Homeಮುಖಪುಟಮಹಾರಾಷ್ಟ್ರ: ಪಠಾಣ್ ಹಾಡು, ಟ್ರೇಲರ್‌‌ ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

ಮಹಾರಾಷ್ಟ್ರ: ಪಠಾಣ್ ಹಾಡು, ಟ್ರೇಲರ್‌‌ ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಪಠಾಣ್ ಚಿತ್ರದ ಟ್ರೇಲರ್‌, ಟೀಸರ್‌, ಬೇಷರಮ್‌ ರಂಗ್‌ ಹಾಡು ಮತ್ತು ಜಾಹೀರಾತುಗಳನ್ನು ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡದಂತೆ ನಿರ್ಮಾಣ ಸಂಸ್ಥೆ ಯಶ್ ರಾಜ್ ಫಿಲ್ಮ್ಸ್‌ಗೆ ನಿರ್ಬಂಧಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಮಹಾರಾಷ್ಟ್ರ ಸಿವಿಲ್ ನ್ಯಾಯಾಲಯವು ಕಳೆದ ವಾರ ತಿರಸ್ಕರಿಸಿದೆ.

ಮೇಲ್ನೋಟಕ್ಕೆ ಯಾವುದೇ ಪ್ರಕರಣ ಕಂಡುಬಂದಿಲ್ಲ. ಅರ್ಜಿದಾರರು ತಮ್ಮ ಪ್ರಕರಣವನ್ನು ಸಾಬೀತುಪಡಿಸಲು ವಿಫಲರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ಚಿತ್ರದ ಟೀಸರ್‌, ಟ್ರೇಲರ್‌, ಹಾಡುಗಳು ಮತ್ತು ಜಾಹೀರಾತುಗಳಿಗೆ ಸಂಬಂಧಿಸಿದಂತೆ ಸೆನ್ಸಾರ್ ಮಂಡಳಿಯ ಯು/ಎ ಪ್ರಮಾಣಪತ್ರವನ್ನು ಯೂಟ್ಯೂಬ್‌ನಲ್ಲಿ ಮೊದಲೇ ಪ್ರದರ್ಶಿಸಿಲ್ಲ. ಇದನ್ನು ಕಂಡು ಗೊಂದಲಕ್ಕೊಳಗಾಗಿದ್ದೇನೆ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಅರ್ಜಿ ಸಲ್ಲಿಸಿದ್ದರು.

ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ ನೀಡಿದ U/A ಪ್ರಮಾಣಪತ್ರವು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ತಮ್ಮ ಪೋಷಕರೊಂದಿಗೆ ಸಿನಿಮಾ ನೋಡಬಹುದೆಂದು ಸೂಚಿಸುತ್ತದೆ.

ಪತ್ರಿಕೆಗಳು, ಹೋರ್ಡಿಂಗ್‌ಗಳು, ಟ್ರೇಲರ್‌ಗಳು ಮತ್ತು ಟೀಸರ್‌ಗಳಲ್ಲಿ ಜಾಹೀರಾತು ಪ್ರಕಟಿಸುವ ಮೊದಲು ಸಿನಿಮಾಟೋಗ್ರಫಿ ಕಾಯ್ದೆಯಡಿ ಯು/ಎ ಪ್ರಮಾಣಪತ್ರವನ್ನು ತಿಳಿಸುವುದು ಅಗತ್ಯ ಎಂದು ಅರ್ಜಿದಾರರು ವಾದಿಸಿದ್ದರು.

ಪ್ರಮಾಣ ಪತ್ರ ತೋರಿಸದಿರುವುದರಿಂದ ನನಗೆ ಹಾಗೂ ಸಮಾಜಕ್ಕೆ ನಷ್ಟವಾಗುತ್ತಿದೆ ಎಂದು ಆರೋಪಿಸಿದ್ದರು. ಅರ್ಜಿದಾರರು ತಾನು ಯಾವ ನಷ್ಟವನ್ನು ಅನುಭವಿಸುತ್ತಿದ್ದೇನೆ ಎಂದು ಉಲ್ಲೇಖಿಸಿಲ್ಲ.

