Homeಮುಖಪುಟಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಪ್ರಾಬಲ್ಯ ಮೆರೆದ ಆಡಳಿತರೂಢ ಮೈತ್ರಿ

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಪ್ರಾಬಲ್ಯ ಮೆರೆದ ಆಡಳಿತರೂಢ ಮೈತ್ರಿ

- Advertisement -
- Advertisement -

ಮಹಾರಾಷ್ಟ್ರದ ಆಡಳಿತರೂಢ ಮಹಾ ವಿಕಾಸ್ ಅಘಾಡಿ (MVS) ಮೈತ್ರಿ ಸರ್ಕಾರವು ರಾಜ್ಯದ ಚುನಾವಣಾ ರಾಜಕೀಯದಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. ಎನ್‌ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್ ಮೈತ್ರಿಯು ರಾಜ್ಯದಲ್ಲಿ ಇತ್ತೀಚೆಗೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಆದರೆ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ.

ರಾಜ್ಯ ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ನಗರ ಸ್ಥಳೀಯ ಸಂಸ್ಥೆಗಳ 1,649 ಸ್ಥಾನಗಳಲ್ಲಿ, ಬಿಜೆಪಿ 384 ಸ್ಥಾನಗಳನ್ನು ಗಳಿಸಿದರೆ, ಎನ್‌ಸಿಪಿ 344 ಸ್ಥಾನಗಳನ್ನು, ಕಾಂಗ್ರೆಸ್ 316 ಮತ್ತು ಶಿವಸೇನೆ 284 ಸ್ಥಾನಗಳನ್ನು ಗೆದ್ದಿದೆ.

ಇದನ್ನೂ ಓದಿ:ಮಹಾರಾಷ್ಟ್ರ: ನೀರಿಗಾಗಿ 40 ಅಡಿ ಆಳದ ನದಿಯನ್ನು ಮರದ ದಿಮ್ಮಿ ಸಹಾಯದಿಂದ ದಾಟುತ್ತಿದ್ದ ಆದಿವಾಸಿ ಮಹಿಳೆಯರು, ಎಚ್ಚೆತ್ತ ಸರ್ಕಾರ

ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ‘ಮಹಾ ವಿಕಾಸ್ ಅಘಾಡಿ’ ಮೈತ್ರಿ ಕೂಟ ಒಟ್ಟು 944 ಸ್ಥಾನಗಳನ್ನು ಗಳಿಸಿದೆ ಎಂದು ಈ ಅಂಕಿ ಅಂಶ ಹೇಳಿದೆ. ಮೈತ್ರಿಕೂಟದಲ್ಲಿ ಎನ್‌ಸಿಪಿ ಅತಿ ಹೆಚ್ಚು ಲಾಭ ಗಳಿಸಿದರೆ, ಶಿವಸೇನೆ 284 ಸ್ಥಾನಗಳೊಂದಿಗೆ ತನ್ನ ಹಲವು ಕ್ಷೇತ್ರಗಳನ್ನು ಕಳೆದುಕೊಂಡಿದೆ. ರಾಜ್ಯದ ಮುಖ್ಯಮಂತ್ರಿ ಶಿವಸೇನೆಯವರಾಗಿದ್ದರೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ.

ಚುನಾವಣೆಯ ಮತ್ತೊಂದು ಗಮನಾರ್ಹ ವೈಶಿಷ್ಟ್ಯವೆಂದರೆ, ಎನ್‌ಸಿಪಿ ಶಾಸಕ ರೋಹಿತ್ ಪವಾರ್ ಅವರ ಕ್ಷೇತ್ರವಾದ ಕರ್ಜಾತ್‌ನ 17 ಸ್ಥಾನಗಳಲ್ಲಿ 15 ಸ್ಥಾನಗಳನ್ನು ಎನ್‌ಸಿಪಿ ಗೆದ್ದಿದೆ. ಬಿಜೆಪಿ ಪ್ರಾಬಲ್ಯದ್ದ ಈ ನಗರ ಸಂಸ್ಥೆಯಲ್ಲಿ ರೋಹಿತ್ ಪವಾರ್ ಅವರು ರಾಜಕೀಯ ಚಿತ್ರಣವನ್ನು ಬದಲಾಯಿಸಲು ನಿರಂತರ ಕೆಲಸ ಮಾಡಿದ್ದರು. ಇದೇ ರೀತಿ ಕವಠೆ-ಮಹಂಕಲ್‌ನ 17 ಸ್ಥಾನಗಳಲ್ಲಿ 10 ಸ್ಥಾನಗಳನ್ನು ಎನ್‌ಸಿಪಿ ಗೆದ್ದುಕೊಂಡಿದೆ.

