Homeಮುಖಪುಟ"ಸಾಹಿಬ್, ನಿಮ್ಮ ದುರಹಂಕಾರವನ್ನು ಪೋಷಿಸಬೇಡಿ": ಬಿಜೆಪಿ ವಿರುದ್ಧ ಶಿವಸೇನೆ ವಾಗ್ದಾಳಿ

“ಸಾಹಿಬ್, ನಿಮ್ಮ ದುರಹಂಕಾರವನ್ನು ಪೋಷಿಸಬೇಡಿ”: ಬಿಜೆಪಿ ವಿರುದ್ಧ ಶಿವಸೇನೆ ವಾಗ್ದಾಳಿ

- Advertisement -
- Advertisement -

“ಸಾಹಿಬ್, ನಿಮ್ಮ ದುರಹಂಕಾರವನ್ನು ಪೋಷಿಸಬೇಡಿ … ಅನೇಕ ಅಲೆಕ್ಸಾಂಡರ್‌ಗಳು ಸಮಯದ ಸಾಗರದಲ್ಲಿ ಮುಳುಗಿದ್ದಾರೆ …” ಎಂದು ಶಿವಸೇನೆಯ ಮುಖಂಡ ಸಂಜಯ್‌ ರಾವತ್‌ ಟ್ವೀಟ್‌ ಮಾಡುವ ಮೂಲಕ ಬಿಜೆಪಿಯ ವಿರುದ್ಧ ಹರಿಹಾಯ್ದಿದ್ದಾರೆ.

ಅಲ್ಲದೇ ಮಹಾರಾಷ್ಟ್ರದ ಜನರು ಶಿವಸೇನಾದಿಂದ ಮುಖ್ಯಮಂತ್ರಿಯನ್ನು ಬಯಸುತ್ತಾರೆ ಎಂದು ಸಂಜಯ್ ರೌತ್ ಎನ್‌ಸಿಪಿಯ ಶರದ್ ಪವಾರ್ ಅವರೊಂದಿಗಿನ ಭೇಟಿಯನ್ನು ’ಸೌಜನ್ಯದ ಭೇಟಿ’ಯ ನಂತರ ತಿಳಿಸಿದ್ದಾರೆ.

ಬಿಜೆಪಿಯೊಂದಿಗೆ ಅಧಿಕಾರ ಹಂಚಿಕೆಗಾಗಿ ವಾರದಿಂದಲೂ ಜಗಳವಾಡುತ್ತಿರುವ ಶಿವಸೇನೆ ಎರಡೂವರೆ ವರ್ಷಗಳ ಮುಖ್ಯಮಂತ್ರಿ ಹುದ್ದೆಗೆ ಪಟ್ಟು ಹಿಡಿದಿದೆ. “ಶಿವಸೇನೆ ನಿರ್ಧರಿಸಿದರೆ, ಅದು ರಾಜ್ಯದಲ್ಲಿ ಸ್ಥಿರವಾದ ಸರ್ಕಾರವನ್ನು ರಚಿಸಲು ಅಗತ್ಯವಾದ ಸಂಖ್ಯೆಗಳನ್ನು ಪಡೆಯುತ್ತದೆ. ಮಹಾರಾಷ್ಟ್ರದ ಜನರ ಮುಂದೆ ಇಡಲಾದ 50-50 ಅಧಿಕಾರ ಹಂಚಿಕೆಯ ಸೂತ್ರದ ಆಧಾರದ ಮೇಲೆ ಜನರು ಸರ್ಕಾರ ರಚಿಸುವ ಆದೇಶವನ್ನು ನೀಡಿದ್ದಾರೆ ಎಂದು ರಾವತ್‌ ಹೇಳಿದ್ದಾರೆ.

