Homeಮುಖಪುಟ'ಉರ್ದು ಭಾರತಕ್ಕೆ ಅನ್ಯವಲ್ಲ' | ಮಹಾರಾಷ್ಟ್ರ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆ ಎತ್ತಿಹಿಡಿದ ಸುಪ್ರೀಂಕೋರ್ಟ್

‘ಉರ್ದು ಭಾರತಕ್ಕೆ ಅನ್ಯವಲ್ಲ’ | ಮಹಾರಾಷ್ಟ್ರ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆ ಎತ್ತಿಹಿಡಿದ ಸುಪ್ರೀಂಕೋರ್ಟ್

- Advertisement -
- Advertisement -

ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಪಾತೂರ್ ಪಟ್ಟಣದಲ್ಲಿರುವ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಉರ್ದು ಭಾಷೆಯ ವಿರುದ್ಧದ ಪೂರ್ವಾಗ್ರಹವು “ಉರ್ದು ಭಾರತಕ್ಕೆ ಅನ್ಯವಾಗಿದೆ ಎಂಬ ತಪ್ಪು ಕಲ್ಪನೆಯಿಂದ ಹುಟ್ಟಿಕೊಂಡಿದೆ” ಎಂದು ನ್ಯಾಯಾಲಯ ಹೇಳಿದೆ. ‘ಮಹಾರಾಷ್ಟ್ರ ಪುರಸಭೆಯ

ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠವು ಉರ್ದು ಭಾರತದಲ್ಲಿ ಹುಟ್ಟಿದ್ದು, ಮರಾಠಿ ಮತ್ತು ಹಿಂದಿಯಂತೆ ಅದು ಇಂಡೋ-ಆರ್ಯನ್ ಭಾಷೆಯಾಗಿದೆ ಎಂದು ಹೇಳಿದೆ.

“ವಿಭಿನ್ನ ಸಾಂಸ್ಕೃತಿಕ ಸಮುದಾಯಕ್ಕೆ ಸೇರಿದ ಜನರು ತಮ್ಮ ನಡುವೆ ಆಲೋಚನೆಗಳನ್ನು ವಿನಿಮಯ ಮಾಡಿಕೊಳ್ಳಲು ಮತ್ತು ಸಂವಹನ ನಡೆಸಲು ಬಯಸುವ ಅಗತ್ಯದಿಂದಾಗಿ ಉರ್ದು ಭಾರತದಲ್ಲಿ ಅಭಿವೃದ್ಧಿ ಹೊಂದಿತು ಮತ್ತು ಪ್ರವರ್ಧಮಾನಕ್ಕೆ ಬಂದಿತು” ಎಂದು ನ್ಯಾಯಾಲಯ ಹೇಳಿದೆ.

ಪಾತೂರ್ ಪುರಸಭೆಯ ಹೊಸ ಕಟ್ಟಡದ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆಯನ್ನು ಪ್ರಶ್ನಿಸಿದ್ದ ಮಾಜಿ ಕೌನ್ಸಿಲರ್ ವರ್ಷತಾಯಿ ಸಂಜಯ್ ಬಾಗಾಡೆ ಅವರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಬಾಗಾಡೆ ಈ ಹಿಂದೆ ಬಾಂಬೆ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. 2021 ರಲ್ಲಿ ತೀರ್ಪು ನೀಡಿದ್ದ ಹೈಕೋರ್ಟ್, ಮಹಾರಾಷ್ಟ್ರ ಸ್ಥಳೀಯ ಪ್ರಾಧಿಕಾರಗಳ ಅಧಿಕೃತ ಭಾಷಾ ಕಾಯ್ದೆ, 2022 ಅಥವಾ ಯಾವುದೇ ಇತರ ಕಾನೂನು ನಿಬಂಧನೆಯ ಅಡಿಯಲ್ಲಿ ಉರ್ದು ಬಳಸುವುದನ್ನು ನಿಷೇಧಿಸಲಾಗಿಲ್ಲ ಎಂದು ತೀರ್ಪು ನೀಡಿತ್ತು. ಅದರ ನಂತರ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು, ಸುಪ್ರಿಂಕೋರ್ಟ್ ಮರಾಠಿ ಜೊತೆಗೆ ಉರ್ದು ಬಳಕೆಯನ್ನು ಸಹ ಎತ್ತಿಹಿಡಿದಿದೆ.

ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠವು “ಭಾಷೆ ಧರ್ಮವಲ್ಲ, ಸಂಸ್ಕೃತಿ” ಎಂದು ಒತ್ತಿ ಹೇಳಿದೆ.

ಆಂಗ್ಲೋ-ಅಲ್ಜೀರಿಯಾದ ಲೇಖಕ ಮೌಲೌದ್ ಬೆನ್ಜಾಡಿ ಅವರ ಉಲ್ಲೇಖದೊಂದಿಗೆ ತೀರ್ಪನ್ನು ಪ್ರಾರಂಭಿಸಿದ ನ್ಯಾಯಮೂರ್ತಿ ಧುಲಿಯಾ ಅವರು, “ನೀವು ಒಂದು ಭಾಷೆಯನ್ನು ಕಲಿತಾಗ, ಹೊಸ ಭಾಷೆಯನ್ನು ಮಾತನಾಡಲು ಮತ್ತು ಬರೆಯಲು ಮಾತ್ರ ಕಲಿಯುವುದಿಲ್ಲ. ಬದಲಾಗಿ ನೀವು ಎಲ್ಲಾ ಮಾನವಕುಲದ ಬಗ್ಗೆ ಮುಕ್ತ ಮನಸ್ಸಿನವರು, ಉದಾರವಾದಿಗಳು, ಸಹಿಷ್ಣುಗಳು, ದಯೆ ಮತ್ತು ಪರಿಗಣನೆಯನ್ನು ಹೊಂದಲು ಕಲಿಯುತ್ತೀರಿ.” ಎಂದು ಹೇಳಿದ್ದಾರೆ.

“ಎರಡು ಭಾಷೆಗಳನ್ನು ಧರ್ಮದ ಆಧಾರದ ಮೇಲೆ ವಿಭಜಿಸಿದ ವಸಾಹತುಶಾಹಿ ಶಕ್ತಿಗಳ ಒಡಕು, ಹಿಂದಿಯನ್ನು ಹಿಂದೂಗಳ ಮತ್ತು ಉರ್ದು ಭಾಷೆಯನ್ನು ಮುಸ್ಲಿಮರ ಭಾಷೆ ಎಂದು ಅರ್ಥೈಸಲಾಯಿತು. ಇದು ವಾಸ್ತವವಾಗಿ ವೈವಿಧ್ಯತೆಯಲ್ಲಿ ಏಕತೆ; ಮತ್ತು ಸಾರ್ವತ್ರಿಕ ಸಹೋದರತ್ವದ ಪರಿಕಲ್ಪನೆ ಮೇಲಿನ ಶೋಷಣೆಯಾಗಿದೆ” ಎಂದು ನ್ಯಾಯಾಲಯ ಹೇಳಿದೆ. ಮಹಾರಾಷ್ಟ್ರ ಪುರಸಭೆಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಅತ್ಯಾಚಾರ ಸಂತ್ರಸ್ತೆಯೇ ಅಪಾಯ ತಂದುಕೊಂಡಳು’: ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಕ್ಕೆ ಸುಪ್ರೀಂ ಆಕ್ಷೇಪ

‘ಅತ್ಯಾಚಾರ ಸಂತ್ರಸ್ತೆಯೇ ಅಪಾಯ ತಂದುಕೊಂಡಳು’: ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಕ್ಕೆ ಸುಪ್ರೀಂ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...