Homeಮುಖಪುಟಮಹಾರಾಷ್ಟ್ರ: ಪಠಾಣ್ ಹಾಡು, ಟ್ರೇಲರ್‌‌ ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

ಮಹಾರಾಷ್ಟ್ರ: ಪಠಾಣ್ ಹಾಡು, ಟ್ರೇಲರ್‌‌ ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಪಠಾಣ್ ಚಿತ್ರದ ಟ್ರೇಲರ್‌, ಟೀಸರ್‌, ಬೇಷರಮ್‌ ರಂಗ್‌ ಹಾಡು ಮತ್ತು ಜಾಹೀರಾತುಗಳನ್ನು ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡದಂತೆ ನಿರ್ಮಾಣ ಸಂಸ್ಥೆ ಯಶ್ ರಾಜ್ ಫಿಲ್ಮ್ಸ್‌ಗೆ ನಿರ್ಬಂಧಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಮಹಾರಾಷ್ಟ್ರ ಸಿವಿಲ್ ನ್ಯಾಯಾಲಯವು ಕಳೆದ ವಾರ ತಿರಸ್ಕರಿಸಿದೆ.

ಮೇಲ್ನೋಟಕ್ಕೆ ಯಾವುದೇ ಪ್ರಕರಣ ಕಂಡುಬಂದಿಲ್ಲ. ಅರ್ಜಿದಾರರು ತಮ್ಮ ಪ್ರಕರಣವನ್ನು ಸಾಬೀತುಪಡಿಸಲು ವಿಫಲರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ಚಿತ್ರದ ಟೀಸರ್‌, ಟ್ರೇಲರ್‌, ಹಾಡುಗಳು ಮತ್ತು ಜಾಹೀರಾತುಗಳಿಗೆ ಸಂಬಂಧಿಸಿದಂತೆ ಸೆನ್ಸಾರ್ ಮಂಡಳಿಯ ಯು/ಎ ಪ್ರಮಾಣಪತ್ರವನ್ನು ಯೂಟ್ಯೂಬ್‌ನಲ್ಲಿ ಮೊದಲೇ ಪ್ರದರ್ಶಿಸಿಲ್ಲ. ಇದನ್ನು ಕಂಡು ಗೊಂದಲಕ್ಕೊಳಗಾಗಿದ್ದೇನೆ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಅರ್ಜಿ ಸಲ್ಲಿಸಿದ್ದರು.

ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ ನೀಡಿದ U/A ಪ್ರಮಾಣಪತ್ರವು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ತಮ್ಮ ಪೋಷಕರೊಂದಿಗೆ ಸಿನಿಮಾ ನೋಡಬಹುದೆಂದು ಸೂಚಿಸುತ್ತದೆ.

ಪತ್ರಿಕೆಗಳು, ಹೋರ್ಡಿಂಗ್‌ಗಳು, ಟ್ರೇಲರ್‌ಗಳು ಮತ್ತು ಟೀಸರ್‌ಗಳಲ್ಲಿ ಜಾಹೀರಾತು ಪ್ರಕಟಿಸುವ ಮೊದಲು ಸಿನಿಮಾಟೋಗ್ರಫಿ ಕಾಯ್ದೆಯಡಿ ಯು/ಎ ಪ್ರಮಾಣಪತ್ರವನ್ನು ತಿಳಿಸುವುದು ಅಗತ್ಯ ಎಂದು ಅರ್ಜಿದಾರರು ವಾದಿಸಿದ್ದರು.

ಪ್ರಮಾಣ ಪತ್ರ ತೋರಿಸದಿರುವುದರಿಂದ ನನಗೆ ಹಾಗೂ ಸಮಾಜಕ್ಕೆ ನಷ್ಟವಾಗುತ್ತಿದೆ ಎಂದು ಆರೋಪಿಸಿದ್ದರು. ಅರ್ಜಿದಾರರು ತಾನು ಯಾವ ನಷ್ಟವನ್ನು ಅನುಭವಿಸುತ್ತಿದ್ದೇನೆ ಎಂದು ಉಲ್ಲೇಖಿಸಿಲ್ಲ.

