Homeಮುಖಪುಟಮಹಾರಾಷ್ಟ್ರ | ಮಹಾಯುತಿ ಅಲೆಯ ನಡುವೆಯು ದಹಾನು ಕ್ಷೇತ್ರವನ್ನು 10ನೇ ಬಾರಿ ಗೆದ್ದ ಸಿಪಿಐ(ಎಂ)

ಮಹಾರಾಷ್ಟ್ರ | ಮಹಾಯುತಿ ಅಲೆಯ ನಡುವೆಯು ದಹಾನು ಕ್ಷೇತ್ರವನ್ನು 10ನೇ ಬಾರಿ ಗೆದ್ದ ಸಿಪಿಐ(ಎಂ)

- Advertisement -
- Advertisement -

ಮಹಾರಾಷ್ಟ್ರ ಚುನಾವಣೆಯಲ್ಲಿ ಪಾಲ್ಘರ್ ಜಿಲ್ಲೆಯ ದಹಾನು (ಪರಿಶಿಷ್ಟ ಪಂಗಡ ಮೀಸಲು) ವಿಧಾನಸಭಾ ಕ್ಷೇತ್ರವನ್ನು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಅಭ್ಯರ್ಥಿ ವಿನೋದ್ ನಿಕೋಲ್ 5,133 ಮತಗಳ ಅಂತರದಿಂದ ಗೆದ್ದಿದ್ದಾರೆ. ಅವರು ಬಿಜೆಪಿಯ ವಿನೋದ್ ಸುರೇಶ್ ಮೇಧಾ ಅವರನ್ನು 5,133 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ. ವಿಶೇಷವಾಗಿ ಸಿಪಿಐ(ಎಂ) ಈ ಕ್ಷೇತ್ರವನ್ನು 1978 ರಿಂದ 10 ನೇ ಬಾರಿಗೆ ಈ ಕ್ಷೇತ್ರವನ್ನು ಗೆದ್ದಿದೆ.

2009 ರಲ್ಲಿ ದಹಾನು (ST) ಕ್ಷೇತ್ರವನ್ನು ಪುನರ್‌ರಚಿಸಲಾಗಿದ್ದು, ಅದಕ್ಕೂ ಮೊದಲು ಕ್ಷೇತ್ರವನ್ನು ಜವಾಹರ್ (ST) ಎಂದು ಕರೆಯಲಾಗುತ್ತಿತ್ತು. ಮಹಾಯುತಿ ಅಲೆಯ ನಡುವೆಯೂ ದಹನು ಕ್ಷೇತ್ರವನ್ನು ಎಲ್ಲಾ ಅಡೆತಡೆಗಳನ್ನು ಮೀರಿ ಸಿಪಿಐ(ಎಂ) ಗೆದ್ದಿರುವುದು ಗಮನಾರ್ಹ ಸಾಧನೆಯಾಗಿದೆ ಎಂದು ಸಿಪಿಐ(ಎಂ) ನಾಯಕ ಅಶೋಕ್ ಧಾವಳೆ ಹೇಳಿದ್ದಾರೆ. ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಶ್ರೇಯವು ದಹಾನು ಮತ್ತು ತಲಾಸರಿ ತಹಸಿಲ್‌ಗಳ ಜನರು ಮತ್ತು ವಿವಿಧ ಎಡಪಂಥೀಯ ಸಂಘಟನೆಗಳ ಕಾರ್ಯಕರ್ತರಿಗೆ ಸಲ್ಲುತ್ತದೆ ಎಂದು ಅವರು ಹೇಳಿದ್ದಾರೆ. ಸಿಪಿಐ(ಎಂ) ವಿರೋಧ ಪಕ್ಷವಾದ ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಮತ್ತು ಶಿವಸೇನೆ (ಯುಬಿಟಿ)ಯ ಮಹಾ ವಿಕಾಸ್ ಅಘಾಡಿಯ ಭಾಗವಾಗಿ ಸ್ಪರ್ಧಿಸಿತ್ತು. ಮಹರಾಷ್ಟ್ರದಲ್ಲಿ ಸಿಪಿಐ(ಎಂ) ತಾನು ಸ್ಪರ್ಧಿಸಿದ್ದ ಒಟ್ಟು ಮೂರು ಕ್ಷೇತ್ರಗಳಲ್ಲಿ 1 ಕ್ಷೇತ್ರವನ್ನು ಗೆಲ್ಲಲು ಯಶಸ್ವಿಯಾಗಿದೆ.

