Homeಮುಖಪುಟ'ಉರ್ದು ಭಾರತಕ್ಕೆ ಅನ್ಯವಲ್ಲ' | ಮಹಾರಾಷ್ಟ್ರ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆ ಎತ್ತಿಹಿಡಿದ ಸುಪ್ರೀಂಕೋರ್ಟ್

‘ಉರ್ದು ಭಾರತಕ್ಕೆ ಅನ್ಯವಲ್ಲ’ | ಮಹಾರಾಷ್ಟ್ರ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆ ಎತ್ತಿಹಿಡಿದ ಸುಪ್ರೀಂಕೋರ್ಟ್

- Advertisement -
- Advertisement -

ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಪಾತೂರ್ ಪಟ್ಟಣದಲ್ಲಿರುವ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಉರ್ದು ಭಾಷೆಯ ವಿರುದ್ಧದ ಪೂರ್ವಾಗ್ರಹವು “ಉರ್ದು ಭಾರತಕ್ಕೆ ಅನ್ಯವಾಗಿದೆ ಎಂಬ ತಪ್ಪು ಕಲ್ಪನೆಯಿಂದ ಹುಟ್ಟಿಕೊಂಡಿದೆ” ಎಂದು ನ್ಯಾಯಾಲಯ ಹೇಳಿದೆ. ‘ಮಹಾರಾಷ್ಟ್ರ ಪುರಸಭೆಯ

ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠವು ಉರ್ದು ಭಾರತದಲ್ಲಿ ಹುಟ್ಟಿದ್ದು, ಮರಾಠಿ ಮತ್ತು ಹಿಂದಿಯಂತೆ ಅದು ಇಂಡೋ-ಆರ್ಯನ್ ಭಾಷೆಯಾಗಿದೆ ಎಂದು ಹೇಳಿದೆ.

“ವಿಭಿನ್ನ ಸಾಂಸ್ಕೃತಿಕ ಸಮುದಾಯಕ್ಕೆ ಸೇರಿದ ಜನರು ತಮ್ಮ ನಡುವೆ ಆಲೋಚನೆಗಳನ್ನು ವಿನಿಮಯ ಮಾಡಿಕೊಳ್ಳಲು ಮತ್ತು ಸಂವಹನ ನಡೆಸಲು ಬಯಸುವ ಅಗತ್ಯದಿಂದಾಗಿ ಉರ್ದು ಭಾರತದಲ್ಲಿ ಅಭಿವೃದ್ಧಿ ಹೊಂದಿತು ಮತ್ತು ಪ್ರವರ್ಧಮಾನಕ್ಕೆ ಬಂದಿತು” ಎಂದು ನ್ಯಾಯಾಲಯ ಹೇಳಿದೆ.

ಪಾತೂರ್ ಪುರಸಭೆಯ ಹೊಸ ಕಟ್ಟಡದ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆಯನ್ನು ಪ್ರಶ್ನಿಸಿದ್ದ ಮಾಜಿ ಕೌನ್ಸಿಲರ್ ವರ್ಷತಾಯಿ ಸಂಜಯ್ ಬಾಗಾಡೆ ಅವರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಬಾಗಾಡೆ ಈ ಹಿಂದೆ ಬಾಂಬೆ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. 2021 ರಲ್ಲಿ ತೀರ್ಪು ನೀಡಿದ್ದ ಹೈಕೋರ್ಟ್, ಮಹಾರಾಷ್ಟ್ರ ಸ್ಥಳೀಯ ಪ್ರಾಧಿಕಾರಗಳ ಅಧಿಕೃತ ಭಾಷಾ ಕಾಯ್ದೆ, 2022 ಅಥವಾ ಯಾವುದೇ ಇತರ ಕಾನೂನು ನಿಬಂಧನೆಯ ಅಡಿಯಲ್ಲಿ ಉರ್ದು ಬಳಸುವುದನ್ನು ನಿಷೇಧಿಸಲಾಗಿಲ್ಲ ಎಂದು ತೀರ್ಪು ನೀಡಿತ್ತು. ಅದರ ನಂತರ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು, ಸುಪ್ರಿಂಕೋರ್ಟ್ ಮರಾಠಿ ಜೊತೆಗೆ ಉರ್ದು ಬಳಕೆಯನ್ನು ಸಹ ಎತ್ತಿಹಿಡಿದಿದೆ.

ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠವು “ಭಾಷೆ ಧರ್ಮವಲ್ಲ, ಸಂಸ್ಕೃತಿ” ಎಂದು ಒತ್ತಿ ಹೇಳಿದೆ.

ಆಂಗ್ಲೋ-ಅಲ್ಜೀರಿಯಾದ ಲೇಖಕ ಮೌಲೌದ್ ಬೆನ್ಜಾಡಿ ಅವರ ಉಲ್ಲೇಖದೊಂದಿಗೆ ತೀರ್ಪನ್ನು ಪ್ರಾರಂಭಿಸಿದ ನ್ಯಾಯಮೂರ್ತಿ ಧುಲಿಯಾ ಅವರು, “ನೀವು ಒಂದು ಭಾಷೆಯನ್ನು ಕಲಿತಾಗ, ಹೊಸ ಭಾಷೆಯನ್ನು ಮಾತನಾಡಲು ಮತ್ತು ಬರೆಯಲು ಮಾತ್ರ ಕಲಿಯುವುದಿಲ್ಲ. ಬದಲಾಗಿ ನೀವು ಎಲ್ಲಾ ಮಾನವಕುಲದ ಬಗ್ಗೆ ಮುಕ್ತ ಮನಸ್ಸಿನವರು, ಉದಾರವಾದಿಗಳು, ಸಹಿಷ್ಣುಗಳು, ದಯೆ ಮತ್ತು ಪರಿಗಣನೆಯನ್ನು ಹೊಂದಲು ಕಲಿಯುತ್ತೀರಿ.” ಎಂದು ಹೇಳಿದ್ದಾರೆ.

“ಎರಡು ಭಾಷೆಗಳನ್ನು ಧರ್ಮದ ಆಧಾರದ ಮೇಲೆ ವಿಭಜಿಸಿದ ವಸಾಹತುಶಾಹಿ ಶಕ್ತಿಗಳ ಒಡಕು, ಹಿಂದಿಯನ್ನು ಹಿಂದೂಗಳ ಮತ್ತು ಉರ್ದು ಭಾಷೆಯನ್ನು ಮುಸ್ಲಿಮರ ಭಾಷೆ ಎಂದು ಅರ್ಥೈಸಲಾಯಿತು. ಇದು ವಾಸ್ತವವಾಗಿ ವೈವಿಧ್ಯತೆಯಲ್ಲಿ ಏಕತೆ; ಮತ್ತು ಸಾರ್ವತ್ರಿಕ ಸಹೋದರತ್ವದ ಪರಿಕಲ್ಪನೆ ಮೇಲಿನ ಶೋಷಣೆಯಾಗಿದೆ” ಎಂದು ನ್ಯಾಯಾಲಯ ಹೇಳಿದೆ. ಮಹಾರಾಷ್ಟ್ರ ಪುರಸಭೆಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಅತ್ಯಾಚಾರ ಸಂತ್ರಸ್ತೆಯೇ ಅಪಾಯ ತಂದುಕೊಂಡಳು’: ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಕ್ಕೆ ಸುಪ್ರೀಂ ಆಕ್ಷೇಪ

‘ಅತ್ಯಾಚಾರ ಸಂತ್ರಸ್ತೆಯೇ ಅಪಾಯ ತಂದುಕೊಂಡಳು’: ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಕ್ಕೆ ಸುಪ್ರೀಂ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...