Homeಮುಖಪುಟಮಹಾರಾಷ್ಟ್ರ: ಒಂದು ವರ್ಷದಲ್ಲಿ ಶಾಲೆಯಿಂದ ಹೊರಗುಳಿದ 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು

ಮಹಾರಾಷ್ಟ್ರ: ಒಂದು ವರ್ಷದಲ್ಲಿ ಶಾಲೆಯಿಂದ ಹೊರಗುಳಿದ 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದಿಂದ ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಳೆದ ಒಂದು ವರ್ಷದಿಂದ ಶಿಕ್ಷಣದಿಂದ ವಂಚಿತರಾಗಿದ್ದಾರೆ. 10ನೇ ತರಗತಿಗೆ ಸೇರಲು ಅರ್ಜಿ ತುಂಬಿರುವ ವಿದ್ಯಾರ್ಥಿಗಳು ಮತ್ತು ಒಂಬತ್ತನೇ ತರಗತಿಯಲ್ಲಿ ಉತ್ತೀರ್ಣರಾದವರಿಗೆ ಹೋಲಿಕೆ ಮಾಡಿದರೇ ಎರಡು ಲಕ್ಷಕ್ಕಿಂತ ಕಡಿಮೆ ವಿದ್ಯಾರ್ಥಿಗಳು ದಾಖಲಾಗಿದ್ದಾರೆ.

ಈ ಮಾಹಿತಿಯು ಮಹಾರಾಷ್ಟ್ರದ ಶಿಕ್ಷಣ ಇಲಾಖೆಗೆ ಆಘಾತವನ್ನುಂಟು ಮಾಡಿದ್ದು, ಶಾಲೆ ಬಿಟ್ಟ ವಿದ್ಯಾರ್ಥಿಗಳನ್ನು ಶಾಲೆಗಳಿಗೆ ಮರಳಿ ಕರೆಸಿಕೊಳ್ಳುವ ಕಾರ್ಯಕ್ಕೆ ತುರ್ತು ಚಾಲನೆಯನ್ನು ನೀಡಲಾಗುತ್ತಿದೆ ಎನ್ನಲಾಗಿದೆ.

ಕಳೆದ ವರ್ಷ ಒಟ್ಟು 18,31,344 ವಿದ್ಯಾರ್ಥಿಗಳು ಒಂಬತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದಾರೆ. ಆದಾಗ್ಯೂ, ಈ ವರ್ಷ ಹತ್ತನೇ ತರಗತಿಗೆ ಅರ್ಜಿ ಸಲ್ಲಿಸಿದವರ ಸಂಖ್ಯೆ ಕೇವಲ 16, 57,000. ಈ ಪೈಕಿ 56 ಸಾವಿರ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆಗೆ ಹಾಜರಾಗಿದ್ದರು. ಹೀಗಾಗಿ ಹತ್ತನೇ ತರಗತಿ ಪರೀಕ್ಷೆಗೆ 16 ಲಕ್ಷ ಹೊಸ ವಿದ್ಯಾರ್ಥಿಗಳು ಮಾತ್ರ ಹಾಜರಾಗಿದ್ದಾರೆ. ಕಳೆದ ವರ್ಷ 9 ನೇ ತರಗತಿಯಲ್ಲಿ ಉತ್ತೀರ್ಣರಾದವರೊಂದಿಗೆ ಹೋಲಿಸಿದರೆ, ಒಂದೇ ವರ್ಷದಲ್ಲಿ ಸುಮಾರು 2,32,000 ವಿದ್ಯಾರ್ಥಿಗಳು ಶಿಕ್ಷಣದಿಂದ ಹೊರಗುಳಿದಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

“ಬಡತನ, ಆರ್ಥಿಕ ತೊಂದರೆ, ಬಾಲ್ಯವಿವಾಹಗಳು, ಪೋಷಕರ ಕೆಲಸ ಮತ್ತು ಬಾಲ ಕಾರ್ಮಿಕ ಪದ್ಧತಿಗಾಗಿ ಬೇರೆಡೆಗೆ ವಲಸೆ ಹೋಗುವ ಸಾಧ್ಯತೆ ಸೇರಿದಂತೆ ಹಲವು ಕಾರಣಗಳಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ” ಎಂದು ಜಲ್ಕಾರಿ ಜ್ಞಾನ ಪ್ರತಿಷ್ಠಾನದ ಹಿರಿಯ ಶಿಕ್ಷಣ ತಜ್ಞ ಮತ್ತು ಸಿಇಒ ಸಂಗಿತಾ ಮಾಲ್ಶೆ ಹೇಳಿದ್ದಾರೆ.

’ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ, ವಿದ್ಯಾರ್ಥಿಗಳು ಶಾಲೆಗೆ ಬರುವಂತಹ ವಾತಾವರಣ ಕಲ್ಪಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಗ್ರೇಡ್ ವ್ಯವಸ್ಥೆಯನ್ನು ಬಳಸಿಕೊಂಡು ವಿದ್ಯಾರ್ಥಿಗಳನ್ನು 8 ನೇ ತರಗತಿವರೆಗೆ ತೇರ್ಗಡೆ ಮಾಡಲಾಗುತ್ತಿದೆ. ಒಂಬತ್ತನೇ ತರಗತಿಯಿಂದ ವಿದ್ಯಾರ್ಥಿಗಳು ಹೊರಗುಳಿದ ಹಲವಾರು ಘಟನೆಗಳು ನಡೆದಿವೆ, ಆದರೆ ಈಗ ಎರಡು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ನಿಲ್ಲಿಸಿರುವುದು ಆಘಾತಕಾರಿ ಮತ್ತು  ಅಸ್ವಾಭಾವಿಕವಾಗಿದೆ’ ಎಂದು ಶಿಕ್ಷಣ ತಜ್ಞರು ಹೇಳುತ್ತಾರೆ.

“ಪ್ರಾಥಮಿಕ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳನ್ನು ತಲುಪಬೇಕಿದೆ. ಮಹಾರಾಷ್ಟ್ರದ ಶಿಕ್ಷಣ ಇಲಾಖೆಯಿಂದ  ಯಾವುದೇ ರೀತಿಯ ಪ್ರಯತ್ನಗಳನ್ನು ನಾವು ನೋಡಿಲ್ಲ. ಅವರು ವಿದ್ಯಾರ್ಥಿಗಳನ್ನು ಹುಡುಕಲು ಮತ್ತು ಹತ್ತನೇ ತರಗತಿಗೆ ದಾಖಲು ಮಾಡಲು ಕ್ರಮ ಕೈಗೊಳ್ಳಬೇಕಾಗಿತ್ತು” ಎಂದು ಮಾಜಿ ಶಿಕ್ಷಣ ಸಚಿವ ಮತ್ತು ಬಿಜೆಪಿ ನಾಯಕ ಆಶಿಶ್ ಶೆಲಾರ್ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಸತತ ಎರಡು ವರ್ಷ ಆನ್‌ಲೈನ್ ಶಿಕ್ಷಣ ವ್ಯವಸ್ಥೆಯನ್ನು ಆಶ್ರಯಿಸಬೇಕಾಗಿದ್ದು, ಈ ಕ್ರಮವು ಬಡ ವಿದ್ಯಾರ್ಥಿಗಳನ್ನು ಶಿಕ್ಷಣ ವ್ಯವಸ್ಥೆಯಿಂದ ಹೊರಗೆ ತಳ್ಳುತ್ತದೆ ಎಂದು ತಜ್ಞರು ಹೇಳುತ್ತಾರೆ. ರಾಜ್ಯದ ಪ್ರಾಥಮಿಕ ಶಿಕ್ಷಣ ಇಲಾಖೆಯು ಎಲ್ಲಾ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿಕೊಳ್ಳುತ್ತಲೇ ಇದ್ದರೂ, ಸರ್ಕಾರದ ಯೋಜನೆಗಳು ಕಾರ್ಯರೂಪಕ್ಕೆ ಬಂದಿಲ್ಲ ಎಂದು ವಾಸ್ತವ ತಿಳಿಸುತ್ತಿದೆ ಎಂದು ಶಿಕ್ಷಣ ತಜ್ಞರು ಮತ್ತು ಪ್ರತಿಪಕ್ಷ ಆರೋಪಿಸಿದೆ.


ಇದನ್ನೂ ಓದಿ: ಡಾಲರ್‌ಗೆ ಬೈಬೈ ಹೇಳಿದ ರಷ್ಯಾ: ಮುರಿಯಲಿದೆಯೆ ಅಮೆರಿಕನ್‍ ಡಾಲರ್ ಏಕಾಧಿಪತ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...