Homeಮುಖಪುಟಅಕ್ರಮ ಹಣ ವರ್ಗಾವಣೆ: ಸಚಿವ ನವಾಬ್ ಮಲಿಕ್ ಬಂಧನದ ವಿರುದ್ಧ ಮಹಾರಾಷ್ಟ್ರ ಶಾಸಕ, ಸಚಿವರ ಪ್ರತಿಭಟನೆ

ಅಕ್ರಮ ಹಣ ವರ್ಗಾವಣೆ: ಸಚಿವ ನವಾಬ್ ಮಲಿಕ್ ಬಂಧನದ ವಿರುದ್ಧ ಮಹಾರಾಷ್ಟ್ರ ಶಾಸಕ, ಸಚಿವರ ಪ್ರತಿಭಟನೆ

- Advertisement -
- Advertisement -

ಪರಾರಿಯಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಬುಧವಾರ ವಿಚಾರಣೆ ನಡೆಸಿದ ನಂತರ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರನ್ನು ಬಂಧಿಸಿದೆ. ಸಚಿವ ನವಾಬ್ ಮಲಿಕ್ ಮಾರ್ಚ್ 3ರ ವರೆಗೆ ಏಜೆನ್ಸಿಯ ಕಸ್ಟಡಿಯಲ್ಲಿರುತ್ತಾರೆ.

ಸಚಿವ ನವಾಬ್ ಮಲಿಕ್ ಬಂಧನವನ್ನು ವಿರೋಧಿಸಿರುವ ಮಹಾರಾಷ್ಟ್ರದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಸರ್ಕಾರ ಪ್ರತಿಭಟನೆ ನಡೆಸುವುದಾಗಿ ತಿಳಿಸಿತ್ತು. ಗುರುವಾರ (ಫೆ.24) ಆಡಳಿತರೂಢ ಪಕ್ಷಗಳ ಸಚಿವರು ಮತ್ತು ಶಾಸಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯಲ್ಲಿ ಸುಮಾರು ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ನವಾಬ್ ಮಲಿಕ್ (62) ಅವರನ್ನು ಬುಧವಾರ ಬಂಧಿಸಲಾಗಿತ್ತು. ನಂತರ ವಿಶೇಷ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಆರ್. ಎನ್. ರೋಕಡೆ ಮಾರ್ಚ್ 3 ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಖಾಸಗಿ ಭೇಟಿಯೆಂದ ಪ್ರಶಾಂತ್ ಕಿಶೋರ್: ವಿರೋಧ ಪಕ್ಷಗಳ ಒಗ್ಗಟ್ಟು ಎಂದ NCPಯ ನವಾಬ್ ಮಲ್ಲಿಕ್!

ಅಕ್ರಮ ಹಣ ವರ್ಗಾವಣೆ ತನಿಖೆಯು ಪರಾರಿಯಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಾಯಕರ ಚಟುವಟಿಕೆಗಳಿಗೆ ಸಂಬಂಧಿಸಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

ಮುಂಬೈನ ರಾಜ್ಯ ಸಚಿವಾಲಯದ ಬಳಿ ಹಿರಿಯ ಸಚಿವರಾದ ಅಜಿತ್ ಪವಾರ್, ಛಗನ್ ಭುಜಬಲ್, ಬಾಳಾಸಾಹೇಬ್ ಥೋರಟ್, ಜಯಂತ್ ಪಾಟೀಲ್ ಮತ್ತು ಅಸ್ಲಂ ಶೇಖ್, ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ ಸೇರಿದಂತೆ ಇತರ ಎನ್‌ಸಿಪಿ ಮತ್ತು ಕಾಂಗ್ರೆಸ್ ನಾಯಕರು ಪ್ರತಿಭಟನಾ ಸ್ಥಳದಲ್ಲಿ ಮೊದಲು ಕಾಣಿಸಿಕೊಂಡಿದ್ದಾರೆ. ಬಳಿಕ ಶಿವಸೇನೆಯ ಹಿರಿಯ ನಾಯಕ ಮತ್ತು ಸಚಿವ ಸುಭಾಷ್ ದೇಸಾಯಿ ಸೇರಿದಂತೆ ಶಿವಸೇನಾ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಫೆಬ್ರವರಿ 25 ರಿಂದ ಎಲ್ಲಾ ಮಹಾ ವಿಕಾಸ್ ಅಘಾಡಿ ಪಕ್ಷಗಳ ಕಾರ್ಯಕರ್ತರು ರಾಜ್ಯದಲ್ಲಿ ಪ್ರತಿಭಟನೆಗಳನ್ನು ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಮಲಿಕ್ ಅವರು ಯಾವುದೇ ತಪ್ಪು ಮಾಡಿಲ್ಲವಾದ್ದರಿಂದ ರಾಜೀನಾಮೆ ತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಎನ್‌ಸಿಪಿಯ ಹಿರಿಯ ನಾಯಕರೊಬ್ಬರು ಬುಧವಾರ ಸಂಜೆ ನಡೆದ ಮಹಾ ವಿಕಾಸ್ ಅಘಾಡಿ ನಾಯಕರ ಸಭೆಯ ನಂತರ ಹೇಳಿದ್ದರು.

ಸಚಿವ ನವಾಬ್ ಮಲಿಕ್ ಬುಧವಾರ ಇಡಿ ಕಚೇರಿಯಿಂದ ಹೊರಬರುವಾಗ ಹೊರಗಡೆಯಿದ್ದ ಮಾಧ್ಯಮದವರಿಗೆ ಮುಷ್ಟಿಯನ್ನು ಹಿಡಿದು ಸನ್ನೆ ಮಾಡುತ್ತಾ, ’ಮಲಿಕ್ ತಲೆಬಾಗುವುದಿಲ್ಲ’. ನಾವು ಹೋರಾಡುತ್ತೇವೆ, ಗೆಲ್ಲುತ್ತೇವೆ ಮತ್ತು ಎಲ್ಲರನ್ನೂ ಬಹಿರಂಗಪಡಿಸುತ್ತೇವೆ’ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಶಿವಮೊಗ್ಗ ಹಿಂಸಾಚಾರ ನಷ್ಟವನ್ನು ಈಶ್ವರಪ್ಪನವರಿಂದ ವಸೂಲಿ ಮಾಡಿ- ಹರಿಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....