Homeಮುಖಪುಟಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

- Advertisement -
- Advertisement -

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ. ಈ ಫಲಿತಾಂಶಗಳು ರಾಜ್ಯದಲ್ಲಿ ಪಕ್ಷದ ಅತ್ಯುತ್ತಮ ಪ್ರದರ್ಶನಗಳಲ್ಲಿ ಒಂದಾಗಿದ್ದು, ರಾಷ್ಟ್ರೀಯ ಪಕ್ಷಗಳ ಸಾಂಪ್ರದಾಯಿಕ ಭದ್ರಕೋಟೆಗಳನ್ನು ಮೀರಿ ಬೆಳೆಯುತ್ತಿದೆ.

ಈ ಫಲಿತಾಂಶಗಳು, ಹಲವು ವರ್ಷಗಳ ಅಡಿಪಾಯ ಮತ್ತು ನಿರಂತರವಾಗಿ ಸ್ಥಳೀಯ ಭಾಗವಹಿಸುವಿಕೆಯ ಪರಿಣಾಮವನ್ನು ಪ್ರತಿಬಿಂಬಿಸುತ್ತವೆ ಎಂದು ಎಐಎಂಐಎಂ ನಾಯಕರು ಹೇಳಿದ್ದಾರೆ. 2017 ರ ಪುರಸಭೆ ಚುನಾವಣೆಯಲ್ಲಿ ಪಕ್ಷವು 81 ಸ್ಥಾನಗಳನ್ನು ಗೆದ್ದಿತ್ತು. ಆದರೆ ಈ ಬಾರಿ ಡಿಸೆಂಬರ್ 2025 ರಲ್ಲಿ ಮಹಾರಾಷ್ಟ್ರ ಪೌರ ಚುನಾವಣೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ ನಂತರ ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸುವ ಮೂಲಕ ತನ್ನ ಅಸ್ತಿತ್ವವನ್ನು ವಿಸ್ತರಿಸಿತು. ಬಿಹಾರ ವಿಧಾನಸಭಾ ಚುನಾವಣೆಯಲ್ಲಿನ ಯಶಸ್ಸಿನ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಯಿತು, ನಮ್ಮ ಪ್ರಯತ್ನ ಫಲ ನೀಡಿದೆ ಎಂದು ತೋರುತ್ತದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ನೇತೃತ್ವದ ಮನೆ ಮನೆಗೆ ತೆರಳಿ ಪ್ರಚಾರ ಮತ್ತು ಹಿಂದಿನ ಚುನಾವಣೆಗಳಲ್ಲಿ ಅಲ್ಪ ಅಂತರದ ಸೋತ ಕ್ಷೇತ್ರದಲ್ಲಿ ಕೆಲಸ ಮಾಡಲು ಪಕ್ಷದ ಕಾರ್ಯಕರ್ತರನ್ನು ಪ್ರೇರೇಪಿಸಿತು ಎಂದು ಎಐಎಂಐಎಂ ನಾಯಕಿ ಶರೇಖ್ ನಕ್ಷ್ಬಂದಿ ಹೇಳಿದರು. ಸ್ಥಳೀಯ ವಿಷಯಗಳ ಬಗ್ಗೆ ಕಾರ್ಯಕರ್ತರು ಹೊಸ ಶಕ್ತಿಯಿಂದ ಕೆಲಸ ಮಾಡಿದ್ದಾರೆ. ಇದು ಜನರ ಬೆಂಬಲವನ್ನು ಮತಗಳಾಗಿ ಪರಿವರ್ತಿಸಲು ನಮಗೆ ಸಹಾಯ ಮಾಡಿದೆ ಎಂದು ಅವರು ಹೇಳಿದರು.

