Homeಮುಖಪುಟಆರ್ಯನ್ ಖಾನ್‌ರಂತೆ ಕ್ರೂಸ್ ಶಿಪ್ ಪಾರ್ಟಿಗೆ ನನ್ನನ್ನು ಆಹ್ವಾನಿಸಲಾಗಿತ್ತು: ಮಹಾರಾಷ್ಟ್ರ ಸಚಿವ ಅಸ್ಲಾಮ್ ಶೇಖ್

ಆರ್ಯನ್ ಖಾನ್‌ರಂತೆ ಕ್ರೂಸ್ ಶಿಪ್ ಪಾರ್ಟಿಗೆ ನನ್ನನ್ನು ಆಹ್ವಾನಿಸಲಾಗಿತ್ತು: ಮಹಾರಾಷ್ಟ್ರ ಸಚಿವ ಅಸ್ಲಾಮ್ ಶೇಖ್

- Advertisement -
- Advertisement -

ಅಕ್ಟೋಬರ್ 2 ರಂದು ಮುಂಬೈ ಕರಾವಳಿಯಲ್ಲಿ ನಡೆದ ಕ್ರೂಸ್ ಶಿಪ್ ಪಾರ್ಟಿಗೆ ಕಾಶಿಫ್ ಖಾನ್ ಎಂಬಾತ ನನ್ನನ್ನು ಆಹ್ವಾನಿಸಿದ್ದ ಎಂದು ಮಂಗಳವಾರ ಮಹಾರಾಷ್ಟ್ರದ ಸಚಿವ ಮತ್ತು ಕಾಂಗ್ರೆಸ್ ನಾಯಕ ಅಸ್ಲಾಮ್ ಶೇಖ್ ಹೇಳಿದ್ದಾರೆ.

ಈ ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ ಕುರಿತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕಾರಿಗಳು ದಾಳಿ ನಡೆಸಿದ್ದರು. ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಈ ದಾಳಿಯಲ್ಲಿ ಬಂಧಿಸಲಾಗಿತ್ತು.

ಕ್ರೂಸ್ ಶಿಫ್ ಪಾರ್ಟಿಯ ಸಂಘಟಕರಾದ ಕಾಶಿಫ್ ಖಾನ್ ಅವರು ಕಾಂಗ್ರೆಸ್ ನಾಯಕ ಅಸ್ಲಾಮ್ ಶೇಖ್ ಮತ್ತು ರಾಜ್ಯ ಸರ್ಕಾರದ ಉನ್ನತ ಸಚಿವರ ಮಕ್ಕಳನ್ನು ಆ ಪಾರ್ಟಿಗೆ ಹಾಜರಾಗುವಂತೆ ಮಾಡಲು ತುಂಬಾ ಶ್ರಮಿಸಿದ್ದರು ಎಂದು ಎನ್‌ಸಿಪಿ ಸಚಿವ ನವಾಬ್ ಮಲಿಕ್ ಆರೋಪಿಸಿದ್ದರು. ಇದಾದ ಒಂದು ದಿನದ ನಂತರ ಅಸ್ಲಾಮ್ ಶೇಖ್ ಅವರ ಹೇಳಿಕೆ ಬಂದಿದೆ.

ಇದನ್ನೂ ಓದಿ: ಡ್ರಗ್ಸ್ ಪ್ರಕರಣದಲ್ಲಿ ಪ್ರತಿಕ್ರಿಯೆ ನೀಡದಂತೆ ಸಚಿವ ನವಾಬ್ ಮಲಿಕ್ ವಿರುದ್ಧ ಪಿಐಎಲ್

