Homeಮುಖಪುಟಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

- Advertisement -
- Advertisement -

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ. ಈ ಫಲಿತಾಂಶಗಳು ರಾಜ್ಯದಲ್ಲಿ ಪಕ್ಷದ ಅತ್ಯುತ್ತಮ ಪ್ರದರ್ಶನಗಳಲ್ಲಿ ಒಂದಾಗಿದ್ದು, ರಾಷ್ಟ್ರೀಯ ಪಕ್ಷಗಳ ಸಾಂಪ್ರದಾಯಿಕ ಭದ್ರಕೋಟೆಗಳನ್ನು ಮೀರಿ ಬೆಳೆಯುತ್ತಿದೆ.

ಈ ಫಲಿತಾಂಶಗಳು, ಹಲವು ವರ್ಷಗಳ ಅಡಿಪಾಯ ಮತ್ತು ನಿರಂತರವಾಗಿ ಸ್ಥಳೀಯ ಭಾಗವಹಿಸುವಿಕೆಯ ಪರಿಣಾಮವನ್ನು ಪ್ರತಿಬಿಂಬಿಸುತ್ತವೆ ಎಂದು ಎಐಎಂಐಎಂ ನಾಯಕರು ಹೇಳಿದ್ದಾರೆ. 2017 ರ ಪುರಸಭೆ ಚುನಾವಣೆಯಲ್ಲಿ ಪಕ್ಷವು 81 ಸ್ಥಾನಗಳನ್ನು ಗೆದ್ದಿತ್ತು. ಆದರೆ ಈ ಬಾರಿ ಡಿಸೆಂಬರ್ 2025 ರಲ್ಲಿ ಮಹಾರಾಷ್ಟ್ರ ಪೌರ ಚುನಾವಣೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ ನಂತರ ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸುವ ಮೂಲಕ ತನ್ನ ಅಸ್ತಿತ್ವವನ್ನು ವಿಸ್ತರಿಸಿತು. ಬಿಹಾರ ವಿಧಾನಸಭಾ ಚುನಾವಣೆಯಲ್ಲಿನ ಯಶಸ್ಸಿನ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಯಿತು, ನಮ್ಮ ಪ್ರಯತ್ನ ಫಲ ನೀಡಿದೆ ಎಂದು ತೋರುತ್ತದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ನೇತೃತ್ವದ ಮನೆ ಮನೆಗೆ ತೆರಳಿ ಪ್ರಚಾರ ಮತ್ತು ಹಿಂದಿನ ಚುನಾವಣೆಗಳಲ್ಲಿ ಅಲ್ಪ ಅಂತರದ ಸೋತ ಕ್ಷೇತ್ರದಲ್ಲಿ ಕೆಲಸ ಮಾಡಲು ಪಕ್ಷದ ಕಾರ್ಯಕರ್ತರನ್ನು ಪ್ರೇರೇಪಿಸಿತು ಎಂದು ಎಐಎಂಐಎಂ ನಾಯಕಿ ಶರೇಖ್ ನಕ್ಷ್ಬಂದಿ ಹೇಳಿದರು. ಸ್ಥಳೀಯ ವಿಷಯಗಳ ಬಗ್ಗೆ ಕಾರ್ಯಕರ್ತರು ಹೊಸ ಶಕ್ತಿಯಿಂದ ಕೆಲಸ ಮಾಡಿದ್ದಾರೆ. ಇದು ಜನರ ಬೆಂಬಲವನ್ನು ಮತಗಳಾಗಿ ಪರಿವರ್ತಿಸಲು ನಮಗೆ ಸಹಾಯ ಮಾಡಿದೆ ಎಂದು ಅವರು ಹೇಳಿದರು.

