Homeಮುಖಪುಟಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

- Advertisement -
- Advertisement -

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ. ಈ ಫಲಿತಾಂಶಗಳು ರಾಜ್ಯದಲ್ಲಿ ಪಕ್ಷದ ಅತ್ಯುತ್ತಮ ಪ್ರದರ್ಶನಗಳಲ್ಲಿ ಒಂದಾಗಿದ್ದು, ರಾಷ್ಟ್ರೀಯ ಪಕ್ಷಗಳ ಸಾಂಪ್ರದಾಯಿಕ ಭದ್ರಕೋಟೆಗಳನ್ನು ಮೀರಿ ಬೆಳೆಯುತ್ತಿದೆ.

ಈ ಫಲಿತಾಂಶಗಳು, ಹಲವು ವರ್ಷಗಳ ಅಡಿಪಾಯ ಮತ್ತು ನಿರಂತರವಾಗಿ ಸ್ಥಳೀಯ ಭಾಗವಹಿಸುವಿಕೆಯ ಪರಿಣಾಮವನ್ನು ಪ್ರತಿಬಿಂಬಿಸುತ್ತವೆ ಎಂದು ಎಐಎಂಐಎಂ ನಾಯಕರು ಹೇಳಿದ್ದಾರೆ. 2017 ರ ಪುರಸಭೆ ಚುನಾವಣೆಯಲ್ಲಿ ಪಕ್ಷವು 81 ಸ್ಥಾನಗಳನ್ನು ಗೆದ್ದಿತ್ತು. ಆದರೆ ಈ ಬಾರಿ ಡಿಸೆಂಬರ್ 2025 ರಲ್ಲಿ ಮಹಾರಾಷ್ಟ್ರ ಪೌರ ಚುನಾವಣೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ ನಂತರ ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸುವ ಮೂಲಕ ತನ್ನ ಅಸ್ತಿತ್ವವನ್ನು ವಿಸ್ತರಿಸಿತು. ಬಿಹಾರ ವಿಧಾನಸಭಾ ಚುನಾವಣೆಯಲ್ಲಿನ ಯಶಸ್ಸಿನ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಯಿತು, ನಮ್ಮ ಪ್ರಯತ್ನ ಫಲ ನೀಡಿದೆ ಎಂದು ತೋರುತ್ತದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ನೇತೃತ್ವದ ಮನೆ ಮನೆಗೆ ತೆರಳಿ ಪ್ರಚಾರ ಮತ್ತು ಹಿಂದಿನ ಚುನಾವಣೆಗಳಲ್ಲಿ ಅಲ್ಪ ಅಂತರದ ಸೋತ ಕ್ಷೇತ್ರದಲ್ಲಿ ಕೆಲಸ ಮಾಡಲು ಪಕ್ಷದ ಕಾರ್ಯಕರ್ತರನ್ನು ಪ್ರೇರೇಪಿಸಿತು ಎಂದು ಎಐಎಂಐಎಂ ನಾಯಕಿ ಶರೇಖ್ ನಕ್ಷ್ಬಂದಿ ಹೇಳಿದರು. ಸ್ಥಳೀಯ ವಿಷಯಗಳ ಬಗ್ಗೆ ಕಾರ್ಯಕರ್ತರು ಹೊಸ ಶಕ್ತಿಯಿಂದ ಕೆಲಸ ಮಾಡಿದ್ದಾರೆ. ಇದು ಜನರ ಬೆಂಬಲವನ್ನು ಮತಗಳಾಗಿ ಪರಿವರ್ತಿಸಲು ನಮಗೆ ಸಹಾಯ ಮಾಡಿದೆ ಎಂದು ಅವರು ಹೇಳಿದರು.

