Homeಮುಖಪುಟಇಂಜಿನಿಯರ್ ಮೇಲೆ ಕೊಳಚೆ ನೀರು ಸುರಿದಿದ್ದ ಶಾಸಕ ನಿತೇಶ್ ರಾಣೆ ಬಿಜೆಪಿಯಿಂದ ಸ್ಪರ್ಧೆ

ಇಂಜಿನಿಯರ್ ಮೇಲೆ ಕೊಳಚೆ ನೀರು ಸುರಿದಿದ್ದ ಶಾಸಕ ನಿತೇಶ್ ರಾಣೆ ಬಿಜೆಪಿಯಿಂದ ಸ್ಪರ್ಧೆ

- Advertisement -
- Advertisement -

ರಸ್ತೆ ವಿಚಾರಕ್ಕೆ ಇಂಜಿನಿಯರ್‌ ಮೇಲೆ ‘ಮಣ್ಣಿನ ದಾಳಿ’ ನಡೆಸಿದ್ದ ನಿತೇಶ್ ರಾಣೆ ಈಗ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. 37 ವರ್ಷದ ನಿತೇಶ್ ರಾಣೆ ಅವರು 2014 ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದ ತಮ್ಮ ಕಂಕವ್ಲಿ ಸ್ಥಾನದಿಂದಲೇ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಾರಾಯಣ್ ರಾಣೆ ಅವರ ಪುತ್ರನಾಗಿರುವ ನಿತೇಶ್ ರಾಣೆ, ಇದುವರೆಗೂ ಕಾಂಗ್ರೆಸ್‌ನಲ್ಲಿದ್ದ ಅವರು ವಾರಗಳ ಹಿಂದೆಯಷ್ಟೇ ಬಿಜೆಪಿಗೆ ಸೇರಿದ್ದರು. ಕಳೆದ ಚುನಾವಣೆಯಲ್ಲಿ ಅವರು ಬಿಜೆಪಿಯ ಪ್ರಮೋದ್ ಜಥರ್ ಅವರನ್ನು ಸೋಲಿಸಿದ್ದರು.

ಅವರ ತಂದೆ ಮಾಜಿ ಮುಖ್ಯಮಂತ್ರಿ ನಾರಾಯಣ್ ರಾಣೆ ಕಾಂಗ್ರೆಸ್ ತೊರೆದ ನಂತರ 2017 ರಲ್ಲಿ ಮಹಾರಾಷ್ಟ್ರ ಸ್ವಾಭಿಮಾನ್ ಪಕ್ಷವನ್ನು ಸ್ಥಾಪಿಸಿದ್ದರು. ಆನಂತರ ಅದನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಬಗ್ಗೆ ಮಾತನಾಡಿ, ಬಿಜೆಪಿ ಬೆಂಬಲದೊಂದಿಗೆ ಅವರು ಈಗ ರಾಜ್ಯಸಭಾ ಸದಸ್ಯರಾಗಿದ್ದಾರೆ.

ಅವರ ತಂದೆ ಆರಂಭದಲ್ಲಿ ಶಿವಸೇನೆಯಲ್ಲಿದ್ದರು. ನಂತರ ಕಾಂಗ್ರೆಸ್, ಆನಂತರ ಸ್ವತಂತ್ರ ಪಕ್ಷ ಕಟ್ಟಿ ಈಗ ಬಿಜೆಪಿ ಸೇರಿದ್ದಾರೆ. ತಂದೆಯ ಹಾದಿಯಲ್ಲಿದೇ ಮಗ ಕೂಡ ಹಲವು ಪಕ್ಷಗಳನ್ನು ಬದಲಿಸುತ್ತಿರುವುದರಲ್ಲಿ ಆಶ್ಚರ್‍ಯವಿಲ್ಲ ಎನ್ನುವಂತಾಗಿದೆ. ಕೊಂಕಣ ಪ್ರದೇಶದಲ್ಲಿ ಪಕ್ಷವನ್ನು ಬಲಪಡಿಸುವ ಪ್ರಯತ್ನದಲ್ಲಿ ತನ್ನ ಮಿತ್ರ ಪಕ್ಷ ಶಿವಸೇನೆಯ ಆಶಯಕ್ಕೆ ವಿರುದ್ಧವಾಗಿ ನಿತೇಶ್ ರಾಣೆ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ.

ಈ ವರ್ಷದ ಜುಲೈನಲ್ಲಿ, ಮುಂಬೈ – ಗೋವಾ ಬಳಿಯ ಕನಕವಲ್ಲಿ ಎಂಬಲ್ಲಿ ರಸ್ತೆ ಮತ್ತು ಸೇತುವೆ ಕಾಮಗರಿ ನಡೆಯುತ್ತಿತ್ತು. ಪರಿಶೀಲನೆಗೆಂದು ಬಂದ ಶಾಸಕ ನಿತೀಶ್ ರಾಣೆ ಕೆಲಸ ಪೂರ್ಣಗೊಂಡಿಲ್ಲದಿರುವುದರಿಂದ ಜನರಿಗೆ ತೊಂದರೆಯಾಗುತ್ತದೆ ಎಂದು ಸಿಡಿಮಿಡಿಗೊಂಡಿದ್ದರು. ಆ ಸಂದರ್ಭದಲ್ಲಿ ಕೋಪದಿಂದ ಉಪ ಇಂಜಿನಿಯರ್ ಪ್ರಕಾಶ್ ಶೆಡ್ಕರ್ ಮೇಲೆ ಕಾಮಗಾರಿ ವಿಳಂಬ ಮಾಡಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡ ಶಾಸಕ ಅಲ್ಲಿ ತಮ್ಮ ಬೆಂಬಲಿಗರು ತುಂಬಿಟ್ಟಿದ್ದ ಕೊಳಚೆ ನೀರನ್ನು ಸುರಿದಿದ್ದಾರೆ. ನಂತರ ಅವರ ಬೆಂಬಲಿಗರು ಇಂಜಿನಿಯರ್ ಅನ್ನು ಕಂಬಕ್ಕೆ ಕಟ್ಟಿದ್ದರು ಎಂಬ ಆರೋಪವಿದೆ.

ಇದನ್ನೂ ಒದಿ: ಇಂಜಿನಿಯರ್ ಮೇಲೆ ಕೊಳಚೆ ನೀರು ಸುರಿದಿದ್ದ ಕಾಂಗ್ರೆಸ್ ಶಾಸಕನ ಬಂಧನ

ಇದಕ್ಕಾಗಿ ಅವರನ್ನು ಬಂಧಿಸಲಾಗಿತ್ತು ಮತ್ತು ಘಟನೆ ಕುರಿತು 50ಕ್ಕೂ ಹೆಚ್ಚು ಜನರ ಮೇಲೆ ಎಫ್‍ಐಆರ್ ದಾಖಲಾಗಿತ್ತು. ಈ ಹಿಂದೆಯೂ ಸಹ 2017ರಲ್ಲಿ ಸಭೆಯೊಂದರಲ್ಲಿ ಸ್ಥಿಮಿತತೆ ಕಳೆದುಕೊಂಡು ಹಿರಿಯ ಅಧಿಕಾರಿಯ ಮೆಲೆ ಮೀನು ಎಸೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...