Homeಮುಖಪುಟಮಹಾರಾಷ್ಟ್ರ:ಪತ್ರಕರ್ತನ ಮೇಲೆ ಶಾಸಕನ ಬೆಂಬಲಿಗರಿಂದ ಹಲ್ಲೆ

ಮಹಾರಾಷ್ಟ್ರ:ಪತ್ರಕರ್ತನ ಮೇಲೆ ಶಾಸಕನ ಬೆಂಬಲಿಗರಿಂದ ಹಲ್ಲೆ

- Advertisement -
- Advertisement -

8ರ ಹರೆಯದ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಮುಂದಿಟ್ಟು ಶಾಸಕ ಕಿಶೋರ್ ಪಾಟೀಲ್ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಲ್ಲಿ ನ್ಯಾಯ ಒದಗಿಸುವಂತೆ ಆಗ್ರಹಿಸಿದ ಮಹಾರಾಷ್ಟ್ರದ ಪತ್ರಕರ್ತ ಸಂದೀಪ್ ಮಹಾಜನ್ ಮೇಲೆ  ಶಾಸಕ ಕಿಶೋರ್ ಪಾಟೀಲ್ ಬೆಂಬಲಿಗರು ಹಾಗೂ ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಶಿವಸೇನಾ ಶಿಂಧೆ ಬಣದ ಶಾಸಕ ಮತ್ತು ಆತನ ಬೆಂಬಲಿಗರ ಈ ಕೃತ್ಯವನ್ನು ಪ್ರತಿಪಕ್ಷಗಳು ಖಂಡಿಸಿದ್ದು, ಶಾಸಕ ಕಿಶೋರ್ ಪಾಟೀಲ್ ಮತ್ತು ಬೆಂಬಲಿಗರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪ್ರತಿಪಕ್ಷಗಳು ಒತ್ತಾಯಿಸಿವೆ. ಅಲ್ಲದೆ ಪತ್ರಕರ್ತನಿಗೆ  ಹಾಗೂ ಆತನ ಕುಟುಂಬಕ್ಕೆ ಬೆದರಿಕೆಯೊಡ್ಡುತ್ತಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದೆ.

ಎನ್‌ಸಿಪಿ ಶಾಸಕ ರೋಹಿತ್ ಪವಾರ್ ಕೂಡ ಈ ವಿಷಯ ಪ್ರಸ್ತಾಪಿಸಿದ್ದು, ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ ಎಂಬುದನ್ನು ಈ ಘಟನೆ ತೋರಿಸುತ್ತದೆ ಎಂದು ಹೇಳಿದ್ದಾರೆ. ಮಾಧ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿದೆ ಆದರೆ ಪತ್ರಕರ್ತರ ಮೇಲೆಯೇ ಸವಾರಿ ನಡೆಯುತ್ತದೆ ಯಾಕೆಂದರೆ ಅವರು ಸಮಸ್ಯೆಗಳನ್ನು ಬಯಲಿಗೆಳೆಯುತ್ತಾರೆ ಎಂದು ಅವರು ಹೇಳಿದ್ದು, ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ದೇಶದ್ರೋಹಿ ಗ್ಯಾಂಗ್‌ನ ಗೂಂಡಾಗಳು ನಿರ್ಲಜ್ಜವಾಗಿ ವರ್ತಿಸಿದ್ದಾರೆ ಎಂದು ಉದ್ಧವ್ ಠಾಕ್ರೆ ಬಣದ ಶಿವಸೇನೆ ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಹೇಳಿದ್ದಾರೆ.

