ರಂಜಾನ್ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು ಜನರ ಗುಂಪು ಮರದ ಕೋಲುಗಳು ಮತ್ತು ಹರಿತವಾದ ಆಯುಧಗಳನ್ನು ಹಿಡಿದು ಸ್ಥಳಕ್ಕೆ ಬಂದಿ ಹಲ್ಲೆ ನಡೆಸಿದ್ದಾರೆ. ಎಫ್ಐಆರ್ ಪ್ರಕಾರ, ಗುಂಪು ಸಭೆಯನ್ನು ಪ್ರಶ್ನಿಸಿ, ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿ, ನಂತರ ಅಲ್ಲಿದ್ದ ಜನರ ಮೇಲೆ ಹಲ್ಲೆ ನಡೆಸಿದೆ.
ಪೊಲೀಸರು ಸುಮಾರು 100 ರಿಂದ 150 ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾದ ಹಲವಾರು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದರಲ್ಲಿ ಸೆಕ್ಷನ್ 118(1), 189(2), 190, 191(2), 191(3), 351(2), 351(3) ಮತ್ತು 352 ಸೇರಿದಂತೆ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯ ನಿಬಂಧನೆಗಳು ಸೇರಿವೆ.
ಘಟನೆಯಲ್ಲಿ ಯಾರು ಭಾಗಿಯಾಗಿದ್ದರು ಎಂದು ನಿರ್ಧರಿಸಲು ನಡೆಯುತ್ತಿರುವ ತನಿಖೆಯ ಭಾಗವಾಗಿ ತನಿಖಾಧಿಕಾರಿಗಳು ಕೆಲವು ಸ್ಥಳೀಯ ನಿವಾಸಿಗಳನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಪರಿಶೀಲನೆಯ ನಂತರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಗುಂಪು ಸೇರಿದ್ದ ಸ್ಥಳವು ನಿರ್ಧಿಷ್ಟಪಡಿಸಿದ ಧಾರ್ಮಿಕ ಸ್ಥಳವಲ್ಲ ಎಂದು ಅಧಿಕಾರಿಗಳು ಗಮನಿಸಿದ್ದಾರೆ. ಹಿಂದಿನ ವರ್ಷಗಳಲ್ಲಿ ಇಫ್ತಾರ್ಗಾಗಿ ಅಲ್ಲಿ ಜನರು ಸೇರಿರುವುದನ್ನು ತಾವು ನೋಡಿಲ್ಲ ಎಂದು ಸ್ಥಳೀಯ ಗ್ರಾಮಸ್ಥರು ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಈ ಮಧ್ಯೆ, ‘ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ’ದ (ಎಸ್ಡಿಪಿಐ) ಸ್ಥಳೀಯ ಕಾರ್ಯಕರ್ತರೊಬ್ಬರು, ಹಲ್ಲೆಯಲ್ಲಿ ಐದರಿಂದ ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ, ಶುಕ್ರವಾರ ಸಂಜೆ ಪುಣೆ ಜಿಲ್ಲೆಯ ಪುರಂದರ್ ತಾಲ್ಲೂಕಿನ ಓಸ್ಕರವಾಡಿ ಗ್ರಾಮದ ಸರೋವರದ ಬಳಿ ರಂಜಾನ್ ಸಮಯದಲ್ಲಿ ದಾಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹಿಂದುತ್ವ ಕಾರ್ಯಕರ್ತರು ಈ ದಾಳಿ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.
ದಾಳಿಕೋರರು ಹಿಂದುತ್ವ ಕಾರ್ಯಕರ್ತರು ಎಂದು ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಎಸ್ಡಿಪಿಐ ಆರೋಪಿಸಿದೆ.


