Homeಮುಖಪುಟಮಹಾರಾಷ್ಟ್ರ | ನವೆಂಬರ್ 6 ರಂದು ಚುನಾವಣಾ ಪ್ರಚಾರ ಪ್ರಾರಂಭಿಸಲಿರುವ ಎಂವಿಎ

ಮಹಾರಾಷ್ಟ್ರ | ನವೆಂಬರ್ 6 ರಂದು ಚುನಾವಣಾ ಪ್ರಚಾರ ಪ್ರಾರಂಭಿಸಲಿರುವ ಎಂವಿಎ

- Advertisement -
- Advertisement -

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ರಾಜ್ಯದ ವಿರೋಧ ಪಕ್ಷಗಳ ಮೈತ್ರಿ ಮಹಾ ವಿಕಾಸ್ ಅಘಾಡಿ ನವೆಂಬರ್ 6 ರಂದು ತನ್ನ ಪ್ರಚಾರವನ್ನು ಪ್ರಾರಂಭಿಸಲಿದೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಗುರುವಾರ ಹೇಳಿದ್ದಾರೆ. ಈ ಅಭಿಯಾನವನ್ನು ನಾನು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮುನ್ನಡೆಸಲಿದ್ದಾರೆ ಎಂದು ಶರದ್ ಪವಾರ್ ಹೇಳಿದ್ದಾರೆ.

ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶರದ್ ಪವಾರ್ ಅವರಿಗೆ ದೀಪಾವಳಿ ಶುಭಾಶಯಗಳನ್ನು ತಿಳಿಸುತ್ತಾ, ರಾಜ್ಯದ ಜನರ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೆಲವು ಕ್ಷೇತ್ರಗಳಲ್ಲಿ ಮೈತ್ರಿಯ ಪಕ್ಷಗಳಾದ ಎನ್‌ಸಿಪಿ (ಎಸ್‌ಪಿ), ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ) ನಡುವಿನ ಸೌಹಾರ್ದ ಹೋರಾಟದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಮಿತ್ರಪಕ್ಷಗಳ ನಡುವೆ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ ಕ್ಷೇತ್ರಗಳು ಕೇವಲ 10-12 ಮಾತ್ರ ಇದೆ. ಇನ್ನೆರಡು ದಿನಗಳಲ್ಲಿ ಪರಿಹಾರ ಕಂಡುಕೊಂಡು ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರ

ಮಹಾ ವಿಕಾಸ್ ಅಘಾಡಿ ಮೈತ್ರಿಯು ರಾಜ್ಯದ ಜನರಿಗೆ ಅವರ ಬೆಂಬಲವನ್ನು ಪಡೆಯಲು “ಕಾರ್ಯಕ್ರಮ” ನೀಡುತ್ತದೆ ಎಂದು ಅವರು ಹೇಳಿದ್ದಾರೆ. ತಾನು, ರಾಹುಲ್ ಗಾಂಧಿ ಮತ್ತು ಉದ್ಧವ್ ಠಾಕ್ರೆ ಅವರ ಸಮ್ಮುಖದಲ್ಲಿ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲಾಗುವುದು ಎಂದು ಶರದ್ ಪವಾರ್ ಹೇಳಿದ್ದಾರೆ.

ನವೆಂಬರ್ 6 ರಂದು ಮುಂಬೈನಲ್ಲಿ ಮಹಾ ವಿಕಾಸ್ ಅಘಾಡಿ ಜಂಟಿ ರ್ಯಾಲಿಯನ್ನು ನಡೆಸಲಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ನಾನಾ ಪಟೋಲೆ ಬುಧವಾರ ಹೇಳಿದ್ದಾರೆ. ಮಹಾ ವಿಕಾಸ್ ಅಘಾಡಿಯಲ್ಲಿ ಕಾಂಗ್ರೆಸ್ 103 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಶಿವಸೇನೆ(ಯುಬಿಟಿ) 89 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ಮತ್ತು NCP (SP) ಗೆ 87 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.

ಮಹಾ ವಿಕಾಸ್ ಅಘಾಡಿಯ ಇತರ ಮಿತ್ರಪಕ್ಷಗಳು ಆರು ಸ್ಥಾನಗಳಲ್ಲಿ ಕಣದಲ್ಲಿದ್ದರೂ, ಮೂರು ವಿಧಾನಸಭಾ ಕ್ಷೇತ್ರಗಳ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಮಹಾರಾಷ್ಟ್ರದ ಒಟ್ಟು 288 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 20 ರಂದು ಮತದಾನ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಶಕ್ತಿ ಯೋಜನೆ ಮರುಪರಿಶೀಲನೆ : ಡಿ.ಕೆ ಶಿವಕುಮಾರ್ ಸುಳಿವು

ಶಕ್ತಿ ಯೋಜನೆ ಮರುಪರಿಶೀಲನೆ : ಡಿ.ಕೆ ಶಿವಕುಮಾರ್ ಸುಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...