Homeಮುಖಪುಟಮಹಾರಾಷ್ಟ್ರ: ಸಿಎಂ ಏಕನಾಥ್ ಶಿಂದೆ ಬಣ ಸೇರಿದ ಸಂಸದನಿಗೆ ವಂಚನೆ ಪ್ರಕರಣದಲ್ಲಿ ಕ್ಲೀನ್‌ ಚಿಟ್

ಮಹಾರಾಷ್ಟ್ರ: ಸಿಎಂ ಏಕನಾಥ್ ಶಿಂದೆ ಬಣ ಸೇರಿದ ಸಂಸದನಿಗೆ ವಂಚನೆ ಪ್ರಕರಣದಲ್ಲಿ ಕ್ಲೀನ್‌ ಚಿಟ್

- Advertisement -
- Advertisement -

ಮಹಾರಾಷ್ಟ್ರದ ಆಡಳಿತರೂಢ ಶಿವಸೇನೆ (ಸಿಎಂ ಏಕನಾಥ್ ಶಿಂದೆ ಬಣ) ಸೇರ್ಪಡೆಯಾದ ನಾಲ್ಕು ತಿಂಗಳ ಬಳಿಕ, ಹೋಟೆಲ್ ನಿರ್ಮಾಣಕ್ಕೆ ಸಂಬಂಧಿಸಿದ ವಂಚನೆ ಪ್ರಕರಣದಲ್ಲಿ ಸಂಸದ ರವೀಂದ್ರ ವೈಕರ್ ಅವರಿಗೆ ಪೊಲೀಸರು ಕ್ಲೀನ್ ಚಿಟ್ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ಪ್ರಕರಣವು ಅಪೂರ್ಣ ಮಾಹಿತಿ ಹಾಗೂ ತಪ್ಪು ತಿಳುವಳಿಕೆಯನ್ನು ಆಧರಿಸಿತ್ತು ಎಂದು ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧ ವಿಭಾಗವು ನ್ಯಾಯಾಲಯಕ್ಕೆ ತಿಳಿಸಿದೆ.

ಮಾಜಿ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿ) ಯ ಭಾಗವಾಗಿದ್ದ ಸಂಸದ ವೈಕರ್, ಕಳೆದ ಮಾರ್ಚ್‌ 10 ರಂದು ಶಿಂದೆ ಬಣ ಸೇರಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದ ಭಾಗವಾಗಿರುವ ಸಿಎಂ ಶಿಂದೆ ಬಣದ ಶಿವಸೇನೆ, ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಜೊತೆ ಮೈತ್ರಿ ಸರ್ಕಾರ ನಡೆಸುತ್ತಿದೆ.

2014ರ ಲೋಕಸಭೆ ಚುನಾವಣೆಯಗೆ ಶಿವಸೇನೆ (ಯುಬಿಟಿ) ಅಭ್ಯರ್ಥಿ ಅಮೋಲ್ ಕೀರ್ತಿಕರ್ ವಿರುದ್ದ ಮುಂಬೈ ವಾಯುವ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ವೈಕರ್ ಗೆಲುವು ದಾಖಲಿಸಿದ್ದರು. ಚುನಾವಣೆಯಲ್ಲಿ ಅಕ್ರಮ ಎಸಗಿರುವ ಆರೋಪದ ಮೇಲೆ ಅವರ ಗೆಲುವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ.

ಮುಂಬೈ ಮಹಾನಗರ ಪಾಲಿಕೆಯೊಂದಿಗಿನ ಒಡಂಬಡಿಕೆಯನ್ನು ಉಲ್ಲಂಘಿಸಿ, ಮುಂಬೈ ನಗರದ ಜೋಗೇಶ್ವರಿ ಪ್ರದೇಶದಲ್ಲಿ ಅಕ್ರಮವಾಗಿ ಹೋಟೆಲ್ ನಿರ್ಮಿಸಲಾಗಿದೆ ಎಂದು ಆರೋಪಿಸಿ ಮುಂಬೈ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧ ವಿಭಾಗವು ವೈಕರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿತ್ತು. ವೈಕರ್‌ರೊಂದಿಗೆ ಅವರ ಪತ್ನಿ ಮನಿಷಾ ಹಾಗೂ ಸಹಚರರಾದ ಆಸೂ ನೆಹ್ಲಾನೈ, ರಾಜ್ ಲಾಲ್ ಚಂದಾನಿ, ಪೃಥ್ ಪಾಲ್ ಬೃಂದಾ ಹಾಗೂ ಅರುಣ್ ದುಬೆ ವಿರುದ್ಧವೂ ಪ್ರಕರಣ ದಾಖಲಾಗಿತ್ತು.

ಮುಂಬೈ ಮಹಾನಗರ ಪಾಲಿಕೆಯ ಸಬ್ ಇಂಜಿನಿಯರ್ ಸಂತೋಷ್ ಮಾಂಡವ್ಕರ್ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ವಾಯ್ಕರ್ ವಿರುದ್ಧ ಕ್ರಿಮಿನಲ್ ನಂಬಿಕೆ ಉಲ್ಲಂಘನೆ, ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣ ದಾಖಲಿಸಲಾಗಿತ್ತು.

ಆರಂಭದಲ್ಲಿ ಮುಂಬೈನ ಆಝಾದ್ ಮೈದಾನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ನಂತರ ಆರ್ಥಿಕ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿತ್ತು.

ಮಹಾರಾಷ್ಟ್ರದ ಹಿಂದಿನ ಮಹಾ ವಿಕಾಸ್ ಅಘಾಡಿ ಸರ್ಕಾರ ಅಧಿಕಾರವಧಿಯಲ್ಲಿ ವೈಕರ್‌ಗೆ ಕ್ರೀಡಾ ಸೌಲಭ್ಯ ಸ್ಥಾಪಿಸಲು ಅನುಮತಿ ನೀಡಲಾಗಿತ್ತು. ಮಹಾ ವಿಕಾಸ್ ಅಘಾಡಿ ಒಕ್ಕೂಟ ಸರ್ಕಾರ ಕಾಂಗ್ರೆಸ್, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಶರದ್ಚಂದ್ರ ಪವಾರ್) ಅನ್ನು ಒಳಗೊಂಡಿತ್ತು.

ಇದನ್ನೂ ಓದಿ : ಅದಾನಿ ಸಮೂಹದಿಂದ 108 ಹೆಕ್ಟೇರ್ ಭೂಮಿ ಹಿಂಪಡೆಯಲು ನಿರ್ಧರಿಸಿದ ಗುಜರಾತ್ ಸರ್ಕಾರ: ಗ್ರಾಮಸ್ಥರ ಹೋರಾಟಕ್ಕೆ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...