ಯಶ್ ರಾಜ್ ಫಿಲ್ಮ್ಸ್ ಅನ್ನು ಪ್ರತಿನಿಧಿಸುವ ವಕೀಲ ಹರ್ಷ್ ಬುಚ್ ಅವರು, “ದಾವೆಯು ತಪ್ಪುದಾರಿಗೆಳೆಯುವಂತಿದೆ” ಎಂದು ವಾದಿಸಿದರು. ಒಒಟಿಯಲ್ಲಿ ಜಾಹೀರಾತು ಪ್ರಕಟಿಸುವಾಗ ಸೆನ್ಸಾರ್ ಮಂಡಳಿಯ ಪ್ರಮಾಣ ಪತ್ರವನ್ನು ತೋರಿಸಬೇಕು ಎಂಬ ನಿಯಮವಿಲ್ಲ” ಎಂದು ಸ್ಪಷ್ಪಡಿಸಿದ್ದಾರೆ.

ಚಲನಚಿತ್ರವನ್ನು ಚಿತ್ರಮಂದಿರದಲ್ಲಿ ಪ್ರದರ್ಶಿಸುವುದಕ್ಕೆ, ಡಿವಿಡಿಗಳನ್ನು ಮಾಡುವುದಕ್ಕೆ ಮಾತ್ರ ಸಿನಿಮಾಟೋಗ್ರಫಿ ಆಕ್ಟ್‌ನ ಪ್ರಮಾಣೀಕರಣ ಅಗತ್ಯವಿರುತ್ತದೆ ಎಂದು ಬುಚ್ ತಿಳಿಸಿದರು. ಯೂಟ್ಯೂನ್‌ನಂತಹ ಪ್ಲಾಟ್‌ಫಾರ್ಮ್‌ಗಳು ಮಾಹಿತಿ ತಂತ್ರಜ್ಞಾನ ನಿಯಮಗಳು, 2021 ರ ಮೂಲಕ ನಿಯಂತ್ರಿಸಲ್ಪಡುತ್ತವೆ ಎಂದು ಅವರು ಉಲ್ಲೇಖಿಸಿದರು.

ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಸಿನಿಮಾ ಜನವರಿ 25 ರಂದು ಬಿಡುಗಡೆಯಾಯಿತು. ಅದಕ್ಕೂ ಮೊದಲೇ ಹಲವಾರು ವಿರೋಧಗಳನ್ನು ಎದುರಿಸಿತು.

ಡಿಸೆಂಬರ್‌ನಲ್ಲಿ ಬೇಷರಂ ರಂಗ್ ಹಾಡು ಆನ್‌ಲೈನ್‌ನಲ್ಲಿ ಬಿಡುಗಡೆಯಾದ ನಂತರ, ಬಿಜೆಪಿ ನಾಯಕ, ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ತಕರಾರು ತೆಗೆದಿದ್ದರು. “ದೀಪಿಕಾ ಪಡುಕೋಣೆ ಅವರ ವೇಷಭೂಷಣ ಸರಿಯಿಲ್ಲ, ರಾಜ್ಯದಲ್ಲಿ ಈ ಸಿನಿಮಾ ಪ್ರದರ್ಶನಕ್ಕೆ ನಿರ್ಬಂಧ ಹೇರಲಾಗುವುದು” ಎಂದು ಬೆದರಿಕೆ ಹಾಕಿದ್ದರು. ಬೇಷರಂ ರಂಗ್ ಹಾಡಿನಲ್ಲಿ ಪಡುಕೋಣೆಯಲ್ಲಿ ಕೇಸರಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆಂದು ವಿರೋಧ ವ್ಯಕ್ತವಾಗಿತ್ತು. ಸಿನಿಮಾವನ್ನು ಬಹಿಷ್ಕರಿಸುವಂತೆ ಹಲವಾರು ಹಿಂದುತ್ವ ಗುಂಪುಗಳು ಕರೆ ನೀಡಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...