“ವೈಯಕ್ತಿಕವಾಗಿ ನನಗೆ ಕಾಶಿಫ್ ಖಾನ್ ಎಂಬ ವ್ಯಕ್ತಿ ತಿಳಿದಿಲ್ಲ. ನಾನು ಅವರನ್ನು ಈ ಮೊದಲು ಭೇಟಿ ಮಾಡಿಲ್ಲ. ಮುಂಬೈನ ಸಚಿವನಾಗಿರುವುದರಿಂದ ನನ್ನನ್ನು ವಿವಿಧ ಕಾರ್ಯಕ್ರಮಗಳಿಗೆ ಆಹ್ವಾನಿಸಲಾಗುತ್ತದೆ. ಇದು ಕೂಡ ಅಂತಹ ಆಹ್ವಾನಗಳಲ್ಲಿ ಒಂದಾಗಿದೆ. ಅವರ ಜೊತೆ ಫೋನ್‌ನಲ್ಲಿ ಮಾತಾಡಿರುವ ನೆನಪಿಲ್ಲ. ಏಕೆಂದರೆ ಆತ ನನಗೆ ವೈಯಕ್ತಿಕವಾಗಿ ಗೊತ್ತಿಲ್ಲ. ಆತನ ನಂಬರ್‌ ಕೂಡ ನನ್ನ ಬಳಿ ಇಲ್ಲ. ಆದರೆ, ಯಾವುದೋ ಕಾರ್ಯಕ್ರಮದಲ್ಲಿ ಭೇಟಿಯಾಗಿ ಪಾರ್ಟಿಗೆ ಆಹ್ವಾನಿಸಿದ್ದರು. ಅದು ಅಲ್ಲಿಗೆ ಮುಗಿಯಿತು” ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

’ಸುಮಾರು ಎರಡು ವರ್ಷಗಳ ಹಿಂದೆ ಮಹಾ ವಿಕಾಸ್ ಅಘಾಡಿ ಬಣ ರಚನೆಯಾದಾಗಿನಿಂದ ಮಹಾರಾಷ್ಟ್ರ ಸರ್ಕಾರ ಮತ್ತು ಅದರ ಮಂತ್ರಿಗಳನ್ನು ದೂಷಿಸಲು ಸಂಘಟಿತ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಸಚಿವ ಅಸ್ಲಾಮ್ ಶೇಖ್ ಬಿಜೆಪಿ ಮತ್ತು ಕೇಂದ್ರವನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದಾರೆ.

ಕ್ರೂಸ್ ಶಿಪ್ ಪಾರ್ಟಿ ಮೇಲಿನ ದಾಳಿಯ ಮೇಲೆ ಎಲ್ಲಾ ಗಮನವನ್ನು ಕೇಂದ್ರೀಕರಿಸಲಾಗಿದೆ. ಆದರೆ, ಸೆಪ್ಟೆಂಬರ್‌ನಲ್ಲಿ ಗುಜರಾತ್‌ನಲ್ಲಿ ಬಹುಕೋಟಿ ಮಾದಕವಸ್ತು ವಶಪಡಿಸಿಕೊಂಡ ಬಗ್ಗೆ ಇದೇ ರೀತಿಯ ಗಮನ ನೀಡಿಲ್ಲ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಮತ್ತು ಬಾಲಿವುಡ್‌ಗೆ ಮಸಿ ಬಳಿಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪಿತೂರಿ ನಡೆಸುತ್ತಿದೆ. ಡ್ರಗ್ಸ್ ಪ್ರಕರಣವೇ ನಕಲಿ ಎಂದು ಒಕ್ಕೂಟ ಸರ್ಕಾರ ಮತ್ತು ಎನ್‌ಸಿಬಿ ವಿರುದ್ಧ ಸಚಿವ ನವಾಬ್ ಮಲಿಕ್ ಆರೋಪಿಸಿದ್ದಾರೆ.


ಇದನ್ನೂ ಓದಿ: ‘ನಿಮ್ಮ ಅತ್ತಿಗೆ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದಾರಾ?’: NCB ಅಧಿಕಾರಿಗೆ ನವಾಬ್ ಮಲಿಕ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...