Homeಮುಖಪುಟಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಪ್ರಾಬಲ್ಯ ಮೆರೆದ ಆಡಳಿತರೂಢ ಮೈತ್ರಿ

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಪ್ರಾಬಲ್ಯ ಮೆರೆದ ಆಡಳಿತರೂಢ ಮೈತ್ರಿ

- Advertisement -
- Advertisement -

ಮಹಾರಾಷ್ಟ್ರದ ಆಡಳಿತರೂಢ ಮಹಾ ವಿಕಾಸ್ ಅಘಾಡಿ (MVS) ಮೈತ್ರಿ ಸರ್ಕಾರವು ರಾಜ್ಯದ ಚುನಾವಣಾ ರಾಜಕೀಯದಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. ಎನ್‌ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್ ಮೈತ್ರಿಯು ರಾಜ್ಯದಲ್ಲಿ ಇತ್ತೀಚೆಗೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಆದರೆ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ.

ರಾಜ್ಯ ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ನಗರ ಸ್ಥಳೀಯ ಸಂಸ್ಥೆಗಳ 1,649 ಸ್ಥಾನಗಳಲ್ಲಿ, ಬಿಜೆಪಿ 384 ಸ್ಥಾನಗಳನ್ನು ಗಳಿಸಿದರೆ, ಎನ್‌ಸಿಪಿ 344 ಸ್ಥಾನಗಳನ್ನು, ಕಾಂಗ್ರೆಸ್ 316 ಮತ್ತು ಶಿವಸೇನೆ 284 ಸ್ಥಾನಗಳನ್ನು ಗೆದ್ದಿದೆ.

ಇದನ್ನೂ ಓದಿ:ಮಹಾರಾಷ್ಟ್ರ: ನೀರಿಗಾಗಿ 40 ಅಡಿ ಆಳದ ನದಿಯನ್ನು ಮರದ ದಿಮ್ಮಿ ಸಹಾಯದಿಂದ ದಾಟುತ್ತಿದ್ದ ಆದಿವಾಸಿ ಮಹಿಳೆಯರು, ಎಚ್ಚೆತ್ತ ಸರ್ಕಾರ

ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ‘ಮಹಾ ವಿಕಾಸ್ ಅಘಾಡಿ’ ಮೈತ್ರಿ ಕೂಟ ಒಟ್ಟು 944 ಸ್ಥಾನಗಳನ್ನು ಗಳಿಸಿದೆ ಎಂದು ಈ ಅಂಕಿ ಅಂಶ ಹೇಳಿದೆ. ಮೈತ್ರಿಕೂಟದಲ್ಲಿ ಎನ್‌ಸಿಪಿ ಅತಿ ಹೆಚ್ಚು ಲಾಭ ಗಳಿಸಿದರೆ, ಶಿವಸೇನೆ 284 ಸ್ಥಾನಗಳೊಂದಿಗೆ ತನ್ನ ಹಲವು ಕ್ಷೇತ್ರಗಳನ್ನು ಕಳೆದುಕೊಂಡಿದೆ. ರಾಜ್ಯದ ಮುಖ್ಯಮಂತ್ರಿ ಶಿವಸೇನೆಯವರಾಗಿದ್ದರೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ.

ಚುನಾವಣೆಯ ಮತ್ತೊಂದು ಗಮನಾರ್ಹ ವೈಶಿಷ್ಟ್ಯವೆಂದರೆ, ಎನ್‌ಸಿಪಿ ಶಾಸಕ ರೋಹಿತ್ ಪವಾರ್ ಅವರ ಕ್ಷೇತ್ರವಾದ ಕರ್ಜಾತ್‌ನ 17 ಸ್ಥಾನಗಳಲ್ಲಿ 15 ಸ್ಥಾನಗಳನ್ನು ಎನ್‌ಸಿಪಿ ಗೆದ್ದಿದೆ. ಬಿಜೆಪಿ ಪ್ರಾಬಲ್ಯದ್ದ ಈ ನಗರ ಸಂಸ್ಥೆಯಲ್ಲಿ ರೋಹಿತ್ ಪವಾರ್ ಅವರು ರಾಜಕೀಯ ಚಿತ್ರಣವನ್ನು ಬದಲಾಯಿಸಲು ನಿರಂತರ ಕೆಲಸ ಮಾಡಿದ್ದರು. ಇದೇ ರೀತಿ ಕವಠೆ-ಮಹಂಕಲ್‌ನ 17 ಸ್ಥಾನಗಳಲ್ಲಿ 10 ಸ್ಥಾನಗಳನ್ನು ಎನ್‌ಸಿಪಿ ಗೆದ್ದುಕೊಂಡಿದೆ.

