Homeಮುಖಪುಟ"ಸಾಹಿಬ್, ನಿಮ್ಮ ದುರಹಂಕಾರವನ್ನು ಪೋಷಿಸಬೇಡಿ": ಬಿಜೆಪಿ ವಿರುದ್ಧ ಶಿವಸೇನೆ ವಾಗ್ದಾಳಿ

“ಸಾಹಿಬ್, ನಿಮ್ಮ ದುರಹಂಕಾರವನ್ನು ಪೋಷಿಸಬೇಡಿ”: ಬಿಜೆಪಿ ವಿರುದ್ಧ ಶಿವಸೇನೆ ವಾಗ್ದಾಳಿ

- Advertisement -
- Advertisement -

“ಸಾಹಿಬ್, ನಿಮ್ಮ ದುರಹಂಕಾರವನ್ನು ಪೋಷಿಸಬೇಡಿ … ಅನೇಕ ಅಲೆಕ್ಸಾಂಡರ್‌ಗಳು ಸಮಯದ ಸಾಗರದಲ್ಲಿ ಮುಳುಗಿದ್ದಾರೆ …” ಎಂದು ಶಿವಸೇನೆಯ ಮುಖಂಡ ಸಂಜಯ್‌ ರಾವತ್‌ ಟ್ವೀಟ್‌ ಮಾಡುವ ಮೂಲಕ ಬಿಜೆಪಿಯ ವಿರುದ್ಧ ಹರಿಹಾಯ್ದಿದ್ದಾರೆ.

ಅಲ್ಲದೇ ಮಹಾರಾಷ್ಟ್ರದ ಜನರು ಶಿವಸೇನಾದಿಂದ ಮುಖ್ಯಮಂತ್ರಿಯನ್ನು ಬಯಸುತ್ತಾರೆ ಎಂದು ಸಂಜಯ್ ರೌತ್ ಎನ್‌ಸಿಪಿಯ ಶರದ್ ಪವಾರ್ ಅವರೊಂದಿಗಿನ ಭೇಟಿಯನ್ನು ’ಸೌಜನ್ಯದ ಭೇಟಿ’ಯ ನಂತರ ತಿಳಿಸಿದ್ದಾರೆ.

ಬಿಜೆಪಿಯೊಂದಿಗೆ ಅಧಿಕಾರ ಹಂಚಿಕೆಗಾಗಿ ವಾರದಿಂದಲೂ ಜಗಳವಾಡುತ್ತಿರುವ ಶಿವಸೇನೆ ಎರಡೂವರೆ ವರ್ಷಗಳ ಮುಖ್ಯಮಂತ್ರಿ ಹುದ್ದೆಗೆ ಪಟ್ಟು ಹಿಡಿದಿದೆ. “ಶಿವಸೇನೆ ನಿರ್ಧರಿಸಿದರೆ, ಅದು ರಾಜ್ಯದಲ್ಲಿ ಸ್ಥಿರವಾದ ಸರ್ಕಾರವನ್ನು ರಚಿಸಲು ಅಗತ್ಯವಾದ ಸಂಖ್ಯೆಗಳನ್ನು ಪಡೆಯುತ್ತದೆ. ಮಹಾರಾಷ್ಟ್ರದ ಜನರ ಮುಂದೆ ಇಡಲಾದ 50-50 ಅಧಿಕಾರ ಹಂಚಿಕೆಯ ಸೂತ್ರದ ಆಧಾರದ ಮೇಲೆ ಜನರು ಸರ್ಕಾರ ರಚಿಸುವ ಆದೇಶವನ್ನು ನೀಡಿದ್ದಾರೆ ಎಂದು ರಾವತ್‌ ಹೇಳಿದ್ದಾರೆ.

