Homeಚಳವಳಿಮಹಾರಾಷ್ಟ್ರ: ನೀರಿಗಾಗಿ 40 ಅಡಿ ಆಳದ ನದಿಯನ್ನು ಮರದ ದಿಮ್ಮಿ ಸಹಾಯದಿಂದ ದಾಟುತ್ತಿದ್ದ ಆದಿವಾಸಿ ಮಹಿಳೆಯರು,...

ಮಹಾರಾಷ್ಟ್ರ: ನೀರಿಗಾಗಿ 40 ಅಡಿ ಆಳದ ನದಿಯನ್ನು ಮರದ ದಿಮ್ಮಿ ಸಹಾಯದಿಂದ ದಾಟುತ್ತಿದ್ದ ಆದಿವಾಸಿ ಮಹಿಳೆಯರು, ಎಚ್ಚೆತ್ತ ಸರ್ಕಾರ

- Advertisement -
- Advertisement -

ಕುಡಿಯುವ ನೀರಿಗಾಗಿ 25 ಅಗಲ ಮತ್ತು 40 ಅಡಿ ಆಳದ ನದಿಯ ಮೇಲೆ ಒಂದೆರಡು ಮರದ ದಿಮ್ಮಿಗಳನ್ನು ಇರಿಸಿ ತಲೆಯ ಮೇಲೆ ನೀರಿನ ಬಿಂದಿಗೆ ಹೊತ್ತು ಪ್ರಾಣ ಭಯದಲ್ಲಿ ನದಿ ದಾಟುತ್ತಿದ್ದ ಮಹಾರಾಷ್ಟ್ರದ ಬುಡಕಟ್ಟು ಮಹಿಳೆಯರ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಮಹಾರಾಷ್ಟ್ರದ ನಾಸಿಕ್‌ ಜಿಲ್ಲೆಯ ತ್ರಯಂಬಕೇಶ್ವರದ ಖರ್ಖೇತ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸರ್ವಪಾಡಾದಲ್ಲಿ ಬುಡಕಟ್ಟು ಮಹಿಳೆಯರ ಈ ಚಿತ್ರಗಳು ವೈರಲ್‌ ಆದ ಬಳಿಕ ಹಲವು ಮಾಧ್ಯಮಗಳು ಈ ಕುರಿತು ವರದಿ ಮಾಡಿದ್ದವು. ಎಚ್ಚೆತ್ತುಕೊಂಡಿರುವ ಮಹಾರಾಷ್ಟ್ರ ಸರ್ಕಾರ ಎರಡು ದಿನಗಳಲ್ಲಿ ನದಿಗೆ ಕಬ್ಬಿಣದ ಸೇತುವೆ ಅಳವಡಿಸಿದೆ.

ಖಾರ್ಖೇತ್ ಗ್ರಾಮ ಪಂಚಾಯಿತಿಯಲ್ಲಿ 25 ಬುಡಕಟ್ಟು ಹಾಡಿಗಳಿದ್ದು, ಇವುಗಳಲ್ಲಿ 300 ಕ್ಕೂ ಹೆಚ್ಚು ಜನರು ವಾಸವಿದ್ದಾರೆ. ಪ್ರತಿ ದಿನ ಕುಡಿಯುವ ನೀರಿಗಾಗಿ ನದಿಯ ಮೇಲೆ ಹಾಕಲಾಗಿರುವ ಕಂಬದ ಸಹಾಯದಿಂದ 40 ಅಡಿ ಆಳದ ಹಳ್ಳವನ್ನು ದಾಟಿ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ತಲುಪಬೇಕಾಗಿತ್ತು.

ಇದನ್ನೂ ಓದಿ: ಲಿಂಗ ತಾರತಮ್ಯ ಹೋಗಲಾಡಿಸುವ ಕ್ರಮ: ಸರ್‌, ಮೇಡಂ ಸಂಬೋಧನೆ ಬಿಟ್ಟ ಕೇರಳದ ಶಾಲೆ

पीने के पानी की खातिर रोज मौत को चकमा देती हैं ये आदिवासी महिलाएं -  Navbharat Times

