Homeಮುಖಪುಟಮಹಾರಾಷ್ಟ್ರ| ಪುಣೆಯಲ್ಲಿ 100ಕ್ಕೂ ಹೆಚ್ಚು ಜಿಬಿ ಸಿಂಡ್ರೋಮ್ ಪ್ರಕರಣಗಳು ಪತ್ತೆ; ವ್ಯಕ್ತಿ ಸಾವು! 

ಮಹಾರಾಷ್ಟ್ರ| ಪುಣೆಯಲ್ಲಿ 100ಕ್ಕೂ ಹೆಚ್ಚು ಜಿಬಿ ಸಿಂಡ್ರೋಮ್ ಪ್ರಕರಣಗಳು ಪತ್ತೆ; ವ್ಯಕ್ತಿ ಸಾವು! 

- Advertisement -
- Advertisement -

ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಗುಯಿಲಿನ್-ಬಾರೆ ಸಿಂಡ್ರೋಮ್ (ಜಿಬಿಎಸ್) ಸೋಂಕಿಗೆ ಒಳಗಾಗಿದ್ದಾರೆ ಎಂದು ಶಂಕಿಸಲಾದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಆದರೆ, ಆಘಾತಕಾರಿ ಬೆಳವಣಿಯಲ್ಲಿ ಪುಣೆಯಲ್ಲಿ ರೋಗನಿರೋಧಕ ನರ ಅಸ್ವಸ್ಥತೆಯ ಪ್ರಕರಣಗಳ ಸಂಖ್ಯೆ 100 ದಾಟಿದೆ ಎಂದು ಆರೋಗ್ಯ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಜಿಬಿ ಸಿಂಡ್ರೋಮ್‌ನಿಂದ ಉಂಟಾಗಿದೆ ಎಂದು ಶಂಕಿಸಲಾದ ಮಹಾರಾಷ್ಟ್ರದಲ್ಲಿ ಇದು ಬಹುಶಃ ಮೊದಲ ಸಾವಿನ ಪ್ರಕರಣವಾಗಿದೆ.

ಸೋಲಾಪುರದ ಮೂಲದ ವ್ಯಕ್ತಿ ಪುಣೆಗೆ ಬಂದಿದ್ದರು, ಅಲ್ಲಿ ಅವರಿಗೆ ಈ ಕಾಯಿಲೆ ತಗುಲಿದೆ ಎಂದು ಶಂಕಿಸಲಾಗಿದೆ. ಅವರು ಸೋಲಾಪುರದಲ್ಲಿ ನಿಧನರಾದರು ಎಂದು ಅಧಿಕಾರಿಯೊಬ್ಬರು ಹೆಚ್ಚಿನ ವಿವರಗಳನ್ನು ನೀಡದೆ ತಿಳಿಸಿದ್ದಾರೆ.

“ಭಾನುವಾರ ಪುಣೆಯಲ್ಲಿ ಒಟ್ಟು ಜಿಬಿಎಸ್ ಪ್ರಕರಣಗಳ ಸಂಖ್ಯೆ 101 ಕ್ಕೆ ಏರಿದೆ, ಇದರಲ್ಲಿ 68 ಪುರುಷರು ಮತ್ತು 33 ಮಹಿಳೆಯರು ಸೇರಿದ್ದಾರೆ. ಈ ಪೈಕಿ 16 ರೋಗಿಗಳು ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ. ಸೋಲಾಪುರದಲ್ಲಿ ಒಂದು ಶಂಕಿತ ಸಾವು ವರದಿಯಾಗಿದೆ” ಎಂದು ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಈ ಮಧ್ಯೆ, ಕ್ಷಿಪ್ರ ಪ್ರತಿಕ್ರಿಯೆ ತಂಡ (ಆರ್‌ಆರ್‌ಟಿ) ಮತ್ತು ಪುಣೆ ಮುನ್ಸಿಪಲ್ ಕಾರ್ಪೊರೇಷನ್‌ನ ಆರೋಗ್ಯ ಇಲಾಖೆ ಇಲ್ಲಿನ ಪೀಡಿತ ಸಿಂಹಗಡ್ ರಸ್ತೆ ಪ್ರದೇಶಗಳಲ್ಲಿ ಕಣ್ಗಾವಲು ಮುಂದುವರಿಸಿದೆ.

ಪುಣೆ ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯಲ್ಲಿ 15,761, ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯಲ್ಲಿ 3,719 ಮತ್ತು ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ 6,098 ಮನೆಗಳು ಸೇರಿದಂತೆ ಒಟ್ಟು 25,578 ಮನೆಗಳನ್ನು ಇಲ್ಲಿಯವರೆಗೆ ಸಮೀಕ್ಷೆ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಏನಿದು ಜಿಬಿ ಸಿಂಡ್ರೋಮ್?

ಜಿಬಿಎಸ್ ಒಂದು ಅಪರೂಪದ ಸ್ಥಿತಿಯಾಗಿದ್ದು, ಇದು ಹಠಾತ್ ಮರಗಟ್ಟುವಿಕೆ ಮತ್ತು ಸ್ನಾಯು ದೌರ್ಬಲ್ಯವನ್ನು ಉಂಟುಮಾಡುತ್ತದೆ, ಇದರಲ್ಲಿ ಕೈಕಾಲುಗಳಲ್ಲಿ ತೀವ್ರ ದೌರ್ಬಲ್ಯ, ಸಡಿಲ ಚಲನೆಗಳು ಇತ್ಯಾದಿ ಲಕ್ಷಣಗಳು ಕಂಡುಬರುತ್ತವೆ.

ವೈದ್ಯರ ಪ್ರಕಾರ ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕುಗಳು ಸಾಮಾನ್ಯವಾಗಿ ರೋಗಿಗಳ ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುವುದರಿಂದ ಜಿಬಿಎಸ್‌ಗೆ ಕಾರಣವಾಗುತ್ತವೆ.

ಜಿಬಿಎಸ್ ಮಕ್ಕಳು ಮತ್ತು ಯುವ ವಯಸ್ಸಿನ ಗುಂಪುಗಳಲ್ಲಿ ಪ್ರಚಲಿತವಾಗಿದ್ದರೂ, ಇದು ಸಾಂಕ್ರಾಮಿಕ ರೋಗಕ್ಕೆ ಕಾರಣವಾಗುವುದಿಲ್ಲ ಎಂದು ಅವರು ಹೇಳಿದರು. ಹೆಚ್ಚಿನ ರೋಗಿಗಳು ಚಿಕಿತ್ಸೆಯಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳುತ್ತಾರೆ ಎಂದು ಅವರು ಹೇಳಿದರು.

ಆರಂಭದಲ್ಲಿ 24 ಶಂಕಿತ ಪ್ರಕರಣಗಳು ಕಂಡುಬಂದ ನಂತರ ಈ ಸೋಂಕಿನ ಹಠಾತ್ ಏರಿಕೆಯನ್ನು ತನಿಖೆ ಮಾಡಲು ರಾಜ್ಯ ಆರೋಗ್ಯ ಇಲಾಖೆ ಕ್ಷಿಪ್ರ ಪ್ರತಿಕ್ರಿಯೆ ತಂಡವನ್ನು ಸ್ಥಾಪಿಸಿತು.

ಇದನ್ನೂ ಓದಿ; ತಮಿಳುನಾಡು ನೀರಿನ ಟ್ಯಾಂಕ್ ಮಲೀನ ಪ್ರಕರಣ: ಆರೋಪ ಪಟ್ಟಿಯಲ್ಲಿ ಮೂವರು ದಲಿತರ ಹೆಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...