Homeಮುಖಪುಟಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

- Advertisement -
- Advertisement -

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ. ಈ ಫಲಿತಾಂಶಗಳು ರಾಜ್ಯದಲ್ಲಿ ಪಕ್ಷದ ಅತ್ಯುತ್ತಮ ಪ್ರದರ್ಶನಗಳಲ್ಲಿ ಒಂದಾಗಿದ್ದು, ರಾಷ್ಟ್ರೀಯ ಪಕ್ಷಗಳ ಸಾಂಪ್ರದಾಯಿಕ ಭದ್ರಕೋಟೆಗಳನ್ನು ಮೀರಿ ಬೆಳೆಯುತ್ತಿದೆ.

ಈ ಫಲಿತಾಂಶಗಳು, ಹಲವು ವರ್ಷಗಳ ಅಡಿಪಾಯ ಮತ್ತು ನಿರಂತರವಾಗಿ ಸ್ಥಳೀಯ ಭಾಗವಹಿಸುವಿಕೆಯ ಪರಿಣಾಮವನ್ನು ಪ್ರತಿಬಿಂಬಿಸುತ್ತವೆ ಎಂದು ಎಐಎಂಐಎಂ ನಾಯಕರು ಹೇಳಿದ್ದಾರೆ. 2017 ರ ಪುರಸಭೆ ಚುನಾವಣೆಯಲ್ಲಿ ಪಕ್ಷವು 81 ಸ್ಥಾನಗಳನ್ನು ಗೆದ್ದಿತ್ತು. ಆದರೆ ಈ ಬಾರಿ ಡಿಸೆಂಬರ್ 2025 ರಲ್ಲಿ ಮಹಾರಾಷ್ಟ್ರ ಪೌರ ಚುನಾವಣೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ ನಂತರ ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸುವ ಮೂಲಕ ತನ್ನ ಅಸ್ತಿತ್ವವನ್ನು ವಿಸ್ತರಿಸಿತು. ಬಿಹಾರ ವಿಧಾನಸಭಾ ಚುನಾವಣೆಯಲ್ಲಿನ ಯಶಸ್ಸಿನ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಯಿತು, ನಮ್ಮ ಪ್ರಯತ್ನ ಫಲ ನೀಡಿದೆ ಎಂದು ತೋರುತ್ತದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ನೇತೃತ್ವದ ಮನೆ ಮನೆಗೆ ತೆರಳಿ ಪ್ರಚಾರ ಮತ್ತು ಹಿಂದಿನ ಚುನಾವಣೆಗಳಲ್ಲಿ ಅಲ್ಪ ಅಂತರದ ಸೋತ ಕ್ಷೇತ್ರದಲ್ಲಿ ಕೆಲಸ ಮಾಡಲು ಪಕ್ಷದ ಕಾರ್ಯಕರ್ತರನ್ನು ಪ್ರೇರೇಪಿಸಿತು ಎಂದು ಎಐಎಂಐಎಂ ನಾಯಕಿ ಶರೇಖ್ ನಕ್ಷ್ಬಂದಿ ಹೇಳಿದರು. ಸ್ಥಳೀಯ ವಿಷಯಗಳ ಬಗ್ಗೆ ಕಾರ್ಯಕರ್ತರು ಹೊಸ ಶಕ್ತಿಯಿಂದ ಕೆಲಸ ಮಾಡಿದ್ದಾರೆ. ಇದು ಜನರ ಬೆಂಬಲವನ್ನು ಮತಗಳಾಗಿ ಪರಿವರ್ತಿಸಲು ನಮಗೆ ಸಹಾಯ ಮಾಡಿದೆ ಎಂದು ಅವರು ಹೇಳಿದರು.

