Homeಚಳವಳಿಮಹಾರಾಷ್ಟ್ರ: ನೀರಿಗಾಗಿ 40 ಅಡಿ ಆಳದ ನದಿಯನ್ನು ಮರದ ದಿಮ್ಮಿ ಸಹಾಯದಿಂದ ದಾಟುತ್ತಿದ್ದ ಆದಿವಾಸಿ ಮಹಿಳೆಯರು,...

ಮಹಾರಾಷ್ಟ್ರ: ನೀರಿಗಾಗಿ 40 ಅಡಿ ಆಳದ ನದಿಯನ್ನು ಮರದ ದಿಮ್ಮಿ ಸಹಾಯದಿಂದ ದಾಟುತ್ತಿದ್ದ ಆದಿವಾಸಿ ಮಹಿಳೆಯರು, ಎಚ್ಚೆತ್ತ ಸರ್ಕಾರ

- Advertisement -
- Advertisement -

ಕುಡಿಯುವ ನೀರಿಗಾಗಿ 25 ಅಗಲ ಮತ್ತು 40 ಅಡಿ ಆಳದ ನದಿಯ ಮೇಲೆ ಒಂದೆರಡು ಮರದ ದಿಮ್ಮಿಗಳನ್ನು ಇರಿಸಿ ತಲೆಯ ಮೇಲೆ ನೀರಿನ ಬಿಂದಿಗೆ ಹೊತ್ತು ಪ್ರಾಣ ಭಯದಲ್ಲಿ ನದಿ ದಾಟುತ್ತಿದ್ದ ಮಹಾರಾಷ್ಟ್ರದ ಬುಡಕಟ್ಟು ಮಹಿಳೆಯರ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಮಹಾರಾಷ್ಟ್ರದ ನಾಸಿಕ್‌ ಜಿಲ್ಲೆಯ ತ್ರಯಂಬಕೇಶ್ವರದ ಖರ್ಖೇತ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸರ್ವಪಾಡಾದಲ್ಲಿ ಬುಡಕಟ್ಟು ಮಹಿಳೆಯರ ಈ ಚಿತ್ರಗಳು ವೈರಲ್‌ ಆದ ಬಳಿಕ ಹಲವು ಮಾಧ್ಯಮಗಳು ಈ ಕುರಿತು ವರದಿ ಮಾಡಿದ್ದವು. ಎಚ್ಚೆತ್ತುಕೊಂಡಿರುವ ಮಹಾರಾಷ್ಟ್ರ ಸರ್ಕಾರ ಎರಡು ದಿನಗಳಲ್ಲಿ ನದಿಗೆ ಕಬ್ಬಿಣದ ಸೇತುವೆ ಅಳವಡಿಸಿದೆ.

ಖಾರ್ಖೇತ್ ಗ್ರಾಮ ಪಂಚಾಯಿತಿಯಲ್ಲಿ 25 ಬುಡಕಟ್ಟು ಹಾಡಿಗಳಿದ್ದು, ಇವುಗಳಲ್ಲಿ 300 ಕ್ಕೂ ಹೆಚ್ಚು ಜನರು ವಾಸವಿದ್ದಾರೆ. ಪ್ರತಿ ದಿನ ಕುಡಿಯುವ ನೀರಿಗಾಗಿ ನದಿಯ ಮೇಲೆ ಹಾಕಲಾಗಿರುವ ಕಂಬದ ಸಹಾಯದಿಂದ 40 ಅಡಿ ಆಳದ ಹಳ್ಳವನ್ನು ದಾಟಿ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ತಲುಪಬೇಕಾಗಿತ್ತು.

ಇದನ್ನೂ ಓದಿ: ಲಿಂಗ ತಾರತಮ್ಯ ಹೋಗಲಾಡಿಸುವ ಕ್ರಮ: ಸರ್‌, ಮೇಡಂ ಸಂಬೋಧನೆ ಬಿಟ್ಟ ಕೇರಳದ ಶಾಲೆ

पीने के पानी की खातिर रोज मौत को चकमा देती हैं ये आदिवासी महिलाएं -  Navbharat Times