ಗ್ರಾಮದ ನಿವಾಸಿ ಲಕ್ಷ್ಮಣ ದಹವಾಡ ಮಾತನಾಡಿ, “ತಮ್ಮ ಗ್ರಾಮಕ್ಕೆ ಸರ್ಕಾರದ ಹಲವು ಯೋಜನೆಗಳು ಬಂದಿವೆ, ಆದರೆ ಒಂದೇ ಒಂದು ಯೋಜನೆ ಗಿರಿಜನರಿಗೆ ತಲುಪಿಲ್ಲ. ಕುಡಿಯುವ ನೀರು ಪ್ರತಿಯೊಬ್ಬರ ಹಕ್ಕು, ಆದರೆ ಅದನ್ನು ಪಡೆಯುವ ಭಾಗ್ಯ ಕೂಡ ನಮಗಿಲ್ಲ. ಹಾಡಿಯ ಬಳಿ ನದಿ ಇದೆ. ಆದರೆ ಶುದ್ಧ ನೀರಿನ ಕೊರತೆಯಿಂದ ಮಹಿಳೆಯರು ಹೊರ ಹೋಗಬೇಕಾಗಿದೆ. ತಮ್ಮ ಜೀವ ಭಯದಲ್ಲೇ ಈ ಕೆಲಸವನ್ನು ಮಹಿಳೆಯರು ಮಾಡುತ್ತಿದ್ದಾರೆ’ ಎಂದಿದ್ದಾರೆ.

ಈ ಚಿತ್ರಗಳು ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ಎಚ್ಚೆತ್ತುಕೊಂಡ ಪರಿಸರ ಸಚಿವ ಆದಿತ್ಯ ಠಾಕ್ರೆ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಬಳಿಕ ನಾಸಿಕ್ ಮತ್ತು ಮುಂಬೈ ಅಧಿಕಾರಿಗಳು ಎರಡು ದಿನಗಳಲ್ಲಿ ನದಿಗೆ ಕಬ್ಬಿಣದ ಸೇತುವೆ ಅಳವಡಿಸುವ ಕಾಮಗಾರಿ ಆರಂಭಿಸಿದ್ದು, ಕೆಲಸ ಮುಗಿಸಿದೆ. ಇದು ಸ್ಥಳೀಯರಲ್ಲಿ ಕೊಂಚ ನೆಮ್ಮದಿಗೆ ಕಾರಣವಾಗಿದೆ.

ಸುದ್ದಿ ಗಮನಿಸಿರುವ ಶಿವಸೇನೆಯ ಸಂಸದ ಹೇಮಂತ್ ಗೋಡ್ಸೆ, ಖರ್ಖೇತ್ಬುಡಕಟ್ಟು ಸಮುದಾಯದ ಮನೆಗಳಿಗೆ ಪೈಪ್‌ಲೈನ್ ಮೂಲಕ ನೀರು ಸರಬರಾಜು ಮಾಡುವ ಭರವಸೆ ನೀಡಿದ್ದಾರೆ. ಆದರೆ, ಒಂದು ಸೇತುವೆ ನಿರ್ಮಾಣವಾಗಲು ಇಷ್ಟು ವರ್ಷಗಳ ಕಾಯಬೇಕಾದ ಜನ ಮನೆಗೆ ಪೈಪ್‌ಲೈನ್‌ನಲ್ಲಿ ನೀರು ಬರಲು ಎಷ್ಟು ವರ್ಷಗಳು ಕಾಯಬೇಕೋ ಎಂದು ಪ್ರಶ್ನಿಸಿದ್ದಾರೆ.

ಈ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯೊಂದೆ ಅಲ್ಲದೆ ರಸ್ತೆ ಕೂಡ ಇಲ್ಲ. ಮಕ್ಕಳು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಈ ಮರದ ದಿಮ್ಮಿಯ ಸಹಾಯದಿಂದ ನದಿ ದಾಟಿ ವಿದ್ಯಾಭ್ಯಾಸಕ್ಕೆ ಹೋಗುತ್ತಾರೆ. ನದಿಯ ಪಕ್ಕದಲ್ಲಿ ಕೃಷಿ ಭೂಮಿ ಇದೆ, ಆದರೆ ವಿದ್ಯುತ್ ಇಲ್ಲದ ಕಾರಣ ಮೋಟಾರ್ ಬಳಸಿ ನೀರು ಎತ್ತಲು ಸಾಧ್ಯವಾಗುತ್ತಿಲ್ಲ. ಮಳೆಯ ನೀರಲ್ಲೇ ಕೃಷಿ ಮಾಡುಲಾಗುತ್ತಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.


ಇದನ್ನೂ ಓದಿ: ಬುಡಕಟ್ಟು ಹಕ್ಕುಗಳ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಬಿಡುಗಡೆಗೆ ಪೋಸ್ಟ್‌ಕಾರ್ಡ್ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...