Homeಮುಖಪುಟ"ಸಾಹಿಬ್, ನಿಮ್ಮ ದುರಹಂಕಾರವನ್ನು ಪೋಷಿಸಬೇಡಿ": ಬಿಜೆಪಿ ವಿರುದ್ಧ ಶಿವಸೇನೆ ವಾಗ್ದಾಳಿ

“ಸಾಹಿಬ್, ನಿಮ್ಮ ದುರಹಂಕಾರವನ್ನು ಪೋಷಿಸಬೇಡಿ”: ಬಿಜೆಪಿ ವಿರುದ್ಧ ಶಿವಸೇನೆ ವಾಗ್ದಾಳಿ

- Advertisement -
- Advertisement -

“ಸಾಹಿಬ್, ನಿಮ್ಮ ದುರಹಂಕಾರವನ್ನು ಪೋಷಿಸಬೇಡಿ … ಅನೇಕ ಅಲೆಕ್ಸಾಂಡರ್‌ಗಳು ಸಮಯದ ಸಾಗರದಲ್ಲಿ ಮುಳುಗಿದ್ದಾರೆ …” ಎಂದು ಶಿವಸೇನೆಯ ಮುಖಂಡ ಸಂಜಯ್‌ ರಾವತ್‌ ಟ್ವೀಟ್‌ ಮಾಡುವ ಮೂಲಕ ಬಿಜೆಪಿಯ ವಿರುದ್ಧ ಹರಿಹಾಯ್ದಿದ್ದಾರೆ.

ಅಲ್ಲದೇ ಮಹಾರಾಷ್ಟ್ರದ ಜನರು ಶಿವಸೇನಾದಿಂದ ಮುಖ್ಯಮಂತ್ರಿಯನ್ನು ಬಯಸುತ್ತಾರೆ ಎಂದು ಸಂಜಯ್ ರೌತ್ ಎನ್‌ಸಿಪಿಯ ಶರದ್ ಪವಾರ್ ಅವರೊಂದಿಗಿನ ಭೇಟಿಯನ್ನು ’ಸೌಜನ್ಯದ ಭೇಟಿ’ಯ ನಂತರ ತಿಳಿಸಿದ್ದಾರೆ.

ಬಿಜೆಪಿಯೊಂದಿಗೆ ಅಧಿಕಾರ ಹಂಚಿಕೆಗಾಗಿ ವಾರದಿಂದಲೂ ಜಗಳವಾಡುತ್ತಿರುವ ಶಿವಸೇನೆ ಎರಡೂವರೆ ವರ್ಷಗಳ ಮುಖ್ಯಮಂತ್ರಿ ಹುದ್ದೆಗೆ ಪಟ್ಟು ಹಿಡಿದಿದೆ. “ಶಿವಸೇನೆ ನಿರ್ಧರಿಸಿದರೆ, ಅದು ರಾಜ್ಯದಲ್ಲಿ ಸ್ಥಿರವಾದ ಸರ್ಕಾರವನ್ನು ರಚಿಸಲು ಅಗತ್ಯವಾದ ಸಂಖ್ಯೆಗಳನ್ನು ಪಡೆಯುತ್ತದೆ. ಮಹಾರಾಷ್ಟ್ರದ ಜನರ ಮುಂದೆ ಇಡಲಾದ 50-50 ಅಧಿಕಾರ ಹಂಚಿಕೆಯ ಸೂತ್ರದ ಆಧಾರದ ಮೇಲೆ ಜನರು ಸರ್ಕಾರ ರಚಿಸುವ ಆದೇಶವನ್ನು ನೀಡಿದ್ದಾರೆ ಎಂದು ರಾವತ್‌ ಹೇಳಿದ್ದಾರೆ.