ಯಶ್ ರಾಜ್ ಫಿಲ್ಮ್ಸ್ ಅನ್ನು ಪ್ರತಿನಿಧಿಸುವ ವಕೀಲ ಹರ್ಷ್ ಬುಚ್ ಅವರು, “ದಾವೆಯು ತಪ್ಪುದಾರಿಗೆಳೆಯುವಂತಿದೆ” ಎಂದು ವಾದಿಸಿದರು. ಒಒಟಿಯಲ್ಲಿ ಜಾಹೀರಾತು ಪ್ರಕಟಿಸುವಾಗ ಸೆನ್ಸಾರ್ ಮಂಡಳಿಯ ಪ್ರಮಾಣ ಪತ್ರವನ್ನು ತೋರಿಸಬೇಕು ಎಂಬ ನಿಯಮವಿಲ್ಲ” ಎಂದು ಸ್ಪಷ್ಪಡಿಸಿದ್ದಾರೆ.

ಚಲನಚಿತ್ರವನ್ನು ಚಿತ್ರಮಂದಿರದಲ್ಲಿ ಪ್ರದರ್ಶಿಸುವುದಕ್ಕೆ, ಡಿವಿಡಿಗಳನ್ನು ಮಾಡುವುದಕ್ಕೆ ಮಾತ್ರ ಸಿನಿಮಾಟೋಗ್ರಫಿ ಆಕ್ಟ್‌ನ ಪ್ರಮಾಣೀಕರಣ ಅಗತ್ಯವಿರುತ್ತದೆ ಎಂದು ಬುಚ್ ತಿಳಿಸಿದರು. ಯೂಟ್ಯೂನ್‌ನಂತಹ ಪ್ಲಾಟ್‌ಫಾರ್ಮ್‌ಗಳು ಮಾಹಿತಿ ತಂತ್ರಜ್ಞಾನ ನಿಯಮಗಳು, 2021 ರ ಮೂಲಕ ನಿಯಂತ್ರಿಸಲ್ಪಡುತ್ತವೆ ಎಂದು ಅವರು ಉಲ್ಲೇಖಿಸಿದರು.

ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಸಿನಿಮಾ ಜನವರಿ 25 ರಂದು ಬಿಡುಗಡೆಯಾಯಿತು. ಅದಕ್ಕೂ ಮೊದಲೇ ಹಲವಾರು ವಿರೋಧಗಳನ್ನು ಎದುರಿಸಿತು.

ಡಿಸೆಂಬರ್‌ನಲ್ಲಿ ಬೇಷರಂ ರಂಗ್ ಹಾಡು ಆನ್‌ಲೈನ್‌ನಲ್ಲಿ ಬಿಡುಗಡೆಯಾದ ನಂತರ, ಬಿಜೆಪಿ ನಾಯಕ, ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ತಕರಾರು ತೆಗೆದಿದ್ದರು. “ದೀಪಿಕಾ ಪಡುಕೋಣೆ ಅವರ ವೇಷಭೂಷಣ ಸರಿಯಿಲ್ಲ, ರಾಜ್ಯದಲ್ಲಿ ಈ ಸಿನಿಮಾ ಪ್ರದರ್ಶನಕ್ಕೆ ನಿರ್ಬಂಧ ಹೇರಲಾಗುವುದು” ಎಂದು ಬೆದರಿಕೆ ಹಾಕಿದ್ದರು. ಬೇಷರಂ ರಂಗ್ ಹಾಡಿನಲ್ಲಿ ಪಡುಕೋಣೆಯಲ್ಲಿ ಕೇಸರಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆಂದು ವಿರೋಧ ವ್ಯಕ್ತವಾಗಿತ್ತು. ಸಿನಿಮಾವನ್ನು ಬಹಿಷ್ಕರಿಸುವಂತೆ ಹಲವಾರು ಹಿಂದುತ್ವ ಗುಂಪುಗಳು ಕರೆ ನೀಡಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...