ಸಂದೀಪ್ ಮಹಾಜನ್ ಅವರು ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಪಚೋರಾದಲ್ಲಿ ತಮ್ಮದೇ ಆದ ಯೂಟ್ಯೂಬ್ ಚಾನೆಲ್ ಮತ್ತು ಪತ್ರಿಕೆಯನ್ನು ನಡೆಸುತ್ತಿದ್ದಾರೆ.ಕೆಲವು ದಿನಗಳ ಹಿಂದೆ, ಎಂಟು ವರ್ಷದ ಬಾಲಕಿಯ ಮೇಲೆ 19 ವರ್ಷದ ನೆರೆಮನೆಯ ಯುವಕನೋರ್ವ ಅತ್ಯಾಚಾರವೆಸಗಿ ಆಕೆಗೆ ಕಲ್ಲಿನಿಂದ ಹಲ್ಲೆ ಮಾಡಿದ್ದ. ಸ್ಥಳೀಯ ಪೊಲೀಸರು ಹಾಗೂ ಶಾಸಕ ಕಿಶೋರ ಪಾಟೀಲ್ ಈ ಪ್ರಕರಣವನ್ನು ಮುಚ್ಚಿ ಹಾಕಲು  ಯತ್ನಿಸಿದರು ಎಂಬ ಆರೋಪ ಕೇಳಿ ಬಂದಿದೆ.

ಸಂದೀಪ್ ಮಹಾಜನ್ ಅವರು ತಮ್ಮ ಸ್ಥಳೀಯ ಪತ್ರಿಕೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಈ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನುಸುದ್ದಿ ಮಾಡಿದ್ದರು ಮತ್ತು ಅವರ ಯೂಟ್ಯೂಬ್ ಚಾನೆಲ್‌ನಲ್ಲಿ ಸುದ್ದಿಯನ್ನು ಪ್ರಸಾರ ಮಾಡಿದ್ದರು. ಶಿಂಧೆ ಬಣದ ಶಿವಸೇನೆ ಶಾಸಕ ಕಿಶೋರ್ ಪಾಟೀಲ್ ಪತ್ರಕರ್ತ ಸಂದೀಪ್ ಮಹಾಜನ್ ಅವರ ವರದಿಯ ಬಗ್ಗೆ ಕೋಪಗೊಂಡರು ಮತ್ತು ಫೋನ್ ಮೂಲಕ ಸಂದೀಪ್ ಮಹಾಜನ್ ಗೆ ನಿಂದಿಸಿದ್ದಾರೆ. ಇದನ್ನು ಪತ್ರಕರ್ತ ಪ್ರಶ್ನಿಸಿದಾಗ ಶಾಸಕ ಕಿಶೋರ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಆದರೆ ಸಂದೀಪ್ ಮಹಾಜನ್ ಅವರು ಅತ್ಯಾಚಾರ ಮತ್ತು ಕೊಲೆ ಘಟನೆಯ ಬಗ್ಗೆ ತಮ್ಮ ವರದಿಯನ್ನು ಮುಂದುವರಿಸಿದ್ದರು ಮತ್ತು ಸ್ಥಳೀಯ ಶಾಸಕ ಕಿಶೋರ್ ಪಾಟೀಲ್ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಪ್ರಶ್ನೆಗಳನ್ನು ಎತ್ತಿ ಬಾಲಕಿ ಮತ್ತು ಆಕೆಯ ಕುಟುಂಬಕ್ಕೆ ನ್ಯಾಯಕ್ಕಾಗಿ ಒತ್ತಾಯಿಸಿದ್ದರು.

ಶಿವಸೇನಾ ಶಾಸಕ ಕಿಶೋರ್ ಪಾಟೀಲ್  ಬೆಂಬಲಿಗರು ಮಹಾಜನ್ ಅವರು ಕಚೇರಿಗೆ ಹೋಗುತ್ತಿದ್ದಾಗ  ಅವರನ್ನು ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಹಲ್ಲೆ ನಡೆಸಿದ್ದಾರೆ. ಅವರು ಪೊಲೀಸ್ ಕೇಸ್ ದಾಖಲಿಸಲು ಹೋದಾಗ ಪೊಲೀಸರು ಶಿವಸೇನಾ ಶಾಸಕ ಕಿಶೋರ್ ಪಾಟೀಲ್ ಮತ್ತು ಅವರ ಗೂಂಡಾಗಳ ವಿರುದ್ಧ ಪ್ರಕರಣ ದಾಖಲಿಸಲು ನಿರಾಕರಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಇದನ್ನು ಓದಿ: ಹರ್ಯಾಣ ಹಿಂಸಾಚಾರ: ಮುಸ್ಲಿಮರ ರಕ್ಷಣೆಗೆ ನಿಲ್ಲುವುದಾಗಿ ನಿರ್ಣಯ ತೆಗೆದುಕೊಂಡ ರೈತ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...