ಹಣ ಮತ್ತು ಅಧಿಕಾರದ ದುರುಪಯೋಗದ ಹೊರತಾಗಿಯೂ ಬಿಜೆಪಿಯು ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತೊಮ್ಮೆ ನಂಬರ್ ಒನ್ ಪಕ್ಷವಾಗಿದೆ ಎಂದು ಅವರು ಹೇಳಿದ್ದಾರೆ. “ಜನರು ಮತ್ತೆ ಬಿಜೆಪಿಯ ಕೆಲಸ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಪ್ರಬಲ ನಾಯಕತ್ವದಲ್ಲಿ ನಂಬಿಕೆ ಇಟ್ಟಿದ್ದಾರೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ:ಮಹಾರಾಷ್ಟ್ರ ಸಿಎಂ ಪತ್ನಿಗೆ ಅವಹೇಳನ: BJP ಐಟಿ ಸೆಲ್‌ ಸದಸ್ಯನ ಬಂಧನ

ಮಹಾ ವಿಕಾಸ್ ಅಘಾಡಿ ಮೈತ್ರಿಯು ಮತ್ತೊಮ್ಮೆ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿದೆ ಎಂದು ಎನ್‌ಸಿಪಿ ವಕ್ತಾರ ಮತ್ತು ಕ್ಯಾಬಿನೆಟ್ ಸಚಿವ ನವಾಬ್ ಮಲಿಕ್ ಹೇಳಿದ್ದಾರೆ. “ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶವು ಮಹಾರಾಷ್ಟ್ರದ ಜನರು ಮಹಾ ವಿಕಾಸ್ ಅಘಾಡಿಯ ಪರವಾಗಿದ್ದಾರೆ ಎಂಬುದನ್ನು ನಿರೂಪಿಸುತ್ತದೆ. ಇದು ನಮ್ಮ ಒಳ್ಳೆಯ ಕೆಲಸಕ್ಕೆ ಸಿಕ್ಕ ರಶೀದಿಯಾಗಿದೆ” ಎಂದು ಮಲಿಕ್ ಪ್ರತಿಪಾದಿಸಿದ್ದಾರೆ.

ಎನ್‌ಸಿಪಿ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಮಾತನಾಡಿ, “ನಮ್ಮ ನಾಯಕತ್ವವು ನಿರಂತರವಾಗಿ ಸಾಮಾನ್ಯ ಜನರೊಂದಿಗೆ ಸಂವಾದ ನಡೆಸುತ್ತಿದೆ, ಪ್ರತಿಕ್ರಿಯೆಯನ್ನು ತೆಗೆದುಕೊಳ್ಳುತ್ತಿದೆ ಮತ್ತು ಜನಪರ ಕೆಲಸಗಳತ್ತ ಗಮನ ಹರಿಸುತ್ತಿದೆ” ಎಂದು ಹೇಳಿದ್ದಾರೆ. ಫಲಿತಾಂಶ ಖುಷಿ ತಂದಿದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಳೆ ಹೇಳಿದ್ದಾರೆ.

ಇದನ್ನೂ ಓದಿ:ದ್ವೇಷ ಭಾಷಣ: ವಿವಾದಿತ ಕಾಳಿಚರಣ್ ಸ್ವಾಮಿಯನ್ನು ವಶಕ್ಕೆ ಪಡೆದ ಮಹಾರಾಷ್ಟ್ರ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...