ಅದರಲ್ಲಿಯೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗಿನ ಭೇಟಿಯ ನಂತರ ರಾವತ್‌ ಅವರ ಮಾತುಗಳಿಗೆ ಹೆಚ್ಚಿನ ಮಹತ್ವ ಬಂದಿದೆ. ಏಕೆಂದರೆ  ಪವಾರ್ ಅವರ ಪಕ್ಷವು 54 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 44 ಸ್ಥಾನಗಳನ್ನು ಗೆದ್ದಿದೆ. ಶಿವಸೇನೆಯು 56 ಸ್ಥಾನಗಳನ್ನು ಪಡೆದಿದ್ದು ಈ ಮೂವರು ಸೇರಿದರೆ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಶಕ್ತಿಪಡೆದುಕೊಂಡಿದೆ. ಈ ಮೂವರ ಸೇರಿದಲ್ಲಿ ಸರ್ಕಾರ ರಚಿಸುವ ಅವಕಾಶವೂ ಇದೆ.

ಇದು ಸೌಜನ್ಯದ ಭೇಟಿ ಎಂದು ಹೇಳುತ್ತಿದ್ದರೂ ಸಹ ಮಹಾರಾಷ್ಟ್ರದ ಜನ ಅದನ್ನು ನಂಬಲು ಸಿದ್ಧರಿಲ್ಲ. ಬಿಜೆಪಿಯೊಂದಿಗಿನ ಅದರ ಹಠ ಬೇರೆಯದೇ ಸಾಧ್ಯತೆಗಳನ್ನು ತೆರೆದಿಡುತ್ತಿವೆ.

“ಬಿಜೆಪಿ ಮುಖ್ಯಸ್ಥ ಅಮಿತ್ ಶಾ ನನ್ನ ಮನೆಗೆ ಭೇಟಿ ನೀಡಿದಾಗ ಬಂದ ಸೂತ್ರದ ಬಗ್ಗೆ ಬಿಜೆಪಿಗೆ ನೆನಪಿಸುವ ಸಮಯ ಇದು. ನಾವು 50:50 ಸೂತ್ರವನ್ನು ನಿರ್ಧರಿಸಿದ್ದೇವೆ” ಎಂದು ಫಲಿತಾಂಶದ ದಿನವಾದ ಅಕ್ಟೋಬರ್ 24 ರಂದು ಉದ್ಧವ್ ಠಾಕ್ರೆ ಮಾಧ್ಯಮಗಳಿಗೆ ತಿಳಿಸಿದ್ದರು. ಅಂದಿನಿಂದ ಅಧಿಕಾರ ಹಂಚಿಕೆ ಕಗ್ಗಾಂಟಾಗಿದೆ.

2014 ರ ರಾಜ್ಯ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಕಡಿಮೆ ಸ್ಥಾನಗಳನ್ನು ಗಳಿಸಿದೆ. ಹಾಗಾಗಿ ಅಧಿಕಾರದಲ್ಲಿ ಸಮಾನ ಸಮಯ ಹಂಚಿಕೆಗೆ ಇದು ನಾವು ಅರ್ಹವಾಗಿದ್ದೇವೆ ಎಂದು ಸೇನಾ ನಂಬುತ್ತದೆ, ಅಂದರೆ ಪ್ರತಿ ಪಕ್ಷದ ಮುಖ್ಯಮಂತ್ರಿಯೊಬ್ಬರಿಗೆ ಎರಡೂವರೆ ವರ್ಷಗಳಾಗಿವೆ ಎಂಬ ಬೇಡಿಕೆ ಶಿವಸೇನೆಯದು. ಆದರೆ ಬಿಜೆಪಿಯ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮತ್ತೊಂದು ಪೂರ್ಣ ಅವಧಿಗೆ ಆಡಳಿತ ನಡೆಸಲು ಪಟ್ಟು ಹಿಡಿದಿದ್ದಾರೆ.

ಉಪಮುಖ್ಯಮಂತ್ರಿ ಹುದ್ದೆಗಿಂತ ಹೆಚ್ಚಿನದನ್ನು ನೀಡಲು ಸಾಧ್ಯವಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸುವುದರೊಂದಿಗೆ, ಬಿಜೆಪಿಯ ಮೇಲೆ ಶಿವಸೇನೆಯ ದಾಳಿಗಳು ಹೆಚ್ಚು ಹೆಚ್ಚು ಕ್ರೂರವಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...