Homeಮುಖಪುಟಮಹಾರಾಷ್ಟ್ರ: ಕೋತಿ ಮರಿಯನ್ನು ಕೊಂದದಕ್ಕೆ 250 ನಾಯಿಗಳನ್ನು ಕೊಂದ ಕೋತಿಗಳು- ಆರೋಪ

ಮಹಾರಾಷ್ಟ್ರ: ಕೋತಿ ಮರಿಯನ್ನು ಕೊಂದದಕ್ಕೆ 250 ನಾಯಿಗಳನ್ನು ಕೊಂದ ಕೋತಿಗಳು- ಆರೋಪ

- Advertisement -
- Advertisement -

ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ವಿಲಕ್ಷಣ ಘಟನೆಯೊಂದು ವರದಿಯಾಗಿದೆ. ಜಿಲ್ಲೆಯ ಮಜಲ್‌ಗಾಂವ್‌ನಲ್ಲಿ ಕೋತಿಗಳು ಮತ್ತು ನಾಯಿಗಳ ನಡುವೆ ನಡೆಯುತ್ತಿರುವ ಕಚ್ಚಾಟ ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಇಲ್ಲಿನ ಕೋತಿಗಳು ಗ್ರಾಮದಲ್ಲಿ ಸುಮಾರು 250 ನಾಯಿಗಳನ್ನು ಕೊಂದಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಳೆದೊಂದು ತಿಂಗಳಿನಿಂದ ಮಂಗಗಳು ನಾಯಿಗಳನ್ನು ಕೊಂದು ಹಾಕುವ ಘಟನೆಗಳು ನಡೆಯುತ್ತಿದ್ದು, ನಾಯಿಗಳು ಮತ್ತು ಕೋತಿಗಳ ಕಚ್ಚಾಟಕ್ಕೆ ಗ್ರಾಮದ ಜನರು ಭಯಭೀತರಾಗಿ ಓಡುತ್ತಿದ್ದಾರೆ. ಈ ಕೋತಿಗಳು ನಾಯಿಮರಿಯೊಂದಿಗೆ ಗ್ರಾಮದಲ್ಲಿನ ಮನೆಗಳ ಟೆರೇಸ್‌, ಮರಗಳಿಗೆ ಹತ್ತಿ ಅಲ್ಲಿಂದ ಮರಿಗಳನ್ನು ಕೆಳಕ್ಕೆ ಎಸೆಯುತ್ತಿವೆ. ಇದರಿಂದಾಗಿ ಅಲ್ಲಿರುವ ಜನರು ತಮ್ಮ ಮೇಲೆಯೂ ಮಂಗಗಳು ದಾಳಿ ಮಾಡುವ ಭಯದಲ್ಲಿದ್ದಾರೆ.

ಘಟನೆ ಕುರಿತು ಗ್ರಾಮದ ನಿವಾಸಿಗಳು ಅರಣ್ಯ ಇಲಾಖೆಯನ್ನು ಸಂಪರ್ಕಿಸಿ ಪ್ರದೇಶದಲ್ಲಿ ಮಂಗಗಳನ್ನು ಹಿಡಿಯುವಂತೆ ಮನವಿ ಮಾಡಿದ್ದರು. ನಿನ್ನೆ ಗ್ರಾಮದಲ್ಲಿ ಹಲವು ಮಂಗಗಳನ್ನು ಹಿಡಿಯುವಲ್ಲಿ ಇಲಾಖೆ ಯಶಸ್ವಿಯಾಗಿದೆ.

ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ನಟ ದರ್ಶನ್ ಆಗ್ರಹ

ಘಟನೆಗೆ ಕಾರಣ:

ಕೆಲ ದಿನಗಳ ಹಿಂದೆ ನಾಯಿಗಳು ಕೋತಿ ಮರಿಯೊಂದನ್ನು ಕೊಂದು ಹಾಕಿದ್ದವು. ಆದಾದ ಬಳಿಕ ಕೋಪಗೊಂಡ ಕೋತಿಗಳು ನಾಯಿಗಳ ಮೇಲೆ ಸೇಡು ತೀರಿಸಿಕೊಳ್ಳುವ ಕಾರ್ಯ ಆರಂಭಿಸಿವೆ ಎನ್ನುತ್ತಾರೆ ಗ್ರಾಮಸ್ಥರು. ನಾಯಿಯನ್ನು ಕಂಡ ಮಂಗಗಳು ಅವುಗಳನ್ನು ಎಳೆದುಕೊಂಡು ಹೋಗಿ ಕೊಂದ ನಂತರ ಮರದಿಂದ ಅಥವಾ ಮನೆಗಳ ಮೇಲ್ಛಾವಣಿಯಿಂದ ಕೆಳಕ್ಕೆ ಎಸೆಯುತ್ತವೆ ಎಂದಿದ್ದಾರೆ.

ಸದ್ಯ ಗ್ರಾಮದಲ್ಲಿ ನಾಯಿಗಳು ಉಳಿದಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ. ನಾಯಿಗಳು ಕಡಿಮೆಯಾಗಿದ್ದರೂ ಮಂಗಗಳ ಕಾಟ ಮಾತ್ರ ನಿಂತಿಲ್ಲ. ವರದಿಯ ಪ್ರಕಾರ ಪ್ರೈಮರಿ ಶಾಲೆಗೆ ಹೋಗುವ ಮಕ್ಕಳನ್ನು ಈ ಮಂಗಗಳು ಗುರಿಯಾಗಿಸಲು ಪ್ರಾರಂಭಿಸಿವೆ. ಕೆಲ ದಿನಗಳ ಹಿಂದೆ ಎಂಟು ವರ್ಷದ ಮಗುವನ್ನು ಹಿಡಿದು ಎಳೆದುಕೊಂಡು ಹೋಗಿದೆ. ಮಂಗಗಳ ಕಾಟದಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಹೇಳಿದ್ದಾರೆ.

ಸುಮಾರು ಐದು ಸಾವಿರ ಜನಸಂಖ್ಯೆಯ ಈ ಗ್ರಾಮದ ಜನರು ಮಂಗಗಳ ಕಾಟದಿಂದ ಕಂಗಾಲಾಗಿದ್ದಾರೆ. ರಸ್ತೆಯಲ್ಲಿ ಸಂಚರಿಸುವವರ ಮೇಲೂ ಮಂಗಗಳು ಹಲವು ಬಾರಿ ದಾಳಿ ನಡೆಸಿವೆ. ಅರಣ್ಯ ಇಲಾಖೆ ಕೆಲವು ಮಂಗಗಳನ್ನು ಬೋನಿನಲ್ಲಿ ಬಂಧಿಸಿದೆ. ಆದರೆ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಅನಿವಾರ್ಯವಾಗಿದೆ ಎನ್ನುತ್ತಾರೆ ಇಲ್ಲಿನ ಜನ.


ಇದನ್ನೂ ಓದಿ: ವಿಚ್ಛೇದನದ ನಂತರ ಸಾಯುತ್ತೇನೆ ಎಂದು ಭಾವಿಸಿದ್ದೆ; ಆದರೆ ನನ್ನನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ: ನಟಿ ಸಮಂತಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...