಕೆ ಆರಂಭ

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವೂ ಇಂದೇ ಹೊರ ಬೀಳಲಿದೆ

- Advertisement -
- Advertisement -

ಬಹು ನಿರೀಕ್ಷಿತ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆಗಳ ಫಲಿತಾಂಶ ಇಂದು (ನ.23) ಪ್ರಕಟಗೊಳ್ಳಲಿದೆ. ಕರ್ನಾಟಕದ ಮೂರು ಕ್ಷೇತ್ರಗಳಾದ ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣದ ಉಪಚುನಾವಣೆಯ ಮತ ಎಣಿಕೆಯೂ ಇಂದೇ ನಡೆಯಲಿದೆ.

ಈಗಾಗಲೇ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯಲಿದ್ದು, ಬಳಿಕ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮತಗಳನ್ನು ಎಣಿಸಲಾಗುತ್ತದೆ.

ಮಹಾರಾಷ್ಟ್ರದಲ್ಲಿ ಆಡಳಿತರೂಢ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ) ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮೈತ್ರಿಕೂಟ ‘ಮಹಾಯುತಿ’ ಮತ್ತೆ ಅಧಿಕಾರ ಹಿಡಿಯುವ ನಿರೀಕ್ಷೆಯಲ್ಲಿದೆ. ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಕೂಡ ಮಹಾಯುತಿಗೆ ಗೆಲುವಾಗಲಿದೆ ಎಂದಿವೆ.

ಮತ್ತೊಂದೆಡೆ ಪ್ರತಿಪಕ್ಷಗಳಾದ ಕಾಂಗ್ರೆಸ್‌, ಶಿವಸೇನೆ (ಉದ್ಧವ್ ಠಾಕ್ರೆ ಬಣ) ಮತ್ತು ಎನ್‌ಸಿಪಿ (ಶರದ್‌ ಪವಾರ್ ಬಣ) ಮೈತ್ರಿಕೂಟ ‘ಮಹಾ ವಿಕಾಸ ಅಘಾಡಿ’ ಶತಾಯಗತಾಯ ಅಧಿಕಾರಕ್ಕೇರುವ ತವಕದಲ್ಲಿದೆ.

ಮಹಾರಾಷ್ಟ್ರದ 288 ಕ್ಷೇತ್ರಗಳಲ್ಲಿ ಒಟ್ಟು 4,136 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದಾರೆ.

ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಭಾಗವಾಗಿ ಬಿಜೆಪಿ 149 ಸ್ಥಾನಗಳಲ್ಲಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 81 ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) 59 ಸ್ಥಾನಗಳಲ್ಲಿ ಸ್ಪರ್ಧಿಸಿವೆ.

ಪ್ರತಿಪಕ್ಷ ಬಣ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದಲ್ಲಿ ಕಾಂಗ್ರೆಸ್ 101, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) 95 ಮತ್ತು ಎನ್‌ಸಿಪಿ (ಶರದ್ ಪವಾರ್) 86 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಜಾರ್ಖಂಡ್‌ನಲ್ಲಿ, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕಾಂಗ್ರೆಸ್ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲು ಭರವಸೆಯಲ್ಲಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ರಾಜ್ಯವನ್ನು ತಮ್ಮ ವಶಕ್ಕೆ ಪಡೆಯುವ ನಿರೀಕ್ಷೆಯಲ್ಲಿದೆ.

ಇಲ್ಲಿ ಕೂಡ ಹೆಚ್ಚಿನ ಸಮೀಕ್ಷೆಗಳು ಎನ್‌ಡಿಎ ಮೈತ್ರಿಕೂಟ ಬಹುಮತ ಗಳಿಸುವುದಾಗಿ ಹೇಳಿವೆ.

ಜಾರ್ಖಂಡ್‌ ವಿಧಾನಸಭೆಯ ಒಟ್ಟು 81 ಸ್ಥಾನಗಳಿಗೆ 528 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಆಡಳಿತರೂಢ ಇಂಡಿಯಾ ಮೈತ್ರಿಕೂಟದಿಂದ ಜೆಎಂಎಂ 43, ಕಾಂಗ್ರೆಸ್ 30, ಆರ್‌ಜೆಡಿ 6 ಮತ್ತು ಸಿಪಿಐ(ಎಂಎಲ್) 4 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಎನ್‌ಡಿಎ ಮೈತ್ರಿಕೂಟದಿಂದ ಬಿಜೆಪಿ 68, ಮಿತ್ರಪಕ್ಷಗಳಾದ ಎಜೆಎಸ್‌ಯು 10, ಜೆಡಿಯು 2 ಮತ್ತು ಲೋಕ ಜನಶಕ್ತಿ (ರಾಮ್ ವಿಲಾಸ್) ಒಂದರಲ್ಲಿ ಸ್ಪರ್ಧೆ ಮಾಡಿದೆ.

ರಾಜ್ಯದ ಮೂರು ಕ್ಷೇತ್ರಗಳ ಮತ ಎಣಿಕೆ ಇಂದು

ಕರ್ನಾಟಕ ವಿಧಾನಸಭೆಯ ಮೂರು ಕ್ಷೇತ್ರಗಳಾದ ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.

ಸಂಡೂರಿನಲ್ಲಿ ಕಾಂಗ್ರೆಸ್‌ನಿಂದ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ, ಬಿಜೆಪಿಯಿಂದ ಬಂಗಾರು ಹನುಮಂತ ಸ್ಪರ್ಧೆ ಮಾಡಿದ್ದಾರೆ.

ಶಿಗ್ಗಾವಿಯಲ್ಲಿ ಕಾಂಗ್ರೆಸ್‌ನಿಂದ ಯಾಸಿರ್ ಅಹ್ಮದ್ ಖಾನ್ ಪಠಾಣ್ ಮತ್ತು ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಕಣಕ್ಕಿಳಿದಿದ್ದಾರೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಸಿ.ಪಿ ಯೋಗೇಶ್ವರ್ ಮತ್ತು ಎನ್‌ಡಿಎ (ಬಿಜೆಪಿ-ಜೆಡಿಎಸ್‌ ಮೈತ್ರಿ) ಅಭ್ಯರ್ಥಿಯಾಗಿ ಮಾಜಿ ಸಿಎಂ ಹಾಗೂ ಹಾಲಿ ಕೇಂದ್ರ ಸಚಿವ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದಾರೆ.

ಪ್ರಿಯಾಂಕಾ ಗಾಂಧಿ ಭವಿಷ್ಯ ಇಂದು ನಿರ್ಧಾರ

ರಾಹುಲ್ ಗಾಂಧಿಯಿಂದ ತೆರವಾಗಿರುವ ಕೇರಳದ ವಯನಾಡ್ ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದೆ. ಚೊಚ್ಚಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರ ಭವಿಷ್ಯ ನಿರ್ಧಾರವಾಗಲಿದೆ.

ಇದನ್ನೂ ಓದಿ : ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ – ದೆಹಲಿ ಗವರ್ನರ್ ಸಕ್ಸೇನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...