Homeಚಳವಳಿಮಹಾರಾಷ್ಟ್ರ: ನೀರಿಗಾಗಿ 40 ಅಡಿ ಆಳದ ನದಿಯನ್ನು ಮರದ ದಿಮ್ಮಿ ಸಹಾಯದಿಂದ ದಾಟುತ್ತಿದ್ದ ಆದಿವಾಸಿ ಮಹಿಳೆಯರು,...

ಮಹಾರಾಷ್ಟ್ರ: ನೀರಿಗಾಗಿ 40 ಅಡಿ ಆಳದ ನದಿಯನ್ನು ಮರದ ದಿಮ್ಮಿ ಸಹಾಯದಿಂದ ದಾಟುತ್ತಿದ್ದ ಆದಿವಾಸಿ ಮಹಿಳೆಯರು, ಎಚ್ಚೆತ್ತ ಸರ್ಕಾರ

- Advertisement -
- Advertisement -

ಕುಡಿಯುವ ನೀರಿಗಾಗಿ 25 ಅಗಲ ಮತ್ತು 40 ಅಡಿ ಆಳದ ನದಿಯ ಮೇಲೆ ಒಂದೆರಡು ಮರದ ದಿಮ್ಮಿಗಳನ್ನು ಇರಿಸಿ ತಲೆಯ ಮೇಲೆ ನೀರಿನ ಬಿಂದಿಗೆ ಹೊತ್ತು ಪ್ರಾಣ ಭಯದಲ್ಲಿ ನದಿ ದಾಟುತ್ತಿದ್ದ ಮಹಾರಾಷ್ಟ್ರದ ಬುಡಕಟ್ಟು ಮಹಿಳೆಯರ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಮಹಾರಾಷ್ಟ್ರದ ನಾಸಿಕ್‌ ಜಿಲ್ಲೆಯ ತ್ರಯಂಬಕೇಶ್ವರದ ಖರ್ಖೇತ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸರ್ವಪಾಡಾದಲ್ಲಿ ಬುಡಕಟ್ಟು ಮಹಿಳೆಯರ ಈ ಚಿತ್ರಗಳು ವೈರಲ್‌ ಆದ ಬಳಿಕ ಹಲವು ಮಾಧ್ಯಮಗಳು ಈ ಕುರಿತು ವರದಿ ಮಾಡಿದ್ದವು. ಎಚ್ಚೆತ್ತುಕೊಂಡಿರುವ ಮಹಾರಾಷ್ಟ್ರ ಸರ್ಕಾರ ಎರಡು ದಿನಗಳಲ್ಲಿ ನದಿಗೆ ಕಬ್ಬಿಣದ ಸೇತುವೆ ಅಳವಡಿಸಿದೆ.

ಖಾರ್ಖೇತ್ ಗ್ರಾಮ ಪಂಚಾಯಿತಿಯಲ್ಲಿ 25 ಬುಡಕಟ್ಟು ಹಾಡಿಗಳಿದ್ದು, ಇವುಗಳಲ್ಲಿ 300 ಕ್ಕೂ ಹೆಚ್ಚು ಜನರು ವಾಸವಿದ್ದಾರೆ. ಪ್ರತಿ ದಿನ ಕುಡಿಯುವ ನೀರಿಗಾಗಿ ನದಿಯ ಮೇಲೆ ಹಾಕಲಾಗಿರುವ ಕಂಬದ ಸಹಾಯದಿಂದ 40 ಅಡಿ ಆಳದ ಹಳ್ಳವನ್ನು ದಾಟಿ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ತಲುಪಬೇಕಾಗಿತ್ತು.

ಇದನ್ನೂ ಓದಿ: ಲಿಂಗ ತಾರತಮ್ಯ ಹೋಗಲಾಡಿಸುವ ಕ್ರಮ: ಸರ್‌, ಮೇಡಂ ಸಂಬೋಧನೆ ಬಿಟ್ಟ ಕೇರಳದ ಶಾಲೆ

पीने के पानी की खातिर रोज मौत को चकमा देती हैं ये आदिवासी महिलाएं -  Navbharat Times