ಅದರಲ್ಲಿಯೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗಿನ ಭೇಟಿಯ ನಂತರ ರಾವತ್‌ ಅವರ ಮಾತುಗಳಿಗೆ ಹೆಚ್ಚಿನ ಮಹತ್ವ ಬಂದಿದೆ. ಏಕೆಂದರೆ  ಪವಾರ್ ಅವರ ಪಕ್ಷವು 54 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 44 ಸ್ಥಾನಗಳನ್ನು ಗೆದ್ದಿದೆ. ಶಿವಸೇನೆಯು 56 ಸ್ಥಾನಗಳನ್ನು ಪಡೆದಿದ್ದು ಈ ಮೂವರು ಸೇರಿದರೆ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಶಕ್ತಿಪಡೆದುಕೊಂಡಿದೆ. ಈ ಮೂವರ ಸೇರಿದಲ್ಲಿ ಸರ್ಕಾರ ರಚಿಸುವ ಅವಕಾಶವೂ ಇದೆ.

ಇದು ಸೌಜನ್ಯದ ಭೇಟಿ ಎಂದು ಹೇಳುತ್ತಿದ್ದರೂ ಸಹ ಮಹಾರಾಷ್ಟ್ರದ ಜನ ಅದನ್ನು ನಂಬಲು ಸಿದ್ಧರಿಲ್ಲ. ಬಿಜೆಪಿಯೊಂದಿಗಿನ ಅದರ ಹಠ ಬೇರೆಯದೇ ಸಾಧ್ಯತೆಗಳನ್ನು ತೆರೆದಿಡುತ್ತಿವೆ.

“ಬಿಜೆಪಿ ಮುಖ್ಯಸ್ಥ ಅಮಿತ್ ಶಾ ನನ್ನ ಮನೆಗೆ ಭೇಟಿ ನೀಡಿದಾಗ ಬಂದ ಸೂತ್ರದ ಬಗ್ಗೆ ಬಿಜೆಪಿಗೆ ನೆನಪಿಸುವ ಸಮಯ ಇದು. ನಾವು 50:50 ಸೂತ್ರವನ್ನು ನಿರ್ಧರಿಸಿದ್ದೇವೆ” ಎಂದು ಫಲಿತಾಂಶದ ದಿನವಾದ ಅಕ್ಟೋಬರ್ 24 ರಂದು ಉದ್ಧವ್ ಠಾಕ್ರೆ ಮಾಧ್ಯಮಗಳಿಗೆ ತಿಳಿಸಿದ್ದರು. ಅಂದಿನಿಂದ ಅಧಿಕಾರ ಹಂಚಿಕೆ ಕಗ್ಗಾಂಟಾಗಿದೆ.

2014 ರ ರಾಜ್ಯ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಕಡಿಮೆ ಸ್ಥಾನಗಳನ್ನು ಗಳಿಸಿದೆ. ಹಾಗಾಗಿ ಅಧಿಕಾರದಲ್ಲಿ ಸಮಾನ ಸಮಯ ಹಂಚಿಕೆಗೆ ಇದು ನಾವು ಅರ್ಹವಾಗಿದ್ದೇವೆ ಎಂದು ಸೇನಾ ನಂಬುತ್ತದೆ, ಅಂದರೆ ಪ್ರತಿ ಪಕ್ಷದ ಮುಖ್ಯಮಂತ್ರಿಯೊಬ್ಬರಿಗೆ ಎರಡೂವರೆ ವರ್ಷಗಳಾಗಿವೆ ಎಂಬ ಬೇಡಿಕೆ ಶಿವಸೇನೆಯದು. ಆದರೆ ಬಿಜೆಪಿಯ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮತ್ತೊಂದು ಪೂರ್ಣ ಅವಧಿಗೆ ಆಡಳಿತ ನಡೆಸಲು ಪಟ್ಟು ಹಿಡಿದಿದ್ದಾರೆ.

ಉಪಮುಖ್ಯಮಂತ್ರಿ ಹುದ್ದೆಗಿಂತ ಹೆಚ್ಚಿನದನ್ನು ನೀಡಲು ಸಾಧ್ಯವಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸುವುದರೊಂದಿಗೆ, ಬಿಜೆಪಿಯ ಮೇಲೆ ಶಿವಸೇನೆಯ ದಾಳಿಗಳು ಹೆಚ್ಚು ಹೆಚ್ಚು ಕ್ರೂರವಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...