ನಗರವಾರು ಫಲಿತಾಂಶಗಳನ್ನು ನೋಡುವುವಾದಾದರೆ, ಎಐಎಂಐಎಂ ಛತ್ರಪತಿ ಸಂಭಾಜಿನಗರದಲ್ಲಿ 33, ಮಾಲೆಗಾಂವ್‌ನಲ್ಲಿ 21, ಅಮರಾವತಿಯಲ್ಲಿ 15, ನಾಂದೇಡ್‌ನಲ್ಲಿ 13, ಧುಲೆಯಲ್ಲಿ 10, ಸೋಲಾಪುರದಲ್ಲಿ ಎಂಟು, ಮುಂಬೈನಲ್ಲಿ ಆರು, ಥಾಣೆಯಲ್ಲಿ ಐದು, ಜಲಗಾಂವ್‌ನಲ್ಲಿ ಎರಡು ಮತ್ತು ಚಂದ್ರಾಪುರದಲ್ಲಿ ಒಂದು ಸ್ಥಾನವನ್ನು ಗೆದ್ದಿದೆ. ಈ ಫಲಿತಾಂಶದೊಂದಿಗೆ, ಶರದ್ ಪವಾರ್ ನೇತೃತ್ವದ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಒಟ್ಟಾರೆ ಸ್ಥಾನಗಳಿಗಿಂತ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಗಳಿಸಿದೆ.

ರಾಜಕೀಯ ವೀಕ್ಷಕರು ಹೇಳುವಂತೆ, ಈ ಫಲಿತಾಂಶಗಳು ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ಇದು ಸಾಂಪ್ರದಾಯಿಕವಾಗಿ ಹಲವಾರು ನಗರ ಪ್ರದೇಶಗಳಲ್ಲಿ ಅಲ್ಪಸಂಖ್ಯಾತರ ಬೆಂಬಲವನ್ನು ಅವಲಂಬಿಸಿದೆ. ಎಐಎಂಐಎಂನ ಏರಿಕೆ ಮುಂಬೈ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಸಮಾಜವಾದಿ ಪಕ್ಷಕ್ಕೆ ಸವಾಲನ್ನು ಒಡ್ಡಿದೆ. 2029 ರಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷವು ಈ ಆವೇಗವನ್ನು ಹೆಚ್ಚಿಸಿಕೊಳ್ಳುವ ಆಶಯವನ್ನು ಹೊಂದಿದೆ.

ಎಐಎಂಐಎಂ ಭದ್ರಕೋಟೆ ಎಂದು ದೀರ್ಘಕಾಲದಿಂದ ಪರಿಗಣಿಸಲ್ಪಟ್ಟ ಛತ್ರಪತಿ ಸಂಭಾಜಿನಗರದಲ್ಲಿ, ಶಿವಸೇನೆಯ ಎರಡೂ ಬಣಗಳನ್ನು ಹಲವಾರು ವಾರ್ಡ್‌ಗಳಲ್ಲಿ ಸೋಲಿಸುವ ಮೂಲಕ ಪಕ್ಷವು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿತು. ಕಾಂಗ್ರೆಸ್ ಮತ್ತು ಎನ್‌ಸಿಪಿ ಅಭ್ಯರ್ಥಿಗಳು ಈ ಹಿಂದೆ ಪ್ರಾಬಲ್ಯ ಹೊಂದಿದ್ದ ಅಲ್ಪಸಂಖ್ಯಾತ ಪ್ರಾಬಲ್ಯದ ಪ್ರದೇಶಗಳಲ್ಲಿ ಸ್ಥಾನಗಳನ್ನು ಗೆಲ್ಲುವ ಮೂಲಕ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಥಾಣೆ ಮುನ್ಸಿಪಲ್ ಕಾರ್ಪೊರೇಷನ್‌ಗೆ ಗಮನಾರ್ಹ ಪ್ರವೇಶ ಮಾಡುತ್ತಿದೆ.