ಗ್ರಾಮದ ನಿವಾಸಿ ಲಕ್ಷ್ಮಣ ದಹವಾಡ ಮಾತನಾಡಿ, “ತಮ್ಮ ಗ್ರಾಮಕ್ಕೆ ಸರ್ಕಾರದ ಹಲವು ಯೋಜನೆಗಳು ಬಂದಿವೆ, ಆದರೆ ಒಂದೇ ಒಂದು ಯೋಜನೆ ಗಿರಿಜನರಿಗೆ ತಲುಪಿಲ್ಲ. ಕುಡಿಯುವ ನೀರು ಪ್ರತಿಯೊಬ್ಬರ ಹಕ್ಕು, ಆದರೆ ಅದನ್ನು ಪಡೆಯುವ ಭಾಗ್ಯ ಕೂಡ ನಮಗಿಲ್ಲ. ಹಾಡಿಯ ಬಳಿ ನದಿ ಇದೆ. ಆದರೆ ಶುದ್ಧ ನೀರಿನ ಕೊರತೆಯಿಂದ ಮಹಿಳೆಯರು ಹೊರ ಹೋಗಬೇಕಾಗಿದೆ. ತಮ್ಮ ಜೀವ ಭಯದಲ್ಲೇ ಈ ಕೆಲಸವನ್ನು ಮಹಿಳೆಯರು ಮಾಡುತ್ತಿದ್ದಾರೆ’ ಎಂದಿದ್ದಾರೆ.

ಈ ಚಿತ್ರಗಳು ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ಎಚ್ಚೆತ್ತುಕೊಂಡ ಪರಿಸರ ಸಚಿವ ಆದಿತ್ಯ ಠಾಕ್ರೆ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಬಳಿಕ ನಾಸಿಕ್ ಮತ್ತು ಮುಂಬೈ ಅಧಿಕಾರಿಗಳು ಎರಡು ದಿನಗಳಲ್ಲಿ ನದಿಗೆ ಕಬ್ಬಿಣದ ಸೇತುವೆ ಅಳವಡಿಸುವ ಕಾಮಗಾರಿ ಆರಂಭಿಸಿದ್ದು, ಕೆಲಸ ಮುಗಿಸಿದೆ. ಇದು ಸ್ಥಳೀಯರಲ್ಲಿ ಕೊಂಚ ನೆಮ್ಮದಿಗೆ ಕಾರಣವಾಗಿದೆ.

ಸುದ್ದಿ ಗಮನಿಸಿರುವ ಶಿವಸೇನೆಯ ಸಂಸದ ಹೇಮಂತ್ ಗೋಡ್ಸೆ, ಖರ್ಖೇತ್ಬುಡಕಟ್ಟು ಸಮುದಾಯದ ಮನೆಗಳಿಗೆ ಪೈಪ್‌ಲೈನ್ ಮೂಲಕ ನೀರು ಸರಬರಾಜು ಮಾಡುವ ಭರವಸೆ ನೀಡಿದ್ದಾರೆ. ಆದರೆ, ಒಂದು ಸೇತುವೆ ನಿರ್ಮಾಣವಾಗಲು ಇಷ್ಟು ವರ್ಷಗಳ ಕಾಯಬೇಕಾದ ಜನ ಮನೆಗೆ ಪೈಪ್‌ಲೈನ್‌ನಲ್ಲಿ ನೀರು ಬರಲು ಎಷ್ಟು ವರ್ಷಗಳು ಕಾಯಬೇಕೋ ಎಂದು ಪ್ರಶ್ನಿಸಿದ್ದಾರೆ.

ಈ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯೊಂದೆ ಅಲ್ಲದೆ ರಸ್ತೆ ಕೂಡ ಇಲ್ಲ. ಮಕ್ಕಳು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಈ ಮರದ ದಿಮ್ಮಿಯ ಸಹಾಯದಿಂದ ನದಿ ದಾಟಿ ವಿದ್ಯಾಭ್ಯಾಸಕ್ಕೆ ಹೋಗುತ್ತಾರೆ. ನದಿಯ ಪಕ್ಕದಲ್ಲಿ ಕೃಷಿ ಭೂಮಿ ಇದೆ, ಆದರೆ ವಿದ್ಯುತ್ ಇಲ್ಲದ ಕಾರಣ ಮೋಟಾರ್ ಬಳಸಿ ನೀರು ಎತ್ತಲು ಸಾಧ್ಯವಾಗುತ್ತಿಲ್ಲ. ಮಳೆಯ ನೀರಲ್ಲೇ ಕೃಷಿ ಮಾಡುಲಾಗುತ್ತಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.


ಇದನ್ನೂ ಓದಿ: ಬುಡಕಟ್ಟು ಹಕ್ಕುಗಳ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಬಿಡುಗಡೆಗೆ ಪೋಸ್ಟ್‌ಕಾರ್ಡ್ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...