Homeಮುಖಪುಟಮಹಾರಾಷ್ಟ್ರ: ಸರ್ಕಾರಿ ಉದ್ಯೋಗಿಗಳು ಟೀ ಶರ್ಟ್, ಜೀನ್ಸ್ ಧರಿಸುವಂತಿಲ್ಲ!

ಮಹಾರಾಷ್ಟ್ರ: ಸರ್ಕಾರಿ ಉದ್ಯೋಗಿಗಳು ಟೀ ಶರ್ಟ್, ಜೀನ್ಸ್ ಧರಿಸುವಂತಿಲ್ಲ!

ಖಾದಿ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ, ಸರ್ಕಾರಿ ನೌಕರರು ವಾರಕ್ಕೆ ಒಮ್ಮೆಯಾದರೂ ಕಡ್ಡಾಯವಾಗಿ ಖಾದಿ ಬಟ್ಟೆಗಳನ್ನು ಧರಿಸಬೇಕು ಎಂದು ತಿಳಿಸಲಾಗಿದೆ.

- Advertisement -
- Advertisement -

ಮಹಾರಾಷ್ಟ್ರದ ಸರ್ಕಾರಿ ಅಧಿಕಾರಿಗಳು, ಉದ್ಯೋಗಿಗಳು ಮತ್ತು ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಸೇರಿದವರು ಎಲ್ಲರಿಗೂ ಸೇರಿದಂತೆ ಇನ್ನು ಮುಂದೆ ಸರ್ಕಾರಿ ಕಚೇರಿಯಲ್ಲಿ ವಸ್ತ್ರ ಸಂಹಿತೆ ಪಾಲಿಸುವಂತೆ ಸರ್ಕಾರ ಸೂಚಿಸಿದೆ. ಜೀನ್ಸ್, ಟೀ ಶರ್ಟ್ ಮತ್ತು ಚಪ್ಪಲಿ ಧರಿಸದಂತೆ, ವಾರಕ್ಕೆ ಒಮ್ಮೆ ಖಾದಿ ಬಟ್ಟೆಗಳನ್ನು ಬಳಸುವಂತೆ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಆದೇಶಿಸಿದೆ.

ಈ ವಾರದ ಆರಂಭದಲ್ಲಿ, ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗವು ತನ್ನ ಎಲ್ಲ ಉದ್ಯೋಗಿಗಳಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಜಾರಿಗೆ ತರುವ ನಿರ್ಣಯವನ್ನು ಹೊರಡಿಸಿತ್ತು. ಸರ್ಕಾರಿ ಉದ್ಯೋಗಿಗಳು ರಾಜ್ಯದ ಪ್ರತಿನಿಧಿಗಳಾಗಿದ್ದು, ಅವರು ಫಾರ್ಮಲ್ ಬಟ್ಟೆ ಧರಿಸದಿದ್ದರೇ ಜನರ ಮನಸ್ಸಿನಲ್ಲಿ ಸರ್ಕಾರದ ಕೆಟ್ಟ ಚಿತ್ರಣ  ಮೂಡಬಹುದು ಎಂಬ ಕಾರಣ ನೀಡಿದ್ದಾರೆ.

’ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಬಹಳಷ್ಟು ಅಧಿಕಾರಿಗಳು ಮತ್ತು ನೌಕರರು, ಅದರಲ್ಲೂ ವಿಶೇಷವಾಗಿ ಗುತ್ತಿಗೆ ಪಡೆದವರು ಅಥವಾ ಸಲಹೆಗಾರರಾಗಿ ನೇಮಕಗೊಂಡವರು ಕಚೇರಿ ಸಮಯದಲ್ಲಿ ಸರ್ಕಾರಿ ನೌಕರರಂತೆ ಸೂಕ್ತವಾದ ಬಟ್ಟೆಗಳನ್ನು ಧರಿಸುವುದಿಲ್ಲ. ಇದರ ಪರಿಣಾಮವಾಗಿ, ಸಮಾಜದಲ್ಲಿ ಸರ್ಕಾರಿ ಅಧಿಕಾರಿಗಳ ಚಿತ್ರಣವು ಕೆಟ್ಟದಾಗಿರುತ್ತದೆ’ ಎಂದು ಆದೇಶದಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ನಿಲ್ಲದ ರೈತ ಹೋರಾಟ: 100 ಪತ್ರಿಕಾಗೋಷ್ಟಿ, 700 ಸಭೆಗಳ ಮೂಲಕ ಪ್ರಚಾರಕ್ಕೆ ಹೊರಟ ಬಿಜೆಪಿ!