ಮುಂಬೈನ ವಾರ್ಡ್ ಸಂಖ್ಯೆ 145 ರಿಂದ ಗೆದ್ದ ಎಐಎಂಐಎಂ ನಾಯಕಿ ಖೈರುನಿಸಾ ಅಕ್ಬರ್ ಹುಸೇನ್, ಜನಾದೇಶ ಜನರಿಗೆ ಸೇರಿದ್ದು ಎಂದು ಹೇಳಿದರು. ಪ್ರಚಾರದ ಸಮಯದಲ್ಲಿ ಪಕ್ಷವು ಎತ್ತಿದ ಸಮಸ್ಯೆಗಳ ಮೇಲೆ ಕೇಂದ್ರೀಕರಿಸುತ್ತದೆ. ನಾಗರಿಕ ಸಮಸ್ಯೆಗಳನ್ನು ಪರಿಹರಿಸಲು ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುತ್ತದೆ ಎಂದು ಅವರು ಹೇಳಿದರು.

ನಾಗ್ಪುರದಲ್ಲಿ ಬಿಜೆಪಿ-ಶಿವಸೇನೆಗೆ ಸೆಡ್ಡು

ವಿದರ್ಭದಲ್ಲಿ, ಬಿಜೆಪಿ ಭದ್ರಕೋಟೆಯಾದ ನಾಗ್ಪುರದಲ್ಲಿ ತನ್ನ ಖಾತೆಯನ್ನು ತೆರೆಯುವ ಮೂಲಕ ಪಕ್ಷವು ಅನೇಕರನ್ನು ಅಚ್ಚರಿಗೊಳಿಸಿತು. ಆರು ಸ್ಥಾನಗಳನ್ನು ಗೆದ್ದು ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಮೂರನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಎಐಎಂಐಎಂ ವಿದರ್ಭದ ಮಾಜಿ ಅಧ್ಯಕ್ಷ ಶಾಹಿದ್ ರಂಗೂನ್‌ವಾಲಾ ಅವರು, ಫಲಿತಾಂಶಗಳು ಸಾಂಸ್ಥಿಕ ಬಲವರ್ಧನೆಯ ಯಶಸ್ಸನ್ನು ಮತ್ತು ತಳಮಟ್ಟದ ಕಾರ್ಯಕರ್ತರಿಗೆ, ಮೊದಲ ಬಾರಿಗೆ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ನಿರ್ಧಾರವನ್ನು ತೋರಿಸಿದೆ ಎಂದು ಹೇಳಿದರು. ನಾಗ್ಪುರದಲ್ಲಿ ಬಿಜೆಪಿ ಮತ್ತು ಶಿವಸೇನಾ ಅಭ್ಯರ್ಥಿಗಳ ವಿರುದ್ಧ ಸ್ಥಾನಗಳನ್ನು ಗೆಲ್ಲುವುದು ಗಮನಾರ್ಹ ಸಾಧನೆಯಾಗಿದೆ ಎಂದು ಅವರು ಹೇಳಿದರು.

ಎಐಎಂಐಎಂ ಇತ್ತೀಚೆಗೆ ಅಕೋಟ್ ಮುನ್ಸಿಪಲ್ ಕೌನ್ಸಿಲ್‌ನಲ್ಲಿ ಬಿಜೆಪಿಯೊಂದಿಗೆ ಕೈಜೋಡಿಸುವ ಮೂಲಕ ಗಮನ ಸೆಳೆದಿದ್ದರೂ, ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾದ ನಂತರ ಮೈತ್ರಿ ಬೇಗನೆ ಕೊನೆಗೊಂಡಿತು. ಇತ್ತೀಚಿನ ನಾಗರಿಕ ಸಮೀಕ್ಷೆಯ ಫಲಿತಾಂಶಗಳು ಮತದಾರರು ಅಭಿವೃದ್ಧಿ, ನ್ಯಾಯ ಮತ್ತು ಪ್ರಾತಿನಿಧ್ಯದ ಮೇಲೆ ಅದರ ಗಮನವನ್ನು ಬೆಂಬಲಿಸಿದ್ದಾರೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...