Homeಮುಖಪುಟ'ಉರ್ದು ಭಾರತಕ್ಕೆ ಅನ್ಯವಲ್ಲ' | ಮಹಾರಾಷ್ಟ್ರ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆ ಎತ್ತಿಹಿಡಿದ ಸುಪ್ರೀಂಕೋರ್ಟ್

‘ಉರ್ದು ಭಾರತಕ್ಕೆ ಅನ್ಯವಲ್ಲ’ | ಮಹಾರಾಷ್ಟ್ರ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆ ಎತ್ತಿಹಿಡಿದ ಸುಪ್ರೀಂಕೋರ್ಟ್

- Advertisement -
- Advertisement -

ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಪಾತೂರ್ ಪಟ್ಟಣದಲ್ಲಿರುವ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಉರ್ದು ಭಾಷೆಯ ವಿರುದ್ಧದ ಪೂರ್ವಾಗ್ರಹವು “ಉರ್ದು ಭಾರತಕ್ಕೆ ಅನ್ಯವಾಗಿದೆ ಎಂಬ ತಪ್ಪು ಕಲ್ಪನೆಯಿಂದ ಹುಟ್ಟಿಕೊಂಡಿದೆ” ಎಂದು ನ್ಯಾಯಾಲಯ ಹೇಳಿದೆ. ‘ಮಹಾರಾಷ್ಟ್ರ ಪುರಸಭೆಯ

ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠವು ಉರ್ದು ಭಾರತದಲ್ಲಿ ಹುಟ್ಟಿದ್ದು, ಮರಾಠಿ ಮತ್ತು ಹಿಂದಿಯಂತೆ ಅದು ಇಂಡೋ-ಆರ್ಯನ್ ಭಾಷೆಯಾಗಿದೆ ಎಂದು ಹೇಳಿದೆ.

“ವಿಭಿನ್ನ ಸಾಂಸ್ಕೃತಿಕ ಸಮುದಾಯಕ್ಕೆ ಸೇರಿದ ಜನರು ತಮ್ಮ ನಡುವೆ ಆಲೋಚನೆಗಳನ್ನು ವಿನಿಮಯ ಮಾಡಿಕೊಳ್ಳಲು ಮತ್ತು ಸಂವಹನ ನಡೆಸಲು ಬಯಸುವ ಅಗತ್ಯದಿಂದಾಗಿ ಉರ್ದು ಭಾರತದಲ್ಲಿ ಅಭಿವೃದ್ಧಿ ಹೊಂದಿತು ಮತ್ತು ಪ್ರವರ್ಧಮಾನಕ್ಕೆ ಬಂದಿತು” ಎಂದು ನ್ಯಾಯಾಲಯ ಹೇಳಿದೆ.

ಪಾತೂರ್ ಪುರಸಭೆಯ ಹೊಸ ಕಟ್ಟಡದ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆಯನ್ನು ಪ್ರಶ್ನಿಸಿದ್ದ ಮಾಜಿ ಕೌನ್ಸಿಲರ್ ವರ್ಷತಾಯಿ ಸಂಜಯ್ ಬಾಗಾಡೆ ಅವರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಬಾಗಾಡೆ ಈ ಹಿಂದೆ ಬಾಂಬೆ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. 2021 ರಲ್ಲಿ ತೀರ್ಪು ನೀಡಿದ್ದ ಹೈಕೋರ್ಟ್, ಮಹಾರಾಷ್ಟ್ರ ಸ್ಥಳೀಯ ಪ್ರಾಧಿಕಾರಗಳ ಅಧಿಕೃತ ಭಾಷಾ ಕಾಯ್ದೆ, 2022 ಅಥವಾ ಯಾವುದೇ ಇತರ ಕಾನೂನು ನಿಬಂಧನೆಯ ಅಡಿಯಲ್ಲಿ ಉರ್ದು ಬಳಸುವುದನ್ನು ನಿಷೇಧಿಸಲಾಗಿಲ್ಲ ಎಂದು ತೀರ್ಪು ನೀಡಿತ್ತು. ಅದರ ನಂತರ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು, ಸುಪ್ರಿಂಕೋರ್ಟ್ ಮರಾಠಿ ಜೊತೆಗೆ ಉರ್ದು ಬಳಕೆಯನ್ನು ಸಹ ಎತ್ತಿಹಿಡಿದಿದೆ.

ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠವು “ಭಾಷೆ ಧರ್ಮವಲ್ಲ, ಸಂಸ್ಕೃತಿ” ಎಂದು ಒತ್ತಿ ಹೇಳಿದೆ.

ಆಂಗ್ಲೋ-ಅಲ್ಜೀರಿಯಾದ ಲೇಖಕ ಮೌಲೌದ್ ಬೆನ್ಜಾಡಿ ಅವರ ಉಲ್ಲೇಖದೊಂದಿಗೆ ತೀರ್ಪನ್ನು ಪ್ರಾರಂಭಿಸಿದ ನ್ಯಾಯಮೂರ್ತಿ ಧುಲಿಯಾ ಅವರು, “ನೀವು ಒಂದು ಭಾಷೆಯನ್ನು ಕಲಿತಾಗ, ಹೊಸ ಭಾಷೆಯನ್ನು ಮಾತನಾಡಲು ಮತ್ತು ಬರೆಯಲು ಮಾತ್ರ ಕಲಿಯುವುದಿಲ್ಲ. ಬದಲಾಗಿ ನೀವು ಎಲ್ಲಾ ಮಾನವಕುಲದ ಬಗ್ಗೆ ಮುಕ್ತ ಮನಸ್ಸಿನವರು, ಉದಾರವಾದಿಗಳು, ಸಹಿಷ್ಣುಗಳು, ದಯೆ ಮತ್ತು ಪರಿಗಣನೆಯನ್ನು ಹೊಂದಲು ಕಲಿಯುತ್ತೀರಿ.” ಎಂದು ಹೇಳಿದ್ದಾರೆ.

“ಎರಡು ಭಾಷೆಗಳನ್ನು ಧರ್ಮದ ಆಧಾರದ ಮೇಲೆ ವಿಭಜಿಸಿದ ವಸಾಹತುಶಾಹಿ ಶಕ್ತಿಗಳ ಒಡಕು, ಹಿಂದಿಯನ್ನು ಹಿಂದೂಗಳ ಮತ್ತು ಉರ್ದು ಭಾಷೆಯನ್ನು ಮುಸ್ಲಿಮರ ಭಾಷೆ ಎಂದು ಅರ್ಥೈಸಲಾಯಿತು. ಇದು ವಾಸ್ತವವಾಗಿ ವೈವಿಧ್ಯತೆಯಲ್ಲಿ ಏಕತೆ; ಮತ್ತು ಸಾರ್ವತ್ರಿಕ ಸಹೋದರತ್ವದ ಪರಿಕಲ್ಪನೆ ಮೇಲಿನ ಶೋಷಣೆಯಾಗಿದೆ” ಎಂದು ನ್ಯಾಯಾಲಯ ಹೇಳಿದೆ. ಮಹಾರಾಷ್ಟ್ರ ಪುರಸಭೆಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಅತ್ಯಾಚಾರ ಸಂತ್ರಸ್ತೆಯೇ ಅಪಾಯ ತಂದುಕೊಂಡಳು’: ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಕ್ಕೆ ಸುಪ್ರೀಂ ಆಕ್ಷೇಪ

‘ಅತ್ಯಾಚಾರ ಸಂತ್ರಸ್ತೆಯೇ ಅಪಾಯ ತಂದುಕೊಂಡಳು’: ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಕ್ಕೆ ಸುಪ್ರೀಂ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...