ನಗರವಾರು ಫಲಿತಾಂಶಗಳನ್ನು ನೋಡುವುವಾದಾದರೆ, ಎಐಎಂಐಎಂ ಛತ್ರಪತಿ ಸಂಭಾಜಿನಗರದಲ್ಲಿ 33, ಮಾಲೆಗಾಂವ್‌ನಲ್ಲಿ 21, ಅಮರಾವತಿಯಲ್ಲಿ 15, ನಾಂದೇಡ್‌ನಲ್ಲಿ 13, ಧುಲೆಯಲ್ಲಿ 10, ಸೋಲಾಪುರದಲ್ಲಿ ಎಂಟು, ಮುಂಬೈನಲ್ಲಿ ಆರು, ಥಾಣೆಯಲ್ಲಿ ಐದು, ಜಲಗಾಂವ್‌ನಲ್ಲಿ ಎರಡು ಮತ್ತು ಚಂದ್ರಾಪುರದಲ್ಲಿ ಒಂದು ಸ್ಥಾನವನ್ನು ಗೆದ್ದಿದೆ. ಈ ಫಲಿತಾಂಶದೊಂದಿಗೆ, ಶರದ್ ಪವಾರ್ ನೇತೃತ್ವದ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಒಟ್ಟಾರೆ ಸ್ಥಾನಗಳಿಗಿಂತ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಗಳಿಸಿದೆ.

ರಾಜಕೀಯ ವೀಕ್ಷಕರು ಹೇಳುವಂತೆ, ಈ ಫಲಿತಾಂಶಗಳು ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ಇದು ಸಾಂಪ್ರದಾಯಿಕವಾಗಿ ಹಲವಾರು ನಗರ ಪ್ರದೇಶಗಳಲ್ಲಿ ಅಲ್ಪಸಂಖ್ಯಾತರ ಬೆಂಬಲವನ್ನು ಅವಲಂಬಿಸಿದೆ. ಎಐಎಂಐಎಂನ ಏರಿಕೆ ಮುಂಬೈ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಸಮಾಜವಾದಿ ಪಕ್ಷಕ್ಕೆ ಸವಾಲನ್ನು ಒಡ್ಡಿದೆ. 2029 ರಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷವು ಈ ಆವೇಗವನ್ನು ಹೆಚ್ಚಿಸಿಕೊಳ್ಳುವ ಆಶಯವನ್ನು ಹೊಂದಿದೆ.

ಎಐಎಂಐಎಂ ಭದ್ರಕೋಟೆ ಎಂದು ದೀರ್ಘಕಾಲದಿಂದ ಪರಿಗಣಿಸಲ್ಪಟ್ಟ ಛತ್ರಪತಿ ಸಂಭಾಜಿನಗರದಲ್ಲಿ, ಶಿವಸೇನೆಯ ಎರಡೂ ಬಣಗಳನ್ನು ಹಲವಾರು ವಾರ್ಡ್‌ಗಳಲ್ಲಿ ಸೋಲಿಸುವ ಮೂಲಕ ಪಕ್ಷವು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿತು. ಕಾಂಗ್ರೆಸ್ ಮತ್ತು ಎನ್‌ಸಿಪಿ ಅಭ್ಯರ್ಥಿಗಳು ಈ ಹಿಂದೆ ಪ್ರಾಬಲ್ಯ ಹೊಂದಿದ್ದ ಅಲ್ಪಸಂಖ್ಯಾತ ಪ್ರಾಬಲ್ಯದ ಪ್ರದೇಶಗಳಲ್ಲಿ ಸ್ಥಾನಗಳನ್ನು ಗೆಲ್ಲುವ ಮೂಲಕ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಥಾಣೆ ಮುನ್ಸಿಪಲ್ ಕಾರ್ಪೊರೇಷನ್‌ಗೆ ಗಮನಾರ್ಹ ಪ್ರವೇಶ ಮಾಡುತ್ತಿದೆ.

