Homeಮುಖಪುಟಮಹಾರಾಷ್ಟ್ರ | ಮಹಾಯುತಿ ಅಲೆಯ ನಡುವೆಯು ದಹಾನು ಕ್ಷೇತ್ರವನ್ನು 10ನೇ ಬಾರಿ ಗೆದ್ದ ಸಿಪಿಐ(ಎಂ)

ಮಹಾರಾಷ್ಟ್ರ | ಮಹಾಯುತಿ ಅಲೆಯ ನಡುವೆಯು ದಹಾನು ಕ್ಷೇತ್ರವನ್ನು 10ನೇ ಬಾರಿ ಗೆದ್ದ ಸಿಪಿಐ(ಎಂ)

- Advertisement -
- Advertisement -

ಮಹಾರಾಷ್ಟ್ರ ಚುನಾವಣೆಯಲ್ಲಿ ಪಾಲ್ಘರ್ ಜಿಲ್ಲೆಯ ದಹಾನು (ಪರಿಶಿಷ್ಟ ಪಂಗಡ ಮೀಸಲು) ವಿಧಾನಸಭಾ ಕ್ಷೇತ್ರವನ್ನು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಅಭ್ಯರ್ಥಿ ವಿನೋದ್ ನಿಕೋಲ್ 5,133 ಮತಗಳ ಅಂತರದಿಂದ ಗೆದ್ದಿದ್ದಾರೆ. ಅವರು ಬಿಜೆಪಿಯ ವಿನೋದ್ ಸುರೇಶ್ ಮೇಧಾ ಅವರನ್ನು 5,133 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ. ವಿಶೇಷವಾಗಿ ಸಿಪಿಐ(ಎಂ) ಈ ಕ್ಷೇತ್ರವನ್ನು 1978 ರಿಂದ 10 ನೇ ಬಾರಿಗೆ ಈ ಕ್ಷೇತ್ರವನ್ನು ಗೆದ್ದಿದೆ.

2009 ರಲ್ಲಿ ದಹಾನು (ST) ಕ್ಷೇತ್ರವನ್ನು ಪುನರ್‌ರಚಿಸಲಾಗಿದ್ದು, ಅದಕ್ಕೂ ಮೊದಲು ಕ್ಷೇತ್ರವನ್ನು ಜವಾಹರ್ (ST) ಎಂದು ಕರೆಯಲಾಗುತ್ತಿತ್ತು. ಮಹಾಯುತಿ ಅಲೆಯ ನಡುವೆಯೂ ದಹನು ಕ್ಷೇತ್ರವನ್ನು ಎಲ್ಲಾ ಅಡೆತಡೆಗಳನ್ನು ಮೀರಿ ಸಿಪಿಐ(ಎಂ) ಗೆದ್ದಿರುವುದು ಗಮನಾರ್ಹ ಸಾಧನೆಯಾಗಿದೆ ಎಂದು ಸಿಪಿಐ(ಎಂ) ನಾಯಕ ಅಶೋಕ್ ಧಾವಳೆ ಹೇಳಿದ್ದಾರೆ. ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಶ್ರೇಯವು ದಹಾನು ಮತ್ತು ತಲಾಸರಿ ತಹಸಿಲ್‌ಗಳ ಜನರು ಮತ್ತು ವಿವಿಧ ಎಡಪಂಥೀಯ ಸಂಘಟನೆಗಳ ಕಾರ್ಯಕರ್ತರಿಗೆ ಸಲ್ಲುತ್ತದೆ ಎಂದು ಅವರು ಹೇಳಿದ್ದಾರೆ. ಸಿಪಿಐ(ಎಂ) ವಿರೋಧ ಪಕ್ಷವಾದ ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಮತ್ತು ಶಿವಸೇನೆ (ಯುಬಿಟಿ)ಯ ಮಹಾ ವಿಕಾಸ್ ಅಘಾಡಿಯ ಭಾಗವಾಗಿ ಸ್ಪರ್ಧಿಸಿತ್ತು. ಮಹರಾಷ್ಟ್ರದಲ್ಲಿ ಸಿಪಿಐ(ಎಂ) ತಾನು ಸ್ಪರ್ಧಿಸಿದ್ದ ಒಟ್ಟು ಮೂರು ಕ್ಷೇತ್ರಗಳಲ್ಲಿ 1 ಕ್ಷೇತ್ರವನ್ನು ಗೆಲ್ಲಲು ಯಶಸ್ವಿಯಾಗಿದೆ.