ನಗರವಾರು ಫಲಿತಾಂಶಗಳನ್ನು ನೋಡುವುವಾದಾದರೆ, ಎಐಎಂಐಎಂ ಛತ್ರಪತಿ ಸಂಭಾಜಿನಗರದಲ್ಲಿ 33, ಮಾಲೆಗಾಂವ್‌ನಲ್ಲಿ 21, ಅಮರಾವತಿಯಲ್ಲಿ 15, ನಾಂದೇಡ್‌ನಲ್ಲಿ 13, ಧುಲೆಯಲ್ಲಿ 10, ಸೋಲಾಪುರದಲ್ಲಿ ಎಂಟು, ಮುಂಬೈನಲ್ಲಿ ಆರು, ಥಾಣೆಯಲ್ಲಿ ಐದು, ಜಲಗಾಂವ್‌ನಲ್ಲಿ ಎರಡು ಮತ್ತು ಚಂದ್ರಾಪುರದಲ್ಲಿ ಒಂದು ಸ್ಥಾನವನ್ನು ಗೆದ್ದಿದೆ. ಈ ಫಲಿತಾಂಶದೊಂದಿಗೆ, ಶರದ್ ಪವಾರ್ ನೇತೃತ್ವದ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಒಟ್ಟಾರೆ ಸ್ಥಾನಗಳಿಗಿಂತ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಗಳಿಸಿದೆ.

ರಾಜಕೀಯ ವೀಕ್ಷಕರು ಹೇಳುವಂತೆ, ಈ ಫಲಿತಾಂಶಗಳು ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ಇದು ಸಾಂಪ್ರದಾಯಿಕವಾಗಿ ಹಲವಾರು ನಗರ ಪ್ರದೇಶಗಳಲ್ಲಿ ಅಲ್ಪಸಂಖ್ಯಾತರ ಬೆಂಬಲವನ್ನು ಅವಲಂಬಿಸಿದೆ. ಎಐಎಂಐಎಂನ ಏರಿಕೆ ಮುಂಬೈ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಸಮಾಜವಾದಿ ಪಕ್ಷಕ್ಕೆ ಸವಾಲನ್ನು ಒಡ್ಡಿದೆ. 2029 ರಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷವು ಈ ಆವೇಗವನ್ನು ಹೆಚ್ಚಿಸಿಕೊಳ್ಳುವ ಆಶಯವನ್ನು ಹೊಂದಿದೆ.

ಎಐಎಂಐಎಂ ಭದ್ರಕೋಟೆ ಎಂದು ದೀರ್ಘಕಾಲದಿಂದ ಪರಿಗಣಿಸಲ್ಪಟ್ಟ ಛತ್ರಪತಿ ಸಂಭಾಜಿನಗರದಲ್ಲಿ, ಶಿವಸೇನೆಯ ಎರಡೂ ಬಣಗಳನ್ನು ಹಲವಾರು ವಾರ್ಡ್‌ಗಳಲ್ಲಿ ಸೋಲಿಸುವ ಮೂಲಕ ಪಕ್ಷವು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿತು. ಕಾಂಗ್ರೆಸ್ ಮತ್ತು ಎನ್‌ಸಿಪಿ ಅಭ್ಯರ್ಥಿಗಳು ಈ ಹಿಂದೆ ಪ್ರಾಬಲ್ಯ ಹೊಂದಿದ್ದ ಅಲ್ಪಸಂಖ್ಯಾತ ಪ್ರಾಬಲ್ಯದ ಪ್ರದೇಶಗಳಲ್ಲಿ ಸ್ಥಾನಗಳನ್ನು ಗೆಲ್ಲುವ ಮೂಲಕ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಥಾಣೆ ಮುನ್ಸಿಪಲ್ ಕಾರ್ಪೊರೇಷನ್‌ಗೆ ಗಮನಾರ್ಹ ಪ್ರವೇಶ ಮಾಡುತ್ತಿದೆ.

