Homeಮುಖಪುಟಮಹಾರಾಷ್ಟ್ರ ಸರ್ಕಾರ ರಚನೆಯಲ್ಲಿ ಮುಂದುವರಿದ ಹಾವು ಏಣಿ ಆಟ: ಬೆಂಬಲವಿಲ್ಲ ಎನ್ನುತ್ತಿದೆ ಕಾಂಗ್ರೆಸ್‌

ಮಹಾರಾಷ್ಟ್ರ ಸರ್ಕಾರ ರಚನೆಯಲ್ಲಿ ಮುಂದುವರಿದ ಹಾವು ಏಣಿ ಆಟ: ಬೆಂಬಲವಿಲ್ಲ ಎನ್ನುತ್ತಿದೆ ಕಾಂಗ್ರೆಸ್‌

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಶಿವಸೇನೆಗೆ ಬೆಂಬಲ ನೀಡಲು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆಮೂಲಕ 11 ದಿನಗಳಿಮದ ನಡೆಯುತ್ತಿರುವ ಸರ್ಕಾರ ರಚನೆಯ ಸರ್ಕಸ್‌ ಇನ್ನು ಮುಂದುವರೆಯಲಿದ್ದು ಇನ್ನು ಮೂರು ದಿನದಲ್ಲಿ ಹೊ ಸರ್ಕಾರ ರಚನೆಯಾಗದಿದ್ದರೆ ರಾಷ್ಟ್ರಪತಿ ಆಡಳಿತ ಹೇರುವ ಭೀತಿ ಎದುರಾಗಿದೆ.

ಈ ಕುರಿತು ನಿನ್ನೆ ಎರಡು ಹೈ ಲೆವೆಲ್‌ ಸಭೆಗಳು ನಡೆದರೂ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬರಲಾಗಿಲ್ಲ. ಹಾಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್‌ ರವರು ಗೃಹಸಚಿವ ಅಮಿತ್‌ ಶಾರನ್ನು ಭೇಟಿಯಾಗಿದ್ದು ಮಾತುಕತೆ ನಡೆಸಿದ್ದಾರೆ. ಅಲ್ಲಿ ಅವರು ನಾವೇ ಸರ್ಕಾರ ರಚಿಸುತ್ತೇವೆಂಬ ವಿಶ್ವಾಸ ಹೊಂದಿದ್ದಾರೆ. ಆದರೆ ಮೈತ್ರಿ ಹೇಗೆ ಎಂಬ ಸ್ಪಷ್ಟನೆಯನ್ನು ನೀಡಿಲ್ಲ.

ಇನ್ನೊಂದೆಡೆ ಎನ್‌ಸಿಪಿ ಮುಖ್ಯಸ್ಥ ಶರಾದ್‌ ಪವಾರ್‌ರವರು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಧೀರ್ಘ ಸಮಾಲೋಚನೆ ನಡೆಸಿದ್ದಾರೆ. ಅಲ್ಲಿ ಬಿಜೆಪಿ ರಾಜ್ಯಕ್ಕೆ ಅಧಿಕಾರಕ್ಕೆ ಬರದಂತೆ ತಡೆಯಲು ಇಂತಹ ಮೈತ್ರಿಕೂಟದ ಅಗತ್ಯವಾಗಿದೆ ಎಂದು ಪವಾರ್‌ ಹೇಳಿದ್ದಾರೆ. ಆದರೆ ಅದಕ್ಕೆ ಸೋನಿಯಾ ಗಾಂಧಿಯವರು ಒಪ್ಪಿದಂತೆ ಕಾಣುತ್ತಿಲ್ಲ.

ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಪವಾರ್‌ ಮುಂದಿನ ದಿನಗಳಲ್ಲಿ ಮತ್ತೊಂದು ಸಭೆ ನಡೆಸುವ ಅಗತ್ಯವಿದೆ. ಈಗಲೇ ಯಾವುದೇ ತೀರ್ಮಾನಕ್ಕೆ ಬಂದಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ಶಿವಸೇನೆ – ಬಿಜೆಪಿ ಜಗಳವು ಅವರ “ಆಂತರಿಕ ವಿಷಯ”ವಾಗಿದೆ. ನಾವು ಶಿವಸೇಗೆ ಯಾವುದೇ ಭರವಸೆ ನೀಡಿಲ್ಲ ಎಂದಿದ್ದಾರೆ.

ಇನ್ನು ಶಿವಸೇನೆ ಪಕ್ಷದ ಹಿರಿಯ ಮುಖಂಡ ಸಂಜಯ್ ರಾವತ್‌ ಅವರು ಸೋಮವಾರ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅವರು ರಾಜ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದಲ್ಲದೇ ಸರ್ಕಾರ ರಚಿಸುವ ಹೊಣೆಗಾರಿಕೆ ಬಿಜೆಪಿಯದ್ದು ಎಂದು ತಿಳಿಸಿದ್ದಾರೆ. “ಯಾರು ಜನಾದೇಶವನ್ನು ಹೊಂದಿದ್ದಾರೆ, ಅವರು ಸರ್ಕಾರ ರಚಿಸುತ್ತಾರೆ. ನಾನು ರಾಜ್ಯಪಾಲರಿಗೆ ಸಲಹೆ ನೀಡಲು ಸಾಧ್ಯವಿಲ್ಲ. ಅವರು ತಮ್ಮದೇ ಆದ ನಿರ್ಧಾರ ತೆಗೆದುಕೊಳ್ಳುತ್ತಾರೆ” ಎಂದು ಅವರು ನುಡಿದಿದ್ದಾರೆ.

ಇನ್ನು ಕಾಂಗ್ರೆಸ್‌ ಪಕ್ಷದ ರಾಜ್ಯ ನಾಯಕರಲ್ಲಿ ಒಂದು ಭಾಗವು ಮೈತ್ರಿಯ ಪರವಾಗಿದೆ ಎಂದು ಹೇಳಲಾಗಿದೆ. ಆದರೆ ಪವಾರ್ ಅವರ ಸಲಹೆಗಳಿಗೆ ಸೋನಿಯಾಗಾಂಧಿಯವರು ಒಪ್ಪದಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಉಲ್ಭಣಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...