ಅದರಲ್ಲಿಯೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗಿನ ಭೇಟಿಯ ನಂತರ ರಾವತ್‌ ಅವರ ಮಾತುಗಳಿಗೆ ಹೆಚ್ಚಿನ ಮಹತ್ವ ಬಂದಿದೆ. ಏಕೆಂದರೆ  ಪವಾರ್ ಅವರ ಪಕ್ಷವು 54 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 44 ಸ್ಥಾನಗಳನ್ನು ಗೆದ್ದಿದೆ. ಶಿವಸೇನೆಯು 56 ಸ್ಥಾನಗಳನ್ನು ಪಡೆದಿದ್ದು ಈ ಮೂವರು ಸೇರಿದರೆ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಶಕ್ತಿಪಡೆದುಕೊಂಡಿದೆ. ಈ ಮೂವರ ಸೇರಿದಲ್ಲಿ ಸರ್ಕಾರ ರಚಿಸುವ ಅವಕಾಶವೂ ಇದೆ.

ಇದು ಸೌಜನ್ಯದ ಭೇಟಿ ಎಂದು ಹೇಳುತ್ತಿದ್ದರೂ ಸಹ ಮಹಾರಾಷ್ಟ್ರದ ಜನ ಅದನ್ನು ನಂಬಲು ಸಿದ್ಧರಿಲ್ಲ. ಬಿಜೆಪಿಯೊಂದಿಗಿನ ಅದರ ಹಠ ಬೇರೆಯದೇ ಸಾಧ್ಯತೆಗಳನ್ನು ತೆರೆದಿಡುತ್ತಿವೆ.

“ಬಿಜೆಪಿ ಮುಖ್ಯಸ್ಥ ಅಮಿತ್ ಶಾ ನನ್ನ ಮನೆಗೆ ಭೇಟಿ ನೀಡಿದಾಗ ಬಂದ ಸೂತ್ರದ ಬಗ್ಗೆ ಬಿಜೆಪಿಗೆ ನೆನಪಿಸುವ ಸಮಯ ಇದು. ನಾವು 50:50 ಸೂತ್ರವನ್ನು ನಿರ್ಧರಿಸಿದ್ದೇವೆ” ಎಂದು ಫಲಿತಾಂಶದ ದಿನವಾದ ಅಕ್ಟೋಬರ್ 24 ರಂದು ಉದ್ಧವ್ ಠಾಕ್ರೆ ಮಾಧ್ಯಮಗಳಿಗೆ ತಿಳಿಸಿದ್ದರು. ಅಂದಿನಿಂದ ಅಧಿಕಾರ ಹಂಚಿಕೆ ಕಗ್ಗಾಂಟಾಗಿದೆ.

2014 ರ ರಾಜ್ಯ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಕಡಿಮೆ ಸ್ಥಾನಗಳನ್ನು ಗಳಿಸಿದೆ. ಹಾಗಾಗಿ ಅಧಿಕಾರದಲ್ಲಿ ಸಮಾನ ಸಮಯ ಹಂಚಿಕೆಗೆ ಇದು ನಾವು ಅರ್ಹವಾಗಿದ್ದೇವೆ ಎಂದು ಸೇನಾ ನಂಬುತ್ತದೆ, ಅಂದರೆ ಪ್ರತಿ ಪಕ್ಷದ ಮುಖ್ಯಮಂತ್ರಿಯೊಬ್ಬರಿಗೆ ಎರಡೂವರೆ ವರ್ಷಗಳಾಗಿವೆ ಎಂಬ ಬೇಡಿಕೆ ಶಿವಸೇನೆಯದು. ಆದರೆ ಬಿಜೆಪಿಯ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮತ್ತೊಂದು ಪೂರ್ಣ ಅವಧಿಗೆ ಆಡಳಿತ ನಡೆಸಲು ಪಟ್ಟು ಹಿಡಿದಿದ್ದಾರೆ.

ಉಪಮುಖ್ಯಮಂತ್ರಿ ಹುದ್ದೆಗಿಂತ ಹೆಚ್ಚಿನದನ್ನು ನೀಡಲು ಸಾಧ್ಯವಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸುವುದರೊಂದಿಗೆ, ಬಿಜೆಪಿಯ ಮೇಲೆ ಶಿವಸೇನೆಯ ದಾಳಿಗಳು ಹೆಚ್ಚು ಹೆಚ್ಚು ಕ್ರೂರವಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...