ನಗರವಾರು ಫಲಿತಾಂಶಗಳನ್ನು ನೋಡುವುವಾದಾದರೆ, ಎಐಎಂಐಎಂ ಛತ್ರಪತಿ ಸಂಭಾಜಿನಗರದಲ್ಲಿ 33, ಮಾಲೆಗಾಂವ್‌ನಲ್ಲಿ 21, ಅಮರಾವತಿಯಲ್ಲಿ 15, ನಾಂದೇಡ್‌ನಲ್ಲಿ 13, ಧುಲೆಯಲ್ಲಿ 10, ಸೋಲಾಪುರದಲ್ಲಿ ಎಂಟು, ಮುಂಬೈನಲ್ಲಿ ಆರು, ಥಾಣೆಯಲ್ಲಿ ಐದು, ಜಲಗಾಂವ್‌ನಲ್ಲಿ ಎರಡು ಮತ್ತು ಚಂದ್ರಾಪುರದಲ್ಲಿ ಒಂದು ಸ್ಥಾನವನ್ನು ಗೆದ್ದಿದೆ. ಈ ಫಲಿತಾಂಶದೊಂದಿಗೆ, ಶರದ್ ಪವಾರ್ ನೇತೃತ್ವದ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಒಟ್ಟಾರೆ ಸ್ಥಾನಗಳಿಗಿಂತ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಗಳಿಸಿದೆ.

ರಾಜಕೀಯ ವೀಕ್ಷಕರು ಹೇಳುವಂತೆ, ಈ ಫಲಿತಾಂಶಗಳು ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ಇದು ಸಾಂಪ್ರದಾಯಿಕವಾಗಿ ಹಲವಾರು ನಗರ ಪ್ರದೇಶಗಳಲ್ಲಿ ಅಲ್ಪಸಂಖ್ಯಾತರ ಬೆಂಬಲವನ್ನು ಅವಲಂಬಿಸಿದೆ. ಎಐಎಂಐಎಂನ ಏರಿಕೆ ಮುಂಬೈ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಸಮಾಜವಾದಿ ಪಕ್ಷಕ್ಕೆ ಸವಾಲನ್ನು ಒಡ್ಡಿದೆ. 2029 ರಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷವು ಈ ಆವೇಗವನ್ನು ಹೆಚ್ಚಿಸಿಕೊಳ್ಳುವ ಆಶಯವನ್ನು ಹೊಂದಿದೆ.

ಎಐಎಂಐಎಂ ಭದ್ರಕೋಟೆ ಎಂದು ದೀರ್ಘಕಾಲದಿಂದ ಪರಿಗಣಿಸಲ್ಪಟ್ಟ ಛತ್ರಪತಿ ಸಂಭಾಜಿನಗರದಲ್ಲಿ, ಶಿವಸೇನೆಯ ಎರಡೂ ಬಣಗಳನ್ನು ಹಲವಾರು ವಾರ್ಡ್‌ಗಳಲ್ಲಿ ಸೋಲಿಸುವ ಮೂಲಕ ಪಕ್ಷವು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿತು. ಕಾಂಗ್ರೆಸ್ ಮತ್ತು ಎನ್‌ಸಿಪಿ ಅಭ್ಯರ್ಥಿಗಳು ಈ ಹಿಂದೆ ಪ್ರಾಬಲ್ಯ ಹೊಂದಿದ್ದ ಅಲ್ಪಸಂಖ್ಯಾತ ಪ್ರಾಬಲ್ಯದ ಪ್ರದೇಶಗಳಲ್ಲಿ ಸ್ಥಾನಗಳನ್ನು ಗೆಲ್ಲುವ ಮೂಲಕ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಥಾಣೆ ಮುನ್ಸಿಪಲ್ ಕಾರ್ಪೊರೇಷನ್‌ಗೆ ಗಮನಾರ್ಹ ಪ್ರವೇಶ ಮಾಡುತ್ತಿದೆ.

ಮುಂಬೈನ ವಾರ್ಡ್ ಸಂಖ್ಯೆ 145 ರಿಂದ ಗೆದ್ದ ಎಐಎಂಐಎಂ ನಾಯಕಿ ಖೈರುನಿಸಾ ಅಕ್ಬರ್ ಹುಸೇನ್, ಜನಾದೇಶ ಜನರಿಗೆ ಸೇರಿದ್ದು ಎಂದು ಹೇಳಿದರು. ಪ್ರಚಾರದ ಸಮಯದಲ್ಲಿ ಪಕ್ಷವು ಎತ್ತಿದ ಸಮಸ್ಯೆಗಳ ಮೇಲೆ ಕೇಂದ್ರೀಕರಿಸುತ್ತದೆ. ನಾಗರಿಕ ಸಮಸ್ಯೆಗಳನ್ನು ಪರಿಹರಿಸಲು ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುತ್ತದೆ ಎಂದು ಅವರು ಹೇಳಿದರು.