ಮುಂಬೈನ ವಾರ್ಡ್ ಸಂಖ್ಯೆ 145 ರಿಂದ ಗೆದ್ದ ಎಐಎಂಐಎಂ ನಾಯಕಿ ಖೈರುನಿಸಾ ಅಕ್ಬರ್ ಹುಸೇನ್, ಜನಾದೇಶ ಜನರಿಗೆ ಸೇರಿದ್ದು ಎಂದು ಹೇಳಿದರು. ಪ್ರಚಾರದ ಸಮಯದಲ್ಲಿ ಪಕ್ಷವು ಎತ್ತಿದ ಸಮಸ್ಯೆಗಳ ಮೇಲೆ ಕೇಂದ್ರೀಕರಿಸುತ್ತದೆ. ನಾಗರಿಕ ಸಮಸ್ಯೆಗಳನ್ನು ಪರಿಹರಿಸಲು ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುತ್ತದೆ ಎಂದು ಅವರು ಹೇಳಿದರು.

ನಾಗ್ಪುರದಲ್ಲಿ ಬಿಜೆಪಿ-ಶಿವಸೇನೆಗೆ ಸೆಡ್ಡು

ವಿದರ್ಭದಲ್ಲಿ, ಬಿಜೆಪಿ ಭದ್ರಕೋಟೆಯಾದ ನಾಗ್ಪುರದಲ್ಲಿ ತನ್ನ ಖಾತೆಯನ್ನು ತೆರೆಯುವ ಮೂಲಕ ಪಕ್ಷವು ಅನೇಕರನ್ನು ಅಚ್ಚರಿಗೊಳಿಸಿತು. ಆರು ಸ್ಥಾನಗಳನ್ನು ಗೆದ್ದು ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಮೂರನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಎಐಎಂಐಎಂ ವಿದರ್ಭದ ಮಾಜಿ ಅಧ್ಯಕ್ಷ ಶಾಹಿದ್ ರಂಗೂನ್‌ವಾಲಾ ಅವರು, ಫಲಿತಾಂಶಗಳು ಸಾಂಸ್ಥಿಕ ಬಲವರ್ಧನೆಯ ಯಶಸ್ಸನ್ನು ಮತ್ತು ತಳಮಟ್ಟದ ಕಾರ್ಯಕರ್ತರಿಗೆ, ಮೊದಲ ಬಾರಿಗೆ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ನಿರ್ಧಾರವನ್ನು ತೋರಿಸಿದೆ ಎಂದು ಹೇಳಿದರು. ನಾಗ್ಪುರದಲ್ಲಿ ಬಿಜೆಪಿ ಮತ್ತು ಶಿವಸೇನಾ ಅಭ್ಯರ್ಥಿಗಳ ವಿರುದ್ಧ ಸ್ಥಾನಗಳನ್ನು ಗೆಲ್ಲುವುದು ಗಮನಾರ್ಹ ಸಾಧನೆಯಾಗಿದೆ ಎಂದು ಅವರು ಹೇಳಿದರು.

ಎಐಎಂಐಎಂ ಇತ್ತೀಚೆಗೆ ಅಕೋಟ್ ಮುನ್ಸಿಪಲ್ ಕೌನ್ಸಿಲ್‌ನಲ್ಲಿ ಬಿಜೆಪಿಯೊಂದಿಗೆ ಕೈಜೋಡಿಸುವ ಮೂಲಕ ಗಮನ ಸೆಳೆದಿದ್ದರೂ, ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾದ ನಂತರ ಮೈತ್ರಿ ಬೇಗನೆ ಕೊನೆಗೊಂಡಿತು. ಇತ್ತೀಚಿನ ನಾಗರಿಕ ಸಮೀಕ್ಷೆಯ ಫಲಿತಾಂಶಗಳು ಮತದಾರರು ಅಭಿವೃದ್ಧಿ, ನ್ಯಾಯ ಮತ್ತು ಪ್ರಾತಿನಿಧ್ಯದ ಮೇಲೆ ಅದರ ಗಮನವನ್ನು ಬೆಂಬಲಿಸಿದ್ದಾರೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...