Homeಮುಖಪುಟಮಹಾರಾಷ್ಟ್ರ: ಕೋತಿ ಮರಿಯನ್ನು ಕೊಂದದಕ್ಕೆ 250 ನಾಯಿಗಳನ್ನು ಕೊಂದ ಕೋತಿಗಳು- ಆರೋಪ

ಮಹಾರಾಷ್ಟ್ರ: ಕೋತಿ ಮರಿಯನ್ನು ಕೊಂದದಕ್ಕೆ 250 ನಾಯಿಗಳನ್ನು ಕೊಂದ ಕೋತಿಗಳು- ಆರೋಪ

- Advertisement -
- Advertisement -

ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ವಿಲಕ್ಷಣ ಘಟನೆಯೊಂದು ವರದಿಯಾಗಿದೆ. ಜಿಲ್ಲೆಯ ಮಜಲ್‌ಗಾಂವ್‌ನಲ್ಲಿ ಕೋತಿಗಳು ಮತ್ತು ನಾಯಿಗಳ ನಡುವೆ ನಡೆಯುತ್ತಿರುವ ಕಚ್ಚಾಟ ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಇಲ್ಲಿನ ಕೋತಿಗಳು ಗ್ರಾಮದಲ್ಲಿ ಸುಮಾರು 250 ನಾಯಿಗಳನ್ನು ಕೊಂದಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಳೆದೊಂದು ತಿಂಗಳಿನಿಂದ ಮಂಗಗಳು ನಾಯಿಗಳನ್ನು ಕೊಂದು ಹಾಕುವ ಘಟನೆಗಳು ನಡೆಯುತ್ತಿದ್ದು, ನಾಯಿಗಳು ಮತ್ತು ಕೋತಿಗಳ ಕಚ್ಚಾಟಕ್ಕೆ ಗ್ರಾಮದ ಜನರು ಭಯಭೀತರಾಗಿ ಓಡುತ್ತಿದ್ದಾರೆ. ಈ ಕೋತಿಗಳು ನಾಯಿಮರಿಯೊಂದಿಗೆ ಗ್ರಾಮದಲ್ಲಿನ ಮನೆಗಳ ಟೆರೇಸ್‌, ಮರಗಳಿಗೆ ಹತ್ತಿ ಅಲ್ಲಿಂದ ಮರಿಗಳನ್ನು ಕೆಳಕ್ಕೆ ಎಸೆಯುತ್ತಿವೆ. ಇದರಿಂದಾಗಿ ಅಲ್ಲಿರುವ ಜನರು ತಮ್ಮ ಮೇಲೆಯೂ ಮಂಗಗಳು ದಾಳಿ ಮಾಡುವ ಭಯದಲ್ಲಿದ್ದಾರೆ.

ಘಟನೆ ಕುರಿತು ಗ್ರಾಮದ ನಿವಾಸಿಗಳು ಅರಣ್ಯ ಇಲಾಖೆಯನ್ನು ಸಂಪರ್ಕಿಸಿ ಪ್ರದೇಶದಲ್ಲಿ ಮಂಗಗಳನ್ನು ಹಿಡಿಯುವಂತೆ ಮನವಿ ಮಾಡಿದ್ದರು. ನಿನ್ನೆ ಗ್ರಾಮದಲ್ಲಿ ಹಲವು ಮಂಗಗಳನ್ನು ಹಿಡಿಯುವಲ್ಲಿ ಇಲಾಖೆ ಯಶಸ್ವಿಯಾಗಿದೆ.

ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ನಟ ದರ್ಶನ್ ಆಗ್ರಹ

ಘಟನೆಗೆ ಕಾರಣ:

ಕೆಲ ದಿನಗಳ ಹಿಂದೆ ನಾಯಿಗಳು ಕೋತಿ ಮರಿಯೊಂದನ್ನು ಕೊಂದು ಹಾಕಿದ್ದವು. ಆದಾದ ಬಳಿಕ ಕೋಪಗೊಂಡ ಕೋತಿಗಳು ನಾಯಿಗಳ ಮೇಲೆ ಸೇಡು ತೀರಿಸಿಕೊಳ್ಳುವ ಕಾರ್ಯ ಆರಂಭಿಸಿವೆ ಎನ್ನುತ್ತಾರೆ ಗ್ರಾಮಸ್ಥರು. ನಾಯಿಯನ್ನು ಕಂಡ ಮಂಗಗಳು ಅವುಗಳನ್ನು ಎಳೆದುಕೊಂಡು ಹೋಗಿ ಕೊಂದ ನಂತರ ಮರದಿಂದ ಅಥವಾ ಮನೆಗಳ ಮೇಲ್ಛಾವಣಿಯಿಂದ ಕೆಳಕ್ಕೆ ಎಸೆಯುತ್ತವೆ ಎಂದಿದ್ದಾರೆ.

ಸದ್ಯ ಗ್ರಾಮದಲ್ಲಿ ನಾಯಿಗಳು ಉಳಿದಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ. ನಾಯಿಗಳು ಕಡಿಮೆಯಾಗಿದ್ದರೂ ಮಂಗಗಳ ಕಾಟ ಮಾತ್ರ ನಿಂತಿಲ್ಲ. ವರದಿಯ ಪ್ರಕಾರ ಪ್ರೈಮರಿ ಶಾಲೆಗೆ ಹೋಗುವ ಮಕ್ಕಳನ್ನು ಈ ಮಂಗಗಳು ಗುರಿಯಾಗಿಸಲು ಪ್ರಾರಂಭಿಸಿವೆ. ಕೆಲ ದಿನಗಳ ಹಿಂದೆ ಎಂಟು ವರ್ಷದ ಮಗುವನ್ನು ಹಿಡಿದು ಎಳೆದುಕೊಂಡು ಹೋಗಿದೆ. ಮಂಗಗಳ ಕಾಟದಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಹೇಳಿದ್ದಾರೆ.

ಸುಮಾರು ಐದು ಸಾವಿರ ಜನಸಂಖ್ಯೆಯ ಈ ಗ್ರಾಮದ ಜನರು ಮಂಗಗಳ ಕಾಟದಿಂದ ಕಂಗಾಲಾಗಿದ್ದಾರೆ. ರಸ್ತೆಯಲ್ಲಿ ಸಂಚರಿಸುವವರ ಮೇಲೂ ಮಂಗಗಳು ಹಲವು ಬಾರಿ ದಾಳಿ ನಡೆಸಿವೆ. ಅರಣ್ಯ ಇಲಾಖೆ ಕೆಲವು ಮಂಗಗಳನ್ನು ಬೋನಿನಲ್ಲಿ ಬಂಧಿಸಿದೆ. ಆದರೆ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಅನಿವಾರ್ಯವಾಗಿದೆ ಎನ್ನುತ್ತಾರೆ ಇಲ್ಲಿನ ಜನ.


ಇದನ್ನೂ ಓದಿ: ವಿಚ್ಛೇದನದ ನಂತರ ಸಾಯುತ್ತೇನೆ ಎಂದು ಭಾವಿಸಿದ್ದೆ; ಆದರೆ ನನ್ನನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ: ನಟಿ ಸಮಂತಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...