Homeಮುಖಪುಟಮಹಾರಾಷ್ಟ್ರ| ಪುಣೆಯಲ್ಲಿ 100ಕ್ಕೂ ಹೆಚ್ಚು ಜಿಬಿ ಸಿಂಡ್ರೋಮ್ ಪ್ರಕರಣಗಳು ಪತ್ತೆ; ವ್ಯಕ್ತಿ ಸಾವು! 

ಮಹಾರಾಷ್ಟ್ರ| ಪುಣೆಯಲ್ಲಿ 100ಕ್ಕೂ ಹೆಚ್ಚು ಜಿಬಿ ಸಿಂಡ್ರೋಮ್ ಪ್ರಕರಣಗಳು ಪತ್ತೆ; ವ್ಯಕ್ತಿ ಸಾವು! 

- Advertisement -
- Advertisement -

ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಗುಯಿಲಿನ್-ಬಾರೆ ಸಿಂಡ್ರೋಮ್ (ಜಿಬಿಎಸ್) ಸೋಂಕಿಗೆ ಒಳಗಾಗಿದ್ದಾರೆ ಎಂದು ಶಂಕಿಸಲಾದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಆದರೆ, ಆಘಾತಕಾರಿ ಬೆಳವಣಿಯಲ್ಲಿ ಪುಣೆಯಲ್ಲಿ ರೋಗನಿರೋಧಕ ನರ ಅಸ್ವಸ್ಥತೆಯ ಪ್ರಕರಣಗಳ ಸಂಖ್ಯೆ 100 ದಾಟಿದೆ ಎಂದು ಆರೋಗ್ಯ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಜಿಬಿ ಸಿಂಡ್ರೋಮ್‌ನಿಂದ ಉಂಟಾಗಿದೆ ಎಂದು ಶಂಕಿಸಲಾದ ಮಹಾರಾಷ್ಟ್ರದಲ್ಲಿ ಇದು ಬಹುಶಃ ಮೊದಲ ಸಾವಿನ ಪ್ರಕರಣವಾಗಿದೆ.

ಸೋಲಾಪುರದ ಮೂಲದ ವ್ಯಕ್ತಿ ಪುಣೆಗೆ ಬಂದಿದ್ದರು, ಅಲ್ಲಿ ಅವರಿಗೆ ಈ ಕಾಯಿಲೆ ತಗುಲಿದೆ ಎಂದು ಶಂಕಿಸಲಾಗಿದೆ. ಅವರು ಸೋಲಾಪುರದಲ್ಲಿ ನಿಧನರಾದರು ಎಂದು ಅಧಿಕಾರಿಯೊಬ್ಬರು ಹೆಚ್ಚಿನ ವಿವರಗಳನ್ನು ನೀಡದೆ ತಿಳಿಸಿದ್ದಾರೆ.

“ಭಾನುವಾರ ಪುಣೆಯಲ್ಲಿ ಒಟ್ಟು ಜಿಬಿಎಸ್ ಪ್ರಕರಣಗಳ ಸಂಖ್ಯೆ 101 ಕ್ಕೆ ಏರಿದೆ, ಇದರಲ್ಲಿ 68 ಪುರುಷರು ಮತ್ತು 33 ಮಹಿಳೆಯರು ಸೇರಿದ್ದಾರೆ. ಈ ಪೈಕಿ 16 ರೋಗಿಗಳು ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ. ಸೋಲಾಪುರದಲ್ಲಿ ಒಂದು ಶಂಕಿತ ಸಾವು ವರದಿಯಾಗಿದೆ” ಎಂದು ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಈ ಮಧ್ಯೆ, ಕ್ಷಿಪ್ರ ಪ್ರತಿಕ್ರಿಯೆ ತಂಡ (ಆರ್‌ಆರ್‌ಟಿ) ಮತ್ತು ಪುಣೆ ಮುನ್ಸಿಪಲ್ ಕಾರ್ಪೊರೇಷನ್‌ನ ಆರೋಗ್ಯ ಇಲಾಖೆ ಇಲ್ಲಿನ ಪೀಡಿತ ಸಿಂಹಗಡ್ ರಸ್ತೆ ಪ್ರದೇಶಗಳಲ್ಲಿ ಕಣ್ಗಾವಲು ಮುಂದುವರಿಸಿದೆ.

ಪುಣೆ ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯಲ್ಲಿ 15,761, ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯಲ್ಲಿ 3,719 ಮತ್ತು ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ 6,098 ಮನೆಗಳು ಸೇರಿದಂತೆ ಒಟ್ಟು 25,578 ಮನೆಗಳನ್ನು ಇಲ್ಲಿಯವರೆಗೆ ಸಮೀಕ್ಷೆ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಏನಿದು ಜಿಬಿ ಸಿಂಡ್ರೋಮ್?

ಜಿಬಿಎಸ್ ಒಂದು ಅಪರೂಪದ ಸ್ಥಿತಿಯಾಗಿದ್ದು, ಇದು ಹಠಾತ್ ಮರಗಟ್ಟುವಿಕೆ ಮತ್ತು ಸ್ನಾಯು ದೌರ್ಬಲ್ಯವನ್ನು ಉಂಟುಮಾಡುತ್ತದೆ, ಇದರಲ್ಲಿ ಕೈಕಾಲುಗಳಲ್ಲಿ ತೀವ್ರ ದೌರ್ಬಲ್ಯ, ಸಡಿಲ ಚಲನೆಗಳು ಇತ್ಯಾದಿ ಲಕ್ಷಣಗಳು ಕಂಡುಬರುತ್ತವೆ.

ವೈದ್ಯರ ಪ್ರಕಾರ ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕುಗಳು ಸಾಮಾನ್ಯವಾಗಿ ರೋಗಿಗಳ ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುವುದರಿಂದ ಜಿಬಿಎಸ್‌ಗೆ ಕಾರಣವಾಗುತ್ತವೆ.

ಜಿಬಿಎಸ್ ಮಕ್ಕಳು ಮತ್ತು ಯುವ ವಯಸ್ಸಿನ ಗುಂಪುಗಳಲ್ಲಿ ಪ್ರಚಲಿತವಾಗಿದ್ದರೂ, ಇದು ಸಾಂಕ್ರಾಮಿಕ ರೋಗಕ್ಕೆ ಕಾರಣವಾಗುವುದಿಲ್ಲ ಎಂದು ಅವರು ಹೇಳಿದರು. ಹೆಚ್ಚಿನ ರೋಗಿಗಳು ಚಿಕಿತ್ಸೆಯಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳುತ್ತಾರೆ ಎಂದು ಅವರು ಹೇಳಿದರು.

ಆರಂಭದಲ್ಲಿ 24 ಶಂಕಿತ ಪ್ರಕರಣಗಳು ಕಂಡುಬಂದ ನಂತರ ಈ ಸೋಂಕಿನ ಹಠಾತ್ ಏರಿಕೆಯನ್ನು ತನಿಖೆ ಮಾಡಲು ರಾಜ್ಯ ಆರೋಗ್ಯ ಇಲಾಖೆ ಕ್ಷಿಪ್ರ ಪ್ರತಿಕ್ರಿಯೆ ತಂಡವನ್ನು ಸ್ಥಾಪಿಸಿತು.

ಇದನ್ನೂ ಓದಿ; ತಮಿಳುನಾಡು ನೀರಿನ ಟ್ಯಾಂಕ್ ಮಲೀನ ಪ್ರಕರಣ: ಆರೋಪ ಪಟ್ಟಿಯಲ್ಲಿ ಮೂವರು ದಲಿತರ ಹೆಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...