“ಸರ್ಕಾರಿ ಅಧಿಕಾರಿಯ ಡ್ರೆಸ್ ಕೋಡ್ ಸೂಕ್ತವಲ್ಲದ, ಕಳಪೆ ಅಥವಾ ಅಶುದ್ಧವಾಗಿದ್ದರೆ ಅದು ಅವರ ಒಟ್ಟಾರೆ ಕೆಲಸದ ಮೇಲೆ ಪರೋಕ್ಷ ಪರಿಣಾಮ ಬೀರುತ್ತದೆ” ಎಂದು ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ದೇಶಪಾಂಡೆ ಸಹಿ ಮಾಡಿರುವ ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ.

ಡ್ರೆಸ್ ಕೋಡ್ ಹೇಗಿರಬೇಕು..?

ಸರ್ಕಾರದ ಹೊಸ ಡ್ರೆಸ್ ಕೋಡ್ ಪ್ರಕಾರ, ಎಲ್ಲಾ ಮಹಿಳಾ ಉದ್ಯೋಗಿಗಳು ಸೀರೆಗಳು, ಚೂಡಿದಾರ್, ಕುರ್ತಾ,  ದುಪಟ್ಟಾ ಧರಿಸಬೇಕು. ಪುರುಷರು ಮತ್ತು ಮಹಿಳಾ ಉದ್ಯೋಗಿಗಳಿಗೆ ಜೀನ್ಸ್ ಮತ್ತು ಟೀ ಶರ್ಟ್, ಗಾಢ ಬಣ್ಣದ, ಮುದ್ರಿತ ಅಥವಾ ಕಸೂತಿ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಫಾರ್ಮಲ್ ಬೂಟುಗಳು, ಸ್ಯಾಂಡಲ್ಸ್‌ಗಳನ್ನು ಬಳಸಬೇಕು. ಲೈಟ್ ವೇಯ್ಟ್​​​ ಚಪ್ಪಲಿಗಳನ್ನು ಧರಿಸಬಾರದೆಂದು ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ.

ಖಾದಿ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ, ಸರ್ಕಾರಿ ನೌಕರರು ವಾರಕ್ಕೆ ಒಮ್ಮೆಯಾದರೂ ಕಡ್ಡಾಯವಾಗಿ ಖಾದಿ ಬಟ್ಟೆಗಳನ್ನು ಧರಿಸಬೇಕು ಎಂದು ತಿಳಿಸಲಾಗಿದೆ.

ಇತ್ತಿಚೆಗೆ ಮಹಾರಾಷ್ಟ್ರದ ಔರಂಗಾಬಾದ್ ನಗರದಲ್ಲಿ ಬಸ್ ಕಂಡಕ್ಟರ್‌ಗಳು ಮತ್ತು ಟಿಕೆಟ್ ಇನ್ಸ್‌ಪೆಕ್ಟರ್‌ಗಳು ಶೀಘ್ರದಲ್ಲೇ ತಮ್ಮ ಸಮವಸ್ತ್ರದಲ್ಲಿ ಕ್ಯಾಮೆರಾ ಹೊಂದಿಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು. ಇದರಿಂದ ಪ್ರಯಾಣ ಸಮಯದಲ್ಲಿ ಪ್ರಯಾಣಿಕರ ವರ್ತನೆ ಮತ್ತು ಇತರ ಚಟುವಟಿಕೆಗಳ ಬಗ್ಗೆ ಗಮನ ಇರಿಸಲಾಗುತ್ತದೆ ಎಂದು ಮಾಹಿತಿ ನೀಡಲಾಗಿತ್ತು


ಇದನ್ನೂ ಓದಿ: ರೈತ ವಿರೋಧಿ ಮಸೂದೆಗಳಿಗೆ ಸಹಿ ಹಾಕಬಾರದು: ಹೋರಾಟನಿರತ ರೈತ ಮುಖಂಡರನ್ನು ಮಾತುಕತೆಗೆ ಕರೆದ ರಾಜ್ಯಪಾಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...