ಗ್ರಾಮದ ನಿವಾಸಿ ಲಕ್ಷ್ಮಣ ದಹವಾಡ ಮಾತನಾಡಿ, “ತಮ್ಮ ಗ್ರಾಮಕ್ಕೆ ಸರ್ಕಾರದ ಹಲವು ಯೋಜನೆಗಳು ಬಂದಿವೆ, ಆದರೆ ಒಂದೇ ಒಂದು ಯೋಜನೆ ಗಿರಿಜನರಿಗೆ ತಲುಪಿಲ್ಲ. ಕುಡಿಯುವ ನೀರು ಪ್ರತಿಯೊಬ್ಬರ ಹಕ್ಕು, ಆದರೆ ಅದನ್ನು ಪಡೆಯುವ ಭಾಗ್ಯ ಕೂಡ ನಮಗಿಲ್ಲ. ಹಾಡಿಯ ಬಳಿ ನದಿ ಇದೆ. ಆದರೆ ಶುದ್ಧ ನೀರಿನ ಕೊರತೆಯಿಂದ ಮಹಿಳೆಯರು ಹೊರ ಹೋಗಬೇಕಾಗಿದೆ. ತಮ್ಮ ಜೀವ ಭಯದಲ್ಲೇ ಈ ಕೆಲಸವನ್ನು ಮಹಿಳೆಯರು ಮಾಡುತ್ತಿದ್ದಾರೆ’ ಎಂದಿದ್ದಾರೆ.

ಈ ಚಿತ್ರಗಳು ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ಎಚ್ಚೆತ್ತುಕೊಂಡ ಪರಿಸರ ಸಚಿವ ಆದಿತ್ಯ ಠಾಕ್ರೆ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಬಳಿಕ ನಾಸಿಕ್ ಮತ್ತು ಮುಂಬೈ ಅಧಿಕಾರಿಗಳು ಎರಡು ದಿನಗಳಲ್ಲಿ ನದಿಗೆ ಕಬ್ಬಿಣದ ಸೇತುವೆ ಅಳವಡಿಸುವ ಕಾಮಗಾರಿ ಆರಂಭಿಸಿದ್ದು, ಕೆಲಸ ಮುಗಿಸಿದೆ. ಇದು ಸ್ಥಳೀಯರಲ್ಲಿ ಕೊಂಚ ನೆಮ್ಮದಿಗೆ ಕಾರಣವಾಗಿದೆ.

ಸುದ್ದಿ ಗಮನಿಸಿರುವ ಶಿವಸೇನೆಯ ಸಂಸದ ಹೇಮಂತ್ ಗೋಡ್ಸೆ, ಖರ್ಖೇತ್ಬುಡಕಟ್ಟು ಸಮುದಾಯದ ಮನೆಗಳಿಗೆ ಪೈಪ್‌ಲೈನ್ ಮೂಲಕ ನೀರು ಸರಬರಾಜು ಮಾಡುವ ಭರವಸೆ ನೀಡಿದ್ದಾರೆ. ಆದರೆ, ಒಂದು ಸೇತುವೆ ನಿರ್ಮಾಣವಾಗಲು ಇಷ್ಟು ವರ್ಷಗಳ ಕಾಯಬೇಕಾದ ಜನ ಮನೆಗೆ ಪೈಪ್‌ಲೈನ್‌ನಲ್ಲಿ ನೀರು ಬರಲು ಎಷ್ಟು ವರ್ಷಗಳು ಕಾಯಬೇಕೋ ಎಂದು ಪ್ರಶ್ನಿಸಿದ್ದಾರೆ.

ಈ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯೊಂದೆ ಅಲ್ಲದೆ ರಸ್ತೆ ಕೂಡ ಇಲ್ಲ. ಮಕ್ಕಳು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಈ ಮರದ ದಿಮ್ಮಿಯ ಸಹಾಯದಿಂದ ನದಿ ದಾಟಿ ವಿದ್ಯಾಭ್ಯಾಸಕ್ಕೆ ಹೋಗುತ್ತಾರೆ. ನದಿಯ ಪಕ್ಕದಲ್ಲಿ ಕೃಷಿ ಭೂಮಿ ಇದೆ, ಆದರೆ ವಿದ್ಯುತ್ ಇಲ್ಲದ ಕಾರಣ ಮೋಟಾರ್ ಬಳಸಿ ನೀರು ಎತ್ತಲು ಸಾಧ್ಯವಾಗುತ್ತಿಲ್ಲ. ಮಳೆಯ ನೀರಲ್ಲೇ ಕೃಷಿ ಮಾಡುಲಾಗುತ್ತಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.


ಇದನ್ನೂ ಓದಿ: ಬುಡಕಟ್ಟು ಹಕ್ಕುಗಳ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಬಿಡುಗಡೆಗೆ ಪೋಸ್ಟ್‌ಕಾರ್ಡ್ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....