ಶನಿವಾರ ನಡೆದ ಮಹಾರಾಷ್ಟ್ರ ಚುನಾವಣೆಯ ಎಣಿಕೆಯಲ್ಲಿ ರಾಜ್ಯದ ಒಟ್ಟು 288 ಕ್ಷೇತ್ರಗಳಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ 235 ಕ್ಷೇತ್ರಗಳನ್ನು ಗೆದ್ದುಕೊಂಡಿದೆ. ಅದರಲ್ಲಿ ಬಿಜೆಪಿ 133 ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದು, ಶಿಂಧೆ ನೇತೃತ್ವದ ಶಿವಸೇನೆ 57 ಕ್ಷೇತ್ರಗಳಲ್ಲಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 41 ಕ್ಷೇತ್ರಗಳಲ್ಲಿ ಗೆದ್ದಿದೆ. ಉಳಿದಂತೆ ಮೈತ್ರಿಯ ಭಾಗವಾಗಿದ್ದ ಜೆಎಸ್‌ಎಸ್‌ 2 ಕ್ಷೇತ್ರಗಳಲ್ಲಿ ಹಾಗೂ ಆರ್ವೈಎಸ್‌ಪಿ ಮತ್ತು ಆರ್‌ಎಸ್‌ವಿಎ ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದುಕೊಂಡಿದೆ.

ವಿಪಕ್ಷಗಳ ಮಹಾ ವಿಕಾಸ್ ಅಘಾಡಿಗೆ ಚುನಾವಣಾ ಫಲಿತಾಂಶವೂ ಭಾರಿ ಅಘಾತ ನೀಡಿದೆ. ಮೈತ್ರಿಯು ಒಟ್ಟು 49 ಕ್ಷೇತ್ರಗಳನ್ನಷ್ಟೆ ಗೆಲ್ಲಲು ಸಫಲವಾಗಿದೆ. ಅದರಲ್ಲಿ ಮೈತ್ರಿಯ ಭಾಗವಾಗಿದ್ದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ 20 ಕ್ಷೇತ್ರಗಳನ್ನು ಗೆದ್ದಿದ್ದು, ಕಾಂಗ್ರೆಸ್ 15 ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ 10 ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ. ಉಳಿದಂತೆ ಮೈತ್ರಿಯ ಸಣ್ಣ ಪಕ್ಷಗಳಾದ ಎಸ್‌ಪಿ 2 ಕ್ಷೇತ್ರಗಳನ್ನು ಗೆದ್ದರೆ, ಸಿಪಿಐ(ಎಂ) ಮತ್ತು ಪಿಡಬ್ಲ್ಯೂಪಿಐ ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದುಕೊಂಡಿದೆ.

ಉಳಿದಂತೆ ISLAM, AIMIM, RSPS ಮತ್ತು ಪಕ್ಷೇತರ ಅಭ್ಯರ್ಥಿಗಳು ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದುಕೊಂಡಿದ್ದಾರೆ.

ಇದನ್ನೂ ಓದಿ: ದೇವೇಂದ್ರ ಫಡ್ನವಿಸ್-ಏಕನಾಥ್ ಶಿಂಧೆ ನಡುವೆ ಪೈಪೋಟಿ; ‘ಮಹಾಯುತಿ’ಯಲ್ಲಿ ಮುಖ್ಯಮಂತ್ರಿ ಹುದ್ದೆ ಯಾರಿಗೆ?

ದೇವೇಂದ್ರ ಫಡ್ನವಿಸ್-ಏಕನಾಥ್ ಶಿಂಧೆ ನಡುವೆ ಪೈಪೋಟಿ; ‘ಮಹಾಯುತಿ’ಯಲ್ಲಿ ಮುಖ್ಯಮಂತ್ರಿ ಹುದ್ದೆ ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...