Homeಮುಖಪುಟಮಹಾರಾಷ್ಟ್ರ: ಪಠಾಣ್ ಹಾಡು, ಟ್ರೇಲರ್‌‌ ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

ಮಹಾರಾಷ್ಟ್ರ: ಪಠಾಣ್ ಹಾಡು, ಟ್ರೇಲರ್‌‌ ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಪಠಾಣ್ ಚಿತ್ರದ ಟ್ರೇಲರ್‌, ಟೀಸರ್‌, ಬೇಷರಮ್‌ ರಂಗ್‌ ಹಾಡು ಮತ್ತು ಜಾಹೀರಾತುಗಳನ್ನು ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡದಂತೆ ನಿರ್ಮಾಣ ಸಂಸ್ಥೆ ಯಶ್ ರಾಜ್ ಫಿಲ್ಮ್ಸ್‌ಗೆ ನಿರ್ಬಂಧಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಮಹಾರಾಷ್ಟ್ರ ಸಿವಿಲ್ ನ್ಯಾಯಾಲಯವು ಕಳೆದ ವಾರ ತಿರಸ್ಕರಿಸಿದೆ.

ಮೇಲ್ನೋಟಕ್ಕೆ ಯಾವುದೇ ಪ್ರಕರಣ ಕಂಡುಬಂದಿಲ್ಲ. ಅರ್ಜಿದಾರರು ತಮ್ಮ ಪ್ರಕರಣವನ್ನು ಸಾಬೀತುಪಡಿಸಲು ವಿಫಲರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ಚಿತ್ರದ ಟೀಸರ್‌, ಟ್ರೇಲರ್‌, ಹಾಡುಗಳು ಮತ್ತು ಜಾಹೀರಾತುಗಳಿಗೆ ಸಂಬಂಧಿಸಿದಂತೆ ಸೆನ್ಸಾರ್ ಮಂಡಳಿಯ ಯು/ಎ ಪ್ರಮಾಣಪತ್ರವನ್ನು ಯೂಟ್ಯೂಬ್‌ನಲ್ಲಿ ಮೊದಲೇ ಪ್ರದರ್ಶಿಸಿಲ್ಲ. ಇದನ್ನು ಕಂಡು ಗೊಂದಲಕ್ಕೊಳಗಾಗಿದ್ದೇನೆ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಅರ್ಜಿ ಸಲ್ಲಿಸಿದ್ದರು.

ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ ನೀಡಿದ U/A ಪ್ರಮಾಣಪತ್ರವು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ತಮ್ಮ ಪೋಷಕರೊಂದಿಗೆ ಸಿನಿಮಾ ನೋಡಬಹುದೆಂದು ಸೂಚಿಸುತ್ತದೆ.

ಪತ್ರಿಕೆಗಳು, ಹೋರ್ಡಿಂಗ್‌ಗಳು, ಟ್ರೇಲರ್‌ಗಳು ಮತ್ತು ಟೀಸರ್‌ಗಳಲ್ಲಿ ಜಾಹೀರಾತು ಪ್ರಕಟಿಸುವ ಮೊದಲು ಸಿನಿಮಾಟೋಗ್ರಫಿ ಕಾಯ್ದೆಯಡಿ ಯು/ಎ ಪ್ರಮಾಣಪತ್ರವನ್ನು ತಿಳಿಸುವುದು ಅಗತ್ಯ ಎಂದು ಅರ್ಜಿದಾರರು ವಾದಿಸಿದ್ದರು.

ಪ್ರಮಾಣ ಪತ್ರ ತೋರಿಸದಿರುವುದರಿಂದ ನನಗೆ ಹಾಗೂ ಸಮಾಜಕ್ಕೆ ನಷ್ಟವಾಗುತ್ತಿದೆ ಎಂದು ಆರೋಪಿಸಿದ್ದರು. ಅರ್ಜಿದಾರರು ತಾನು ಯಾವ ನಷ್ಟವನ್ನು ಅನುಭವಿಸುತ್ತಿದ್ದೇನೆ ಎಂದು ಉಲ್ಲೇಖಿಸಿಲ್ಲ.

