Homeಮುಖಪುಟಇಂಜಿನಿಯರ್ ಮೇಲೆ ಕೊಳಚೆ ನೀರು ಸುರಿದಿದ್ದ ಶಾಸಕ ನಿತೇಶ್ ರಾಣೆ ಬಿಜೆಪಿಯಿಂದ ಸ್ಪರ್ಧೆ

ಇಂಜಿನಿಯರ್ ಮೇಲೆ ಕೊಳಚೆ ನೀರು ಸುರಿದಿದ್ದ ಶಾಸಕ ನಿತೇಶ್ ರಾಣೆ ಬಿಜೆಪಿಯಿಂದ ಸ್ಪರ್ಧೆ

- Advertisement -
- Advertisement -

ರಸ್ತೆ ವಿಚಾರಕ್ಕೆ ಇಂಜಿನಿಯರ್‌ ಮೇಲೆ ‘ಮಣ್ಣಿನ ದಾಳಿ’ ನಡೆಸಿದ್ದ ನಿತೇಶ್ ರಾಣೆ ಈಗ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. 37 ವರ್ಷದ ನಿತೇಶ್ ರಾಣೆ ಅವರು 2014 ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದ ತಮ್ಮ ಕಂಕವ್ಲಿ ಸ್ಥಾನದಿಂದಲೇ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಾರಾಯಣ್ ರಾಣೆ ಅವರ ಪುತ್ರನಾಗಿರುವ ನಿತೇಶ್ ರಾಣೆ, ಇದುವರೆಗೂ ಕಾಂಗ್ರೆಸ್‌ನಲ್ಲಿದ್ದ ಅವರು ವಾರಗಳ ಹಿಂದೆಯಷ್ಟೇ ಬಿಜೆಪಿಗೆ ಸೇರಿದ್ದರು. ಕಳೆದ ಚುನಾವಣೆಯಲ್ಲಿ ಅವರು ಬಿಜೆಪಿಯ ಪ್ರಮೋದ್ ಜಥರ್ ಅವರನ್ನು ಸೋಲಿಸಿದ್ದರು.

ಅವರ ತಂದೆ ಮಾಜಿ ಮುಖ್ಯಮಂತ್ರಿ ನಾರಾಯಣ್ ರಾಣೆ ಕಾಂಗ್ರೆಸ್ ತೊರೆದ ನಂತರ 2017 ರಲ್ಲಿ ಮಹಾರಾಷ್ಟ್ರ ಸ್ವಾಭಿಮಾನ್ ಪಕ್ಷವನ್ನು ಸ್ಥಾಪಿಸಿದ್ದರು. ಆನಂತರ ಅದನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಬಗ್ಗೆ ಮಾತನಾಡಿ, ಬಿಜೆಪಿ ಬೆಂಬಲದೊಂದಿಗೆ ಅವರು ಈಗ ರಾಜ್ಯಸಭಾ ಸದಸ್ಯರಾಗಿದ್ದಾರೆ.

ಅವರ ತಂದೆ ಆರಂಭದಲ್ಲಿ ಶಿವಸೇನೆಯಲ್ಲಿದ್ದರು. ನಂತರ ಕಾಂಗ್ರೆಸ್, ಆನಂತರ ಸ್ವತಂತ್ರ ಪಕ್ಷ ಕಟ್ಟಿ ಈಗ ಬಿಜೆಪಿ ಸೇರಿದ್ದಾರೆ. ತಂದೆಯ ಹಾದಿಯಲ್ಲಿದೇ ಮಗ ಕೂಡ ಹಲವು ಪಕ್ಷಗಳನ್ನು ಬದಲಿಸುತ್ತಿರುವುದರಲ್ಲಿ ಆಶ್ಚರ್‍ಯವಿಲ್ಲ ಎನ್ನುವಂತಾಗಿದೆ. ಕೊಂಕಣ ಪ್ರದೇಶದಲ್ಲಿ ಪಕ್ಷವನ್ನು ಬಲಪಡಿಸುವ ಪ್ರಯತ್ನದಲ್ಲಿ ತನ್ನ ಮಿತ್ರ ಪಕ್ಷ ಶಿವಸೇನೆಯ ಆಶಯಕ್ಕೆ ವಿರುದ್ಧವಾಗಿ ನಿತೇಶ್ ರಾಣೆ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ.

ಈ ವರ್ಷದ ಜುಲೈನಲ್ಲಿ, ಮುಂಬೈ – ಗೋವಾ ಬಳಿಯ ಕನಕವಲ್ಲಿ ಎಂಬಲ್ಲಿ ರಸ್ತೆ ಮತ್ತು ಸೇತುವೆ ಕಾಮಗರಿ ನಡೆಯುತ್ತಿತ್ತು. ಪರಿಶೀಲನೆಗೆಂದು ಬಂದ ಶಾಸಕ ನಿತೀಶ್ ರಾಣೆ ಕೆಲಸ ಪೂರ್ಣಗೊಂಡಿಲ್ಲದಿರುವುದರಿಂದ ಜನರಿಗೆ ತೊಂದರೆಯಾಗುತ್ತದೆ ಎಂದು ಸಿಡಿಮಿಡಿಗೊಂಡಿದ್ದರು. ಆ ಸಂದರ್ಭದಲ್ಲಿ ಕೋಪದಿಂದ ಉಪ ಇಂಜಿನಿಯರ್ ಪ್ರಕಾಶ್ ಶೆಡ್ಕರ್ ಮೇಲೆ ಕಾಮಗಾರಿ ವಿಳಂಬ ಮಾಡಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡ ಶಾಸಕ ಅಲ್ಲಿ ತಮ್ಮ ಬೆಂಬಲಿಗರು ತುಂಬಿಟ್ಟಿದ್ದ ಕೊಳಚೆ ನೀರನ್ನು ಸುರಿದಿದ್ದಾರೆ. ನಂತರ ಅವರ ಬೆಂಬಲಿಗರು ಇಂಜಿನಿಯರ್ ಅನ್ನು ಕಂಬಕ್ಕೆ ಕಟ್ಟಿದ್ದರು ಎಂಬ ಆರೋಪವಿದೆ.

ಇದನ್ನೂ ಒದಿ: ಇಂಜಿನಿಯರ್ ಮೇಲೆ ಕೊಳಚೆ ನೀರು ಸುರಿದಿದ್ದ ಕಾಂಗ್ರೆಸ್ ಶಾಸಕನ ಬಂಧನ

ಇದಕ್ಕಾಗಿ ಅವರನ್ನು ಬಂಧಿಸಲಾಗಿತ್ತು ಮತ್ತು ಘಟನೆ ಕುರಿತು 50ಕ್ಕೂ ಹೆಚ್ಚು ಜನರ ಮೇಲೆ ಎಫ್‍ಐಆರ್ ದಾಖಲಾಗಿತ್ತು. ಈ ಹಿಂದೆಯೂ ಸಹ 2017ರಲ್ಲಿ ಸಭೆಯೊಂದರಲ್ಲಿ ಸ್ಥಿಮಿತತೆ ಕಳೆದುಕೊಂಡು ಹಿರಿಯ ಅಧಿಕಾರಿಯ ಮೆಲೆ ಮೀನು ಎಸೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...