Homeಮುಖಪುಟಮಹಾರಾಷ್ಟ್ರ: ಕೋತಿ ಮರಿಯನ್ನು ಕೊಂದದಕ್ಕೆ 250 ನಾಯಿಗಳನ್ನು ಕೊಂದ ಕೋತಿಗಳು- ಆರೋಪ

ಮಹಾರಾಷ್ಟ್ರ: ಕೋತಿ ಮರಿಯನ್ನು ಕೊಂದದಕ್ಕೆ 250 ನಾಯಿಗಳನ್ನು ಕೊಂದ ಕೋತಿಗಳು- ಆರೋಪ

- Advertisement -
- Advertisement -

ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ವಿಲಕ್ಷಣ ಘಟನೆಯೊಂದು ವರದಿಯಾಗಿದೆ. ಜಿಲ್ಲೆಯ ಮಜಲ್‌ಗಾಂವ್‌ನಲ್ಲಿ ಕೋತಿಗಳು ಮತ್ತು ನಾಯಿಗಳ ನಡುವೆ ನಡೆಯುತ್ತಿರುವ ಕಚ್ಚಾಟ ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಇಲ್ಲಿನ ಕೋತಿಗಳು ಗ್ರಾಮದಲ್ಲಿ ಸುಮಾರು 250 ನಾಯಿಗಳನ್ನು ಕೊಂದಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಳೆದೊಂದು ತಿಂಗಳಿನಿಂದ ಮಂಗಗಳು ನಾಯಿಗಳನ್ನು ಕೊಂದು ಹಾಕುವ ಘಟನೆಗಳು ನಡೆಯುತ್ತಿದ್ದು, ನಾಯಿಗಳು ಮತ್ತು ಕೋತಿಗಳ ಕಚ್ಚಾಟಕ್ಕೆ ಗ್ರಾಮದ ಜನರು ಭಯಭೀತರಾಗಿ ಓಡುತ್ತಿದ್ದಾರೆ. ಈ ಕೋತಿಗಳು ನಾಯಿಮರಿಯೊಂದಿಗೆ ಗ್ರಾಮದಲ್ಲಿನ ಮನೆಗಳ ಟೆರೇಸ್‌, ಮರಗಳಿಗೆ ಹತ್ತಿ ಅಲ್ಲಿಂದ ಮರಿಗಳನ್ನು ಕೆಳಕ್ಕೆ ಎಸೆಯುತ್ತಿವೆ. ಇದರಿಂದಾಗಿ ಅಲ್ಲಿರುವ ಜನರು ತಮ್ಮ ಮೇಲೆಯೂ ಮಂಗಗಳು ದಾಳಿ ಮಾಡುವ ಭಯದಲ್ಲಿದ್ದಾರೆ.

ಘಟನೆ ಕುರಿತು ಗ್ರಾಮದ ನಿವಾಸಿಗಳು ಅರಣ್ಯ ಇಲಾಖೆಯನ್ನು ಸಂಪರ್ಕಿಸಿ ಪ್ರದೇಶದಲ್ಲಿ ಮಂಗಗಳನ್ನು ಹಿಡಿಯುವಂತೆ ಮನವಿ ಮಾಡಿದ್ದರು. ನಿನ್ನೆ ಗ್ರಾಮದಲ್ಲಿ ಹಲವು ಮಂಗಗಳನ್ನು ಹಿಡಿಯುವಲ್ಲಿ ಇಲಾಖೆ ಯಶಸ್ವಿಯಾಗಿದೆ.

ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ನಟ ದರ್ಶನ್ ಆಗ್ರಹ

ಘಟನೆಗೆ ಕಾರಣ:

ಕೆಲ ದಿನಗಳ ಹಿಂದೆ ನಾಯಿಗಳು ಕೋತಿ ಮರಿಯೊಂದನ್ನು ಕೊಂದು ಹಾಕಿದ್ದವು. ಆದಾದ ಬಳಿಕ ಕೋಪಗೊಂಡ ಕೋತಿಗಳು ನಾಯಿಗಳ ಮೇಲೆ ಸೇಡು ತೀರಿಸಿಕೊಳ್ಳುವ ಕಾರ್ಯ ಆರಂಭಿಸಿವೆ ಎನ್ನುತ್ತಾರೆ ಗ್ರಾಮಸ್ಥರು. ನಾಯಿಯನ್ನು ಕಂಡ ಮಂಗಗಳು ಅವುಗಳನ್ನು ಎಳೆದುಕೊಂಡು ಹೋಗಿ ಕೊಂದ ನಂತರ ಮರದಿಂದ ಅಥವಾ ಮನೆಗಳ ಮೇಲ್ಛಾವಣಿಯಿಂದ ಕೆಳಕ್ಕೆ ಎಸೆಯುತ್ತವೆ ಎಂದಿದ್ದಾರೆ.

ಸದ್ಯ ಗ್ರಾಮದಲ್ಲಿ ನಾಯಿಗಳು ಉಳಿದಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ. ನಾಯಿಗಳು ಕಡಿಮೆಯಾಗಿದ್ದರೂ ಮಂಗಗಳ ಕಾಟ ಮಾತ್ರ ನಿಂತಿಲ್ಲ. ವರದಿಯ ಪ್ರಕಾರ ಪ್ರೈಮರಿ ಶಾಲೆಗೆ ಹೋಗುವ ಮಕ್ಕಳನ್ನು ಈ ಮಂಗಗಳು ಗುರಿಯಾಗಿಸಲು ಪ್ರಾರಂಭಿಸಿವೆ. ಕೆಲ ದಿನಗಳ ಹಿಂದೆ ಎಂಟು ವರ್ಷದ ಮಗುವನ್ನು ಹಿಡಿದು ಎಳೆದುಕೊಂಡು ಹೋಗಿದೆ. ಮಂಗಗಳ ಕಾಟದಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಹೇಳಿದ್ದಾರೆ.

ಸುಮಾರು ಐದು ಸಾವಿರ ಜನಸಂಖ್ಯೆಯ ಈ ಗ್ರಾಮದ ಜನರು ಮಂಗಗಳ ಕಾಟದಿಂದ ಕಂಗಾಲಾಗಿದ್ದಾರೆ. ರಸ್ತೆಯಲ್ಲಿ ಸಂಚರಿಸುವವರ ಮೇಲೂ ಮಂಗಗಳು ಹಲವು ಬಾರಿ ದಾಳಿ ನಡೆಸಿವೆ. ಅರಣ್ಯ ಇಲಾಖೆ ಕೆಲವು ಮಂಗಗಳನ್ನು ಬೋನಿನಲ್ಲಿ ಬಂಧಿಸಿದೆ. ಆದರೆ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಅನಿವಾರ್ಯವಾಗಿದೆ ಎನ್ನುತ್ತಾರೆ ಇಲ್ಲಿನ ಜನ.


ಇದನ್ನೂ ಓದಿ: ವಿಚ್ಛೇದನದ ನಂತರ ಸಾಯುತ್ತೇನೆ ಎಂದು ಭಾವಿಸಿದ್ದೆ; ಆದರೆ ನನ್ನನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ: ನಟಿ ಸಮಂತಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...