ಯಶ್ ರಾಜ್ ಫಿಲ್ಮ್ಸ್ ಅನ್ನು ಪ್ರತಿನಿಧಿಸುವ ವಕೀಲ ಹರ್ಷ್ ಬುಚ್ ಅವರು, “ದಾವೆಯು ತಪ್ಪುದಾರಿಗೆಳೆಯುವಂತಿದೆ” ಎಂದು ವಾದಿಸಿದರು. ಒಒಟಿಯಲ್ಲಿ ಜಾಹೀರಾತು ಪ್ರಕಟಿಸುವಾಗ ಸೆನ್ಸಾರ್ ಮಂಡಳಿಯ ಪ್ರಮಾಣ ಪತ್ರವನ್ನು ತೋರಿಸಬೇಕು ಎಂಬ ನಿಯಮವಿಲ್ಲ” ಎಂದು ಸ್ಪಷ್ಪಡಿಸಿದ್ದಾರೆ.

ಚಲನಚಿತ್ರವನ್ನು ಚಿತ್ರಮಂದಿರದಲ್ಲಿ ಪ್ರದರ್ಶಿಸುವುದಕ್ಕೆ, ಡಿವಿಡಿಗಳನ್ನು ಮಾಡುವುದಕ್ಕೆ ಮಾತ್ರ ಸಿನಿಮಾಟೋಗ್ರಫಿ ಆಕ್ಟ್‌ನ ಪ್ರಮಾಣೀಕರಣ ಅಗತ್ಯವಿರುತ್ತದೆ ಎಂದು ಬುಚ್ ತಿಳಿಸಿದರು. ಯೂಟ್ಯೂನ್‌ನಂತಹ ಪ್ಲಾಟ್‌ಫಾರ್ಮ್‌ಗಳು ಮಾಹಿತಿ ತಂತ್ರಜ್ಞಾನ ನಿಯಮಗಳು, 2021 ರ ಮೂಲಕ ನಿಯಂತ್ರಿಸಲ್ಪಡುತ್ತವೆ ಎಂದು ಅವರು ಉಲ್ಲೇಖಿಸಿದರು.

ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಸಿನಿಮಾ ಜನವರಿ 25 ರಂದು ಬಿಡುಗಡೆಯಾಯಿತು. ಅದಕ್ಕೂ ಮೊದಲೇ ಹಲವಾರು ವಿರೋಧಗಳನ್ನು ಎದುರಿಸಿತು.

ಡಿಸೆಂಬರ್‌ನಲ್ಲಿ ಬೇಷರಂ ರಂಗ್ ಹಾಡು ಆನ್‌ಲೈನ್‌ನಲ್ಲಿ ಬಿಡುಗಡೆಯಾದ ನಂತರ, ಬಿಜೆಪಿ ನಾಯಕ, ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ತಕರಾರು ತೆಗೆದಿದ್ದರು. “ದೀಪಿಕಾ ಪಡುಕೋಣೆ ಅವರ ವೇಷಭೂಷಣ ಸರಿಯಿಲ್ಲ, ರಾಜ್ಯದಲ್ಲಿ ಈ ಸಿನಿಮಾ ಪ್ರದರ್ಶನಕ್ಕೆ ನಿರ್ಬಂಧ ಹೇರಲಾಗುವುದು” ಎಂದು ಬೆದರಿಕೆ ಹಾಕಿದ್ದರು. ಬೇಷರಂ ರಂಗ್ ಹಾಡಿನಲ್ಲಿ ಪಡುಕೋಣೆಯಲ್ಲಿ ಕೇಸರಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆಂದು ವಿರೋಧ ವ್ಯಕ್ತವಾಗಿತ್ತು. ಸಿನಿಮಾವನ್ನು ಬಹಿಷ್ಕರಿಸುವಂತೆ ಹಲವಾರು ಹಿಂದುತ್ವ ಗುಂಪುಗಳು ಕರೆ ನೀಡಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...