ಮುಂಬೈನ ವಾರ್ಡ್ ಸಂಖ್ಯೆ 145 ರಿಂದ ಗೆದ್ದ ಎಐಎಂಐಎಂ ನಾಯಕಿ ಖೈರುನಿಸಾ ಅಕ್ಬರ್ ಹುಸೇನ್, ಜನಾದೇಶ ಜನರಿಗೆ ಸೇರಿದ್ದು ಎಂದು ಹೇಳಿದರು. ಪ್ರಚಾರದ ಸಮಯದಲ್ಲಿ ಪಕ್ಷವು ಎತ್ತಿದ ಸಮಸ್ಯೆಗಳ ಮೇಲೆ ಕೇಂದ್ರೀಕರಿಸುತ್ತದೆ. ನಾಗರಿಕ ಸಮಸ್ಯೆಗಳನ್ನು ಪರಿಹರಿಸಲು ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುತ್ತದೆ ಎಂದು ಅವರು ಹೇಳಿದರು.

ನಾಗ್ಪುರದಲ್ಲಿ ಬಿಜೆಪಿ-ಶಿವಸೇನೆಗೆ ಸೆಡ್ಡು

ವಿದರ್ಭದಲ್ಲಿ, ಬಿಜೆಪಿ ಭದ್ರಕೋಟೆಯಾದ ನಾಗ್ಪುರದಲ್ಲಿ ತನ್ನ ಖಾತೆಯನ್ನು ತೆರೆಯುವ ಮೂಲಕ ಪಕ್ಷವು ಅನೇಕರನ್ನು ಅಚ್ಚರಿಗೊಳಿಸಿತು. ಆರು ಸ್ಥಾನಗಳನ್ನು ಗೆದ್ದು ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಮೂರನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಎಐಎಂಐಎಂ ವಿದರ್ಭದ ಮಾಜಿ ಅಧ್ಯಕ್ಷ ಶಾಹಿದ್ ರಂಗೂನ್‌ವಾಲಾ ಅವರು, ಫಲಿತಾಂಶಗಳು ಸಾಂಸ್ಥಿಕ ಬಲವರ್ಧನೆಯ ಯಶಸ್ಸನ್ನು ಮತ್ತು ತಳಮಟ್ಟದ ಕಾರ್ಯಕರ್ತರಿಗೆ, ಮೊದಲ ಬಾರಿಗೆ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ನಿರ್ಧಾರವನ್ನು ತೋರಿಸಿದೆ ಎಂದು ಹೇಳಿದರು. ನಾಗ್ಪುರದಲ್ಲಿ ಬಿಜೆಪಿ ಮತ್ತು ಶಿವಸೇನಾ ಅಭ್ಯರ್ಥಿಗಳ ವಿರುದ್ಧ ಸ್ಥಾನಗಳನ್ನು ಗೆಲ್ಲುವುದು ಗಮನಾರ್ಹ ಸಾಧನೆಯಾಗಿದೆ ಎಂದು ಅವರು ಹೇಳಿದರು.

ಎಐಎಂಐಎಂ ಇತ್ತೀಚೆಗೆ ಅಕೋಟ್ ಮುನ್ಸಿಪಲ್ ಕೌನ್ಸಿಲ್‌ನಲ್ಲಿ ಬಿಜೆಪಿಯೊಂದಿಗೆ ಕೈಜೋಡಿಸುವ ಮೂಲಕ ಗಮನ ಸೆಳೆದಿದ್ದರೂ, ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾದ ನಂತರ ಮೈತ್ರಿ ಬೇಗನೆ ಕೊನೆಗೊಂಡಿತು. ಇತ್ತೀಚಿನ ನಾಗರಿಕ ಸಮೀಕ್ಷೆಯ ಫಲಿತಾಂಶಗಳು ಮತದಾರರು ಅಭಿವೃದ್ಧಿ, ನ್ಯಾಯ ಮತ್ತು ಪ್ರಾತಿನಿಧ್ಯದ ಮೇಲೆ ಅದರ ಗಮನವನ್ನು ಬೆಂಬಲಿಸಿದ್ದಾರೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...