ನಾಗ್ಪುರದಲ್ಲಿ ಬಿಜೆಪಿ-ಶಿವಸೇನೆಗೆ ಸೆಡ್ಡು

ವಿದರ್ಭದಲ್ಲಿ, ಬಿಜೆಪಿ ಭದ್ರಕೋಟೆಯಾದ ನಾಗ್ಪುರದಲ್ಲಿ ತನ್ನ ಖಾತೆಯನ್ನು ತೆರೆಯುವ ಮೂಲಕ ಪಕ್ಷವು ಅನೇಕರನ್ನು ಅಚ್ಚರಿಗೊಳಿಸಿತು. ಆರು ಸ್ಥಾನಗಳನ್ನು ಗೆದ್ದು ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಮೂರನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಎಐಎಂಐಎಂ ವಿದರ್ಭದ ಮಾಜಿ ಅಧ್ಯಕ್ಷ ಶಾಹಿದ್ ರಂಗೂನ್‌ವಾಲಾ ಅವರು, ಫಲಿತಾಂಶಗಳು ಸಾಂಸ್ಥಿಕ ಬಲವರ್ಧನೆಯ ಯಶಸ್ಸನ್ನು ಮತ್ತು ತಳಮಟ್ಟದ ಕಾರ್ಯಕರ್ತರಿಗೆ, ಮೊದಲ ಬಾರಿಗೆ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ನಿರ್ಧಾರವನ್ನು ತೋರಿಸಿದೆ ಎಂದು ಹೇಳಿದರು. ನಾಗ್ಪುರದಲ್ಲಿ ಬಿಜೆಪಿ ಮತ್ತು ಶಿವಸೇನಾ ಅಭ್ಯರ್ಥಿಗಳ ವಿರುದ್ಧ ಸ್ಥಾನಗಳನ್ನು ಗೆಲ್ಲುವುದು ಗಮನಾರ್ಹ ಸಾಧನೆಯಾಗಿದೆ ಎಂದು ಅವರು ಹೇಳಿದರು.

ಎಐಎಂಐಎಂ ಇತ್ತೀಚೆಗೆ ಅಕೋಟ್ ಮುನ್ಸಿಪಲ್ ಕೌನ್ಸಿಲ್‌ನಲ್ಲಿ ಬಿಜೆಪಿಯೊಂದಿಗೆ ಕೈಜೋಡಿಸುವ ಮೂಲಕ ಗಮನ ಸೆಳೆದಿದ್ದರೂ, ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾದ ನಂತರ ಮೈತ್ರಿ ಬೇಗನೆ ಕೊನೆಗೊಂಡಿತು. ಇತ್ತೀಚಿನ ನಾಗರಿಕ ಸಮೀಕ್ಷೆಯ ಫಲಿತಾಂಶಗಳು ಮತದಾರರು ಅಭಿವೃದ್ಧಿ, ನ್ಯಾಯ ಮತ್ತು ಪ್ರಾತಿನಿಧ್ಯದ ಮೇಲೆ ಅದರ ಗಮನವನ್ನು ಬೆಂಬಲಿಸಿದ್ದಾರೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....

‘ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಿಗೆ ಪದತ್ಯಾಗ’: ಸೋನಿಯಾ ಗಾಂಧಿ

ಮಂಗಳವಾರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿಯವರ ಮೌನವು ತಟಸ್ಥವಲ್ಲ, ಬದಲಾಗಿ ತ್ಯಾಗವಾಗಿದೆ...

ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ಟೆಕ್ಸಾಸ್‌ನ ಆಸ್ಟಿನ್ ನಗರದ ಬಾರ್ ಒಂದರ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಭಯೋತ್ಪಾದನಾ ಕೃತ್ಯವಾಗಿರಬಹುದು ಎಂಬ ಶಂಕೆಯ ಮೇಲೆ ತನಿಖೆ...