Homeಮುಖಪುಟಮಹಾರಾಷ್ಟ್ರ | ಇವಿಎಂ ತಿರುಚಿದ ಆರೋಪ : ಪ್ರಮಾಣವಚನ ಸಮಾರಂಭ ಬಹಿಷ್ಕರಿಸಿದ ವಿಪಕ್ಷ ಶಾಸಕರು

ಮಹಾರಾಷ್ಟ್ರ | ಇವಿಎಂ ತಿರುಚಿದ ಆರೋಪ : ಪ್ರಮಾಣವಚನ ಸಮಾರಂಭ ಬಹಿಷ್ಕರಿಸಿದ ವಿಪಕ್ಷ ಶಾಸಕರು

- Advertisement -
- Advertisement -

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಮತ್ತು ಏಕನಾಥ್ ಶಿಂದೆ ವಿಧಾನಸಭೆಯ ಸದಸ್ಯರಾಗಿ ಇಂದು (ಡಿ.7) ಪ್ರಮಾಣವಚನ ಸ್ವೀಕರಿಸಿದರು. ಇವಿಎಂ ತಿರುಚಿದ ಆರೋಪ ಮಾಡಿರುವ ಪ್ರತಿಪಕ್ಷ ನಾಯಕರು ಈ ಕಾರ್ಯಕ್ರಮ (ಕಲಾಪ) ಬಹಿಷ್ಕರಿಸಿದರು.

ಮೂರು ದಿನಗಳ ವಿಶೇಷ ಕಲಾಪದ ಮೊದಲ ದಿನವಾದ ಇಂದು, ಮಹಾರಾಷ್ಟ್ರ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಕಾಳಿದಾಸ್ ಕೊಳಂಬಕರ್, ಆರಂಭದಲ್ಲಿ ಮೂವರು ನಾಯಕರಿಗೆ ಪ್ರಮಾಣವಚನ ಬೋಧಿಸಿದರು. ನಂತರ ಉಳಿದವರು ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ತಿರುಚಲಾಗಿದೆ. ಈ ಮೂಲಕ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಿದ್ದಾರೆ ಎಂದು ಆರೋಪಿಸಿರುವ ಪ್ರತಿಪಕ್ಷಗಳ ಎಂವಿಎ ನಾಯಕರು ಕಲಾಪ ಬಹಿಷ್ಕರಿಸಿದರು.

ಈ ಕುರಿತು ಮಾತನಾಡಿರುವ ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ, “ವಿಶೇಷ ಕಲಾಪದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಎಂವಿಎ ಪಕ್ಷಗಳ ಚುನಾಯಿತ ಪ್ರತಿನಿಧಿಗಳು ಯಾರೂ ಭಾಗವಹಿಸುವುದಿಲ್ಲ ಎಂದಿದ್ದಾರೆ.

ಚುನಾವಣೆಯಲ್ಲಿ ಎನ್‌ಡಿಎ ಗೆಲುವು ಜನಾದೇಶವಾಗಿದ್ದರೆ ಜನರು ಸಂಭ್ರಮಿಸುತ್ತಿದ್ದರು. ಆದರೆ, ಜನರು ಸಂಭ್ರಮಿಸುವುದು ಎಲ್ಲೂ ಕಾಣುತ್ತಿಲ್ಲ. ನಮಗೆ ಇವಿಎಂ ಮೇಲೆ ಅನುಮಾನವಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ನಾನಾ ಪಟೋಲೆ ಕೂಡ “ನಮ್ಮ ಚುನಾಯಿತು ಪ್ರತಿನಿಧಿಗಳು ಕಲಾಪ ಬಹಿಷ್ಕರಿಸಿದ್ದಾರೆ” ಎಂದು ಹೇಳಿದ್ದು, ಸರ್ಕಾರ ಅನ್ಯಾಯ ಎಸಗುವ ಮೂಲಕ ಎನ್‌ಡಿಎ ಚುನಾವಣೆ ಗೆದ್ದಿದೆ ಎಂದು ಆರೋಪಿಸಿದ್ದಾರೆ.

“ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭೆ ಚುನಾವಣೆ ಜನರಿಗೆ ಅರ್ಥವೇ ಅಗಿಲ್ಲ. ಮರ್ಕಡವಾಡಿಯಲ್ಲಿ ಗ್ರಾಮಸ್ಥರು ಚುನಾವಣಾ ಆಯೋಗದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿ ಖಾಸಗಿ ಚುನಾವಣೆ ನಡೆಸಲು ಮುಂದಾಗಿರುವುದು ಇಡೀ ಮಹಾರಾಷ್ಟ್ರದ ಭಾವನೆಯಾಗಿದೆ. ಚುನಾವಣಾ ಆಯೋಗ ಖಾಸಗಿ ಮತದಾನಕ್ಕೆ ವಿರೋಧ ವ್ಯಕ್ತಪಡಿಸಿರುವುದು ಸರ್ಕಾರ ಅನ್ಯಾಯ ಮಾಡಿದೆ ಎಂದರ್ಥ. ಆದ್ದರಿಂದ ನಮ್ಮ ಪ್ರತಿಭಟನೆ ವ್ಯಕ್ತಪಡಿಸಲು ನಾವು ಕಲಾಪ ಬಹಿಷ್ಕರಿಸಿದ್ದೇವೆ” ಎಂದು ನಾನಾ ಪಟೋಲೆ ಹೇಳಿದ್ದಾರೆ.

ನವೆಂಬರ್ 20ರಂದು ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನದ ಫಲಿತಾಂಶ ನ.20ರಂದು ಪ್ರಕಟಗೊಂಡಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ 288 ಸ್ಥಾನಗಳ ಪೈಕಿ 230 ಸ್ಥಾನಗಳನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ : ಉಪ ಮುಖ್ಯಮಂತ್ರಿಯಾದ ಮರುದಿನ ಅಜಿತ್ ಪವಾರ್ ಮೇಲಿನ 1000 ಕೋಟಿ ರೂ. ಬೇನಾಮಿ ಆರೋಪ ತೆರವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...