ಶನಿವಾರ ನಡೆದ ಮಹಾರಾಷ್ಟ್ರ ಚುನಾವಣೆಯ ಎಣಿಕೆಯಲ್ಲಿ ರಾಜ್ಯದ ಒಟ್ಟು 288 ಕ್ಷೇತ್ರಗಳಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ 235 ಕ್ಷೇತ್ರಗಳನ್ನು ಗೆದ್ದುಕೊಂಡಿದೆ. ಅದರಲ್ಲಿ ಬಿಜೆಪಿ 133 ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದು, ಶಿಂಧೆ ನೇತೃತ್ವದ ಶಿವಸೇನೆ 57 ಕ್ಷೇತ್ರಗಳಲ್ಲಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 41 ಕ್ಷೇತ್ರಗಳಲ್ಲಿ ಗೆದ್ದಿದೆ. ಉಳಿದಂತೆ ಮೈತ್ರಿಯ ಭಾಗವಾಗಿದ್ದ ಜೆಎಸ್‌ಎಸ್‌ 2 ಕ್ಷೇತ್ರಗಳಲ್ಲಿ ಹಾಗೂ ಆರ್ವೈಎಸ್‌ಪಿ ಮತ್ತು ಆರ್‌ಎಸ್‌ವಿಎ ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದುಕೊಂಡಿದೆ.

ವಿಪಕ್ಷಗಳ ಮಹಾ ವಿಕಾಸ್ ಅಘಾಡಿಗೆ ಚುನಾವಣಾ ಫಲಿತಾಂಶವೂ ಭಾರಿ ಅಘಾತ ನೀಡಿದೆ. ಮೈತ್ರಿಯು ಒಟ್ಟು 49 ಕ್ಷೇತ್ರಗಳನ್ನಷ್ಟೆ ಗೆಲ್ಲಲು ಸಫಲವಾಗಿದೆ. ಅದರಲ್ಲಿ ಮೈತ್ರಿಯ ಭಾಗವಾಗಿದ್ದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ 20 ಕ್ಷೇತ್ರಗಳನ್ನು ಗೆದ್ದಿದ್ದು, ಕಾಂಗ್ರೆಸ್ 15 ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ 10 ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ. ಉಳಿದಂತೆ ಮೈತ್ರಿಯ ಸಣ್ಣ ಪಕ್ಷಗಳಾದ ಎಸ್‌ಪಿ 2 ಕ್ಷೇತ್ರಗಳನ್ನು ಗೆದ್ದರೆ, ಸಿಪಿಐ(ಎಂ) ಮತ್ತು ಪಿಡಬ್ಲ್ಯೂಪಿಐ ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದುಕೊಂಡಿದೆ.

ಉಳಿದಂತೆ ISLAM, AIMIM, RSPS ಮತ್ತು ಪಕ್ಷೇತರ ಅಭ್ಯರ್ಥಿಗಳು ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದುಕೊಂಡಿದ್ದಾರೆ.

ಇದನ್ನೂ ಓದಿ: ದೇವೇಂದ್ರ ಫಡ್ನವಿಸ್-ಏಕನಾಥ್ ಶಿಂಧೆ ನಡುವೆ ಪೈಪೋಟಿ; ‘ಮಹಾಯುತಿ’ಯಲ್ಲಿ ಮುಖ್ಯಮಂತ್ರಿ ಹುದ್ದೆ ಯಾರಿಗೆ?

ದೇವೇಂದ್ರ ಫಡ್ನವಿಸ್-ಏಕನಾಥ್ ಶಿಂಧೆ ನಡುವೆ ಪೈಪೋಟಿ; ‘ಮಹಾಯುತಿ’ಯಲ್ಲಿ ಮುಖ್ಯಮಂತ್ರಿ ಹುದ್ದೆ ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....