ಹಣ ಮತ್ತು ಅಧಿಕಾರದ ದುರುಪಯೋಗದ ಹೊರತಾಗಿಯೂ ಬಿಜೆಪಿಯು ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತೊಮ್ಮೆ ನಂಬರ್ ಒನ್ ಪಕ್ಷವಾಗಿದೆ ಎಂದು ಅವರು ಹೇಳಿದ್ದಾರೆ. “ಜನರು ಮತ್ತೆ ಬಿಜೆಪಿಯ ಕೆಲಸ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಪ್ರಬಲ ನಾಯಕತ್ವದಲ್ಲಿ ನಂಬಿಕೆ ಇಟ್ಟಿದ್ದಾರೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ:ಮಹಾರಾಷ್ಟ್ರ ಸಿಎಂ ಪತ್ನಿಗೆ ಅವಹೇಳನ: BJP ಐಟಿ ಸೆಲ್‌ ಸದಸ್ಯನ ಬಂಧನ

ಮಹಾ ವಿಕಾಸ್ ಅಘಾಡಿ ಮೈತ್ರಿಯು ಮತ್ತೊಮ್ಮೆ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿದೆ ಎಂದು ಎನ್‌ಸಿಪಿ ವಕ್ತಾರ ಮತ್ತು ಕ್ಯಾಬಿನೆಟ್ ಸಚಿವ ನವಾಬ್ ಮಲಿಕ್ ಹೇಳಿದ್ದಾರೆ. “ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶವು ಮಹಾರಾಷ್ಟ್ರದ ಜನರು ಮಹಾ ವಿಕಾಸ್ ಅಘಾಡಿಯ ಪರವಾಗಿದ್ದಾರೆ ಎಂಬುದನ್ನು ನಿರೂಪಿಸುತ್ತದೆ. ಇದು ನಮ್ಮ ಒಳ್ಳೆಯ ಕೆಲಸಕ್ಕೆ ಸಿಕ್ಕ ರಶೀದಿಯಾಗಿದೆ” ಎಂದು ಮಲಿಕ್ ಪ್ರತಿಪಾದಿಸಿದ್ದಾರೆ.

ಎನ್‌ಸಿಪಿ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಮಾತನಾಡಿ, “ನಮ್ಮ ನಾಯಕತ್ವವು ನಿರಂತರವಾಗಿ ಸಾಮಾನ್ಯ ಜನರೊಂದಿಗೆ ಸಂವಾದ ನಡೆಸುತ್ತಿದೆ, ಪ್ರತಿಕ್ರಿಯೆಯನ್ನು ತೆಗೆದುಕೊಳ್ಳುತ್ತಿದೆ ಮತ್ತು ಜನಪರ ಕೆಲಸಗಳತ್ತ ಗಮನ ಹರಿಸುತ್ತಿದೆ” ಎಂದು ಹೇಳಿದ್ದಾರೆ. ಫಲಿತಾಂಶ ಖುಷಿ ತಂದಿದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಳೆ ಹೇಳಿದ್ದಾರೆ.

ಇದನ್ನೂ ಓದಿ:ದ್ವೇಷ ಭಾಷಣ: ವಿವಾದಿತ ಕಾಳಿಚರಣ್ ಸ್ವಾಮಿಯನ್ನು ವಶಕ್ಕೆ ಪಡೆದ ಮಹಾರಾಷ್ಟ್ರ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...